Homeಚಳವಳಿಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ ಎಂದು ವಕೀಲರಾದ ಅನೀಶ್ ಪಾಶರವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರ ವಿರುದ್ಧ ನೀಡಿದ ತೀರ್ಪನ್ನು ಪುನರ್ ಪರಿಶೀಲಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಎಲ್ಲಾ ಪ್ರಗತಿಪರ ವಕೀಲರು ಮನವಿ ಸಲ್ಲಿಸಬೇಕೆಂದು ಪ್ರಗತಿಪರ ಚಿಂತಕ ವಕೀಲರ ವೇದಿಕೆಯ ಸಂಚಾಲಯಕರಾದ ಅನೀಸ್ ಪಾಶರವರು ಕರೆ ನೀಡಿದ್ದಾರೆ.

14-08-2020 ರಂದು ಸರ್ವೋಚ್ಚ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರು ತಪ್ಪಿತಸ್ತರೆಂದು ತೀರ್ಪು ನೀಡಿರುತ್ತದೆ. ಈ ತೀರ್ಪು ಇಡೀ ವಕೀಲ ವೃಂದದಲ್ಲಿ ಸಂಚಲನವನ್ನು ಮೂಡಿಸಿದ್ದು, ತುಂಬಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ. ಹಿರಿಯ ವಕೀಲರು ಮಾಡಿರುವಂತಹ ಆರೋಪಗಳು ಸರಿ ಇದೇಯೋ ಇಲ್ಲವೋ ಎಂದು ತನಿಖೆ ನಡೆಸದೆ ನೇರವಾಗಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿ ಒಬ್ಬ ಸಾಮಾಜಿಕ ಹೋರಾಟಗಾರರಾದ ವಕೀಲರನ್ನು ಶಿಕ್ಷಿಸಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಎಂಬ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಭಾರತ ದೇಶದ ಇತಿಹಾಸವನ್ನು ಗಮನಿಸಿದರೆ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿತ್ತು, ಸಂವಿಧಾನವನ್ನು ರಚನೆ ಮಾಡಿರುವಂತಹ ಬಾಬಾ ಸಾಹೇಬ್ ಅಂಬೇಡ್ಕರ್ ರವರೂ ಕೂಡ ಒಬ್ಬ ವಕೀಲರಾಗಿದ್ದರು. ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ದೇಶದ ಏಕತೆ ಮತ್ತು ಅಖಂಡತೆ ಮತ್ತು ನ್ಯಾಯಾದಾನದ ವ್ಯವಸ್ಥೆಯನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿದೆ.
ಕೊರೋನ ಕಾಯಿಲೆ ಸಲುವಾಗಿ ನ್ಯಾಯಾಲಯಗಳಲ್ಲಿ ತುರ್ತು ವಿಷಯಗಳನ್ನು ಹೊರತುಪಡಿಸಿ ಬೇರೆ ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳದೆ ಇರುವುದರಿಂದ ದೇಶದ ಹೆಚ್ಚಿನ ವಕೀಲರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ತುರ್ತು ಪ್ರಕರಣಗಳನ್ನು ಕೂಡ ಆನ್ ಲೈನ್ ಮುಖಾಂತರ ಮಂಡನೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಹಳೆಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವುದನ್ನು ಬಿಟ್ಟು ಹೊಸ ಪ್ರಕರಣವನ್ನು ತರಾತುರಿಯಲ್ಲಿ ಕೈಗೆತ್ತಿಕೊಂಡು ತೀರ್ಪು ನೀಡಿರುವುದು ಇಡೀ ಭಾರತ ದೇಶದ ಜನತೆಗೆ ಆಶ್ಚರ್ಯಚಕಿತರನ್ನಾಗಿಸಿದೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಮತ್ತು ವಕೀಲ ವೃಂದದ ಘನತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ವಕೀಲರಾದ ನಮ್ಮ ಮೇಲೆ ಹೆಚ್ಚು ಇದೆ. ಹಾಗಾಗಿ ಎಲ್ಲರೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೆಂದು ಕೋರಲಾಗಿದೆ ಎಂದು ಹೇಳಿಕೆಯಲ್ಲಿ ಅನೀಸ್ ಪಾಶ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ರವರು ತಮ್ಮ ಟ್ವೀಟ್‌ಗಳಲ್ಲಿ ಆರೋಪಿಸಿದಂತಹ ಅಂಶಗಳು ಸರಿಯೋ ತಪ್ಪೋ ಎಂದು ತನಿಖೆ ಮಾಡಲು ಒಂದು ನ್ಯಾಯಮೂರ್ತಿಗಳ ತಂಡವನ್ನು ರಚಿಸಬೇಕೆಂದು, ತದನಂತರದಲ್ಲಿ ಅವರು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಕಂಡುಬಂದಾಗ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಶಿಕ್ಷೆಯನ್ನು ವಿಧಿಸಿದರೆ ಇಡೀ ಭಾರತ ದೇಶದ ಜನತೆ ನ್ಯಾಯಾಲಯದ ಮೇಲೆ ಇಟ್ಟಿರುವ ಗೌರವ ಮತ್ತು ಘನತೆಯು ಇನ್ನೂ ಹೆಚ್ಚಾಗುವುದು ಹಾಗೂ ಸಂವಿಧಾನ ನಮಗೆ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತು ಪ್ರಜಾ ಪ್ರಭುತ್ವವನ್ನು ನ್ಯಾಯಾಲಯ ಎತ್ತಿ ಹಿಡಿದಂತಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯಗಳ ಮತ್ತು ವಕೀಲ ವೃಂದದ ಗೌರವವನ್ನು ಹೆಚ್ಚಿಸಲು ಮತ್ತು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು ನಾವೆಲ್ಲ ಈ ತಕ್ಷಣ ಕಾರ್ಯಪ್ರವೃತ್ತರಾಗಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ರಿಜಿಸ್ಟ್ರಾರ್ ರವರ ಮೂಲಕ ದಿನಾಂಕ:14-8-2020 ರಂದು ಪ್ರಶಾಂತ್ ಭೂಷಣ್ ರವರ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಬೇಕು ಮತ್ತು ಪ್ರಶಾಂತ್ ಭೂಷಣ್ ರವರು ಆರೋಪಿಸಿರುವ ಆರೋಪಗಳನ್ನು ಕೂಲಂಕುಂಶವಾಗಿ ತನಿಖೆ ಮಾಡಬೇಕು ಎಂದು ಇ-ಮೇಲ್ ಮೂಲಕ ಮನವಿ ಸಲ್ಲಿಸಲು ಎಲ್ಲಾ ಪ್ರಗತಿಪರ ವಕೀಲರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಎಸಗಿದ್ದಾರೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...