Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ: ನಾಳೆ ಶಿಕ್ಷೆ ಪ್ರಕಟಿಸಲಿರುವ ನ್ಯಾಯಾಲಯ

ಪ್ರಶಾಂತ್ ಭೂಷಣ್ ಪ್ರಕರಣ: ನಾಳೆ ಶಿಕ್ಷೆ ಪ್ರಕಟಿಸಲಿರುವ ನ್ಯಾಯಾಲಯ

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು.

- Advertisement -
- Advertisement -

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್‌ರವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಶಿಕ್ಷೆ ಪ್ರಕಟಿಸಲಿದೆ.

ಆಗಸ್ಟ್ 5 ರಂದು ಭೂಷಣ್ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಆಗಸ್ಟ್ 14 ರಂದು ಅವರು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿ, ಆಗಸ್ಟ್ 20 ರಂದು ಶಿಕ್ಷೆ ಪ್ರಮಾಣ ಘೊಷಿಸುವುದಾಗಿ ಹೇಳಿತ್ತು. ಆದರೆ ಆಗಸ್ಟ್ 20 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ನಿರ್ದೇಶನದಂತೆ ಬೇಷರತ್ ಕ್ಷಮೆಯಾಚಿಸಲು ಭೂಷಣ್ ನಿರಾಕರಿಸಿದರು. ನೀವೆಷ್ಟೇ ಸಮಯ ಕೊಟ್ಟರೂ ತನ್ನ ಪ್ರಯೋಜನವಿಲ್ಲ ಎಂದಿದ್ದರು.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದರು.

ಆದರೂ ಸುಪ್ರೀಂ ಕೋರ್ಟ್ ಅವರಿಗೆ ಕ್ಷಮೆ ಕೇಳಲು ಮತ್ತು ತಮ್ಮ ಹೇಳಿಕೆಯನ್ನು ಬದಲಿಸಲು ಮೂರುದಿನಗಳ ಸಮಯ ನೀಡಿತ್ತು. ಆಗಸ್ಟ್ 24 ರಂದು ಮತ್ತೆ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಅಂದೂ ಸಹ ಸಮಯ ನೀಡಿ ಕ್ಷಮೆ ಕೇಳುವಂತೆ ನಿರ್ದೇಶಿಸಿತ್ತು. ಆದರೆ ಅಂದು ಕೂಡ ಭೂಷಣ್ ಕ್ಷಮೆಯಾಚಿಸಲಿಲ್ಲ.

“ನನ್ನ ಟ್ವೀಟ್‌ಗಳು ನನ್ನ ನಂಬಿಕೆಯನ್ನು ಪ್ರತಿನಿಧಿಸುತ್ತವೆ. ಷರತ್ತುಬದ್ಧ ಅಥವಾ ಬೇಷರತ್ತಾದ ಕ್ಷಮೆಯು ಈ ನಂಬಿಕೆಗಳಿಗೆ ಅಪ್ರಾಮಾಣಿಕ ಎಂದು ಭಾವಿಸುತ್ತೆನೆ. ಯಾವುದೇ ಕ್ಷಮೆಯಾಚನೆಯು ನ್ಯಾಯಾಲಯವು ಹೇಳಿದಂತೆ ಕೇವಲ ಪ್ರಚೋದನೆಯಾಗಿರಬಾರದು. ಅದು ಪ್ರಾಮಾಣಿಕವಾಗಿರಬೇಕು. ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ” ಎಂದು ಭೂಷಣ್ ನುಡಿದಿದ್ದರು.

ಇದನ್ನೂ ಓದಿ; ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು. ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣಮುರಾರಿಯವರಿದ್ದ ಪೀಠದ ಎದುರು ಭೂಷಣ್ ಪರವಾಗಿ ಹಿರಿಯ ವಕೀಲರಾದ ದುಷ್ಯಂತ್ ಧವೆ ಮತ್ತು ರಾಜೀವ್ ಧವನ್ ವಾದಿಸಿದ್ದರು.

2009ರ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸೆಪ್ಟಂಬರ್ 10ಕ್ಕೆ ಮುಂದೂಡಿದ ನ್ಯಾಯಾಲಯವು ಇತ್ತೀಚಿನ ಪ್ರಕರಣದ ಕುರಿತು ನಾಳೆ ಶಿಕ್ಷೆ ಪ್ರಕಟಿಸಲಿದೆ. ಎಚ್ಚರಿಕೆ ನೀಡಿ ಬಿಡಲಾಗುವುದು ಎಂದು ಹಿರಿಯ ವಕೀಲರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ..; ಯೋಗೇಂದ್ರ ಯಾದವ್

Also Read: Prashant Bhushan Refuses To Apologize In Contempt Case

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...