Homeಮುಖಪುಟಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

- Advertisement -
- Advertisement -

ಸುಪ್ರೀಂ ಕೋರ್ಟ್‌‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಅವರ ವಿರುದ್ದ ಗುಜರಾತ್ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.

ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್‌ ಅವರನ್ನು ರಾಮಾಯಣದ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ ಹಾಗೂ ಜನರ ದಾರಿ ತಪ್ಪಿಸಲು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ಆದೇಶಗಳನ್ನು ಬಳಸಿದ್ದಕ್ಕಾಗಿ ಕಣ್ಣನ್ ಗೋಪಿನಾಥನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಎಫ್‌ಐಆರ್ ಅನ್ನು ಭಾನುವಾರ ಸಂಜೆ ರಾಜ್‌ಕೋಟ್ ನಗರದ ಭಕ್ತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ತನಿಖೆಯನ್ನು ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಗೆ ವರ್ಗಾಯಿಸಲಾಯಿತು.

ರಾಜ್‌ಕೋಟ್ ಮೂಲದ ನಿವೃತ್ತ ಕ್ಯಾಪ್ಟನ್ ಜಯದೇವ್ ಭಾಯ್ ಜೋಶಿ ಎಂಬವರು, ಮಾರ್ಚ್ 28 ರಂದು ಪ್ರಶಾಂತ್‌ ಭೂಷಣ್ ಮಾಡಿದ ಟ್ವೀಟ್‌ನಲ್ಲಿ ರಾಮಾಯಣ ಮತ್ತು ಮಹಾಭಾರತದ ಜೊತೆ ಅಫೀಮು ಪದವನ್ನು ಬಳಸಿದ್ದಾರೆ, ಇದು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ಎಸ್‌ಒಜಿಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಪ್ರಕರಣದ ತನಿಖಾ ಅಧಿಕಾರಿಯಾದ ರೋಹಿತ್ ರಾವಲ್ ಹೇಳಿದ್ದಾರೆ.

“ಬಲವಂತದ ಲಾಕ್‌ಡೌನ್‌ನಿಂದಾಗಿ ಕೋಟ್ಯಂತರ ಜನರು ಹಸಿವಿನಿಂದ ಬಳಲುತ್ತಿರುವಾಗ, ನಮ್ಮ ಹೃದಯಹೀನ ಮಂತ್ರಿಗಳು ರಾಮಾಯಣ ಮತ್ತು ಮಹಾಭಾರತದ ಅಫೀಮನ್ನು ಜನರಿಗೆ ನೀಡುತ್ತಿದ್ದಾರೆ” ಎಂದು ಭೂಷಣ್ ಮಾರ್ಚ್ 28 ರಂದು ಟ್ವೀಟ್ ಮಾಡಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸುದ್ದಿ ಸಂಪಾದಕ ಅಶ್ಲಿನ್ ಮ್ಯಾಥ್ಯೂ ಮತ್ತು ಕಣ್ಣನ್‌ ಗೋಪಿನಾಥನ್ ಅವರು ಸರ್ಕಾರದ ಆದೇಶಗಳನ್ನು ತಪ್ಪುದಾರಿಗೆಳೆಯುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಮತ್ತು ಇದು ಸಮಾಜದಲ್ಲಿ ಶಾಂತಿಗೆ ಭಂಗ ತರುತ್ತದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ದೂರಿನ ಆಧಾರದ ಮೇಲೆ, ನಾವು ಈ ಮೂವರ ವಿರುದ್ಧ ಸೆಕ್ಷನ್ 34 (ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯ), 295-ಎ (ಯಾವುದೇ ವರ್ಗದವರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳನ್ನು ಅದರ ಧರ್ಮವನ್ನು ಅವಮಾನಿಸುವ ಮೂಲಕ ಅಥವಾ ಧಾರ್ಮಿಕ ನಂಬಿಕೆಗಳು), 505 (1) (ಜನರಲ್ಲಿ ಭಯ ಮತ್ತು ಎಚ್ಚರಿಕೆಯನ್ನು ಉಂಟುಮಾಡುವ ಯಾವುದೇ ಹೇಳಿಕೆ, ವದಂತಿ ಅಥವಾ ವರದಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು) ಮತ್ತು ಸೆಕ್ಷನ್ 120-ಬಿ (ಭಾರತೀಯ ದಂಡ ಸಂಹಿತೆಯ ಕ್ರಿಮಿನಲ್ ಪಿತೂರಿ) ದಾಖಲಿಸಿದ್ದೇವೆ, ಹೆಚ್ಚಿನ ತನಿಖೆಗಾಗಿ ನಾವು ಟ್ವೀಟ್ ಅನ್ನು ಪರಿಶೀಲಿಸುತ್ತಿದ್ದೇವೆ” ಎಂದು ರಾವಲ್ ಹೇಳಿದ್ದಾರೆ.

ದಾಖಲಾದ ದೂರಿನ ಬಗ್ಗೆ ಪ್ರತಿಕ್ರಿಯೆಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದಾರೆ.

ದೂರು ದಾಖಲಾದ ಬಗ್ಗೆ ಗೋಪಿನಾಥನ್ ಸೋಮವಾರ ಟ್ವೀಟ್ ಮಾಡಿದ್ದು “ಒಳ್ಳೆ ಪ್ರಯತ್ನ. ನೀವು ನನ್ನನ್ನು ಬಂಧಿಸಬಹುದು, ಆದರೆ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇಲ್ಲಿ ಯಾರೂ ನಿಮ್ಮನ್ನು ಹೆದರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

ಗೋಪಿನಾಥನ್ ಅವರು “ಅಸಹಿಷ್ಣುತೆ ಮತ್ತು ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತಿದ್ದಾರೆ” ಎಂದು ಆರೋಪಿಸಿ ಸೇವೆಗೆ ರಾಜಿನಾಮೆ ಕೊಟ್ಟಿದ್ದರು.


ಇದನ್ನೂ ಓದಿ: ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಹಿಟ್ಲರ್ ನ ಆಡಳಿತವು, ಸಂವಿಧಾನದ ಕೈ ಮೀರಿ ಹೋಗುವುದರೊಳಗೆ ಎಲ್ಲರೂ ಎಚ್ಚರಗೊಂಡು ಸರಿದಾರಿಗೆ ತರಬೇಕು.

LEAVE A REPLY

Please enter your comment!
Please enter your name here

- Advertisment -

Must Read

‘ಸತ್ಯ ಆದಷ್ಟು ಬೇಗ ಹೊರಬರಲಿದೆ..’; ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

0
ದೇಶದಾದ್ಯಂತ ಭಾರೀ ಸುದ್ದಿಯಾಗಿರುವ, ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಲೈಂಗಿಕ ಹಗರಣದ ಪ್ರಮುಖ ಆರೋಪಿ, ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ...