Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ: ನಾಳೆ ಶಿಕ್ಷೆ ಪ್ರಕಟಿಸಲಿರುವ ನ್ಯಾಯಾಲಯ

ಪ್ರಶಾಂತ್ ಭೂಷಣ್ ಪ್ರಕರಣ: ನಾಳೆ ಶಿಕ್ಷೆ ಪ್ರಕಟಿಸಲಿರುವ ನ್ಯಾಯಾಲಯ

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು.

- Advertisement -
- Advertisement -

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್‌ರವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಶಿಕ್ಷೆ ಪ್ರಕಟಿಸಲಿದೆ.

ಆಗಸ್ಟ್ 5 ರಂದು ಭೂಷಣ್ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಆಗಸ್ಟ್ 14 ರಂದು ಅವರು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿ, ಆಗಸ್ಟ್ 20 ರಂದು ಶಿಕ್ಷೆ ಪ್ರಮಾಣ ಘೊಷಿಸುವುದಾಗಿ ಹೇಳಿತ್ತು. ಆದರೆ ಆಗಸ್ಟ್ 20 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ನಿರ್ದೇಶನದಂತೆ ಬೇಷರತ್ ಕ್ಷಮೆಯಾಚಿಸಲು ಭೂಷಣ್ ನಿರಾಕರಿಸಿದರು. ನೀವೆಷ್ಟೇ ಸಮಯ ಕೊಟ್ಟರೂ ತನ್ನ ಪ್ರಯೋಜನವಿಲ್ಲ ಎಂದಿದ್ದರು.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದರು.

ಆದರೂ ಸುಪ್ರೀಂ ಕೋರ್ಟ್ ಅವರಿಗೆ ಕ್ಷಮೆ ಕೇಳಲು ಮತ್ತು ತಮ್ಮ ಹೇಳಿಕೆಯನ್ನು ಬದಲಿಸಲು ಮೂರುದಿನಗಳ ಸಮಯ ನೀಡಿತ್ತು. ಆಗಸ್ಟ್ 24 ರಂದು ಮತ್ತೆ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಅಂದೂ ಸಹ ಸಮಯ ನೀಡಿ ಕ್ಷಮೆ ಕೇಳುವಂತೆ ನಿರ್ದೇಶಿಸಿತ್ತು. ಆದರೆ ಅಂದು ಕೂಡ ಭೂಷಣ್ ಕ್ಷಮೆಯಾಚಿಸಲಿಲ್ಲ.

“ನನ್ನ ಟ್ವೀಟ್‌ಗಳು ನನ್ನ ನಂಬಿಕೆಯನ್ನು ಪ್ರತಿನಿಧಿಸುತ್ತವೆ. ಷರತ್ತುಬದ್ಧ ಅಥವಾ ಬೇಷರತ್ತಾದ ಕ್ಷಮೆಯು ಈ ನಂಬಿಕೆಗಳಿಗೆ ಅಪ್ರಾಮಾಣಿಕ ಎಂದು ಭಾವಿಸುತ್ತೆನೆ. ಯಾವುದೇ ಕ್ಷಮೆಯಾಚನೆಯು ನ್ಯಾಯಾಲಯವು ಹೇಳಿದಂತೆ ಕೇವಲ ಪ್ರಚೋದನೆಯಾಗಿರಬಾರದು. ಅದು ಪ್ರಾಮಾಣಿಕವಾಗಿರಬೇಕು. ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ” ಎಂದು ಭೂಷಣ್ ನುಡಿದಿದ್ದರು.

ಇದನ್ನೂ ಓದಿ; ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು. ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣಮುರಾರಿಯವರಿದ್ದ ಪೀಠದ ಎದುರು ಭೂಷಣ್ ಪರವಾಗಿ ಹಿರಿಯ ವಕೀಲರಾದ ದುಷ್ಯಂತ್ ಧವೆ ಮತ್ತು ರಾಜೀವ್ ಧವನ್ ವಾದಿಸಿದ್ದರು.

2009ರ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸೆಪ್ಟಂಬರ್ 10ಕ್ಕೆ ಮುಂದೂಡಿದ ನ್ಯಾಯಾಲಯವು ಇತ್ತೀಚಿನ ಪ್ರಕರಣದ ಕುರಿತು ನಾಳೆ ಶಿಕ್ಷೆ ಪ್ರಕಟಿಸಲಿದೆ. ಎಚ್ಚರಿಕೆ ನೀಡಿ ಬಿಡಲಾಗುವುದು ಎಂದು ಹಿರಿಯ ವಕೀಲರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ..; ಯೋಗೇಂದ್ರ ಯಾದವ್

Also Read: Prashant Bhushan Refuses To Apologize In Contempt Case

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...