Homeಚಳವಳಿಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ ಎಂದು ವಕೀಲರಾದ ಅನೀಶ್ ಪಾಶರವರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರ ವಿರುದ್ಧ ನೀಡಿದ ತೀರ್ಪನ್ನು ಪುನರ್ ಪರಿಶೀಲಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಎಲ್ಲಾ ಪ್ರಗತಿಪರ ವಕೀಲರು ಮನವಿ ಸಲ್ಲಿಸಬೇಕೆಂದು ಪ್ರಗತಿಪರ ಚಿಂತಕ ವಕೀಲರ ವೇದಿಕೆಯ ಸಂಚಾಲಯಕರಾದ ಅನೀಸ್ ಪಾಶರವರು ಕರೆ ನೀಡಿದ್ದಾರೆ.

14-08-2020 ರಂದು ಸರ್ವೋಚ್ಚ ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ರವರು ತಪ್ಪಿತಸ್ತರೆಂದು ತೀರ್ಪು ನೀಡಿರುತ್ತದೆ. ಈ ತೀರ್ಪು ಇಡೀ ವಕೀಲ ವೃಂದದಲ್ಲಿ ಸಂಚಲನವನ್ನು ಮೂಡಿಸಿದ್ದು, ತುಂಬಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಬಹಳಷ್ಟು ಪ್ರಕರಣಗಳಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಪತ್ರಿಕಾ ಮಾಧ್ಯಮ (ತಾಂತ್ರಿಕ ಮಾಧ್ಯಮ) ಗಳಲ್ಲಿ ಪ್ರಸಾರವಾಗುವ ವಿಚಾರಗಳು ನಿರ್ಣಾಯಕ ಸಾಕ್ಷ್ಯವಾಗಿ ಪರಿಗಣಿಸಲು ಬರುವುದಿಲ್ಲ ಎಂದು ತೀರ್ಪನ್ನು ನೀಡಿದೆ. ಹಿರಿಯ ವಕೀಲರು ಮಾಡಿರುವಂತಹ ಆರೋಪಗಳು ಸರಿ ಇದೇಯೋ ಇಲ್ಲವೋ ಎಂದು ತನಿಖೆ ನಡೆಸದೆ ನೇರವಾಗಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿ ಒಬ್ಬ ಸಾಮಾಜಿಕ ಹೋರಾಟಗಾರರಾದ ವಕೀಲರನ್ನು ಶಿಕ್ಷಿಸಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಎಂಬ ಚರ್ಚೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಭಾರತ ದೇಶದ ಇತಿಹಾಸವನ್ನು ಗಮನಿಸಿದರೆ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿತ್ತು, ಸಂವಿಧಾನವನ್ನು ರಚನೆ ಮಾಡಿರುವಂತಹ ಬಾಬಾ ಸಾಹೇಬ್ ಅಂಬೇಡ್ಕರ್ ರವರೂ ಕೂಡ ಒಬ್ಬ ವಕೀಲರಾಗಿದ್ದರು. ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ದೇಶದ ಏಕತೆ ಮತ್ತು ಅಖಂಡತೆ ಮತ್ತು ನ್ಯಾಯಾದಾನದ ವ್ಯವಸ್ಥೆಯನ್ನು ಎತ್ತಿ ಹಿಡಿಯುವಲ್ಲಿ ವಕೀಲರ ಪಾತ್ರ ಬಹಳ ಮಹತ್ವದ್ದಾಗಿದೆ.
ಕೊರೋನ ಕಾಯಿಲೆ ಸಲುವಾಗಿ ನ್ಯಾಯಾಲಯಗಳಲ್ಲಿ ತುರ್ತು ವಿಷಯಗಳನ್ನು ಹೊರತುಪಡಿಸಿ ಬೇರೆ ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳದೆ ಇರುವುದರಿಂದ ದೇಶದ ಹೆಚ್ಚಿನ ವಕೀಲರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ತುರ್ತು ಪ್ರಕರಣಗಳನ್ನು ಕೂಡ ಆನ್ ಲೈನ್ ಮುಖಾಂತರ ಮಂಡನೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ಹಳೆಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವುದನ್ನು ಬಿಟ್ಟು ಹೊಸ ಪ್ರಕರಣವನ್ನು ತರಾತುರಿಯಲ್ಲಿ ಕೈಗೆತ್ತಿಕೊಂಡು ತೀರ್ಪು ನೀಡಿರುವುದು ಇಡೀ ಭಾರತ ದೇಶದ ಜನತೆಗೆ ಆಶ್ಚರ್ಯಚಕಿತರನ್ನಾಗಿಸಿದೆ ಹಾಗೂ ನ್ಯಾಯಾಂಗ ವ್ಯವಸ್ಥೆಯ ಘನತೆಗೆ ಮತ್ತು ವಕೀಲ ವೃಂದದ ಘನತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ವಕೀಲರಾದ ನಮ್ಮ ಮೇಲೆ ಹೆಚ್ಚು ಇದೆ. ಹಾಗಾಗಿ ಎಲ್ಲರೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೆಂದು ಕೋರಲಾಗಿದೆ ಎಂದು ಹೇಳಿಕೆಯಲ್ಲಿ ಅನೀಸ್ ಪಾಶ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ರವರು ತಮ್ಮ ಟ್ವೀಟ್‌ಗಳಲ್ಲಿ ಆರೋಪಿಸಿದಂತಹ ಅಂಶಗಳು ಸರಿಯೋ ತಪ್ಪೋ ಎಂದು ತನಿಖೆ ಮಾಡಲು ಒಂದು ನ್ಯಾಯಮೂರ್ತಿಗಳ ತಂಡವನ್ನು ರಚಿಸಬೇಕೆಂದು, ತದನಂತರದಲ್ಲಿ ಅವರು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಕಂಡುಬಂದಾಗ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಶಿಕ್ಷೆಯನ್ನು ವಿಧಿಸಿದರೆ ಇಡೀ ಭಾರತ ದೇಶದ ಜನತೆ ನ್ಯಾಯಾಲಯದ ಮೇಲೆ ಇಟ್ಟಿರುವ ಗೌರವ ಮತ್ತು ಘನತೆಯು ಇನ್ನೂ ಹೆಚ್ಚಾಗುವುದು ಹಾಗೂ ಸಂವಿಧಾನ ನಮಗೆ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತು ಪ್ರಜಾ ಪ್ರಭುತ್ವವನ್ನು ನ್ಯಾಯಾಲಯ ಎತ್ತಿ ಹಿಡಿದಂತಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯಗಳ ಮತ್ತು ವಕೀಲ ವೃಂದದ ಗೌರವವನ್ನು ಹೆಚ್ಚಿಸಲು ಮತ್ತು ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಲು ನಾವೆಲ್ಲ ಈ ತಕ್ಷಣ ಕಾರ್ಯಪ್ರವೃತ್ತರಾಗಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ರಿಜಿಸ್ಟ್ರಾರ್ ರವರ ಮೂಲಕ ದಿನಾಂಕ:14-8-2020 ರಂದು ಪ್ರಶಾಂತ್ ಭೂಷಣ್ ರವರ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸಬೇಕು ಮತ್ತು ಪ್ರಶಾಂತ್ ಭೂಷಣ್ ರವರು ಆರೋಪಿಸಿರುವ ಆರೋಪಗಳನ್ನು ಕೂಲಂಕುಂಶವಾಗಿ ತನಿಖೆ ಮಾಡಬೇಕು ಎಂದು ಇ-ಮೇಲ್ ಮೂಲಕ ಮನವಿ ಸಲ್ಲಿಸಲು ಎಲ್ಲಾ ಪ್ರಗತಿಪರ ವಕೀಲರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಎಸಗಿದ್ದಾರೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...