Homeಮುಖಪುಟನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

- Advertisement -
- Advertisement -

ಬಿಹಾರದ ಪ್ರಮುಖ ಕ್ಷೇತ್ರಗಳ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆದರಿಸುತ್ತಿದ್ದಾರೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಮಂಗಳವಾರ ಆರೋಪಿಸಿದ್ದಾರೆ.

ಪಾಟ್ನಾದ ಶೇಖ್‌ಪುರ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಶೋರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೆಲೆ ಕಳೆದುಕೊಳ್ಳುವ ಭಯದಿಂದಾಗಿ ಬಿಜೆಪಿ ಒತ್ತಡ ತಂತ್ರಗಳನ್ನು ಬಳಸುತ್ತಿದೆ. ಯಾರೇ ಗೆದ್ದರೂ ನಾವು ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಅಂದುಕೊಂಡಿತ್ತು. ಆದರೆ ಈ ಬಾರಿ, ಅವರ ವಿಶ್ವಾಸವನ್ನು ಜನ್ ಸುರಾಜ್ ಪಕ್ಷ ಅಲುಗಾಡಿಸಿದೆ ಎಂದು ಹೇಳಿದ್ದಾರೆ.

ದಾನಾಪುರದಲ್ಲಿ ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಅಖಿಲೇಶ್ ಕುಮಾರ್ ಅಲಿಯಾಸ್ ಮುತೂರ್ ಶಾ ಅವರನ್ನು ಬಂಧಿಸಿಟ್ಟ ಬಿಜೆಪಿ ನಾಮಪತ್ರ ಸಲ್ಲಿಸದಂತೆ ತಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರೊಂದಿಗೆ ನಮ್ಮ ಅಭ್ಯರ್ಥಿಯನ್ನು ಇಡೀ ದಿನ ಕೂರಿಸಲಾಗಿತ್ತು ಎಂದು ಪ್ರಶಾಂತ್ ಕಿಶೋರ್ ಆರೋಪ ಮಾಡಿದ್ದಾರೆ.

“ಆರ್‌ಜೆಡಿ ಗೂಂಡಾಗಳು ನಮ್ಮ ಅಭ್ಯರ್ಥಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ಜನರಿಗೆ ಹೇಳಲಾಗಿತ್ತು. ಆದರೆ, ವಾಸ್ತವವಾಗಿ ನಮ್ಮ ಅಭ್ಯರ್ಥಿ ದೇಶದ ಗೃಹ ಸಚಿವರೊಂದಿಗೆ ಕುಳಿತಿದ್ದರು. ಚುನಾವಣಾ ಆಯೋಗ ಇದನ್ನು ಗಮನಿಸಬೇಕು. ಗೃಹ ಸಚಿವರು ಅಭ್ಯರ್ಥಿಯನ್ನು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಅವರು ನಾಮಪತ್ರ ಸಲ್ಲಿಸುವುದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಕಿಶೋರ್ ಪ್ರಶ್ನಿಸಿದ್ದು, “ಇದು ಬಿಜೆಪಿಯ ನಿಜವಾದ ಮುಖ ಮತ್ತು ನಡವಳಿಕೆ” ಎಂದಿದ್ದಾರೆ.

ಮೂವರು ಜನ್ ಸುರಾಜ್ ಅಭ್ಯರ್ಥಿಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕುವಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಆರೋಪಿಸಿದ ಕಿಶೋರ್, ಜನ್ ಸುರಾಜ್‌ ಪಕ್ಷದ ಬ್ರಹ್ಮಪುರ ಅಭ್ಯರ್ಥಿ ಡಾ. ಸತ್ಯ ಪ್ರಕಾಶ್ ತಿವಾರಿ ಅವರೊಂದಿಗೆ ಧರ್ಮೇಂದ್ರ ಪ್ರಧಾನ್ ಇರುವ ಫೋಟೋ ಬಿಡುಗಡೆ ಮಾಡಿದ್ದಾರೆ.

ಪ್ರಶಾಂತ್ ಕಿಶೋರ್ ಆರೋಪಗಳ ಬಗ್ಗೆ ಬಿಜೆಪಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಎಲ್‌ಜೆಪಿಯ ಪ್ರಾಬಲ್ಯ ಹೊಂದಿರುವ ಬ್ರಹ್ಮಪುರದಲ್ಲಿ ನಮ್ಮ ಅಭ್ಯರ್ಥಿ, ಪಾಟ್ನಾದಲ್ಲಿ ಪ್ರಮುಖ ಆಸ್ಪತ್ರೆ ನಡೆಸುತ್ತಿರುವ ವೈದ್ಯ ಡಾ. ತಿವಾರಿ ಮೂರು ದಿನಗಳ ಕಾಲ ಪ್ರಚಾರ ಮಾಡಿದ್ದರು. ನಂತರ ಇದ್ದಕ್ಕಿದ್ದಂತೆ ಹಿಂದೆ ಸರಿದರು. ಧರ್ಮೇಂದ್ರ ಪ್ರಧಾನ್ ಜೊತೆ ತಿವಾರಿ ಇರುವ ಫೋಟೋ ಅವರ ಮೇಲೆ ಹೇರಲಾದ ಒತ್ತಡಕ್ಕೆ ಪುರಾವೆಯಾಗಿದೆ. ಚುನಾವಣೆ ಘೋಷಣೆಯಾದ ನಂತರ ಕೇಂದ್ರ ಸಚಿವರು ಎದುರಾಳಿ ಅಭ್ಯರ್ಥಿಯನ್ನು ಭೇಟಿಯಾಗುವುದು ಆಶ್ಚರ್ಯಕರ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಗೋಪಾಲ್‌ಗಂಜ್‌ನ ಬಿಜೆಪಿ ನಾಯಕರು ನಮ್ಮ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯ ರಾಜಕೀಯ ನಾಯಕ ರಘುನಾಥ್ ಪಾಂಡೆ ಅವರ ಅಳಿಯ ಡಾ. ಶಶಿ ಶೇಖರ್ ಸಿನ್ಹಾ ಅವರನ್ನು ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಒತ್ತಡ ಹೇರಿದ್ದಾರೆ. ಎರಡು ದಿನಗಳ ಹಿಂದಿನವರೆಗೂ ಸಿನ್ಹಾ ಅವರು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದರು. ತನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಲು ನನಗೆ ಕರೆ ಮಾಡಿದ್ದರು. ಆದರೆ, ಪಕ್ಷದಲ್ಲೇ ಇರುವುದಾಗಿ ತಿಳಿಸಿದ್ದರು. ಇದಾಗಿ ಎರಡು ಗಂಟೆಗಳ ನಂತರ, ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡರು. ಫೋನ್ ಸ್ವಿಚ್ ಆಫ್ ಮಾಡಿದರು. ರಾಜ್ಯಾದ್ಯಂತ ಇತರ ಅಭ್ಯರ್ಥಿಗಳು ಇದೇ ರೀತಿಯ ಒತ್ತಡ ಮತ್ತು ಬೆದರಿಕೆಯನ್ನು ಎದುರಿಸುತ್ತಿದ್ದಾರೆ” ಎಂದು ಕಿಶೋರ್ ವಿವರಿಸಿದ್ದಾರೆ.

“ಕುಮ್ರಾರ್‌ ಕ್ಷೇತ್ರದ ನಮ್ಮ ಅಭ್ಯರ್ಥಿ ಪ್ರೊ. ಕೆ. ಸಿ. ಸಿನ್ಹಾ ಅವರ ಮೇಲೆ ಒತ್ತಡ ಹೇರಲಾಗಿದೆ. ನಾಮಪತ್ರ ಹಿಂತೆಗೆದುಕೊಳ್ಳುವಂತೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ, ಅವರು ಒತ್ತಡಕ್ಕೆ ಮಣಿಯಲು ನಿರಾಕರಿಸಿದ್ದಾರೆ. ಎರಡು ವರ್ಷಗಳ ಹಿಂದೆ ಜನ್ ಸುರಾಜ್‌ಗೆ ಸೇರಲು ಬಿಜೆಪಿಗೆ ರಾಜೀನಾಮೆ ನೀಡಿರುವ ಶಾಲಾ ಶಿಕ್ಷಕ ವಾಲ್ಮೀಕಿನಗರ ಅಭ್ಯರ್ಥಿ ಡಾ. ನಾರಾಯಣ್ ಪ್ರಸಾದ್ ಅವರ ರಾಜೀನಾಮೆಯನ್ನು ಇದುವರೆಗೆ ಅಂಗೀಕರಿಸಲಾಗಿಲ್ಲ. ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು ಎಂದು ಸ್ಥಳೀಯ ಅಧಿಕಾರಿಗಳು ಬೆದರಿಸುತ್ತಿದ್ದಾರೆ” ಎಂದು ಕಿಶೋರ್ ಆರೋಪಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಕಿಶೋರ್, “ಅಭ್ಯರ್ಥಿಗಳಿಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗದಿದ್ದರೆ, ಇನ್ನು ಮತದಾರರನ್ನು ಹೇಗೆ ರಕ್ಷಿಸುತ್ತೀರಿ? ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯುವಂತೆ ಈ ರೀತಿ ಬೆದರಿಕೆ ಹಾಕಿದರೆ, ಮತದಾನದ ದಿನದಂದು ಪಕ್ಷಗಳು ಮತದಾರರನ್ನು ಬೆದರಿಸುವುದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ?” ಎಂದು ಕೇಳಿದ್ದಾರೆ.

“14 ಮಂದಿ ಜನ ಸುರಾಜ್ ಅಭ್ಯರ್ಥಿಗಳು ಬೆದರಿಕೆಗಳನ್ನು ಎದುರಿಸಿದ್ದಾರೆ. ಆದರೂ 240 ಮಂದಿ ಅಭ್ಯರ್ಥಿಗಳು ದೃಢವಾಗಿ ನಿಂತಿದ್ದಾರೆ. ಅವರಿಗೆ ನಾನು ನಮಸ್ಕರಿಸುತ್ತೇನೆ. ಅವರು ನಮ್ಮ ಮೇಲೆ ಬೆದರಿಕೆ, ಒತ್ತಡ ಹಾಕಬಹುದು. ಇದಕ್ಕೆ ನಾವು ಪ್ರತ್ಯತ್ತರ ಕೊಡುತ್ತೇವೆ” ಎಂದಿದ್ದಾರೆ.

“ಬಿಜೆಪಿ ಮಹಾಮೈತ್ರಿಕೂಟದ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿಲ್ಲ, ಬದಲಾಗಿ ಜನ ಸುರಾಜ್‌ನ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿದೆ. ಏಕೆಂದರೆ ನಮ್ಮ ಅಭ್ಯರ್ಥಿಗಳು ಉತ್ತಮ ವೃತ್ತಿಪರರು, ವೈದ್ಯರು ಮತ್ತು ಉದ್ಯಮಿಗಳು. ಅವರು ಬಲ ಪ್ರಯೋಗಕ್ಕೆ ಹೆದರುವವರು ಅಲ್ಲ, ಸಭ್ಯ ಜನರಿಗೆ ಹೆದರುವವರು. ಇದು ಜನ ಸುರಾಜ್‌ನ ಭಯ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಜನರು ಮತ್ತೆ ವಲಸೆ ಹೋಗಬಾರದು. ಹಾಗಾಗಿ, ಪೂರ್ಣ ಶಕ್ತಿಯಿಂದ ಎದ್ದು ಈ ಸರ್ಕಾರವನ್ನು ಉರುಳಿಸಿ” ಎಂದು ಬಿಹಾರದ ಯುವಜನತೆಗೆ ಪ್ರಶಾಂತ್ ಕಿಶೋರ್ ಕರೆ ಕೊಟ್ಟಿದ್ದಾರೆ.

ಅಭ್ಯರ್ಥಿ ಆಯ್ಕೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಕಿಶೋರ್, ಜನ್ ಸುರಾಜ್ ಅತ್ಯಂತ ಹಿಂದುಳಿದ ಸಮುದಾಯಗಳ 54 ಮತ್ತು ಮುಸ್ಲಿಂ ಸಮುದಾಯದ 34 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾವು ಅತ್ಯಂತ ಹಿಂದುಳಿದ ಗುಂಪುಗಳಿಗೆ 70 ಟಿಕೆಟ್‌ಗಳನ್ನು ನೀಡಲು ಉದ್ದೇಶಿಸಿದ್ದೆವು. ಆದರೆ, 54 ನೀಡಲು ಸಾಧ್ಯವಾಯಿತು. ಇಷ್ಟು ಟಿಕೆಟ್ ಇತರ ಯಾವುದೇ ಪಕ್ಷಗಳು ಈ ಸಮುದಾಯಗಳಿಗೆ ನೀಡಿಲ್ಲ. ನಾವು ಮುಸ್ಲಿಮರ ಬಗ್ಗೆ ನಾಟಕೀಯ ಒಲವು ತೋರಿಸುತ್ತಿದ್ದೇವೆ ಎನ್ನುವರಿಗೆ, ನಾವು ಕೊಟ್ಟ ಟಿಕೆಟ್ ಸೇರಿದಂತೆ ಸಮುದಾಯಕ್ಕೆ ನೀಡಿದ ಪ್ರಾಮುಖ್ಯತೆಯ ಇತರ ದಾಖಲೆಗಳು ಪ್ರತ್ಯುತ್ತರವಾಗಿದೆ. ಈಗಾಗಲೇ ಮುಸ್ಲಿಂ ಶಾಸಕರು ಇರುವ ಕ್ಷೇತ್ರಗಳನ್ನು ಹೊರತುಪಡಿಸಿ, ಸಾಧ್ಯವಾದಲ್ಲೆಲ್ಲಾ ನಾವು ಆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದ್ದೇವೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...