Homeಮುಖಪುಟಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

- Advertisement -
- Advertisement -

ಸುಪ್ರೀಂ ಕೋರ್ಟ್‌‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಅವರ ವಿರುದ್ದ ಗುಜರಾತ್ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.

ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್‌ ಅವರನ್ನು ರಾಮಾಯಣದ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ ಹಾಗೂ ಜನರ ದಾರಿ ತಪ್ಪಿಸಲು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ಆದೇಶಗಳನ್ನು ಬಳಸಿದ್ದಕ್ಕಾಗಿ ಕಣ್ಣನ್ ಗೋಪಿನಾಥನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಎಫ್‌ಐಆರ್ ಅನ್ನು ಭಾನುವಾರ ಸಂಜೆ ರಾಜ್‌ಕೋಟ್ ನಗರದ ಭಕ್ತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ತನಿಖೆಯನ್ನು ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಗೆ ವರ್ಗಾಯಿಸಲಾಯಿತು.

ರಾಜ್‌ಕೋಟ್ ಮೂಲದ ನಿವೃತ್ತ ಕ್ಯಾಪ್ಟನ್ ಜಯದೇವ್ ಭಾಯ್ ಜೋಶಿ ಎಂಬವರು, ಮಾರ್ಚ್ 28 ರಂದು ಪ್ರಶಾಂತ್‌ ಭೂಷಣ್ ಮಾಡಿದ ಟ್ವೀಟ್‌ನಲ್ಲಿ ರಾಮಾಯಣ ಮತ್ತು ಮಹಾಭಾರತದ ಜೊತೆ ಅಫೀಮು ಪದವನ್ನು ಬಳಸಿದ್ದಾರೆ, ಇದು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ಎಸ್‌ಒಜಿಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಪ್ರಕರಣದ ತನಿಖಾ ಅಧಿಕಾರಿಯಾದ ರೋಹಿತ್ ರಾವಲ್ ಹೇಳಿದ್ದಾರೆ.

“ಬಲವಂತದ ಲಾಕ್‌ಡೌನ್‌ನಿಂದಾಗಿ ಕೋಟ್ಯಂತರ ಜನರು ಹಸಿವಿನಿಂದ ಬಳಲುತ್ತಿರುವಾಗ, ನಮ್ಮ ಹೃದಯಹೀನ ಮಂತ್ರಿಗಳು ರಾಮಾಯಣ ಮತ್ತು ಮಹಾಭಾರತದ ಅಫೀಮನ್ನು ಜನರಿಗೆ ನೀಡುತ್ತಿದ್ದಾರೆ” ಎಂದು ಭೂಷಣ್ ಮಾರ್ಚ್ 28 ರಂದು ಟ್ವೀಟ್ ಮಾಡಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸುದ್ದಿ ಸಂಪಾದಕ ಅಶ್ಲಿನ್ ಮ್ಯಾಥ್ಯೂ ಮತ್ತು ಕಣ್ಣನ್‌ ಗೋಪಿನಾಥನ್ ಅವರು ಸರ್ಕಾರದ ಆದೇಶಗಳನ್ನು ತಪ್ಪುದಾರಿಗೆಳೆಯುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಮತ್ತು ಇದು ಸಮಾಜದಲ್ಲಿ ಶಾಂತಿಗೆ ಭಂಗ ತರುತ್ತದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ದೂರಿನ ಆಧಾರದ ಮೇಲೆ, ನಾವು ಈ ಮೂವರ ವಿರುದ್ಧ ಸೆಕ್ಷನ್ 34 (ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯ), 295-ಎ (ಯಾವುದೇ ವರ್ಗದವರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳನ್ನು ಅದರ ಧರ್ಮವನ್ನು ಅವಮಾನಿಸುವ ಮೂಲಕ ಅಥವಾ ಧಾರ್ಮಿಕ ನಂಬಿಕೆಗಳು), 505 (1) (ಜನರಲ್ಲಿ ಭಯ ಮತ್ತು ಎಚ್ಚರಿಕೆಯನ್ನು ಉಂಟುಮಾಡುವ ಯಾವುದೇ ಹೇಳಿಕೆ, ವದಂತಿ ಅಥವಾ ವರದಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು) ಮತ್ತು ಸೆಕ್ಷನ್ 120-ಬಿ (ಭಾರತೀಯ ದಂಡ ಸಂಹಿತೆಯ ಕ್ರಿಮಿನಲ್ ಪಿತೂರಿ) ದಾಖಲಿಸಿದ್ದೇವೆ, ಹೆಚ್ಚಿನ ತನಿಖೆಗಾಗಿ ನಾವು ಟ್ವೀಟ್ ಅನ್ನು ಪರಿಶೀಲಿಸುತ್ತಿದ್ದೇವೆ” ಎಂದು ರಾವಲ್ ಹೇಳಿದ್ದಾರೆ.

ದಾಖಲಾದ ದೂರಿನ ಬಗ್ಗೆ ಪ್ರತಿಕ್ರಿಯೆಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದಾರೆ.

ದೂರು ದಾಖಲಾದ ಬಗ್ಗೆ ಗೋಪಿನಾಥನ್ ಸೋಮವಾರ ಟ್ವೀಟ್ ಮಾಡಿದ್ದು “ಒಳ್ಳೆ ಪ್ರಯತ್ನ. ನೀವು ನನ್ನನ್ನು ಬಂಧಿಸಬಹುದು, ಆದರೆ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇಲ್ಲಿ ಯಾರೂ ನಿಮ್ಮನ್ನು ಹೆದರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

ಗೋಪಿನಾಥನ್ ಅವರು “ಅಸಹಿಷ್ಣುತೆ ಮತ್ತು ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತಿದ್ದಾರೆ” ಎಂದು ಆರೋಪಿಸಿ ಸೇವೆಗೆ ರಾಜಿನಾಮೆ ಕೊಟ್ಟಿದ್ದರು.


ಇದನ್ನೂ ಓದಿ: ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಟ್ಲರ್ ನ ಆಡಳಿತವು, ಸಂವಿಧಾನದ ಕೈ ಮೀರಿ ಹೋಗುವುದರೊಳಗೆ ಎಲ್ಲರೂ ಎಚ್ಚರಗೊಂಡು ಸರಿದಾರಿಗೆ ತರಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...