Homeಚಳವಳಿ#prashantbhushan ಟ್ರೆಂಡಿಂಗ್: ಸುಪ್ರೀಂ ಕುರಿತು ಟ್ವಿಟರ್‌ನಲ್ಲಿ ಪರ-ವಿರೋಧ ಚರ್ಚೆ

#prashantbhushan ಟ್ರೆಂಡಿಂಗ್: ಸುಪ್ರೀಂ ಕುರಿತು ಟ್ವಿಟರ್‌ನಲ್ಲಿ ಪರ-ವಿರೋಧ ಚರ್ಚೆ

- Advertisement -
- Advertisement -

ಪ್ರಸ್ತುತ ಟ್ವಿಟರ್‌ನಲ್ಲಿ #prashantbhushan ಟ್ರೆಂಡ್ ಆಗುತ್ತಿದ್ದು, ಇವರ ಕುರಿತ ನ್ಯಾಯಾಂಗ ನಿಂದನೆ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಹೇಳಿಕೆಯು ಟ್ವಿಟರ್ ನಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟು ಹಾಕಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಬಗ್ಗೆ ವಕೀಲ ಪ್ರಶಾಂತ್ ಭೂಷಣ್ ಮಾಡಿದ ಎರಡು ಟ್ವೀಟ್‌ಗಳ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅವರನ್ನು ತಪ್ಪಿತಸ್ತ ಎಂದು ಸುಪ್ರೀಂ ಕೊರ್ಟ್ ಹೇಳಿದೆ.

ತೀರ್ಪನ್ನು ಓದಿದ ನ್ಯಾಯಮೂರ್ತಿ ಬಿ ಆರ್ ಗವಾಯಿ, “ಪ್ರಶಾಂತ್ ಭೂಷಣ್ ಗಂಭೀರ ನ್ಯಾಯಾಂಗ ನಿಂದನೆ ಮಾಡಿದ್ದಾರೆ” ಎಂದು ಹೇಳಿದರು.

ಇದರ ಕುರಿತು, ಆರ್ಟಿಕಲ್-14 ಎಂಬ ಸುದ್ದಿತಾಣದ ಟ್ವಿಟ್ಟರ್ ಹ್ಯಾಂಡಲ್, ‘ಒಬ್ಬ ಪುಂಡ ಭಯದ ಮೂಲಕ ಶಾಲಾವರಣವನ್ನು ನಿಯಂತ್ರಿಸುತ್ತಾನೆ ಆದರೆ ಅದನ್ನು ತಪ್ಪಾಗಿ ಗೌರವ ಎಂದು ಭಾವಿಸಿರುತ್ತಾನೆ’ #prashanthbhushan ಎಂದು ಹೇಳಿದೆ. ಇದು 117 ಬಾರಿ ರೀಟ್ವೀಟ್ ಆಗಿದೆ.

ಸ್ವರಾಜ್ ಇಂಡಿಯಾದ ಮುಖಂಡ ಯೋಗೇಂದ್ರ ಯಾದವ್ ‘ನಾನು ಮತ್ತೆ ಹೇಳುತ್ತೇನೆ #prashanthbhushan, ಸತ್ಯದ ಪರ ನಿಲ್ಲುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಆಗಸ್ಟ್ 20 ರಂದು ನ್ಯಾಯಪೀಠ ಅವರ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ.

ಪ್ರಶಾಂತ್ ನ್ಯಾಯಾಂಗದ ವಿರುದ್ಧ ಯಾವುದೇ ದುರುದ್ದೇಶವಿಲ್ಲದೆ ಕೇವಲ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಅವರ ಪರವಾಗಿ ವಾದಿಸಿದ್ದ ದುಶ್ಯಂತ್ ದವೆ ಹೇಳಿದ್ದರು.

ಪ್ರಶಾಂತ್ ನ್ಯಾಯಾಂಗ ನಿಂದನೆ ನೋಟಿಸ್‌ಗೆ ವಿವರವಾದ ಉತ್ತರದ ಅಫಿಡವಿಟ್ ಸಲ್ಲಿಸಿದ್ದು, ನ್ಯಾಯಾಲಯದ ಬಗ್ಗೆ ಪ್ರಾಮಾಣಿಕ ಅಭಿಪ್ರಾಯ ವ್ಯಕ್ತಪಡಿಸುವುದು ನ್ಯಾಯಾಂಗ ನಿಂದನೆ ಆಗುವುದಿಲ್ಲ ಎಂದು ಹೇಳಿದ್ದರು.

ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಇತಿಹಾಸಕಾರ ರಾಮಚಂದ್ರ ಗುಹಾ, “ಭಾರತೀಯ ಪ್ರಜಾಪ್ರಭುತ್ವಕ್ಕೆ ಕರಾಳ ದಿನ” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಶಾಂತ್ ಜೂನ್ 27ರಂದು ಸುಪ್ರೀಕೋರ್ಟ್ ಕುರಿತು ಹಾಗೂ ಜೂನ್ 29ರಂದು ಸಿಜೆಐ ಎಸ್‌ಎ ಬೋಬ್ಡೆ ಕುರಿತಂತೆ ಟ್ವೀಟ್‌ ಮಾಡಿದ್ದರು. ಇದನ್ನು ಗಮನಿಸಿದ ನ್ಯಾಯಾಲಯ ಜುಲೈ 22ರಂದು ಪ್ರಶಾಂತ್‌ಗೆ ನೋಟಿಸ್ ಜಾರಿ ಮಾಡಿತ್ತು.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಪರ ನಿಂತ 8ಕ್ಕೂ ಹೆಚ್ಚು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರು

ಪ್ರಶಾಂತ್ ಭೂಷಣ್ ಸತ್ಯ ಹೇಳಿದ್ದಾರೆ, ಅದಕ್ಕಾಗಿ ತನಿಖೆ: ಭೂಷಣ್ ಪರ ನಿಂತ ಸಾಮಾಜಿಕ ಕಾರ್ಯಕರ್ತರು

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸಿ ಹಾಕಿ ಫ್ಯಾಸಿಸಂ ತರಲಾಗಿದೆ : ಪ್ರಶಾಂತ್ ಭೂಷಣ್ ಭಾಷಣದ ಬರಹ ರೂಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...