Homeಚಳವಳಿಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

ಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

"ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದ್ದಾರೆ.

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್‌ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ’ವಕೀಲಿ ವೃತ್ತಿಗೆ ನಿಷೇಧ ಹೇರಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ’ ಎಂದು ಹೇಳಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಲ ಕಾಲ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಈ ಬಗ್ಗೆ ಪ್ರತಿಕ್ರಿಯಿದ ರಾಜ್‌ದೀಪ್, ನ್ಯಾಯಾಲಯವು ತಾನೆ ಉಂಟು ಮಾಡಿದ ಮುಜುಗರದಿಂದ ಹೊರಬರಲು ನೋಡುತ್ತಿದೆ ಎಂದು ಕುಟುಕಿದ್ದಾರೆ.

ಐಪಿಸಿ ಸೆಕ್ಷನ್ 67 ರ ಪ್ರಕಾರ – ರೂ. 50 ರೂಗಿಂತ ಕಡಿಮೆ ದಂಡವಿದ್ದರೆ, ಜೈಲು ಶಿಕ್ಷೆ 2 ತಿಂಗಳು ಮೀರಬಾರದು. ಆದರೆ ಸುಪ್ರೀಂಕೋರ್ಟ್ ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಘೋಷಿಸಿದೆ. ಅಷ್ಟೇ ಅಲ್ಲದೆ ಅವರ ವಕೀಲಿ ವೃತ್ತಿಗೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ. ಇದು ವಿಸಿ ಮಿಶ್ರಾ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ಪೀಠದ ತೀರ್ಪು. ಇಷ್ಟೆಲ್ಲ ಮಾಡುವುದರ ಬದಲು ಸುಪ್ರೀಂ ಕೋರ್ಟ್ ಯಾಕೆ ಕ್ಷಮೆ ಕೇಳಿ ಬಿಟ್ಟುಬಿಡಬಾರದು” ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ ತೀರ್ಪಿನ ಕುರಿತು ಚೆನ್ನೈ ಹೈಕೋರ್ಟ್‌ ಮಾಜಿ ಮುಖ್ಯ ನ್ಯಾಯಧೀಶ ಚಂದ್ರುರವರು ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವನ್ನು ಬಳಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

“ಅವರಿಗೆ 1 ರೂ. ದಂಡ ಮತ್ತು ದಂಡ ಪಾವತಿಸದಿದ್ದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ, ಇದು ಹಿಂದಿನ ಸುಪ್ರೀಂ ಕೋರ್ಟ್ ತೀರ್ಪಿಗೆ ತದ್ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

“ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದರು.

“ವಕೀಲರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾದರೆ, ಅದನ್ನು ಮೊದಲು ರಾಜ್ಯ ಬಾರ್ ಕೌನ್ಸಿಲ್ ನಿರ್ಧರಿಸಬೇಕು. ಅಲ್ಲಿ ಮೇಲ್ಮನವಿ ಸಲ್ಲಿಸಿದರೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಕ್ರಮ ತೆಗೆದುಕೊಳ್ಳುತ್ತದೆ. ಅದನ್ನು ಮೀರಿದ ಮೇಲ್ಮನವಿಯನ್ನು ಮಾತ್ರ ಸುಪ್ರೀಂ ಕೋರ್ಟ್ ಆಲಿಸಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

“ವಿಶೇಷ ಅಧಿಕಾರಗಳ ಹೊರತಾಗಿಯೂ, ಸಂಸತ್ತು ಜಾರಿಗೆ ತಂದ ಕಾನೂನಿನಡಿಯಲ್ಲಿ ತೀರ್ಪು ನೀಡುವುದನ್ನು ಬಿಟ್ಟು ವಿಶೇಷ ಅಧಿಕಾರವನ್ನು ಚಲಾಯಿಸುವ ಅಧಿಕಾರ ಸುಪ್ರೀಂ ಕೋರ್ಟ್‌ಗೆ ಇಲ್ಲ. ಶಿಸ್ತು ಕ್ರಮವು ಬಾರ್ ಕೌನ್ಸಿಲ್‌ನ ಅಧಿಕಾರಕ್ಕೆ ಒಳಪಟ್ಟಿರುತ್ತದೆ” ಎಂದು ಅವರು ಹೇಳಿದ್ದಾರೆ.

ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್‌ ಬಿ.ಟಿ ವೆಂಕಟೇಶ್ ಈ ಬಗ್ಗೆ ಪ್ರತಿಕ್ರಿಯಿಸಿ, “ಸುಪ್ರೀಂ ಕೋರ್ಟ್ ತಮ್ಮ ಹಿಂದಿನ ತೀರ್ಪುಗಳ ವ್ಯಾಖ್ಯಾನಗಳನ್ನು ಕಾಲಕಾಲಕ್ಕೆ ಬದಲಾಯಿಸಬಹುದು. ನ್ಯಾಯಾಂಗ ನಿಂದನೆಯನ್ನು ದೂರ ಮಾಡುವಂತೆ ಒತ್ತಾಯಿಸುವ ಅವಶ್ಯಕತೆಯಿದೆ. ನಾವು ಇನ್ನೂ ‘ನಿಂದನೆ’ ಎಂಬ ಪದಕ್ಕೆ ಏಕೆ ತೂಗು ಹಾಕುತ್ತೇವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ?” ಎಂದು ಪ್ರಶ್ನಿಸಿದರು.

“ನ್ಯಾಯಾಲಯದ ಆದೇಶಗಳ ಅಸಹಕಾರಕ್ಕೆ ಶಿಕ್ಷಿಸಬಹುದು, ನ್ಯಾಯಾಲಯದ ಗೌರವಕ್ಕಲ್ಲ. ಇದು ನಮ್ಮದೇ ವ್ಯವಸ್ಥೆಯ ಸಂಸ್ಥೆಗಳಲ್ಲಿ ಒಂದಾಗಿದೆ. ಅವರು ತಪ್ಪು ಮಾಡಿದರೆ ಅದನ್ನು ಟೀಕಿಸಲು ನಮಗೆ ಸ್ವಾತಂತ್ರ್ಯವಿದೆ ಎಂದು ಪ್ರಶಾಂತ್‌ ಭೂಷಣ್ ಚೆನ್ನಾಗಿ ಹೇಳಿದರು. ರಾಷ್ಟ್ರಪಿತ ಗಾಂಧೀಜಿ ಅದನ್ನು ಸಂಪೂರ್ಣ ಸ್ಪಷ್ಟತೆಯೊಂದಿಗೆ ಹೇಳಿದ್ದಾರೆ. ನಮ್ಮದೆ ವ್ಯವಸ್ಥೆಯ ಸಂಸ್ಥೆಯೊಂದು ಅದು ದೋಷಗಳನ್ನು ಮಾಡಿದಾಗಲೆಲ್ಲಾ ಟೀಕಿಸುವುದು ಸಾಂವಿಧಾನಿಕ ಕರ್ತವ್ಯವಾಗುತ್ತದೆ” ಎಂದು ಬಿ.ಟಿ ವೇಂಕಟೇಶ್ ಹೇಳಿದರು.


ಓದಿ:  ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...