Homeಚಳವಳಿಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ ಎಂದು ವಕೀಲರಾದ ಅನೀಶ್ ಪಾಶರವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರ ವಿರುದ್ಧ ನೀಡಿದ ತೀರ್ಪನ್ನು ಪುನರ್ ಪರಿಶೀಲಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಎಲ್ಲಾ ಪ್ರಗತಿಪರ ವಕೀಲರು ಮನವಿ ಸಲ್ಲಿಸಬೇಕೆಂದು ಪ್ರಗತಿಪರ ಚಿಂತಕ ವಕೀಲರ ವೇದಿಕೆಯ ಸಂಚಾಲಯಕರಾದ ಅನೀಸ್ ಪಾಶರವರು ಕರೆ ನೀಡಿದ್ದಾರೆ.

14-08-2020 ರಂದು ಸರ್ವೋಚ್ಚ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರು ತಪ್ಪಿತಸ್ತರೆಂದು ತೀರ್ಪು ನೀಡಿರುತ್ತದೆ. ಈ ತೀರ್ಪು ಇಡೀ ವಕೀಲ ವೃಂದದಲ್ಲಿ ಸಂಚಲನವನ್ನು ಮೂಡಿಸಿದ್ದು, ತುಂಬಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ. ಹಿರಿಯ ವಕೀಲರು ಮಾಡಿರುವಂತಹ ಆರೋಪಗಳು ಸರಿ ಇದೇಯೋ ಇಲ್ಲವೋ ಎಂದು ತನಿಖೆ ನಡೆಸದೆ ನೇರವಾಗಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿ ಒಬ್ಬ ಸಾಮಾಜಿಕ ಹೋರಾಟಗಾರರಾದ ವಕೀಲರನ್ನು ಶಿಕ್ಷಿಸಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಎಂಬ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಭಾರತ ದೇಶದ ಇತಿಹಾಸವನ್ನು ಗಮನಿಸಿದರೆ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿತ್ತು, ಸಂವಿಧಾನವನ್ನು ರಚನೆ ಮಾಡಿರುವಂತಹ ಬಾಬಾ ಸಾಹೇಬ್ ಅಂಬೇಡ್ಕರ್ ರವರೂ ಕೂಡ ಒಬ್ಬ ವಕೀಲರಾಗಿದ್ದರು. ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ದೇಶದ ಏಕತೆ ಮತ್ತು ಅಖಂಡತೆ ಮತ್ತು ನ್ಯಾಯಾದಾನದ ವ್ಯವಸ್ಥೆಯನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿದೆ.
ಕೊರೋನ ಕಾಯಿಲೆ ಸಲುವಾಗಿ ನ್ಯಾಯಾಲಯಗಳಲ್ಲಿ ತುರ್ತು ವಿಷಯಗಳನ್ನು ಹೊರತುಪಡಿಸಿ ಬೇರೆ ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳದೆ ಇರುವುದರಿಂದ ದೇಶದ ಹೆಚ್ಚಿನ ವಕೀಲರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ತುರ್ತು ಪ್ರಕರಣಗಳನ್ನು ಕೂಡ ಆನ್ ಲೈನ್ ಮುಖಾಂತರ ಮಂಡನೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಹಳೆಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವುದನ್ನು ಬಿಟ್ಟು ಹೊಸ ಪ್ರಕರಣವನ್ನು ತರಾತುರಿಯಲ್ಲಿ ಕೈಗೆತ್ತಿಕೊಂಡು ತೀರ್ಪು ನೀಡಿರುವುದು ಇಡೀ ಭಾರತ ದೇಶದ ಜನತೆಗೆ ಆಶ್ಚರ್ಯಚಕಿತರನ್ನಾಗಿಸಿದೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಮತ್ತು ವಕೀಲ ವೃಂದದ ಘನತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ವಕೀಲರಾದ ನಮ್ಮ ಮೇಲೆ ಹೆಚ್ಚು ಇದೆ. ಹಾಗಾಗಿ ಎಲ್ಲರೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೆಂದು ಕೋರಲಾಗಿದೆ ಎಂದು ಹೇಳಿಕೆಯಲ್ಲಿ ಅನೀಸ್ ಪಾಶ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ರವರು ತಮ್ಮ ಟ್ವೀಟ್‌ಗಳಲ್ಲಿ ಆರೋಪಿಸಿದಂತಹ ಅಂಶಗಳು ಸರಿಯೋ ತಪ್ಪೋ ಎಂದು ತನಿಖೆ ಮಾಡಲು ಒಂದು ನ್ಯಾಯಮೂರ್ತಿಗಳ ತಂಡವನ್ನು ರಚಿಸಬೇಕೆಂದು, ತದನಂತರದಲ್ಲಿ ಅವರು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಕಂಡುಬಂದಾಗ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಶಿಕ್ಷೆಯನ್ನು ವಿಧಿಸಿದರೆ ಇಡೀ ಭಾರತ ದೇಶದ ಜನತೆ ನ್ಯಾಯಾಲಯದ ಮೇಲೆ ಇಟ್ಟಿರುವ ಗೌರವ ಮತ್ತು ಘನತೆಯು ಇನ್ನೂ ಹೆಚ್ಚಾಗುವುದು ಹಾಗೂ ಸಂವಿಧಾನ ನಮಗೆ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತು ಪ್ರಜಾ ಪ್ರಭುತ್ವವನ್ನು ನ್ಯಾಯಾಲಯ ಎತ್ತಿ ಹಿಡಿದಂತಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯಗಳ ಮತ್ತು ವಕೀಲ ವೃಂದದ ಗೌರವವನ್ನು ಹೆಚ್ಚಿಸಲು ಮತ್ತು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು ನಾವೆಲ್ಲ ಈ ತಕ್ಷಣ ಕಾರ್ಯಪ್ರವೃತ್ತರಾಗಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ರಿಜಿಸ್ಟ್ರಾರ್ ರವರ ಮೂಲಕ ದಿನಾಂಕ:14-8-2020 ರಂದು ಪ್ರಶಾಂತ್ ಭೂಷಣ್ ರವರ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಬೇಕು ಮತ್ತು ಪ್ರಶಾಂತ್ ಭೂಷಣ್ ರವರು ಆರೋಪಿಸಿರುವ ಆರೋಪಗಳನ್ನು ಕೂಲಂಕುಂಶವಾಗಿ ತನಿಖೆ ಮಾಡಬೇಕು ಎಂದು ಇ-ಮೇಲ್ ಮೂಲಕ ಮನವಿ ಸಲ್ಲಿಸಲು ಎಲ್ಲಾ ಪ್ರಗತಿಪರ ವಕೀಲರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಎಸಗಿದ್ದಾರೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...