Homeಚಳವಳಿಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

ಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

"ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದ್ದಾರೆ.

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್‌ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ’ವಕೀಲಿ ವೃತ್ತಿಗೆ ನಿಷೇಧ ಹೇರಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ’ ಎಂದು ಹೇಳಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಲ ಕಾಲ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಈ ಬಗ್ಗೆ ಪ್ರತಿಕ್ರಿಯಿದ ರಾಜ್‌ದೀಪ್, ನ್ಯಾಯಾಲಯವು ತಾನೆ ಉಂಟು ಮಾಡಿದ ಮುಜುಗರದಿಂದ ಹೊರಬರಲು ನೋಡುತ್ತಿದೆ ಎಂದು ಕುಟುಕಿದ್ದಾರೆ.

ಐಪಿಸಿ ಸೆಕ್ಷನ್ 67 ರ ಪ್ರಕಾರ – ರೂ. 50 ರೂಗಿಂತ ಕಡಿಮೆ ದಂಡವಿದ್ದರೆ, ಜೈಲು ಶಿಕ್ಷೆ 2 ತಿಂಗಳು ಮೀರಬಾರದು. ಆದರೆ ಸುಪ್ರೀಂಕೋರ್ಟ್ ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಘೋಷಿಸಿದೆ. ಅಷ್ಟೇ ಅಲ್ಲದೆ ಅವರ ವಕೀಲಿ ವೃತ್ತಿಗೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ. ಇದು ವಿಸಿ ಮಿಶ್ರಾ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ಪೀಠದ ತೀರ್ಪು. ಇಷ್ಟೆಲ್ಲ ಮಾಡುವುದರ ಬದಲು ಸುಪ್ರೀಂ ಕೋರ್ಟ್ ಯಾಕೆ ಕ್ಷಮೆ ಕೇಳಿ ಬಿಟ್ಟುಬಿಡಬಾರದು” ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ ತೀರ್ಪಿನ ಕುರಿತು ಚೆನ್ನೈ ಹೈಕೋರ್ಟ್‌ ಮಾಜಿ ಮುಖ್ಯ ನ್ಯಾಯಧೀಶ ಚಂದ್ರುರವರು ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವನ್ನು ಬಳಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

“ಅವರಿಗೆ 1 ರೂ. ದಂಡ ಮತ್ತು ದಂಡ ಪಾವತಿಸದಿದ್ದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ, ಇದು ಹಿಂದಿನ ಸುಪ್ರೀಂ ಕೋರ್ಟ್ ತೀರ್ಪಿಗೆ ತದ್ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

“ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದರು.

“ವಕೀಲರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾದರೆ, ಅದನ್ನು ಮೊದಲು ರಾಜ್ಯ ಬಾರ್ ಕೌನ್ಸಿಲ್ ನಿರ್ಧರಿಸಬೇಕು. ಅಲ್ಲಿ ಮೇಲ್ಮನವಿ ಸಲ್ಲಿಸಿದರೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಕ್ರಮ ತೆಗೆದುಕೊಳ್ಳುತ್ತದೆ. ಅದನ್ನು ಮೀರಿದ ಮೇಲ್ಮನವಿಯನ್ನು ಮಾತ್ರ ಸುಪ್ರೀಂ ಕೋರ್ಟ್ ಆಲಿಸಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

“ವಿಶೇಷ ಅಧಿಕಾರಗಳ ಹೊರತಾಗಿಯೂ, ಸಂಸತ್ತು ಜಾರಿಗೆ ತಂದ ಕಾನೂನಿನಡಿಯಲ್ಲಿ ತೀರ್ಪು ನೀಡುವುದನ್ನು ಬಿಟ್ಟು ವಿಶೇಷ ಅಧಿಕಾರವನ್ನು ಚಲಾಯಿಸುವ ಅಧಿಕಾರ ಸುಪ್ರೀಂ ಕೋರ್ಟ್‌ಗೆ ಇಲ್ಲ. ಶಿಸ್ತು ಕ್ರಮವು ಬಾರ್ ಕೌನ್ಸಿಲ್‌ನ ಅಧಿಕಾರಕ್ಕೆ ಒಳಪಟ್ಟಿರುತ್ತದೆ” ಎಂದು ಅವರು ಹೇಳಿದ್ದಾರೆ.

ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್‌ ಬಿ.ಟಿ ವೆಂಕಟೇಶ್ ಈ ಬಗ್ಗೆ ಪ್ರತಿಕ್ರಿಯಿಸಿ, “ಸುಪ್ರೀಂ ಕೋರ್ಟ್ ತಮ್ಮ ಹಿಂದಿನ ತೀರ್ಪುಗಳ ವ್ಯಾಖ್ಯಾನಗಳನ್ನು ಕಾಲಕಾಲಕ್ಕೆ ಬದಲಾಯಿಸಬಹುದು. ನ್ಯಾಯಾಂಗ ನಿಂದನೆಯನ್ನು ದೂರ ಮಾಡುವಂತೆ ಒತ್ತಾಯಿಸುವ ಅವಶ್ಯಕತೆಯಿದೆ. ನಾವು ಇನ್ನೂ ‘ನಿಂದನೆ’ ಎಂಬ ಪದಕ್ಕೆ ಏಕೆ ತೂಗು ಹಾಕುತ್ತೇವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ?” ಎಂದು ಪ್ರಶ್ನಿಸಿದರು.

“ನ್ಯಾಯಾಲಯದ ಆದೇಶಗಳ ಅಸಹಕಾರಕ್ಕೆ ಶಿಕ್ಷಿಸಬಹುದು, ನ್ಯಾಯಾಲಯದ ಗೌರವಕ್ಕಲ್ಲ. ಇದು ನಮ್ಮದೇ ವ್ಯವಸ್ಥೆಯ ಸಂಸ್ಥೆಗಳಲ್ಲಿ ಒಂದಾಗಿದೆ. ಅವರು ತಪ್ಪು ಮಾಡಿದರೆ ಅದನ್ನು ಟೀಕಿಸಲು ನಮಗೆ ಸ್ವಾತಂತ್ರ್ಯವಿದೆ ಎಂದು ಪ್ರಶಾಂತ್‌ ಭೂಷಣ್ ಚೆನ್ನಾಗಿ ಹೇಳಿದರು. ರಾಷ್ಟ್ರಪಿತ ಗಾಂಧೀಜಿ ಅದನ್ನು ಸಂಪೂರ್ಣ ಸ್ಪಷ್ಟತೆಯೊಂದಿಗೆ ಹೇಳಿದ್ದಾರೆ. ನಮ್ಮದೆ ವ್ಯವಸ್ಥೆಯ ಸಂಸ್ಥೆಯೊಂದು ಅದು ದೋಷಗಳನ್ನು ಮಾಡಿದಾಗಲೆಲ್ಲಾ ಟೀಕಿಸುವುದು ಸಾಂವಿಧಾನಿಕ ಕರ್ತವ್ಯವಾಗುತ್ತದೆ” ಎಂದು ಬಿ.ಟಿ ವೇಂಕಟೇಶ್ ಹೇಳಿದರು.


ಓದಿ:  ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...