Homeಮುಖಪುಟನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

- Advertisement -
- Advertisement -

ಬಿಹಾರದ ಪ್ರಮುಖ ಕ್ಷೇತ್ರಗಳ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆದರಿಸುತ್ತಿದ್ದಾರೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಮಂಗಳವಾರ ಆರೋಪಿಸಿದ್ದಾರೆ.

ಪಾಟ್ನಾದ ಶೇಖ್‌ಪುರ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಶೋರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೆಲೆ ಕಳೆದುಕೊಳ್ಳುವ ಭಯದಿಂದಾಗಿ ಬಿಜೆಪಿ ಒತ್ತಡ ತಂತ್ರಗಳನ್ನು ಬಳಸುತ್ತಿದೆ. ಯಾರೇ ಗೆದ್ದರೂ ನಾವು ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಅಂದುಕೊಂಡಿತ್ತು. ಆದರೆ ಈ ಬಾರಿ, ಅವರ ವಿಶ್ವಾಸವನ್ನು ಜನ್ ಸುರಾಜ್ ಪಕ್ಷ ಅಲುಗಾಡಿಸಿದೆ ಎಂದು ಹೇಳಿದ್ದಾರೆ.

ದಾನಾಪುರದಲ್ಲಿ ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಅಖಿಲೇಶ್ ಕುಮಾರ್ ಅಲಿಯಾಸ್ ಮುತೂರ್ ಶಾ ಅವರನ್ನು ಬಂಧಿಸಿಟ್ಟ ಬಿಜೆಪಿ ನಾಮಪತ್ರ ಸಲ್ಲಿಸದಂತೆ ತಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರೊಂದಿಗೆ ನಮ್ಮ ಅಭ್ಯರ್ಥಿಯನ್ನು ಇಡೀ ದಿನ ಕೂರಿಸಲಾಗಿತ್ತು ಎಂದು ಪ್ರಶಾಂತ್ ಕಿಶೋರ್ ಆರೋಪ ಮಾಡಿದ್ದಾರೆ.

“ಆರ್‌ಜೆಡಿ ಗೂಂಡಾಗಳು ನಮ್ಮ ಅಭ್ಯರ್ಥಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ಜನರಿಗೆ ಹೇಳಲಾಗಿತ್ತು. ಆದರೆ, ವಾಸ್ತವವಾಗಿ ನಮ್ಮ ಅಭ್ಯರ್ಥಿ ದೇಶದ ಗೃಹ ಸಚಿವರೊಂದಿಗೆ ಕುಳಿತಿದ್ದರು. ಚುನಾವಣಾ ಆಯೋಗ ಇದನ್ನು ಗಮನಿಸಬೇಕು. ಗೃಹ ಸಚಿವರು ಅಭ್ಯರ್ಥಿಯನ್ನು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಅವರು ನಾಮಪತ್ರ ಸಲ್ಲಿಸುವುದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಕಿಶೋರ್ ಪ್ರಶ್ನಿಸಿದ್ದು, “ಇದು ಬಿಜೆಪಿಯ ನಿಜವಾದ ಮುಖ ಮತ್ತು ನಡವಳಿಕೆ” ಎಂದಿದ್ದಾರೆ.

ಮೂವರು ಜನ್ ಸುರಾಜ್ ಅಭ್ಯರ್ಥಿಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕುವಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಆರೋಪಿಸಿದ ಕಿಶೋರ್, ಜನ್ ಸುರಾಜ್‌ ಪಕ್ಷದ ಬ್ರಹ್ಮಪುರ ಅಭ್ಯರ್ಥಿ ಡಾ. ಸತ್ಯ ಪ್ರಕಾಶ್ ತಿವಾರಿ ಅವರೊಂದಿಗೆ ಧರ್ಮೇಂದ್ರ ಪ್ರಧಾನ್ ಇರುವ ಫೋಟೋ ಬಿಡುಗಡೆ ಮಾಡಿದ್ದಾರೆ.

ಪ್ರಶಾಂತ್ ಕಿಶೋರ್ ಆರೋಪಗಳ ಬಗ್ಗೆ ಬಿಜೆಪಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಎಲ್‌ಜೆಪಿಯ ಪ್ರಾಬಲ್ಯ ಹೊಂದಿರುವ ಬ್ರಹ್ಮಪುರದಲ್ಲಿ ನಮ್ಮ ಅಭ್ಯರ್ಥಿ, ಪಾಟ್ನಾದಲ್ಲಿ ಪ್ರಮುಖ ಆಸ್ಪತ್ರೆ ನಡೆಸುತ್ತಿರುವ ವೈದ್ಯ ಡಾ. ತಿವಾರಿ ಮೂರು ದಿನಗಳ ಕಾಲ ಪ್ರಚಾರ ಮಾಡಿದ್ದರು. ನಂತರ ಇದ್ದಕ್ಕಿದ್ದಂತೆ ಹಿಂದೆ ಸರಿದರು. ಧರ್ಮೇಂದ್ರ ಪ್ರಧಾನ್ ಜೊತೆ ತಿವಾರಿ ಇರುವ ಫೋಟೋ ಅವರ ಮೇಲೆ ಹೇರಲಾದ ಒತ್ತಡಕ್ಕೆ ಪುರಾವೆಯಾಗಿದೆ. ಚುನಾವಣೆ ಘೋಷಣೆಯಾದ ನಂತರ ಕೇಂದ್ರ ಸಚಿವರು ಎದುರಾಳಿ ಅಭ್ಯರ್ಥಿಯನ್ನು ಭೇಟಿಯಾಗುವುದು ಆಶ್ಚರ್ಯಕರ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಗೋಪಾಲ್‌ಗಂಜ್‌ನ ಬಿಜೆಪಿ ನಾಯಕರು ನಮ್ಮ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯ ರಾಜಕೀಯ ನಾಯಕ ರಘುನಾಥ್ ಪಾಂಡೆ ಅವರ ಅಳಿಯ ಡಾ. ಶಶಿ ಶೇಖರ್ ಸಿನ್ಹಾ ಅವರನ್ನು ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಒತ್ತಡ ಹೇರಿದ್ದಾರೆ. ಎರಡು ದಿನಗಳ ಹಿಂದಿನವರೆಗೂ ಸಿನ್ಹಾ ಅವರು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದರು. ತನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಲು ನನಗೆ ಕರೆ ಮಾಡಿದ್ದರು. ಆದರೆ, ಪಕ್ಷದಲ್ಲೇ ಇರುವುದಾಗಿ ತಿಳಿಸಿದ್ದರು. ಇದಾಗಿ ಎರಡು ಗಂಟೆಗಳ ನಂತರ, ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡರು. ಫೋನ್ ಸ್ವಿಚ್ ಆಫ್ ಮಾಡಿದರು. ರಾಜ್ಯಾದ್ಯಂತ ಇತರ ಅಭ್ಯರ್ಥಿಗಳು ಇದೇ ರೀತಿಯ ಒತ್ತಡ ಮತ್ತು ಬೆದರಿಕೆಯನ್ನು ಎದುರಿಸುತ್ತಿದ್ದಾರೆ” ಎಂದು ಕಿಶೋರ್ ವಿವರಿಸಿದ್ದಾರೆ.

“ಕುಮ್ರಾರ್‌ ಕ್ಷೇತ್ರದ ನಮ್ಮ ಅಭ್ಯರ್ಥಿ ಪ್ರೊ. ಕೆ. ಸಿ. ಸಿನ್ಹಾ ಅವರ ಮೇಲೆ ಒತ್ತಡ ಹೇರಲಾಗಿದೆ. ನಾಮಪತ್ರ ಹಿಂತೆಗೆದುಕೊಳ್ಳುವಂತೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ, ಅವರು ಒತ್ತಡಕ್ಕೆ ಮಣಿಯಲು ನಿರಾಕರಿಸಿದ್ದಾರೆ. ಎರಡು ವರ್ಷಗಳ ಹಿಂದೆ ಜನ್ ಸುರಾಜ್‌ಗೆ ಸೇರಲು ಬಿಜೆಪಿಗೆ ರಾಜೀನಾಮೆ ನೀಡಿರುವ ಶಾಲಾ ಶಿಕ್ಷಕ ವಾಲ್ಮೀಕಿನಗರ ಅಭ್ಯರ್ಥಿ ಡಾ. ನಾರಾಯಣ್ ಪ್ರಸಾದ್ ಅವರ ರಾಜೀನಾಮೆಯನ್ನು ಇದುವರೆಗೆ ಅಂಗೀಕರಿಸಲಾಗಿಲ್ಲ. ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು ಎಂದು ಸ್ಥಳೀಯ ಅಧಿಕಾರಿಗಳು ಬೆದರಿಸುತ್ತಿದ್ದಾರೆ” ಎಂದು ಕಿಶೋರ್ ಆರೋಪಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಕಿಶೋರ್, “ಅಭ್ಯರ್ಥಿಗಳಿಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗದಿದ್ದರೆ, ಇನ್ನು ಮತದಾರರನ್ನು ಹೇಗೆ ರಕ್ಷಿಸುತ್ತೀರಿ? ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯುವಂತೆ ಈ ರೀತಿ ಬೆದರಿಕೆ ಹಾಕಿದರೆ, ಮತದಾನದ ದಿನದಂದು ಪಕ್ಷಗಳು ಮತದಾರರನ್ನು ಬೆದರಿಸುವುದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ?” ಎಂದು ಕೇಳಿದ್ದಾರೆ.

“14 ಮಂದಿ ಜನ ಸುರಾಜ್ ಅಭ್ಯರ್ಥಿಗಳು ಬೆದರಿಕೆಗಳನ್ನು ಎದುರಿಸಿದ್ದಾರೆ. ಆದರೂ 240 ಮಂದಿ ಅಭ್ಯರ್ಥಿಗಳು ದೃಢವಾಗಿ ನಿಂತಿದ್ದಾರೆ. ಅವರಿಗೆ ನಾನು ನಮಸ್ಕರಿಸುತ್ತೇನೆ. ಅವರು ನಮ್ಮ ಮೇಲೆ ಬೆದರಿಕೆ, ಒತ್ತಡ ಹಾಕಬಹುದು. ಇದಕ್ಕೆ ನಾವು ಪ್ರತ್ಯತ್ತರ ಕೊಡುತ್ತೇವೆ” ಎಂದಿದ್ದಾರೆ.

“ಬಿಜೆಪಿ ಮಹಾಮೈತ್ರಿಕೂಟದ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿಲ್ಲ, ಬದಲಾಗಿ ಜನ ಸುರಾಜ್‌ನ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿದೆ. ಏಕೆಂದರೆ ನಮ್ಮ ಅಭ್ಯರ್ಥಿಗಳು ಉತ್ತಮ ವೃತ್ತಿಪರರು, ವೈದ್ಯರು ಮತ್ತು ಉದ್ಯಮಿಗಳು. ಅವರು ಬಲ ಪ್ರಯೋಗಕ್ಕೆ ಹೆದರುವವರು ಅಲ್ಲ, ಸಭ್ಯ ಜನರಿಗೆ ಹೆದರುವವರು. ಇದು ಜನ ಸುರಾಜ್‌ನ ಭಯ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಜನರು ಮತ್ತೆ ವಲಸೆ ಹೋಗಬಾರದು. ಹಾಗಾಗಿ, ಪೂರ್ಣ ಶಕ್ತಿಯಿಂದ ಎದ್ದು ಈ ಸರ್ಕಾರವನ್ನು ಉರುಳಿಸಿ” ಎಂದು ಬಿಹಾರದ ಯುವಜನತೆಗೆ ಪ್ರಶಾಂತ್ ಕಿಶೋರ್ ಕರೆ ಕೊಟ್ಟಿದ್ದಾರೆ.

ಅಭ್ಯರ್ಥಿ ಆಯ್ಕೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಕಿಶೋರ್, ಜನ್ ಸುರಾಜ್ ಅತ್ಯಂತ ಹಿಂದುಳಿದ ಸಮುದಾಯಗಳ 54 ಮತ್ತು ಮುಸ್ಲಿಂ ಸಮುದಾಯದ 34 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾವು ಅತ್ಯಂತ ಹಿಂದುಳಿದ ಗುಂಪುಗಳಿಗೆ 70 ಟಿಕೆಟ್‌ಗಳನ್ನು ನೀಡಲು ಉದ್ದೇಶಿಸಿದ್ದೆವು. ಆದರೆ, 54 ನೀಡಲು ಸಾಧ್ಯವಾಯಿತು. ಇಷ್ಟು ಟಿಕೆಟ್ ಇತರ ಯಾವುದೇ ಪಕ್ಷಗಳು ಈ ಸಮುದಾಯಗಳಿಗೆ ನೀಡಿಲ್ಲ. ನಾವು ಮುಸ್ಲಿಮರ ಬಗ್ಗೆ ನಾಟಕೀಯ ಒಲವು ತೋರಿಸುತ್ತಿದ್ದೇವೆ ಎನ್ನುವರಿಗೆ, ನಾವು ಕೊಟ್ಟ ಟಿಕೆಟ್ ಸೇರಿದಂತೆ ಸಮುದಾಯಕ್ಕೆ ನೀಡಿದ ಪ್ರಾಮುಖ್ಯತೆಯ ಇತರ ದಾಖಲೆಗಳು ಪ್ರತ್ಯುತ್ತರವಾಗಿದೆ. ಈಗಾಗಲೇ ಮುಸ್ಲಿಂ ಶಾಸಕರು ಇರುವ ಕ್ಷೇತ್ರಗಳನ್ನು ಹೊರತುಪಡಿಸಿ, ಸಾಧ್ಯವಾದಲ್ಲೆಲ್ಲಾ ನಾವು ಆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದ್ದೇವೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...