Homeಮುಖಪುಟಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಕಣ್ಣನ್ ಗೋಪಿನಾಥನ್ ಹಾಗೂ ಪ್ರಶಾಂತ್ ಭೂಷಣ್‌ ವಿರುದ್ದ ಕೇಸು ದಾಖಲು

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

- Advertisement -
- Advertisement -

ಸುಪ್ರೀಂ ಕೋರ್ಟ್‌‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಅವರ ವಿರುದ್ದ ಗುಜರಾತ್ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.

ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್‌ ಅವರನ್ನು ರಾಮಾಯಣದ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಕ್ಕಾಗಿ ಹಾಗೂ ಜನರ ದಾರಿ ತಪ್ಪಿಸಲು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ಆದೇಶಗಳನ್ನು ಬಳಸಿದ್ದಕ್ಕಾಗಿ ಕಣ್ಣನ್ ಗೋಪಿನಾಥನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಎಫ್‌ಐಆರ್ ಅನ್ನು ಭಾನುವಾರ ಸಂಜೆ ರಾಜ್‌ಕೋಟ್ ನಗರದ ಭಕ್ತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ತನಿಖೆಯನ್ನು ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಗೆ ವರ್ಗಾಯಿಸಲಾಯಿತು.

ರಾಜ್‌ಕೋಟ್ ಮೂಲದ ನಿವೃತ್ತ ಕ್ಯಾಪ್ಟನ್ ಜಯದೇವ್ ಭಾಯ್ ಜೋಶಿ ಎಂಬವರು, ಮಾರ್ಚ್ 28 ರಂದು ಪ್ರಶಾಂತ್‌ ಭೂಷಣ್ ಮಾಡಿದ ಟ್ವೀಟ್‌ನಲ್ಲಿ ರಾಮಾಯಣ ಮತ್ತು ಮಹಾಭಾರತದ ಜೊತೆ ಅಫೀಮು ಪದವನ್ನು ಬಳಸಿದ್ದಾರೆ, ಇದು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ಎಸ್‌ಒಜಿಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಪ್ರಕರಣದ ತನಿಖಾ ಅಧಿಕಾರಿಯಾದ ರೋಹಿತ್ ರಾವಲ್ ಹೇಳಿದ್ದಾರೆ.

“ಬಲವಂತದ ಲಾಕ್‌ಡೌನ್‌ನಿಂದಾಗಿ ಕೋಟ್ಯಂತರ ಜನರು ಹಸಿವಿನಿಂದ ಬಳಲುತ್ತಿರುವಾಗ, ನಮ್ಮ ಹೃದಯಹೀನ ಮಂತ್ರಿಗಳು ರಾಮಾಯಣ ಮತ್ತು ಮಹಾಭಾರತದ ಅಫೀಮನ್ನು ಜನರಿಗೆ ನೀಡುತ್ತಿದ್ದಾರೆ” ಎಂದು ಭೂಷಣ್ ಮಾರ್ಚ್ 28 ರಂದು ಟ್ವೀಟ್ ಮಾಡಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸುದ್ದಿ ಸಂಪಾದಕ ಅಶ್ಲಿನ್ ಮ್ಯಾಥ್ಯೂ ಮತ್ತು ಕಣ್ಣನ್‌ ಗೋಪಿನಾಥನ್ ಅವರು ಸರ್ಕಾರದ ಆದೇಶಗಳನ್ನು ತಪ್ಪುದಾರಿಗೆಳೆಯುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಮತ್ತು ಇದು ಸಮಾಜದಲ್ಲಿ ಶಾಂತಿಗೆ ಭಂಗ ತರುತ್ತದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ದೂರಿನ ಆಧಾರದ ಮೇಲೆ, ನಾವು ಈ ಮೂವರ ವಿರುದ್ಧ ಸೆಕ್ಷನ್ 34 (ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯ), 295-ಎ (ಯಾವುದೇ ವರ್ಗದವರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳನ್ನು ಅದರ ಧರ್ಮವನ್ನು ಅವಮಾನಿಸುವ ಮೂಲಕ ಅಥವಾ ಧಾರ್ಮಿಕ ನಂಬಿಕೆಗಳು), 505 (1) (ಜನರಲ್ಲಿ ಭಯ ಮತ್ತು ಎಚ್ಚರಿಕೆಯನ್ನು ಉಂಟುಮಾಡುವ ಯಾವುದೇ ಹೇಳಿಕೆ, ವದಂತಿ ಅಥವಾ ವರದಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು) ಮತ್ತು ಸೆಕ್ಷನ್ 120-ಬಿ (ಭಾರತೀಯ ದಂಡ ಸಂಹಿತೆಯ ಕ್ರಿಮಿನಲ್ ಪಿತೂರಿ) ದಾಖಲಿಸಿದ್ದೇವೆ, ಹೆಚ್ಚಿನ ತನಿಖೆಗಾಗಿ ನಾವು ಟ್ವೀಟ್ ಅನ್ನು ಪರಿಶೀಲಿಸುತ್ತಿದ್ದೇವೆ” ಎಂದು ರಾವಲ್ ಹೇಳಿದ್ದಾರೆ.

ದಾಖಲಾದ ದೂರಿನ ಬಗ್ಗೆ ಪ್ರತಿಕ್ರಿಯೆಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದಾರೆ.

ದೂರು ದಾಖಲಾದ ಬಗ್ಗೆ ಗೋಪಿನಾಥನ್ ಸೋಮವಾರ ಟ್ವೀಟ್ ಮಾಡಿದ್ದು “ಒಳ್ಳೆ ಪ್ರಯತ್ನ. ನೀವು ನನ್ನನ್ನು ಬಂಧಿಸಬಹುದು, ಆದರೆ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇಲ್ಲಿ ಯಾರೂ ನಿಮ್ಮನ್ನು ಹೆದರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಮಾಜಿ ಐಎಎಸ್ ಅಧಿಕಾರಿಯಾದ ಗೋಪಿನಾಥನ್ ಅವರಿಗೆ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ತಕ್ಷಣವೇ ತಮ್ಮ ಕರ್ತವ್ಯಕ್ಕೆ ಸೇರಲು ಕೇಳಲಾಯಿತು. ಆಗ ಗೋಪಿನಾಥನ್ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತೇನೆ ಬದಲಿಗೆ ಸರ್ಕಾರಿ ಸೇವೆಗೆ ಸೇರುವ ಪ್ರಶ್ನೆಯೆ ಇಲ್ಲ ಎಂದು ಉತ್ತರಿಸಿದ್ದರು.

ಗೋಪಿನಾಥನ್ ಅವರು “ಅಸಹಿಷ್ಣುತೆ ಮತ್ತು ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತಿದ್ದಾರೆ” ಎಂದು ಆರೋಪಿಸಿ ಸೇವೆಗೆ ರಾಜಿನಾಮೆ ಕೊಟ್ಟಿದ್ದರು.


ಇದನ್ನೂ ಓದಿ: ಮತ್ತೆ ಕರ್ತವ್ಯಕ್ಕೆ ಬನ್ನಿ ಎಂದ ಕೇಂದ್ರ: IAS ಅಲ್ಲ, ಸ್ವಯಂಸೇವಕನಾಗಿ ಮಾತ್ರ ಬರುತ್ತೇನೆ ಎಂದ ಕಣ್ಣನ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಟ್ಲರ್ ನ ಆಡಳಿತವು, ಸಂವಿಧಾನದ ಕೈ ಮೀರಿ ಹೋಗುವುದರೊಳಗೆ ಎಲ್ಲರೂ ಎಚ್ಚರಗೊಂಡು ಸರಿದಾರಿಗೆ ತರಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...