Homeಚಳವಳಿಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

ಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

"ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದ್ದಾರೆ.

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್‌ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ’ವಕೀಲಿ ವೃತ್ತಿಗೆ ನಿಷೇಧ ಹೇರಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ’ ಎಂದು ಹೇಳಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಲ ಕಾಲ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಈ ಬಗ್ಗೆ ಪ್ರತಿಕ್ರಿಯಿದ ರಾಜ್‌ದೀಪ್, ನ್ಯಾಯಾಲಯವು ತಾನೆ ಉಂಟು ಮಾಡಿದ ಮುಜುಗರದಿಂದ ಹೊರಬರಲು ನೋಡುತ್ತಿದೆ ಎಂದು ಕುಟುಕಿದ್ದಾರೆ.

ಐಪಿಸಿ ಸೆಕ್ಷನ್ 67 ರ ಪ್ರಕಾರ – ರೂ. 50 ರೂಗಿಂತ ಕಡಿಮೆ ದಂಡವಿದ್ದರೆ, ಜೈಲು ಶಿಕ್ಷೆ 2 ತಿಂಗಳು ಮೀರಬಾರದು. ಆದರೆ ಸುಪ್ರೀಂಕೋರ್ಟ್ ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಘೋಷಿಸಿದೆ. ಅಷ್ಟೇ ಅಲ್ಲದೆ ಅವರ ವಕೀಲಿ ವೃತ್ತಿಗೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ. ಇದು ವಿಸಿ ಮಿಶ್ರಾ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ಪೀಠದ ತೀರ್ಪು. ಇಷ್ಟೆಲ್ಲ ಮಾಡುವುದರ ಬದಲು ಸುಪ್ರೀಂ ಕೋರ್ಟ್ ಯಾಕೆ ಕ್ಷಮೆ ಕೇಳಿ ಬಿಟ್ಟುಬಿಡಬಾರದು” ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ ತೀರ್ಪಿನ ಕುರಿತು ಚೆನ್ನೈ ಹೈಕೋರ್ಟ್‌ ಮಾಜಿ ಮುಖ್ಯ ನ್ಯಾಯಧೀಶ ಚಂದ್ರುರವರು ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವನ್ನು ಬಳಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

“ಅವರಿಗೆ 1 ರೂ. ದಂಡ ಮತ್ತು ದಂಡ ಪಾವತಿಸದಿದ್ದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ, ಇದು ಹಿಂದಿನ ಸುಪ್ರೀಂ ಕೋರ್ಟ್ ತೀರ್ಪಿಗೆ ತದ್ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

“ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದರು.

“ವಕೀಲರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾದರೆ, ಅದನ್ನು ಮೊದಲು ರಾಜ್ಯ ಬಾರ್ ಕೌನ್ಸಿಲ್ ನಿರ್ಧರಿಸಬೇಕು. ಅಲ್ಲಿ ಮೇಲ್ಮನವಿ ಸಲ್ಲಿಸಿದರೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಕ್ರಮ ತೆಗೆದುಕೊಳ್ಳುತ್ತದೆ. ಅದನ್ನು ಮೀರಿದ ಮೇಲ್ಮನವಿಯನ್ನು ಮಾತ್ರ ಸುಪ್ರೀಂ ಕೋರ್ಟ್ ಆಲಿಸಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

“ವಿಶೇಷ ಅಧಿಕಾರಗಳ ಹೊರತಾಗಿಯೂ, ಸಂಸತ್ತು ಜಾರಿಗೆ ತಂದ ಕಾನೂನಿನಡಿಯಲ್ಲಿ ತೀರ್ಪು ನೀಡುವುದನ್ನು ಬಿಟ್ಟು ವಿಶೇಷ ಅಧಿಕಾರವನ್ನು ಚಲಾಯಿಸುವ ಅಧಿಕಾರ ಸುಪ್ರೀಂ ಕೋರ್ಟ್‌ಗೆ ಇಲ್ಲ. ಶಿಸ್ತು ಕ್ರಮವು ಬಾರ್ ಕೌನ್ಸಿಲ್‌ನ ಅಧಿಕಾರಕ್ಕೆ ಒಳಪಟ್ಟಿರುತ್ತದೆ” ಎಂದು ಅವರು ಹೇಳಿದ್ದಾರೆ.

ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್‌ ಬಿ.ಟಿ ವೆಂಕಟೇಶ್ ಈ ಬಗ್ಗೆ ಪ್ರತಿಕ್ರಿಯಿಸಿ, “ಸುಪ್ರೀಂ ಕೋರ್ಟ್ ತಮ್ಮ ಹಿಂದಿನ ತೀರ್ಪುಗಳ ವ್ಯಾಖ್ಯಾನಗಳನ್ನು ಕಾಲಕಾಲಕ್ಕೆ ಬದಲಾಯಿಸಬಹುದು. ನ್ಯಾಯಾಂಗ ನಿಂದನೆಯನ್ನು ದೂರ ಮಾಡುವಂತೆ ಒತ್ತಾಯಿಸುವ ಅವಶ್ಯಕತೆಯಿದೆ. ನಾವು ಇನ್ನೂ ‘ನಿಂದನೆ’ ಎಂಬ ಪದಕ್ಕೆ ಏಕೆ ತೂಗು ಹಾಕುತ್ತೇವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ?” ಎಂದು ಪ್ರಶ್ನಿಸಿದರು.

“ನ್ಯಾಯಾಲಯದ ಆದೇಶಗಳ ಅಸಹಕಾರಕ್ಕೆ ಶಿಕ್ಷಿಸಬಹುದು, ನ್ಯಾಯಾಲಯದ ಗೌರವಕ್ಕಲ್ಲ. ಇದು ನಮ್ಮದೇ ವ್ಯವಸ್ಥೆಯ ಸಂಸ್ಥೆಗಳಲ್ಲಿ ಒಂದಾಗಿದೆ. ಅವರು ತಪ್ಪು ಮಾಡಿದರೆ ಅದನ್ನು ಟೀಕಿಸಲು ನಮಗೆ ಸ್ವಾತಂತ್ರ್ಯವಿದೆ ಎಂದು ಪ್ರಶಾಂತ್‌ ಭೂಷಣ್ ಚೆನ್ನಾಗಿ ಹೇಳಿದರು. ರಾಷ್ಟ್ರಪಿತ ಗಾಂಧೀಜಿ ಅದನ್ನು ಸಂಪೂರ್ಣ ಸ್ಪಷ್ಟತೆಯೊಂದಿಗೆ ಹೇಳಿದ್ದಾರೆ. ನಮ್ಮದೆ ವ್ಯವಸ್ಥೆಯ ಸಂಸ್ಥೆಯೊಂದು ಅದು ದೋಷಗಳನ್ನು ಮಾಡಿದಾಗಲೆಲ್ಲಾ ಟೀಕಿಸುವುದು ಸಾಂವಿಧಾನಿಕ ಕರ್ತವ್ಯವಾಗುತ್ತದೆ” ಎಂದು ಬಿ.ಟಿ ವೇಂಕಟೇಶ್ ಹೇಳಿದರು.


ಓದಿ:  ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...