Homeಚಳವಳಿಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ ಎಂದು ವಕೀಲರಾದ ಅನೀಶ್ ಪಾಶರವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರ ವಿರುದ್ಧ ನೀಡಿದ ತೀರ್ಪನ್ನು ಪುನರ್ ಪರಿಶೀಲಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಎಲ್ಲಾ ಪ್ರಗತಿಪರ ವಕೀಲರು ಮನವಿ ಸಲ್ಲಿಸಬೇಕೆಂದು ಪ್ರಗತಿಪರ ಚಿಂತಕ ವಕೀಲರ ವೇದಿಕೆಯ ಸಂಚಾಲಯಕರಾದ ಅನೀಸ್ ಪಾಶರವರು ಕರೆ ನೀಡಿದ್ದಾರೆ.

14-08-2020 ರಂದು ಸರ್ವೋಚ್ಚ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರು ತಪ್ಪಿತಸ್ತರೆಂದು ತೀರ್ಪು ನೀಡಿರುತ್ತದೆ. ಈ ತೀರ್ಪು ಇಡೀ ವಕೀಲ ವೃಂದದಲ್ಲಿ ಸಂಚಲನವನ್ನು ಮೂಡಿಸಿದ್ದು, ತುಂಬಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ. ಹಿರಿಯ ವಕೀಲರು ಮಾಡಿರುವಂತಹ ಆರೋಪಗಳು ಸರಿ ಇದೇಯೋ ಇಲ್ಲವೋ ಎಂದು ತನಿಖೆ ನಡೆಸದೆ ನೇರವಾಗಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿ ಒಬ್ಬ ಸಾಮಾಜಿಕ ಹೋರಾಟಗಾರರಾದ ವಕೀಲರನ್ನು ಶಿಕ್ಷಿಸಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಎಂಬ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಭಾರತ ದೇಶದ ಇತಿಹಾಸವನ್ನು ಗಮನಿಸಿದರೆ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿತ್ತು, ಸಂವಿಧಾನವನ್ನು ರಚನೆ ಮಾಡಿರುವಂತಹ ಬಾಬಾ ಸಾಹೇಬ್ ಅಂಬೇಡ್ಕರ್ ರವರೂ ಕೂಡ ಒಬ್ಬ ವಕೀಲರಾಗಿದ್ದರು. ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ದೇಶದ ಏಕತೆ ಮತ್ತು ಅಖಂಡತೆ ಮತ್ತು ನ್ಯಾಯಾದಾನದ ವ್ಯವಸ್ಥೆಯನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿದೆ.
ಕೊರೋನ ಕಾಯಿಲೆ ಸಲುವಾಗಿ ನ್ಯಾಯಾಲಯಗಳಲ್ಲಿ ತುರ್ತು ವಿಷಯಗಳನ್ನು ಹೊರತುಪಡಿಸಿ ಬೇರೆ ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳದೆ ಇರುವುದರಿಂದ ದೇಶದ ಹೆಚ್ಚಿನ ವಕೀಲರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ತುರ್ತು ಪ್ರಕರಣಗಳನ್ನು ಕೂಡ ಆನ್ ಲೈನ್ ಮುಖಾಂತರ ಮಂಡನೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಹಳೆಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವುದನ್ನು ಬಿಟ್ಟು ಹೊಸ ಪ್ರಕರಣವನ್ನು ತರಾತುರಿಯಲ್ಲಿ ಕೈಗೆತ್ತಿಕೊಂಡು ತೀರ್ಪು ನೀಡಿರುವುದು ಇಡೀ ಭಾರತ ದೇಶದ ಜನತೆಗೆ ಆಶ್ಚರ್ಯಚಕಿತರನ್ನಾಗಿಸಿದೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಮತ್ತು ವಕೀಲ ವೃಂದದ ಘನತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ವಕೀಲರಾದ ನಮ್ಮ ಮೇಲೆ ಹೆಚ್ಚು ಇದೆ. ಹಾಗಾಗಿ ಎಲ್ಲರೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೆಂದು ಕೋರಲಾಗಿದೆ ಎಂದು ಹೇಳಿಕೆಯಲ್ಲಿ ಅನೀಸ್ ಪಾಶ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ರವರು ತಮ್ಮ ಟ್ವೀಟ್‌ಗಳಲ್ಲಿ ಆರೋಪಿಸಿದಂತಹ ಅಂಶಗಳು ಸರಿಯೋ ತಪ್ಪೋ ಎಂದು ತನಿಖೆ ಮಾಡಲು ಒಂದು ನ್ಯಾಯಮೂರ್ತಿಗಳ ತಂಡವನ್ನು ರಚಿಸಬೇಕೆಂದು, ತದನಂತರದಲ್ಲಿ ಅವರು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಕಂಡುಬಂದಾಗ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಶಿಕ್ಷೆಯನ್ನು ವಿಧಿಸಿದರೆ ಇಡೀ ಭಾರತ ದೇಶದ ಜನತೆ ನ್ಯಾಯಾಲಯದ ಮೇಲೆ ಇಟ್ಟಿರುವ ಗೌರವ ಮತ್ತು ಘನತೆಯು ಇನ್ನೂ ಹೆಚ್ಚಾಗುವುದು ಹಾಗೂ ಸಂವಿಧಾನ ನಮಗೆ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತು ಪ್ರಜಾ ಪ್ರಭುತ್ವವನ್ನು ನ್ಯಾಯಾಲಯ ಎತ್ತಿ ಹಿಡಿದಂತಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯಗಳ ಮತ್ತು ವಕೀಲ ವೃಂದದ ಗೌರವವನ್ನು ಹೆಚ್ಚಿಸಲು ಮತ್ತು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು ನಾವೆಲ್ಲ ಈ ತಕ್ಷಣ ಕಾರ್ಯಪ್ರವೃತ್ತರಾಗಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ರಿಜಿಸ್ಟ್ರಾರ್ ರವರ ಮೂಲಕ ದಿನಾಂಕ:14-8-2020 ರಂದು ಪ್ರಶಾಂತ್ ಭೂಷಣ್ ರವರ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಬೇಕು ಮತ್ತು ಪ್ರಶಾಂತ್ ಭೂಷಣ್ ರವರು ಆರೋಪಿಸಿರುವ ಆರೋಪಗಳನ್ನು ಕೂಲಂಕುಂಶವಾಗಿ ತನಿಖೆ ಮಾಡಬೇಕು ಎಂದು ಇ-ಮೇಲ್ ಮೂಲಕ ಮನವಿ ಸಲ್ಲಿಸಲು ಎಲ್ಲಾ ಪ್ರಗತಿಪರ ವಕೀಲರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಎಸಗಿದ್ದಾರೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...