Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ; ಸುಪ್ರೀಂನಿಂದ ಇಂದು ಶಿಕ್ಷೆ ಪ್ರಕಟ: ತೀರ್ಪು ಮರುಪರಿಶೀಲಿಸುವಂತೆ 122 ಕಾನೂನು ವಿದ್ಯಾರ್ಥಿಗಳಿಂದ...

ಪ್ರಶಾಂತ್ ಭೂಷಣ್ ಪ್ರಕರಣ; ಸುಪ್ರೀಂನಿಂದ ಇಂದು ಶಿಕ್ಷೆ ಪ್ರಕಟ: ತೀರ್ಪು ಮರುಪರಿಶೀಲಿಸುವಂತೆ 122 ಕಾನೂನು ವಿದ್ಯಾರ್ಥಿಗಳಿಂದ ಒತ್ತಾಯ

"ನ್ಯಾಯಾಂಗವು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಾಂಗವು ತನ್ನ ಪ್ರಕರಣವನ್ನು ಬದಲಾಯಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಕ್ಕಾಗಿ ನ್ಯಾಯಾಲಯವು ತಿರಸ್ಕಾರಕ್ಕೆ ಗುರಿಯಾಗಬಾರದು" ಎಂದು ಪತ್ರದಲ್ಲಿ ತಿಳಿಸಲಾಗಿದೆ.

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಶಿಕ್ಷೆ ಪ್ರಕಟಗೊಳಿಸಲಿದೆ. ದೇಶದಾದ್ಯಂತ ಸುಮಾರು 122 ಜನ ಕಾನೂನು ವಿದ್ಯಾರ್ಥಿಗಳು ಸುಪ್ರೀಂ ಕೋರ್ಟಿನ ತೀರ್ಪನ್ನು ಮರುಪರಿಶೀಲಿಸುವಂತೆ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.

ಮಾಜಿ ಮುಖ್ಯ ನ್ಯಾಯಾಧೀಶರಾದ ಬೊಬಡೆ ಮತ್ತು ಸುಪ್ರೀಂ ಕೋರ್ಟನ್ನು ಟೀಕಿಸಿದ್ದಾರೆ ಎಂದು ಪ್ರಶಾಂತ್ ಭೂಷಣ್ ಮೇಲೆ ಸುಪ್ರೀಂ ಸ್ವಯಂ ಪ್ರಕರಣ ದಾಖಲಿಸಿಕೊಂಡಿತ್ತು. ಭೂಷಣ್ ತಪ್ಪಿತಸ್ಥ ಎಂದು ಹೇಳಿದ ಸುಪ್ರೀಂ, ಕ್ಷಮೆ ಕೇಳಲು ಅವಕಾಶ ನೀಡಿತ್ತು. ಆದರೆ ಪ್ರಶಾಂತ್ ಭೂಷಣ್, “ನಾನು ಸಂವಿಧಾನದ ಅಡಿಯಲ್ಲಿ ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಕ್ಷಮೆಯಾಚಿಸುವುದು “ನನ್ನ ಆತ್ಮಸಾಕ್ಷಿಯ ತಿರಸ್ಕಾರ” ಎಂದು ಭೂಷಣ್ ಆಗಸ್ಟ್ 24 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು. “ಹಾಗಾಗಿ ಕ್ಷಮೆ ಕೇಳುವ ಪ್ರಮೇಯವಿಲ್ಲ” ಎಂದು ಅಫಿಡವಿಟ್ ಸಲ್ಲಿಸಿದ್ದರು.

ಇದು ಸುಪ್ರೀಂ ಅನ್ನು ಮತ್ತಷ್ಟು ಅವಹೇಳನ ಮಾಡಿದೆ ಎಂದು ಸುಪ್ರೀಂ ಹೇಳಿತ್ತು. “ಭೂಷಣ್ ಅವರಂತಹ 30 ವರ್ಷಗಳ ಅನುಭವದ ಹಿರಿಯ ವಕೀಲರು ವರ್ತಿಸಬೇಕಾದ ರೀತಿ ಇದಲ್ಲ” ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅಭಿಪ್ರಾಯಪಟ್ಟಿದ್ದರು.

ಆಗಸ್ಟ್ 5 ರಂದು ಭೂಷಣ್ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಆಗಸ್ಟ್ 14 ರಂದು ಅವರು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿ, ಆಗಸ್ಟ್ 20 ರಂದು ಶಿಕ್ಷೆ ಪ್ರಮಾಣ ಘೊಷಿಸುವುದಾಗಿ ಹೇಳಿತ್ತು. ಆದರೆ ಆಗಸ್ಟ್ 20 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ನಿರ್ದೇಶನದಂತೆ ಬೇಷರತ್ ಕ್ಷಮೆಯಾಚಿಸಲು ಭೂಷಣ್ ನಿರಾಕರಿಸಿದರು.

ಆಗಸ್ಟ್ 24 ರಂದು ಮತ್ತೆ ಪ್ರಕರಣ ಕೈಗೆತ್ತಿಕೊಂಡ ನ್ಯಾಯಾಲಯ ಅಂದೂ ಸಹ ಸಮಯ ನೀಡಿ ಕ್ಷಮೆ ಕೇಳುವಂತೆ ನಿರ್ದೇಶಿಸಿತ್ತು. ಆದರೆ ಅಂದು ಕೂಡ ಭೂಷಣ್ ಕ್ಷಮೆಯಾಚಿಸಲಿಲ್ಲ.

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಆಗಸ್ಟ್ 25ರಂದು ಮನವಿ ಮಾಡಿದ್ದರು. ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣಮುರಾರಿಯವರಿದ್ದ ಪೀಠದ ಎದುರು ಭೂಷಣ್ ಪರವಾಗಿ ಹಿರಿಯ ವಕೀಲರಾದ ದುಷ್ಯಂತ್ ಧವೆ ಮತ್ತು ರಾಜೀವ್ ಧವನ್ ವಾದಿಸಿದ್ದರು.

ಇಂದು ಶಿಕ್ಷೆ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಕಾನೂನು ವಿದ್ಯಾರ್ಥಿಗಳು ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಮತ್ತು ಇತರ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ‘ತೀರ್ಪನ್ನು ಮರುಪರಿಶೀಲಿಸುವಂತೆ’ ಒತ್ತಾಯಿಸಿ ಪತ್ರ ಬರೆದಿದ್ದಾರೆ ಎಂದು ಎನ್ ಡಿ ಟಿ ವಿ ವರದಿ ಮಾಡಿದ್ದಾಗಿ ಸ್ಕ್ರಾಲ್.ಇನ್ ತಿಳಿಸಿದೆ.

ಇದನ್ನೂ ಓದಿ: ಪ್ರಶಾಂತ್ ಭೂಷಣ್ ಮೇಲಿನ ಸುಪ್ರೀಂಕೋರ್ಟ್ ಕ್ರಮ ಅಸಂವಿಧಾನಿಕ: ನ್ಯಾಯಮೂರ್ತಿ ಕರ್ಣನ್‌

ವಿದ್ಯಾರ್ಥಿಗಳು ಪತ್ರದಲ್ಲಿ ನ್ಯಾಯಾಧೀಶರಿಗೆ ಭಾವನಾತ್ಮಕ ಮನವಿ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ನ್ಯಾಯಾಂಗವು ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಾಂಗವು ತನ್ನ ಪ್ರಕರಣವನ್ನು ಬದಲಾಯಿಸುವ ಮೂಲಕ ಟೀಕೆಗೆ ಉತ್ತರಿಸಬೇಕಾಗಿದೆ. ನ್ಯಾಯಕ್ಕಾಗಿ ನ್ಯಾಯಾಲಯವು ತಿರಸ್ಕಾರಕ್ಕೆ ಗುರಿಯಾಗಬಾರದು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪಾರದರ್ಶಕತೆ, ಹೊಣೆಗಾರಿಕೆ, ಪರಿಸರ ಸಂರಕ್ಷಣೆ, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಭೂಷಣ್ ವರ್ಷಗಳಿಂದ ನ್ಯಾಯಾಲಯಗಳಲ್ಲಿ ಹೋರಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಕಾನೂನು ಭ್ರಾತೃತ್ವ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಭೂಷಣ್ ಅವರ ಕೊಡುಗೆಯನ್ನು ಎಲ್ಲರೂ ಮೆಚ್ಚಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಭೂಷಣ್ ಅವರ ಎರಡು ಟ್ವೀಟ್‌ಗಳು ನ್ಯಾಯಾಲಯದ ಪಾವಿತ್ರ್ಯವನ್ನು ನೋಯಿಸುತ್ತವೆ ಎಂದು ಒಪ್ಪಲು ಸಾಧ್ಯವಿಲ್ಲ. ಬದಲಾಗಿ, ಅವರು ಅಂಚಿನಲ್ಲಿರುವ ಮತ್ತು ಧ್ವನಿರಹಿತ ಸಮುದಾಯದ ಧ್ವನಿಯನ್ನು ಪ್ರತಿನಿಧಿಸುತ್ತದೆ ಎಂದು ವಿದ್ಯಾರ್ತಿಗಳು ಪತ್ರದಲ್ಲಿ ಬರೆದಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ವಿ.ಕೆ.ಅಯ್ಯರ್ ಅವರ ತೀರ್ಪನ್ನು ಉಲ್ಲೇಖಿಸಿ “ನ್ಯಾಯಾಂಗವನ್ನು ನ್ಯಾಯಯುತವಾಗಿ ಟೀಕಿಸುವುದು ಅಪರಾಧವಲ್ಲ. ಇದು ಪ್ರಜಾಪ್ರಭುತ್ವದಲ್ಲಿ ಅಗತ್ಯವಾದ ಹಕ್ಕು” ಎಂದು ಕಾನೂನು ವಿದ್ಯಾರ್ಥಿಗಳು ಹೇಳಿದರು.

ಆಗಸ್ಟ್ 14 ರ ತೀರ್ಪಿನ ನಂತರ, ಮಾಜಿ ನ್ಯಾಯಾಧೀಶರು, ನಿವೃತ್ತ ಅಧಿಕಾರಿಗಳು, ಪತ್ರಕರ್ತರು ಮತ್ತು ವಕೀಲರು ಸೇರಿದಂತೆ ನಾಗರಿಕ ಸಮಾಜದ 3,000 ಕ್ಕೂ ಹೆಚ್ಚು ಸದಸ್ಯರು ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿದ್ದರು.

ಪ್ರತಿಪಕ್ಷದ ನಾಯಕರು, ವಕೀಲರು ಮತ್ತು ಮಾನವ ಹಕ್ಕುಗಳ ಸಂಘಟನೆಗಳಲ್ಲದೆ ವಕೀಲರ ಸಂಘದ 1,800 ಕ್ಕೂ ಹೆಚ್ಚು ಸದಸ್ಯರು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಟೀಕಿಸಿದ್ದರು.

2009ರ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸೆಪ್ಟಂಬರ್ 10ಕ್ಕೆ ಮುಂದೂಡಿದ ನ್ಯಾಯಾಲಯವು ಇತ್ತೀಚಿನ ಪ್ರಕರಣದ ಕುರಿತು ಇಂದು ಶಿಕ್ಷೆ ಪ್ರಕಟಿಸಲಿದೆ. ಎಚ್ಚರಿಕೆ ನೀಡಿ ಬಿಡಲಾಗುವುದು ಎಂದು ಹಿರಿಯ ವಕೀಲರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ..; ಯೋಗೇಂದ್ರ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...