Homeಚಳವಳಿಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

ಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

"ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದ್ದಾರೆ.

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್‌ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ’ವಕೀಲಿ ವೃತ್ತಿಗೆ ನಿಷೇಧ ಹೇರಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ’ ಎಂದು ಹೇಳಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಲ ಕಾಲ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಈ ಬಗ್ಗೆ ಪ್ರತಿಕ್ರಿಯಿದ ರಾಜ್‌ದೀಪ್, ನ್ಯಾಯಾಲಯವು ತಾನೆ ಉಂಟು ಮಾಡಿದ ಮುಜುಗರದಿಂದ ಹೊರಬರಲು ನೋಡುತ್ತಿದೆ ಎಂದು ಕುಟುಕಿದ್ದಾರೆ.

ಐಪಿಸಿ ಸೆಕ್ಷನ್ 67 ರ ಪ್ರಕಾರ – ರೂ. 50 ರೂಗಿಂತ ಕಡಿಮೆ ದಂಡವಿದ್ದರೆ, ಜೈಲು ಶಿಕ್ಷೆ 2 ತಿಂಗಳು ಮೀರಬಾರದು. ಆದರೆ ಸುಪ್ರೀಂಕೋರ್ಟ್ ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಘೋಷಿಸಿದೆ. ಅಷ್ಟೇ ಅಲ್ಲದೆ ಅವರ ವಕೀಲಿ ವೃತ್ತಿಗೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ. ಇದು ವಿಸಿ ಮಿಶ್ರಾ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ಪೀಠದ ತೀರ್ಪು. ಇಷ್ಟೆಲ್ಲ ಮಾಡುವುದರ ಬದಲು ಸುಪ್ರೀಂ ಕೋರ್ಟ್ ಯಾಕೆ ಕ್ಷಮೆ ಕೇಳಿ ಬಿಟ್ಟುಬಿಡಬಾರದು” ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ ತೀರ್ಪಿನ ಕುರಿತು ಚೆನ್ನೈ ಹೈಕೋರ್ಟ್‌ ಮಾಜಿ ಮುಖ್ಯ ನ್ಯಾಯಧೀಶ ಚಂದ್ರುರವರು ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವನ್ನು ಬಳಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

“ಅವರಿಗೆ 1 ರೂ. ದಂಡ ಮತ್ತು ದಂಡ ಪಾವತಿಸದಿದ್ದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ, ಇದು ಹಿಂದಿನ ಸುಪ್ರೀಂ ಕೋರ್ಟ್ ತೀರ್ಪಿಗೆ ತದ್ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

“ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದರು.

“ವಕೀಲರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾದರೆ, ಅದನ್ನು ಮೊದಲು ರಾಜ್ಯ ಬಾರ್ ಕೌನ್ಸಿಲ್ ನಿರ್ಧರಿಸಬೇಕು. ಅಲ್ಲಿ ಮೇಲ್ಮನವಿ ಸಲ್ಲಿಸಿದರೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಕ್ರಮ ತೆಗೆದುಕೊಳ್ಳುತ್ತದೆ. ಅದನ್ನು ಮೀರಿದ ಮೇಲ್ಮನವಿಯನ್ನು ಮಾತ್ರ ಸುಪ್ರೀಂ ಕೋರ್ಟ್ ಆಲಿಸಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

“ವಿಶೇಷ ಅಧಿಕಾರಗಳ ಹೊರತಾಗಿಯೂ, ಸಂಸತ್ತು ಜಾರಿಗೆ ತಂದ ಕಾನೂನಿನಡಿಯಲ್ಲಿ ತೀರ್ಪು ನೀಡುವುದನ್ನು ಬಿಟ್ಟು ವಿಶೇಷ ಅಧಿಕಾರವನ್ನು ಚಲಾಯಿಸುವ ಅಧಿಕಾರ ಸುಪ್ರೀಂ ಕೋರ್ಟ್‌ಗೆ ಇಲ್ಲ. ಶಿಸ್ತು ಕ್ರಮವು ಬಾರ್ ಕೌನ್ಸಿಲ್‌ನ ಅಧಿಕಾರಕ್ಕೆ ಒಳಪಟ್ಟಿರುತ್ತದೆ” ಎಂದು ಅವರು ಹೇಳಿದ್ದಾರೆ.

ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್‌ ಬಿ.ಟಿ ವೆಂಕಟೇಶ್ ಈ ಬಗ್ಗೆ ಪ್ರತಿಕ್ರಿಯಿಸಿ, “ಸುಪ್ರೀಂ ಕೋರ್ಟ್ ತಮ್ಮ ಹಿಂದಿನ ತೀರ್ಪುಗಳ ವ್ಯಾಖ್ಯಾನಗಳನ್ನು ಕಾಲಕಾಲಕ್ಕೆ ಬದಲಾಯಿಸಬಹುದು. ನ್ಯಾಯಾಂಗ ನಿಂದನೆಯನ್ನು ದೂರ ಮಾಡುವಂತೆ ಒತ್ತಾಯಿಸುವ ಅವಶ್ಯಕತೆಯಿದೆ. ನಾವು ಇನ್ನೂ ‘ನಿಂದನೆ’ ಎಂಬ ಪದಕ್ಕೆ ಏಕೆ ತೂಗು ಹಾಕುತ್ತೇವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ?” ಎಂದು ಪ್ರಶ್ನಿಸಿದರು.

“ನ್ಯಾಯಾಲಯದ ಆದೇಶಗಳ ಅಸಹಕಾರಕ್ಕೆ ಶಿಕ್ಷಿಸಬಹುದು, ನ್ಯಾಯಾಲಯದ ಗೌರವಕ್ಕಲ್ಲ. ಇದು ನಮ್ಮದೇ ವ್ಯವಸ್ಥೆಯ ಸಂಸ್ಥೆಗಳಲ್ಲಿ ಒಂದಾಗಿದೆ. ಅವರು ತಪ್ಪು ಮಾಡಿದರೆ ಅದನ್ನು ಟೀಕಿಸಲು ನಮಗೆ ಸ್ವಾತಂತ್ರ್ಯವಿದೆ ಎಂದು ಪ್ರಶಾಂತ್‌ ಭೂಷಣ್ ಚೆನ್ನಾಗಿ ಹೇಳಿದರು. ರಾಷ್ಟ್ರಪಿತ ಗಾಂಧೀಜಿ ಅದನ್ನು ಸಂಪೂರ್ಣ ಸ್ಪಷ್ಟತೆಯೊಂದಿಗೆ ಹೇಳಿದ್ದಾರೆ. ನಮ್ಮದೆ ವ್ಯವಸ್ಥೆಯ ಸಂಸ್ಥೆಯೊಂದು ಅದು ದೋಷಗಳನ್ನು ಮಾಡಿದಾಗಲೆಲ್ಲಾ ಟೀಕಿಸುವುದು ಸಾಂವಿಧಾನಿಕ ಕರ್ತವ್ಯವಾಗುತ್ತದೆ” ಎಂದು ಬಿ.ಟಿ ವೇಂಕಟೇಶ್ ಹೇಳಿದರು.


ಓದಿ:  ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...