Homeಚಳವಳಿಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ ಎಂದು ವಕೀಲರಾದ ಅನೀಶ್ ಪಾಶರವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರ ವಿರುದ್ಧ ನೀಡಿದ ತೀರ್ಪನ್ನು ಪುನರ್ ಪರಿಶೀಲಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಎಲ್ಲಾ ಪ್ರಗತಿಪರ ವಕೀಲರು ಮನವಿ ಸಲ್ಲಿಸಬೇಕೆಂದು ಪ್ರಗತಿಪರ ಚಿಂತಕ ವಕೀಲರ ವೇದಿಕೆಯ ಸಂಚಾಲಯಕರಾದ ಅನೀಸ್ ಪಾಶರವರು ಕರೆ ನೀಡಿದ್ದಾರೆ.

14-08-2020 ರಂದು ಸರ್ವೋಚ್ಚ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರು ತಪ್ಪಿತಸ್ತರೆಂದು ತೀರ್ಪು ನೀಡಿರುತ್ತದೆ. ಈ ತೀರ್ಪು ಇಡೀ ವಕೀಲ ವೃಂದದಲ್ಲಿ ಸಂಚಲನವನ್ನು ಮೂಡಿಸಿದ್ದು, ತುಂಬಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ. ಹಿರಿಯ ವಕೀಲರು ಮಾಡಿರುವಂತಹ ಆರೋಪಗಳು ಸರಿ ಇದೇಯೋ ಇಲ್ಲವೋ ಎಂದು ತನಿಖೆ ನಡೆಸದೆ ನೇರವಾಗಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿ ಒಬ್ಬ ಸಾಮಾಜಿಕ ಹೋರಾಟಗಾರರಾದ ವಕೀಲರನ್ನು ಶಿಕ್ಷಿಸಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಎಂಬ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಭಾರತ ದೇಶದ ಇತಿಹಾಸವನ್ನು ಗಮನಿಸಿದರೆ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿತ್ತು, ಸಂವಿಧಾನವನ್ನು ರಚನೆ ಮಾಡಿರುವಂತಹ ಬಾಬಾ ಸಾಹೇಬ್ ಅಂಬೇಡ್ಕರ್ ರವರೂ ಕೂಡ ಒಬ್ಬ ವಕೀಲರಾಗಿದ್ದರು. ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ದೇಶದ ಏಕತೆ ಮತ್ತು ಅಖಂಡತೆ ಮತ್ತು ನ್ಯಾಯಾದಾನದ ವ್ಯವಸ್ಥೆಯನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿದೆ.
ಕೊರೋನ ಕಾಯಿಲೆ ಸಲುವಾಗಿ ನ್ಯಾಯಾಲಯಗಳಲ್ಲಿ ತುರ್ತು ವಿಷಯಗಳನ್ನು ಹೊರತುಪಡಿಸಿ ಬೇರೆ ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳದೆ ಇರುವುದರಿಂದ ದೇಶದ ಹೆಚ್ಚಿನ ವಕೀಲರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ತುರ್ತು ಪ್ರಕರಣಗಳನ್ನು ಕೂಡ ಆನ್ ಲೈನ್ ಮುಖಾಂತರ ಮಂಡನೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಹಳೆಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವುದನ್ನು ಬಿಟ್ಟು ಹೊಸ ಪ್ರಕರಣವನ್ನು ತರಾತುರಿಯಲ್ಲಿ ಕೈಗೆತ್ತಿಕೊಂಡು ತೀರ್ಪು ನೀಡಿರುವುದು ಇಡೀ ಭಾರತ ದೇಶದ ಜನತೆಗೆ ಆಶ್ಚರ್ಯಚಕಿತರನ್ನಾಗಿಸಿದೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಮತ್ತು ವಕೀಲ ವೃಂದದ ಘನತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ವಕೀಲರಾದ ನಮ್ಮ ಮೇಲೆ ಹೆಚ್ಚು ಇದೆ. ಹಾಗಾಗಿ ಎಲ್ಲರೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೆಂದು ಕೋರಲಾಗಿದೆ ಎಂದು ಹೇಳಿಕೆಯಲ್ಲಿ ಅನೀಸ್ ಪಾಶ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ರವರು ತಮ್ಮ ಟ್ವೀಟ್‌ಗಳಲ್ಲಿ ಆರೋಪಿಸಿದಂತಹ ಅಂಶಗಳು ಸರಿಯೋ ತಪ್ಪೋ ಎಂದು ತನಿಖೆ ಮಾಡಲು ಒಂದು ನ್ಯಾಯಮೂರ್ತಿಗಳ ತಂಡವನ್ನು ರಚಿಸಬೇಕೆಂದು, ತದನಂತರದಲ್ಲಿ ಅವರು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಕಂಡುಬಂದಾಗ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಶಿಕ್ಷೆಯನ್ನು ವಿಧಿಸಿದರೆ ಇಡೀ ಭಾರತ ದೇಶದ ಜನತೆ ನ್ಯಾಯಾಲಯದ ಮೇಲೆ ಇಟ್ಟಿರುವ ಗೌರವ ಮತ್ತು ಘನತೆಯು ಇನ್ನೂ ಹೆಚ್ಚಾಗುವುದು ಹಾಗೂ ಸಂವಿಧಾನ ನಮಗೆ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತು ಪ್ರಜಾ ಪ್ರಭುತ್ವವನ್ನು ನ್ಯಾಯಾಲಯ ಎತ್ತಿ ಹಿಡಿದಂತಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯಗಳ ಮತ್ತು ವಕೀಲ ವೃಂದದ ಗೌರವವನ್ನು ಹೆಚ್ಚಿಸಲು ಮತ್ತು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು ನಾವೆಲ್ಲ ಈ ತಕ್ಷಣ ಕಾರ್ಯಪ್ರವೃತ್ತರಾಗಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ರಿಜಿಸ್ಟ್ರಾರ್ ರವರ ಮೂಲಕ ದಿನಾಂಕ:14-8-2020 ರಂದು ಪ್ರಶಾಂತ್ ಭೂಷಣ್ ರವರ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಬೇಕು ಮತ್ತು ಪ್ರಶಾಂತ್ ಭೂಷಣ್ ರವರು ಆರೋಪಿಸಿರುವ ಆರೋಪಗಳನ್ನು ಕೂಲಂಕುಂಶವಾಗಿ ತನಿಖೆ ಮಾಡಬೇಕು ಎಂದು ಇ-ಮೇಲ್ ಮೂಲಕ ಮನವಿ ಸಲ್ಲಿಸಲು ಎಲ್ಲಾ ಪ್ರಗತಿಪರ ವಕೀಲರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಎಸಗಿದ್ದಾರೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...