Homeಮುಖಪುಟಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

- Advertisement -
- Advertisement -

ಸುಪ್ರೀಂ ಕೋರ್ಟ್‌‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಅವರ ವಿರುದ್ದ ಗುಜರಾತ್ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.

ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್‌ ಅವರನ್ನು ರಾಮಾಯಣದ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ ಹಾಗೂ ಜನರ ದಾರಿ ತಪ್ಪಿಸಲು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ಆದೇಶಗಳನ್ನು ಬಳಸಿದ್ದಕ್ಕಾಗಿ ಕಣ್ಣನ್ ಗೋಪಿನಾಥನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಎಫ್‌ಐಆರ್ ಅನ್ನು ಭಾನುವಾರ ಸಂಜೆ ರಾಜ್‌ಕೋಟ್ ನಗರದ ಭಕ್ತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ತನಿಖೆಯನ್ನು ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಗೆ ವರ್ಗಾಯಿಸಲಾಯಿತು.

ರಾಜ್‌ಕೋಟ್ ಮೂಲದ ನಿವೃತ್ತ ಕ್ಯಾಪ್ಟನ್ ಜಯದೇವ್ ಭಾಯ್ ಜೋಶಿ ಎಂಬವರು, ಮಾರ್ಚ್ 28 ರಂದು ಪ್ರಶಾಂತ್‌ ಭೂಷಣ್ ಮಾಡಿದ ಟ್ವೀಟ್‌ನಲ್ಲಿ ರಾಮಾಯಣ ಮತ್ತು ಮಹಾಭಾರತದ ಜೊತೆ ಅಫೀಮು ಪದವನ್ನು ಬಳಸಿದ್ದಾರೆ, ಇದು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ಎಸ್‌ಒಜಿಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಪ್ರಕರಣದ ತನಿಖಾ ಅಧಿಕಾರಿಯಾದ ರೋಹಿತ್ ರಾವಲ್ ಹೇಳಿದ್ದಾರೆ.

“ಬಲವಂತದ ಲಾಕ್‌ಡೌನ್‌ನಿಂದಾಗಿ ಕೋಟ್ಯಂತರ ಜನರು ಹಸಿವಿನಿಂದ ಬಳಲುತ್ತಿರುವಾಗ, ನಮ್ಮ ಹೃದಯಹೀನ ಮಂತ್ರಿಗಳು ರಾಮಾಯಣ ಮತ್ತು ಮಹಾಭಾರತದ ಅಫೀಮನ್ನು ಜನರಿಗೆ ನೀಡುತ್ತಿದ್ದಾರೆ” ಎಂದು ಭೂಷಣ್ ಮಾರ್ಚ್ 28 ರಂದು ಟ್ವೀಟ್ ಮಾಡಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸುದ್ದಿ ಸಂಪಾದಕ ಅಶ್ಲಿನ್ ಮ್ಯಾಥ್ಯೂ ಮತ್ತು ಕಣ್ಣನ್‌ ಗೋಪಿನಾಥನ್ ಅವರು ಸರ್ಕಾರದ ಆದೇಶಗಳನ್ನು ತಪ್ಪುದಾರಿಗೆಳೆಯುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಮತ್ತು ಇದು ಸಮಾಜದಲ್ಲಿ ಶಾಂತಿಗೆ ಭಂಗ ತರುತ್ತದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ದೂರಿನ ಆಧಾರದ ಮೇಲೆ, ನಾವು ಈ ಮೂವರ ವಿರುದ್ಧ ಸೆಕ್ಷನ್ 34 (ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯ), 295-ಎ (ಯಾವುದೇ ವರ್ಗದವರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳನ್ನು ಅದರ ಧರ್ಮವನ್ನು ಅವಮಾನಿಸುವ ಮೂಲಕ ಅಥವಾ ಧಾರ್ಮಿಕ ನಂಬಿಕೆಗಳು), 505 (1) (ಜನರಲ್ಲಿ ಭಯ ಮತ್ತು ಎಚ್ಚರಿಕೆಯನ್ನು ಉಂಟುಮಾಡುವ ಯಾವುದೇ ಹೇಳಿಕೆ, ವದಂತಿ ಅಥವಾ ವರದಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು) ಮತ್ತು ಸೆಕ್ಷನ್ 120-ಬಿ (ಭಾರತೀಯ ದಂಡ ಸಂಹಿತೆಯ ಕ್ರಿಮಿನಲ್ ಪಿತೂರಿ) ದಾಖಲಿಸಿದ್ದೇವೆ, ಹೆಚ್ಚಿನ ತನಿಖೆಗಾಗಿ ನಾವು ಟ್ವೀಟ್ ಅನ್ನು ಪರಿಶೀಲಿಸುತ್ತಿದ್ದೇವೆ” ಎಂದು ರಾವಲ್ ಹೇಳಿದ್ದಾರೆ.

ದಾಖಲಾದ ದೂರಿನ ಬಗ್ಗೆ ಪ್ರತಿಕ್ರಿಯೆಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದಾರೆ.

ದೂರು ದಾಖಲಾದ ಬಗ್ಗೆ ಗೋಪಿನಾಥನ್ ಸೋಮವಾರ ಟ್ವೀಟ್ ಮಾಡಿದ್ದು “ಒಳ್ಳೆ ಪ್ರಯತ್ನ. ನೀವು ನನ್ನನ್ನು ಬಂಧಿಸಬಹುದು, ಆದರೆ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇಲ್ಲಿ ಯಾರೂ ನಿಮ್ಮನ್ನು ಹೆದರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

ಗೋಪಿನಾಥನ್ ಅವರು “ಅಸಹಿಷ್ಣುತೆ ಮತ್ತು ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತಿದ್ದಾರೆ” ಎಂದು ಆರೋಪಿಸಿ ಸೇವೆಗೆ ರಾಜಿನಾಮೆ ಕೊಟ್ಟಿದ್ದರು.


ಇದನ್ನೂ ಓದಿ: ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಟ್ಲರ್ ನ ಆಡಳಿತವು, ಸಂವಿಧಾನದ ಕೈ ಮೀರಿ ಹೋಗುವುದರೊಳಗೆ ಎಲ್ಲರೂ ಎಚ್ಚರಗೊಂಡು ಸರಿದಾರಿಗೆ ತರಬೇಕು.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...