Homeಚಳವಳಿಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

ಭೂಷಣ್ ಪ್ರಕರಣ: ವಕೀಲಿ ವೃತ್ತಿಗೆ ನಿಷೇಧವೇರುವುದು ಸುಪ್ರೀಂ ವ್ಯಾಪ್ತಿಯಲ್ಲಿಲ್ಲ

"ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದ್ದಾರೆ.

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್‌ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ’ವಕೀಲಿ ವೃತ್ತಿಗೆ ನಿಷೇಧ ಹೇರಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ’ ಎಂದು ಹೇಳಿದ್ದಾರೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್‌ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಲ ಕಾಲ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಈ ಬಗ್ಗೆ ಪ್ರತಿಕ್ರಿಯಿದ ರಾಜ್‌ದೀಪ್, ನ್ಯಾಯಾಲಯವು ತಾನೆ ಉಂಟು ಮಾಡಿದ ಮುಜುಗರದಿಂದ ಹೊರಬರಲು ನೋಡುತ್ತಿದೆ ಎಂದು ಕುಟುಕಿದ್ದಾರೆ.

ಐಪಿಸಿ ಸೆಕ್ಷನ್ 67 ರ ಪ್ರಕಾರ – ರೂ. 50 ರೂಗಿಂತ ಕಡಿಮೆ ದಂಡವಿದ್ದರೆ, ಜೈಲು ಶಿಕ್ಷೆ 2 ತಿಂಗಳು ಮೀರಬಾರದು. ಆದರೆ ಸುಪ್ರೀಂಕೋರ್ಟ್ ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಘೋಷಿಸಿದೆ. ಅಷ್ಟೇ ಅಲ್ಲದೆ ಅವರ ವಕೀಲಿ ವೃತ್ತಿಗೆ ನಿಷೇಧ ಮಾಡಲು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿಲ್ಲ. ಇದು ವಿಸಿ ಮಿಶ್ರಾ ಅವರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ಪೀಠದ ತೀರ್ಪು. ಇಷ್ಟೆಲ್ಲ ಮಾಡುವುದರ ಬದಲು ಸುಪ್ರೀಂ ಕೋರ್ಟ್ ಯಾಕೆ ಕ್ಷಮೆ ಕೇಳಿ ಬಿಟ್ಟುಬಿಡಬಾರದು” ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ ತೀರ್ಪಿನ ಕುರಿತು ಚೆನ್ನೈ ಹೈಕೋರ್ಟ್‌ ಮಾಜಿ ಮುಖ್ಯ ನ್ಯಾಯಧೀಶ ಚಂದ್ರುರವರು ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವನ್ನು ಬಳಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

“ಅವರಿಗೆ 1 ರೂ. ದಂಡ ಮತ್ತು ದಂಡ ಪಾವತಿಸದಿದ್ದರೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ, ಇದು ಹಿಂದಿನ ಸುಪ್ರೀಂ ಕೋರ್ಟ್ ತೀರ್ಪಿಗೆ ತದ್ವಿರುದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುವುದಿಲ್ಲ, ಅದು ನನ್ನ ಆತ್ಮಸಾಕ್ಷಿಯ ನಿಂದನೆಯಾಗುತ್ತದೆ: ಪ್ರಶಾಂತ್ ಭೂಷಣ್

“ಬಾರ್ ಕೌನ್ಸಿಲ್ ಮಾತ್ರ ಕಾನೂನು ವೃತ್ತಿಯ ನಡವಳಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ ವಿಶೇಷ ಅಧಿಕಾರವನ್ನು ಬಳಸುವುದು ಸುಪ್ರೀಂ ಕೋರ್ಟ್‌ನ ಹಿಂದಿನ ತೀರ್ಪುಗಳಿಗೆ ವಿರುದ್ಧವಾಗಿದೆ” ಎಂದು ಚಂದ್ರುರವರು ಹೇಳಿದರು.

“ವಕೀಲರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾದರೆ, ಅದನ್ನು ಮೊದಲು ರಾಜ್ಯ ಬಾರ್ ಕೌನ್ಸಿಲ್ ನಿರ್ಧರಿಸಬೇಕು. ಅಲ್ಲಿ ಮೇಲ್ಮನವಿ ಸಲ್ಲಿಸಿದರೆ, ಬಾರ್ ಕೌನ್ಸಿಲ್ ಆಫ್ ಇಂಡಿಯಾ ಕ್ರಮ ತೆಗೆದುಕೊಳ್ಳುತ್ತದೆ. ಅದನ್ನು ಮೀರಿದ ಮೇಲ್ಮನವಿಯನ್ನು ಮಾತ್ರ ಸುಪ್ರೀಂ ಕೋರ್ಟ್ ಆಲಿಸಬಹುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

“ವಿಶೇಷ ಅಧಿಕಾರಗಳ ಹೊರತಾಗಿಯೂ, ಸಂಸತ್ತು ಜಾರಿಗೆ ತಂದ ಕಾನೂನಿನಡಿಯಲ್ಲಿ ತೀರ್ಪು ನೀಡುವುದನ್ನು ಬಿಟ್ಟು ವಿಶೇಷ ಅಧಿಕಾರವನ್ನು ಚಲಾಯಿಸುವ ಅಧಿಕಾರ ಸುಪ್ರೀಂ ಕೋರ್ಟ್‌ಗೆ ಇಲ್ಲ. ಶಿಸ್ತು ಕ್ರಮವು ಬಾರ್ ಕೌನ್ಸಿಲ್‌ನ ಅಧಿಕಾರಕ್ಕೆ ಒಳಪಟ್ಟಿರುತ್ತದೆ” ಎಂದು ಅವರು ಹೇಳಿದ್ದಾರೆ.

ಮಾಜಿ ಪಬ್ಲಿಕ್ ಪ್ರಾಸಿಕ್ಯೂಟರ್‌ ಬಿ.ಟಿ ವೆಂಕಟೇಶ್ ಈ ಬಗ್ಗೆ ಪ್ರತಿಕ್ರಿಯಿಸಿ, “ಸುಪ್ರೀಂ ಕೋರ್ಟ್ ತಮ್ಮ ಹಿಂದಿನ ತೀರ್ಪುಗಳ ವ್ಯಾಖ್ಯಾನಗಳನ್ನು ಕಾಲಕಾಲಕ್ಕೆ ಬದಲಾಯಿಸಬಹುದು. ನ್ಯಾಯಾಂಗ ನಿಂದನೆಯನ್ನು ದೂರ ಮಾಡುವಂತೆ ಒತ್ತಾಯಿಸುವ ಅವಶ್ಯಕತೆಯಿದೆ. ನಾವು ಇನ್ನೂ ‘ನಿಂದನೆ’ ಎಂಬ ಪದಕ್ಕೆ ಏಕೆ ತೂಗು ಹಾಕುತ್ತೇವೆ ಎಂಬುದು ನನಗೆ ಅರ್ಥವಾಗುತ್ತಿಲ್ಲ?” ಎಂದು ಪ್ರಶ್ನಿಸಿದರು.

“ನ್ಯಾಯಾಲಯದ ಆದೇಶಗಳ ಅಸಹಕಾರಕ್ಕೆ ಶಿಕ್ಷಿಸಬಹುದು, ನ್ಯಾಯಾಲಯದ ಗೌರವಕ್ಕಲ್ಲ. ಇದು ನಮ್ಮದೇ ವ್ಯವಸ್ಥೆಯ ಸಂಸ್ಥೆಗಳಲ್ಲಿ ಒಂದಾಗಿದೆ. ಅವರು ತಪ್ಪು ಮಾಡಿದರೆ ಅದನ್ನು ಟೀಕಿಸಲು ನಮಗೆ ಸ್ವಾತಂತ್ರ್ಯವಿದೆ ಎಂದು ಪ್ರಶಾಂತ್‌ ಭೂಷಣ್ ಚೆನ್ನಾಗಿ ಹೇಳಿದರು. ರಾಷ್ಟ್ರಪಿತ ಗಾಂಧೀಜಿ ಅದನ್ನು ಸಂಪೂರ್ಣ ಸ್ಪಷ್ಟತೆಯೊಂದಿಗೆ ಹೇಳಿದ್ದಾರೆ. ನಮ್ಮದೆ ವ್ಯವಸ್ಥೆಯ ಸಂಸ್ಥೆಯೊಂದು ಅದು ದೋಷಗಳನ್ನು ಮಾಡಿದಾಗಲೆಲ್ಲಾ ಟೀಕಿಸುವುದು ಸಾಂವಿಧಾನಿಕ ಕರ್ತವ್ಯವಾಗುತ್ತದೆ” ಎಂದು ಬಿ.ಟಿ ವೇಂಕಟೇಶ್ ಹೇಳಿದರು.


ಓದಿ:  ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....