Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ: ತೀರ್ಪು ಕಾದಿರಿಸಿದ ಸುಪ್ರೀಂ ಕೋರ್ಟ್

ಪ್ರಶಾಂತ್ ಭೂಷಣ್ ಪ್ರಕರಣ: ತೀರ್ಪು ಕಾದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬಡೆ ಮತ್ತು ಸುಪ್ರೀಂ ಕೋರ್ಟ್‌ಗೆ ಸಂಬಂಧಿಸಿದಂತೆ ಮಾಡಿದ ಟ್ವೀಟ್‌ಗಳಿಗೆ ಕ್ಷಮೆಯಾಚಿಸಲು ನಿರಾಕರಿಸಿದ ಪ್ರಶಾಂತ್ ಭೂಷಣ್ ಅವರ ಪ್ರತಿಕ್ರಿಯೆ ಇನ್ನೂ ಅವಹೇಳನಕಾರಿಯಾಗಿದೆ ಎಂದಿರುವ ಸುಪ್ರೀಂ ಕೋರ್ಟ್ ತೀರ್ಪು ಕಾದಿರಿಸಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣ ಮುರಾರಿಯವರಿದ್ದ ಪೀಠವು ಮೂರು ದಿನದ ಕಾಲಾವಾಕಾಶದ ನಂತರ ಮತ್ತೆ ಇಂದು ವಿಚಾರಣೆ ಕೈಗೆತ್ತಿಕೊಂಡಿತು.

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಮನವಿ ಮಾಡಿದರು. “ದಯವಿಟ್ಟು ಭವಿಷ್ಯದಲ್ಲಿ ಇದನ್ನು ಪುನರಾವರ್ತಿಸಬೇಡಿ ಎಂದು ಎಚ್ಚರಿಸಿ” ಎಂದು ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಹೇಳಿಕೆಯನ್ನು ಹಿಂತೆಗೆದುಕೊಳ್ಳುವ ಬಗ್ಗೆ ಯೋಚಿಸಲು ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ವಿಚಾರಣೆಯಿಂದ 30 ನಿಮಿಷಗಳ ವಿರಾಮ ನೀಡಿತ್ತು. ಕ್ಷಮೆಯಾಚಿಸಿಲು ಭೂಷಣ್ ನಿರಾಕರಿಸಿದ ನಂತರ, ಸುಪ್ರೀಂ ಕೋರ್ಟ್ “ಏನು ಮಾಡಬೇಕೆಂದು ನಮಗೆ ತಿಳಿಸಿ, ನಾವು ಬೇರೆ ಹೇಳಿಕೆಯನ್ನು ನಿರೀಕ್ಷಿಸಿದ್ದೇವೆ” ಎಂದು ವೇಣುಗೋಪಾಲ್ ಅವರನ್ನು ಕೇಳಿತು.

ಹಲವಾರು ನ್ಯಾಯಾಂಗ ಮತ್ತು ನಿವೃತ್ತ ನ್ಯಾಯಾಧೀಶರು ಉನ್ನತ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಅಟಾರ್ನಿ ಜನರಲ್ ಹೇಳಿದರು. ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಬಹುದು ಆದರೆ ಶಿಕ್ಷೆಯ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಸೋಮವಾರ, ನಿಂದನೆಯ ಆರೋಪ ಹೊತ್ತಿರುವ ಭೂಷಣ್, ಉನ್ನತ ನ್ಯಾಯಾಲಯ ನೀಡಿದ ಮೂರು ದಿನಗಳ ಸಮಯದ ನಂತರ ತಮ್ಮ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳಲು ಅಥವಾ ಕ್ಷಮೆಯಾಚಿಸಲು ನಿರಾಕರಿಸಿದ್ದರು. ಟ್ವೀಟ್‌ಗಳು ತನ್ನ ನಂಬಿಕೆಯನ್ನು ಪ್ರತಿನಿಧಿಸುತ್ತವೆ. ಕ್ಷಮೆಯಾಚನೆ ನನ್ನ ಆತ್ಮವಂಚನೆಯಾಗುತ್ತದೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದರು.

ಅಟಾರ್ನಿ ಜನರಲ್ ಅವರ ಸಲಹೆಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಅರುಣ್ ಮಿಶ್ರಾ, “ಅವರು ಮಾಡಿದ್ದು ತಪ್ಪು ಎಂದು ಅವರು ಭಾವಿಸುವುದಿಲ್ಲ. ಅವರು ಕ್ಷಮೆಯಾಚಿಸಲಿಲ್ಲ. ಜನರು ತಪ್ಪುಗಳನ್ನು ಮಾಡುತ್ತಾರೆ, ಕೆಲವೊಮ್ಮೆ ನಮ್ಮ ನಂಬಿಕೆಗಳು ಸಹ ತಪ್ಪಾಗಿರುತ್ತವೆ. ಆದರೆ ಯಾರಾದರೂ ತಾನು ತಪ್ಪು ಮಾಡಿದ್ದೇನೆಂದು ಭಾವಿಸದಿದ್ದಾಗ ಏನು ಮಾಡಬೇಕು?” ಎಂದು ಕೇಳಿದರು.

“ಇಬ್ಬರು ಸಿಬಿಐ ಅಧಿಕಾರಿಗಳು ಹೋರಾಡುತ್ತಿರುವಾಗ ನಾನು ಪ್ರಶಾಂತ್ ಭೂಷಣ್ ವಿರುದ್ಧ ನ್ಯಾಯಂಗ ನಿಂದನೆಯ ಅರ್ಜಿ ಸಲ್ಲಿಸಲು ಬಯಸಿದ್ದೆ. ಆದರೆ ಅವರು ವಿಷಾದ ವ್ಯಕ್ತಪಡಿಸಿದ ನಂತರ ನಾನು ಹಿಂದೆ ಸರಿದಿದ್ದೇನೆ. ಈ ಸಂದರ್ಭದಲ್ಲಿ ಅವರ ಹೇಳಿಕೆಯ ವಿಷಯದಲ್ಲಿ ಪ್ರಜಾಪ್ರಭುತ್ವವನ್ನು ಅನುಸರಿಸೋಣ” ಎಂದು ವೇಣುಗೋಪಾಲ್ ಉತ್ತರಿಸಿದರು.

ನ್ಯಾಯಾಲಯವು ಸಹಾನುಭೂತಿಯ ದೃಷ್ಟಿಕೋನವನ್ನು ತೆಗೆದುಕೊಂಡರೆ, ಅದನ್ನು ಬಹಳವಾಗಿ ಪ್ರಶಂಸಿಸಲಾಗುತ್ತದೆ ಎಂದು ಅವರು ಹೇಳಿದರು.

“ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಅವರು ನಂಬಿದರೆ, ಈ ಎಚ್ಚರಿಕೆಯ ಉದ್ದೇಶವೇನು” ಎಂದು ನ್ಯಾಯಮೂರ್ತಿ ಮಿಶ್ರಾ ಮತ್ತೆ ಪ್ರಶ್ನಿಸಿದರು.

ಸರಳವಾದ ಪ್ರಕರಣವೊಂದಕ್ಕೆ ಭೂಷಣ್ ತಮ್ಮ ಟ್ವೀಟ್‌ಗಳ ಮೂಲಕ ಬಣ್ಣ ನೀಡಿದ್ದಾರೆ ಎಂದು ಹೇಳಿದ ನ್ಯಾಯಮೂರ್ತಿ ಮಿಶ್ರಾ, “ಈ ಸಂಸ್ಥೆಯ ವಿರುದ್ಧ, ಈ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಹಲವಾರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಹೇಳಿದರು.

ಅವರ ಪ್ರತಿಕ್ರಿಯೆಯನ್ನು ಪರಿಗಣಿಸಬಾರದೆಂದು ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಮನವಿ ಮಾಡಿದಾಗ, ನ್ಯಾಯಮೂರ್ತಿ ಮಿಶ್ರಾ, ” ಹೇಗೆ? ಸಾಧ್ಯವಿಲ್ಲ? ಅವರ ಪ್ರತಿಕ್ರಿಯೆಯನ್ನು ನಾವು ಪರಿಗಣಿಸಿಲ್ಲ ಎಂದು ಎಲ್ಲರೂ ನಮ್ಮನ್ನು ಟೀಕಿಸುತ್ತಿದ್ದಾರೆ. ಅದು ನಮ್ಮ ಪ್ರಕಾರ ಇನ್ನಷ್ಟು ಅವಹೇಳನಕಾರಿಯಾಗಿದೆ. ಈಗ ನಾವು ಅದನ್ನು ತೆಗೆದುಹಾಕಿದರೆ, ದೂಷಣೆಗೆ ಒಳಗಾಗುತ್ತೇವೆ” ಎಂದು ಹೇಳಿದರು.

ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಕುರಿತಾದ ಟೀಕೆಗಳಿಗೆ ಸಂಬಂಧಿಸಿದಂತೆ 2009 ರ ತಿರಸ್ಕಾರ ಪ್ರಕರಣದಲ್ಲಿ ಭೂಷಣ್ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ವಾದಿಸಿದರು.

ಆಗ ನ್ಯಾಯಾಧೀಶ ಮಿಶ್ರಾ “ದಯವಿಟ್ಟು ಅವರ ಉತ್ತರವನ್ನು ಓದಿ. ಅವರು ಹೇಳಿದ್ದನ್ನು ನೋಡಿ, ಸುಪ್ರೀಂ ಕೋರ್ಟ್ ಕುಸಿದಿದೆ. ಅದು ಆಕ್ಷೇಪಾರ್ಹವಲ್ಲವೇ?” ಎಂದು ಕೇಳಿದರು.

ಭೂಷಣ್ ಅವರ ಹೇಳಿಕೆಯನ್ನು ಹಿಂತೆಗೆದುಕೊಳ್ಳಲು ಅಟಾರ್ನಿ ಜನರಲ್ ನ್ಯಾಯಾಧೀಶರನ್ನು ಒತ್ತಾಯಿಸಿದರು. “ಈ ನ್ಯಾಯಾಲಯವು ವ್ಯವಹಾರ ನಿಪುಣತೆಯನ್ನು ತೋರಿಸಲಿ. ಮತ್ತು ಈ ಅಫಿಡವಿಟ್ ಕಾರಣದಿಂದಾಗಿ ತಿರಸ್ಕಾರದ ಅಧಿಕಾರವನ್ನು ಬಳಸಬಾರದು” ಎಂದು ಹೇಳಿದರು.

ಗುರುವಾರ ನಡೆದ ಕೊನೆಯ ವಿಚಾರಣೆಯಲ್ಲಿ, ನ್ಯಾಯಾಲಯವು ಬೇಷರತ್ತಾಗಿ ಕ್ಷಮೆಯಾಚಿಸಲು ಕೋರಿತ್ತು. ಮತ್ತು ತನ್ನ ಹೇಳಿಕೆಯನ್ನು ಮರುಪರಿಶೀಲಿಸುವಂತೆ ಕೇಳಿಕೊಂಡಿತ್ತು.

ಇಂದಿನ ವಿಚಾರಣೆಯ ಕೊನೆಯಲ್ಲಿ ಭೂಷಣ್ ಪರ ವಕೀಲರಾದ ರಾಜೀವ್‌ ಧವನ್‌ರವರು ‘ಭೂಷಣ್‌ರವರಿಗೆ ಮುಂದೆ ಹೀಗೆ ಮಾಡಬೇಡಿ ಎಂದು ಹೇಳಲಾಗುವುದಿಲ್ಲ. ಇಂತದ್ದನ್ನು ಮಾಡಬೇಡಿ ಎಂದು ಎಚ್ಚರಿಸುವ ಮೂಲಕ ಒಬ್ಬರನ್ನು ಶಾಶ್ವತವಾಗಿ ಮೌನಗೊಳಿಸಲಾಗುವುದಿಲ್ಲ. ಭವಿಷ್ಯದಲ್ಲಿ ಅವರು ಸ್ವಲ್ಪ ಸಂಯಮದಿಂದಿರಬೇಕು ಎಂಬ ಸಂದೇಶವು ಸಾಕು” ಎಂದರು.

ಭೂಷಣ್ ಅವರ ಶಿಕ್ಷೆ ಏನು ಎಂದು ನ್ಯಾಯಾಲಯ ಕೇಳಿದಾಗ,”ಅವರನ್ನು ಹುತಾತ್ಮರನ್ನಾಗಿ ಮಾಡಬೇಡಿ, ಈ ನ್ಯಾಯಾಲಯವು ಅವರಿಗೆ ಯಾವ ಶಿಕ್ಷೆಯನ್ನು ನೀಡುತ್ತದೆ ಎಂಬುದರ ಆಧಾರದ ಮೇಲೆ ಈ ವಿವಾದ ಮುಂದುವರಿಯುತ್ತದೆ. ಮತ್ತು ಈ ನ್ಯಾಯಾಲಯವು ರಾಜಕಾರಣವನ್ನು ತೋರಿಸಿದರೆ ಮಾತ್ರ ಈ ವಿವಾದವು ಕೊನೆಗೊಳ್ಳುತ್ತದೆ” ಎಂದು ಧವನ್ ಹೇಳಿದರು.

ನ್ಯಾಯಾಲವು ತೀರ್ಪನ್ನು ಕಾದಿರಿಸಿದ್ದು ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 10ಕ್ಕೆ ಮೂಂದೂಡಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾರವರು ಸೆಪ್ಟಂಬರ್ 02ರಂದು ನಿವೃತ್ತಿಯಾಗಲಿರುವ ಕಾರಣ ಪ್ರಕರಣವನ್ನು ಹೊಸ ಪೀಠಕ್ಕೆ ವರ್ಗಾಯಿಸಲಾಗಿದೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...