Homeಮುಖಪುಟಪ್ರಶಾಂತ್ ಭೂಷಣ್ ಪ್ರಕರಣ: ತೀರ್ಪು ಕಾದಿರಿಸಿದ ಸುಪ್ರೀಂ ಕೋರ್ಟ್

ಪ್ರಶಾಂತ್ ಭೂಷಣ್ ಪ್ರಕರಣ: ತೀರ್ಪು ಕಾದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬಡೆ ಮತ್ತು ಸುಪ್ರೀಂ ಕೋರ್ಟ್‌ಗೆ ಸಂಬಂಧಿಸಿದಂತೆ ಮಾಡಿದ ಟ್ವೀಟ್‌ಗಳಿಗೆ ಕ್ಷಮೆಯಾಚಿಸಲು ನಿರಾಕರಿಸಿದ ಪ್ರಶಾಂತ್ ಭೂಷಣ್ ಅವರ ಪ್ರತಿಕ್ರಿಯೆ ಇನ್ನೂ ಅವಹೇಳನಕಾರಿಯಾಗಿದೆ ಎಂದಿರುವ ಸುಪ್ರೀಂ ಕೋರ್ಟ್ ತೀರ್ಪು ಕಾದಿರಿಸಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣ ಮುರಾರಿಯವರಿದ್ದ ಪೀಠವು ಮೂರು ದಿನದ ಕಾಲಾವಾಕಾಶದ ನಂತರ ಮತ್ತೆ ಇಂದು ವಿಚಾರಣೆ ಕೈಗೆತ್ತಿಕೊಂಡಿತು.

ವಕೀಲ, ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಿ, ಪ್ರಕರಣ ಬಿಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಮನವಿ ಮಾಡಿದರು. “ದಯವಿಟ್ಟು ಭವಿಷ್ಯದಲ್ಲಿ ಇದನ್ನು ಪುನರಾವರ್ತಿಸಬೇಡಿ ಎಂದು ಎಚ್ಚರಿಸಿ” ಎಂದು ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ಹೇಳಿಕೆಯನ್ನು ಹಿಂತೆಗೆದುಕೊಳ್ಳುವ ಬಗ್ಗೆ ಯೋಚಿಸಲು ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ವಿಚಾರಣೆಯಿಂದ 30 ನಿಮಿಷಗಳ ವಿರಾಮ ನೀಡಿತ್ತು. ಕ್ಷಮೆಯಾಚಿಸಿಲು ಭೂಷಣ್ ನಿರಾಕರಿಸಿದ ನಂತರ, ಸುಪ್ರೀಂ ಕೋರ್ಟ್ “ಏನು ಮಾಡಬೇಕೆಂದು ನಮಗೆ ತಿಳಿಸಿ, ನಾವು ಬೇರೆ ಹೇಳಿಕೆಯನ್ನು ನಿರೀಕ್ಷಿಸಿದ್ದೇವೆ” ಎಂದು ವೇಣುಗೋಪಾಲ್ ಅವರನ್ನು ಕೇಳಿತು.

ಹಲವಾರು ನ್ಯಾಯಾಂಗ ಮತ್ತು ನಿವೃತ್ತ ನ್ಯಾಯಾಧೀಶರು ಉನ್ನತ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಅಟಾರ್ನಿ ಜನರಲ್ ಹೇಳಿದರು. ಪ್ರಶಾಂತ್ ಭೂಷಣ್ ಅವರಿಗೆ ಎಚ್ಚರಿಕೆ ನೀಡಬಹುದು ಆದರೆ ಶಿಕ್ಷೆಯ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಸೋಮವಾರ, ನಿಂದನೆಯ ಆರೋಪ ಹೊತ್ತಿರುವ ಭೂಷಣ್, ಉನ್ನತ ನ್ಯಾಯಾಲಯ ನೀಡಿದ ಮೂರು ದಿನಗಳ ಸಮಯದ ನಂತರ ತಮ್ಮ ಟ್ವೀಟ್‌ಗಳನ್ನು ಹಿಂತೆಗೆದುಕೊಳ್ಳಲು ಅಥವಾ ಕ್ಷಮೆಯಾಚಿಸಲು ನಿರಾಕರಿಸಿದ್ದರು. ಟ್ವೀಟ್‌ಗಳು ತನ್ನ ನಂಬಿಕೆಯನ್ನು ಪ್ರತಿನಿಧಿಸುತ್ತವೆ. ಕ್ಷಮೆಯಾಚನೆ ನನ್ನ ಆತ್ಮವಂಚನೆಯಾಗುತ್ತದೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದರು.

ಅಟಾರ್ನಿ ಜನರಲ್ ಅವರ ಸಲಹೆಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಅರುಣ್ ಮಿಶ್ರಾ, “ಅವರು ಮಾಡಿದ್ದು ತಪ್ಪು ಎಂದು ಅವರು ಭಾವಿಸುವುದಿಲ್ಲ. ಅವರು ಕ್ಷಮೆಯಾಚಿಸಲಿಲ್ಲ. ಜನರು ತಪ್ಪುಗಳನ್ನು ಮಾಡುತ್ತಾರೆ, ಕೆಲವೊಮ್ಮೆ ನಮ್ಮ ನಂಬಿಕೆಗಳು ಸಹ ತಪ್ಪಾಗಿರುತ್ತವೆ. ಆದರೆ ಯಾರಾದರೂ ತಾನು ತಪ್ಪು ಮಾಡಿದ್ದೇನೆಂದು ಭಾವಿಸದಿದ್ದಾಗ ಏನು ಮಾಡಬೇಕು?” ಎಂದು ಕೇಳಿದರು.

“ಇಬ್ಬರು ಸಿಬಿಐ ಅಧಿಕಾರಿಗಳು ಹೋರಾಡುತ್ತಿರುವಾಗ ನಾನು ಪ್ರಶಾಂತ್ ಭೂಷಣ್ ವಿರುದ್ಧ ನ್ಯಾಯಂಗ ನಿಂದನೆಯ ಅರ್ಜಿ ಸಲ್ಲಿಸಲು ಬಯಸಿದ್ದೆ. ಆದರೆ ಅವರು ವಿಷಾದ ವ್ಯಕ್ತಪಡಿಸಿದ ನಂತರ ನಾನು ಹಿಂದೆ ಸರಿದಿದ್ದೇನೆ. ಈ ಸಂದರ್ಭದಲ್ಲಿ ಅವರ ಹೇಳಿಕೆಯ ವಿಷಯದಲ್ಲಿ ಪ್ರಜಾಪ್ರಭುತ್ವವನ್ನು ಅನುಸರಿಸೋಣ” ಎಂದು ವೇಣುಗೋಪಾಲ್ ಉತ್ತರಿಸಿದರು.

ನ್ಯಾಯಾಲಯವು ಸಹಾನುಭೂತಿಯ ದೃಷ್ಟಿಕೋನವನ್ನು ತೆಗೆದುಕೊಂಡರೆ, ಅದನ್ನು ಬಹಳವಾಗಿ ಪ್ರಶಂಸಿಸಲಾಗುತ್ತದೆ ಎಂದು ಅವರು ಹೇಳಿದರು.

“ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಅವರು ನಂಬಿದರೆ, ಈ ಎಚ್ಚರಿಕೆಯ ಉದ್ದೇಶವೇನು” ಎಂದು ನ್ಯಾಯಮೂರ್ತಿ ಮಿಶ್ರಾ ಮತ್ತೆ ಪ್ರಶ್ನಿಸಿದರು.

ಸರಳವಾದ ಪ್ರಕರಣವೊಂದಕ್ಕೆ ಭೂಷಣ್ ತಮ್ಮ ಟ್ವೀಟ್‌ಗಳ ಮೂಲಕ ಬಣ್ಣ ನೀಡಿದ್ದಾರೆ ಎಂದು ಹೇಳಿದ ನ್ಯಾಯಮೂರ್ತಿ ಮಿಶ್ರಾ, “ಈ ಸಂಸ್ಥೆಯ ವಿರುದ್ಧ, ಈ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಹಲವಾರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಹೇಳಿದರು.

ಅವರ ಪ್ರತಿಕ್ರಿಯೆಯನ್ನು ಪರಿಗಣಿಸಬಾರದೆಂದು ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ಮನವಿ ಮಾಡಿದಾಗ, ನ್ಯಾಯಮೂರ್ತಿ ಮಿಶ್ರಾ, ” ಹೇಗೆ? ಸಾಧ್ಯವಿಲ್ಲ? ಅವರ ಪ್ರತಿಕ್ರಿಯೆಯನ್ನು ನಾವು ಪರಿಗಣಿಸಿಲ್ಲ ಎಂದು ಎಲ್ಲರೂ ನಮ್ಮನ್ನು ಟೀಕಿಸುತ್ತಿದ್ದಾರೆ. ಅದು ನಮ್ಮ ಪ್ರಕಾರ ಇನ್ನಷ್ಟು ಅವಹೇಳನಕಾರಿಯಾಗಿದೆ. ಈಗ ನಾವು ಅದನ್ನು ತೆಗೆದುಹಾಕಿದರೆ, ದೂಷಣೆಗೆ ಒಳಗಾಗುತ್ತೇವೆ” ಎಂದು ಹೇಳಿದರು.

ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಕುರಿತಾದ ಟೀಕೆಗಳಿಗೆ ಸಂಬಂಧಿಸಿದಂತೆ 2009 ರ ತಿರಸ್ಕಾರ ಪ್ರಕರಣದಲ್ಲಿ ಭೂಷಣ್ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಅಟಾರ್ನಿ ಜನರಲ್ ವೇಣುಗೋಪಾಲ್ ವಾದಿಸಿದರು.

ಆಗ ನ್ಯಾಯಾಧೀಶ ಮಿಶ್ರಾ “ದಯವಿಟ್ಟು ಅವರ ಉತ್ತರವನ್ನು ಓದಿ. ಅವರು ಹೇಳಿದ್ದನ್ನು ನೋಡಿ, ಸುಪ್ರೀಂ ಕೋರ್ಟ್ ಕುಸಿದಿದೆ. ಅದು ಆಕ್ಷೇಪಾರ್ಹವಲ್ಲವೇ?” ಎಂದು ಕೇಳಿದರು.

ಭೂಷಣ್ ಅವರ ಹೇಳಿಕೆಯನ್ನು ಹಿಂತೆಗೆದುಕೊಳ್ಳಲು ಅಟಾರ್ನಿ ಜನರಲ್ ನ್ಯಾಯಾಧೀಶರನ್ನು ಒತ್ತಾಯಿಸಿದರು. “ಈ ನ್ಯಾಯಾಲಯವು ವ್ಯವಹಾರ ನಿಪುಣತೆಯನ್ನು ತೋರಿಸಲಿ. ಮತ್ತು ಈ ಅಫಿಡವಿಟ್ ಕಾರಣದಿಂದಾಗಿ ತಿರಸ್ಕಾರದ ಅಧಿಕಾರವನ್ನು ಬಳಸಬಾರದು” ಎಂದು ಹೇಳಿದರು.

ಗುರುವಾರ ನಡೆದ ಕೊನೆಯ ವಿಚಾರಣೆಯಲ್ಲಿ, ನ್ಯಾಯಾಲಯವು ಬೇಷರತ್ತಾಗಿ ಕ್ಷಮೆಯಾಚಿಸಲು ಕೋರಿತ್ತು. ಮತ್ತು ತನ್ನ ಹೇಳಿಕೆಯನ್ನು ಮರುಪರಿಶೀಲಿಸುವಂತೆ ಕೇಳಿಕೊಂಡಿತ್ತು.

ಇಂದಿನ ವಿಚಾರಣೆಯ ಕೊನೆಯಲ್ಲಿ ಭೂಷಣ್ ಪರ ವಕೀಲರಾದ ರಾಜೀವ್‌ ಧವನ್‌ರವರು ‘ಭೂಷಣ್‌ರವರಿಗೆ ಮುಂದೆ ಹೀಗೆ ಮಾಡಬೇಡಿ ಎಂದು ಹೇಳಲಾಗುವುದಿಲ್ಲ. ಇಂತದ್ದನ್ನು ಮಾಡಬೇಡಿ ಎಂದು ಎಚ್ಚರಿಸುವ ಮೂಲಕ ಒಬ್ಬರನ್ನು ಶಾಶ್ವತವಾಗಿ ಮೌನಗೊಳಿಸಲಾಗುವುದಿಲ್ಲ. ಭವಿಷ್ಯದಲ್ಲಿ ಅವರು ಸ್ವಲ್ಪ ಸಂಯಮದಿಂದಿರಬೇಕು ಎಂಬ ಸಂದೇಶವು ಸಾಕು” ಎಂದರು.

ಭೂಷಣ್ ಅವರ ಶಿಕ್ಷೆ ಏನು ಎಂದು ನ್ಯಾಯಾಲಯ ಕೇಳಿದಾಗ,”ಅವರನ್ನು ಹುತಾತ್ಮರನ್ನಾಗಿ ಮಾಡಬೇಡಿ, ಈ ನ್ಯಾಯಾಲಯವು ಅವರಿಗೆ ಯಾವ ಶಿಕ್ಷೆಯನ್ನು ನೀಡುತ್ತದೆ ಎಂಬುದರ ಆಧಾರದ ಮೇಲೆ ಈ ವಿವಾದ ಮುಂದುವರಿಯುತ್ತದೆ. ಮತ್ತು ಈ ನ್ಯಾಯಾಲಯವು ರಾಜಕಾರಣವನ್ನು ತೋರಿಸಿದರೆ ಮಾತ್ರ ಈ ವಿವಾದವು ಕೊನೆಗೊಳ್ಳುತ್ತದೆ” ಎಂದು ಧವನ್ ಹೇಳಿದರು.

ನ್ಯಾಯಾಲವು ತೀರ್ಪನ್ನು ಕಾದಿರಿಸಿದ್ದು ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 10ಕ್ಕೆ ಮೂಂದೂಡಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾರವರು ಸೆಪ್ಟಂಬರ್ 02ರಂದು ನಿವೃತ್ತಿಯಾಗಲಿರುವ ಕಾರಣ ಪ್ರಕರಣವನ್ನು ಹೊಸ ಪೀಠಕ್ಕೆ ವರ್ಗಾಯಿಸಲಾಗಿದೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಬಹುತೇಕ ರದ್ದುಗೊಂಡಿರುವ ವಸಾಹತುಶಾಹಿ ಪಳೆಯುಳಿಕೆ ಕಾನೂನು ‘ನ್ಯಾಯಾಂಗ ನಿಂದನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...