Homeಮುಖಪುಟಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

- Advertisement -
- Advertisement -

ಸುಪ್ರೀಂ ಕೋರ್ಟ್‌‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಅವರ ವಿರುದ್ದ ಗುಜರಾತ್ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.

ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್‌ ಅವರನ್ನು ರಾಮಾಯಣದ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ ಹಾಗೂ ಜನರ ದಾರಿ ತಪ್ಪಿಸಲು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ಆದೇಶಗಳನ್ನು ಬಳಸಿದ್ದಕ್ಕಾಗಿ ಕಣ್ಣನ್ ಗೋಪಿನಾಥನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಎಫ್‌ಐಆರ್ ಅನ್ನು ಭಾನುವಾರ ಸಂಜೆ ರಾಜ್‌ಕೋಟ್ ನಗರದ ಭಕ್ತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ತನಿಖೆಯನ್ನು ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಗೆ ವರ್ಗಾಯಿಸಲಾಯಿತು.

ರಾಜ್‌ಕೋಟ್ ಮೂಲದ ನಿವೃತ್ತ ಕ್ಯಾಪ್ಟನ್ ಜಯದೇವ್ ಭಾಯ್ ಜೋಶಿ ಎಂಬವರು, ಮಾರ್ಚ್ 28 ರಂದು ಪ್ರಶಾಂತ್‌ ಭೂಷಣ್ ಮಾಡಿದ ಟ್ವೀಟ್‌ನಲ್ಲಿ ರಾಮಾಯಣ ಮತ್ತು ಮಹಾಭಾರತದ ಜೊತೆ ಅಫೀಮು ಪದವನ್ನು ಬಳಸಿದ್ದಾರೆ, ಇದು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ಎಸ್‌ಒಜಿಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಪ್ರಕರಣದ ತನಿಖಾ ಅಧಿಕಾರಿಯಾದ ರೋಹಿತ್ ರಾವಲ್ ಹೇಳಿದ್ದಾರೆ.

“ಬಲವಂತದ ಲಾಕ್‌ಡೌನ್‌ನಿಂದಾಗಿ ಕೋಟ್ಯಂತರ ಜನರು ಹಸಿವಿನಿಂದ ಬಳಲುತ್ತಿರುವಾಗ, ನಮ್ಮ ಹೃದಯಹೀನ ಮಂತ್ರಿಗಳು ರಾಮಾಯಣ ಮತ್ತು ಮಹಾಭಾರತದ ಅಫೀಮನ್ನು ಜನರಿಗೆ ನೀಡುತ್ತಿದ್ದಾರೆ” ಎಂದು ಭೂಷಣ್ ಮಾರ್ಚ್ 28 ರಂದು ಟ್ವೀಟ್ ಮಾಡಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸುದ್ದಿ ಸಂಪಾದಕ ಅಶ್ಲಿನ್ ಮ್ಯಾಥ್ಯೂ ಮತ್ತು ಕಣ್ಣನ್‌ ಗೋಪಿನಾಥನ್ ಅವರು ಸರ್ಕಾರದ ಆದೇಶಗಳನ್ನು ತಪ್ಪುದಾರಿಗೆಳೆಯುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಮತ್ತು ಇದು ಸಮಾಜದಲ್ಲಿ ಶಾಂತಿಗೆ ಭಂಗ ತರುತ್ತದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ದೂರಿನ ಆಧಾರದ ಮೇಲೆ, ನಾವು ಈ ಮೂವರ ವಿರುದ್ಧ ಸೆಕ್ಷನ್ 34 (ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯ), 295-ಎ (ಯಾವುದೇ ವರ್ಗದವರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳನ್ನು ಅದರ ಧರ್ಮವನ್ನು ಅವಮಾನಿಸುವ ಮೂಲಕ ಅಥವಾ ಧಾರ್ಮಿಕ ನಂಬಿಕೆಗಳು), 505 (1) (ಜನರಲ್ಲಿ ಭಯ ಮತ್ತು ಎಚ್ಚರಿಕೆಯನ್ನು ಉಂಟುಮಾಡುವ ಯಾವುದೇ ಹೇಳಿಕೆ, ವದಂತಿ ಅಥವಾ ವರದಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು) ಮತ್ತು ಸೆಕ್ಷನ್ 120-ಬಿ (ಭಾರತೀಯ ದಂಡ ಸಂಹಿತೆಯ ಕ್ರಿಮಿನಲ್ ಪಿತೂರಿ) ದಾಖಲಿಸಿದ್ದೇವೆ, ಹೆಚ್ಚಿನ ತನಿಖೆಗಾಗಿ ನಾವು ಟ್ವೀಟ್ ಅನ್ನು ಪರಿಶೀಲಿಸುತ್ತಿದ್ದೇವೆ” ಎಂದು ರಾವಲ್ ಹೇಳಿದ್ದಾರೆ.

ದಾಖಲಾದ ದೂರಿನ ಬಗ್ಗೆ ಪ್ರತಿಕ್ರಿಯೆಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದಾರೆ.

ದೂರು ದಾಖಲಾದ ಬಗ್ಗೆ ಗೋಪಿನಾಥನ್ ಸೋಮವಾರ ಟ್ವೀಟ್ ಮಾಡಿದ್ದು “ಒಳ್ಳೆ ಪ್ರಯತ್ನ. ನೀವು ನನ್ನನ್ನು ಬಂಧಿಸಬಹುದು, ಆದರೆ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇಲ್ಲಿ ಯಾರೂ ನಿಮ್ಮನ್ನು ಹೆದರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

ಗೋಪಿನಾಥನ್ ಅವರು “ಅಸಹಿಷ್ಣುತೆ ಮತ್ತು ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತಿದ್ದಾರೆ” ಎಂದು ಆರೋಪಿಸಿ ಸೇವೆಗೆ ರಾಜಿನಾಮೆ ಕೊಟ್ಟಿದ್ದರು.


ಇದನ್ನೂ ಓದಿ: ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಟ್ಲರ್ ನ ಆಡಳಿತವು, ಸಂವಿಧಾನದ ಕೈ ಮೀರಿ ಹೋಗುವುದರೊಳಗೆ ಎಲ್ಲರೂ ಎಚ್ಚರಗೊಂಡು ಸರಿದಾರಿಗೆ ತರಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...