Homeಮುಖಪುಟನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

- Advertisement -
- Advertisement -

ಬಿಹಾರದ ಪ್ರಮುಖ ಕ್ಷೇತ್ರಗಳ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆದರಿಸುತ್ತಿದ್ದಾರೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಮಂಗಳವಾರ ಆರೋಪಿಸಿದ್ದಾರೆ.

ಪಾಟ್ನಾದ ಶೇಖ್‌ಪುರ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಶೋರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೆಲೆ ಕಳೆದುಕೊಳ್ಳುವ ಭಯದಿಂದಾಗಿ ಬಿಜೆಪಿ ಒತ್ತಡ ತಂತ್ರಗಳನ್ನು ಬಳಸುತ್ತಿದೆ. ಯಾರೇ ಗೆದ್ದರೂ ನಾವು ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಅಂದುಕೊಂಡಿತ್ತು. ಆದರೆ ಈ ಬಾರಿ, ಅವರ ವಿಶ್ವಾಸವನ್ನು ಜನ್ ಸುರಾಜ್ ಪಕ್ಷ ಅಲುಗಾಡಿಸಿದೆ ಎಂದು ಹೇಳಿದ್ದಾರೆ.

ದಾನಾಪುರದಲ್ಲಿ ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಅಖಿಲೇಶ್ ಕುಮಾರ್ ಅಲಿಯಾಸ್ ಮುತೂರ್ ಶಾ ಅವರನ್ನು ಬಂಧಿಸಿಟ್ಟ ಬಿಜೆಪಿ ನಾಮಪತ್ರ ಸಲ್ಲಿಸದಂತೆ ತಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರೊಂದಿಗೆ ನಮ್ಮ ಅಭ್ಯರ್ಥಿಯನ್ನು ಇಡೀ ದಿನ ಕೂರಿಸಲಾಗಿತ್ತು ಎಂದು ಪ್ರಶಾಂತ್ ಕಿಶೋರ್ ಆರೋಪ ಮಾಡಿದ್ದಾರೆ.

“ಆರ್‌ಜೆಡಿ ಗೂಂಡಾಗಳು ನಮ್ಮ ಅಭ್ಯರ್ಥಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ಜನರಿಗೆ ಹೇಳಲಾಗಿತ್ತು. ಆದರೆ, ವಾಸ್ತವವಾಗಿ ನಮ್ಮ ಅಭ್ಯರ್ಥಿ ದೇಶದ ಗೃಹ ಸಚಿವರೊಂದಿಗೆ ಕುಳಿತಿದ್ದರು. ಚುನಾವಣಾ ಆಯೋಗ ಇದನ್ನು ಗಮನಿಸಬೇಕು. ಗೃಹ ಸಚಿವರು ಅಭ್ಯರ್ಥಿಯನ್ನು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಅವರು ನಾಮಪತ್ರ ಸಲ್ಲಿಸುವುದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಕಿಶೋರ್ ಪ್ರಶ್ನಿಸಿದ್ದು, “ಇದು ಬಿಜೆಪಿಯ ನಿಜವಾದ ಮುಖ ಮತ್ತು ನಡವಳಿಕೆ” ಎಂದಿದ್ದಾರೆ.

ಮೂವರು ಜನ್ ಸುರಾಜ್ ಅಭ್ಯರ್ಥಿಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕುವಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಆರೋಪಿಸಿದ ಕಿಶೋರ್, ಜನ್ ಸುರಾಜ್‌ ಪಕ್ಷದ ಬ್ರಹ್ಮಪುರ ಅಭ್ಯರ್ಥಿ ಡಾ. ಸತ್ಯ ಪ್ರಕಾಶ್ ತಿವಾರಿ ಅವರೊಂದಿಗೆ ಧರ್ಮೇಂದ್ರ ಪ್ರಧಾನ್ ಇರುವ ಫೋಟೋ ಬಿಡುಗಡೆ ಮಾಡಿದ್ದಾರೆ.

ಪ್ರಶಾಂತ್ ಕಿಶೋರ್ ಆರೋಪಗಳ ಬಗ್ಗೆ ಬಿಜೆಪಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಎಲ್‌ಜೆಪಿಯ ಪ್ರಾಬಲ್ಯ ಹೊಂದಿರುವ ಬ್ರಹ್ಮಪುರದಲ್ಲಿ ನಮ್ಮ ಅಭ್ಯರ್ಥಿ, ಪಾಟ್ನಾದಲ್ಲಿ ಪ್ರಮುಖ ಆಸ್ಪತ್ರೆ ನಡೆಸುತ್ತಿರುವ ವೈದ್ಯ ಡಾ. ತಿವಾರಿ ಮೂರು ದಿನಗಳ ಕಾಲ ಪ್ರಚಾರ ಮಾಡಿದ್ದರು. ನಂತರ ಇದ್ದಕ್ಕಿದ್ದಂತೆ ಹಿಂದೆ ಸರಿದರು. ಧರ್ಮೇಂದ್ರ ಪ್ರಧಾನ್ ಜೊತೆ ತಿವಾರಿ ಇರುವ ಫೋಟೋ ಅವರ ಮೇಲೆ ಹೇರಲಾದ ಒತ್ತಡಕ್ಕೆ ಪುರಾವೆಯಾಗಿದೆ. ಚುನಾವಣೆ ಘೋಷಣೆಯಾದ ನಂತರ ಕೇಂದ್ರ ಸಚಿವರು ಎದುರಾಳಿ ಅಭ್ಯರ್ಥಿಯನ್ನು ಭೇಟಿಯಾಗುವುದು ಆಶ್ಚರ್ಯಕರ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಗೋಪಾಲ್‌ಗಂಜ್‌ನ ಬಿಜೆಪಿ ನಾಯಕರು ನಮ್ಮ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯ ರಾಜಕೀಯ ನಾಯಕ ರಘುನಾಥ್ ಪಾಂಡೆ ಅವರ ಅಳಿಯ ಡಾ. ಶಶಿ ಶೇಖರ್ ಸಿನ್ಹಾ ಅವರನ್ನು ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಒತ್ತಡ ಹೇರಿದ್ದಾರೆ. ಎರಡು ದಿನಗಳ ಹಿಂದಿನವರೆಗೂ ಸಿನ್ಹಾ ಅವರು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದರು. ತನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಲು ನನಗೆ ಕರೆ ಮಾಡಿದ್ದರು. ಆದರೆ, ಪಕ್ಷದಲ್ಲೇ ಇರುವುದಾಗಿ ತಿಳಿಸಿದ್ದರು. ಇದಾಗಿ ಎರಡು ಗಂಟೆಗಳ ನಂತರ, ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡರು. ಫೋನ್ ಸ್ವಿಚ್ ಆಫ್ ಮಾಡಿದರು. ರಾಜ್ಯಾದ್ಯಂತ ಇತರ ಅಭ್ಯರ್ಥಿಗಳು ಇದೇ ರೀತಿಯ ಒತ್ತಡ ಮತ್ತು ಬೆದರಿಕೆಯನ್ನು ಎದುರಿಸುತ್ತಿದ್ದಾರೆ” ಎಂದು ಕಿಶೋರ್ ವಿವರಿಸಿದ್ದಾರೆ.

“ಕುಮ್ರಾರ್‌ ಕ್ಷೇತ್ರದ ನಮ್ಮ ಅಭ್ಯರ್ಥಿ ಪ್ರೊ. ಕೆ. ಸಿ. ಸಿನ್ಹಾ ಅವರ ಮೇಲೆ ಒತ್ತಡ ಹೇರಲಾಗಿದೆ. ನಾಮಪತ್ರ ಹಿಂತೆಗೆದುಕೊಳ್ಳುವಂತೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ, ಅವರು ಒತ್ತಡಕ್ಕೆ ಮಣಿಯಲು ನಿರಾಕರಿಸಿದ್ದಾರೆ. ಎರಡು ವರ್ಷಗಳ ಹಿಂದೆ ಜನ್ ಸುರಾಜ್‌ಗೆ ಸೇರಲು ಬಿಜೆಪಿಗೆ ರಾಜೀನಾಮೆ ನೀಡಿರುವ ಶಾಲಾ ಶಿಕ್ಷಕ ವಾಲ್ಮೀಕಿನಗರ ಅಭ್ಯರ್ಥಿ ಡಾ. ನಾರಾಯಣ್ ಪ್ರಸಾದ್ ಅವರ ರಾಜೀನಾಮೆಯನ್ನು ಇದುವರೆಗೆ ಅಂಗೀಕರಿಸಲಾಗಿಲ್ಲ. ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು ಎಂದು ಸ್ಥಳೀಯ ಅಧಿಕಾರಿಗಳು ಬೆದರಿಸುತ್ತಿದ್ದಾರೆ” ಎಂದು ಕಿಶೋರ್ ಆರೋಪಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಕಿಶೋರ್, “ಅಭ್ಯರ್ಥಿಗಳಿಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗದಿದ್ದರೆ, ಇನ್ನು ಮತದಾರರನ್ನು ಹೇಗೆ ರಕ್ಷಿಸುತ್ತೀರಿ? ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯುವಂತೆ ಈ ರೀತಿ ಬೆದರಿಕೆ ಹಾಕಿದರೆ, ಮತದಾನದ ದಿನದಂದು ಪಕ್ಷಗಳು ಮತದಾರರನ್ನು ಬೆದರಿಸುವುದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ?” ಎಂದು ಕೇಳಿದ್ದಾರೆ.

“14 ಮಂದಿ ಜನ ಸುರಾಜ್ ಅಭ್ಯರ್ಥಿಗಳು ಬೆದರಿಕೆಗಳನ್ನು ಎದುರಿಸಿದ್ದಾರೆ. ಆದರೂ 240 ಮಂದಿ ಅಭ್ಯರ್ಥಿಗಳು ದೃಢವಾಗಿ ನಿಂತಿದ್ದಾರೆ. ಅವರಿಗೆ ನಾನು ನಮಸ್ಕರಿಸುತ್ತೇನೆ. ಅವರು ನಮ್ಮ ಮೇಲೆ ಬೆದರಿಕೆ, ಒತ್ತಡ ಹಾಕಬಹುದು. ಇದಕ್ಕೆ ನಾವು ಪ್ರತ್ಯತ್ತರ ಕೊಡುತ್ತೇವೆ” ಎಂದಿದ್ದಾರೆ.

“ಬಿಜೆಪಿ ಮಹಾಮೈತ್ರಿಕೂಟದ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿಲ್ಲ, ಬದಲಾಗಿ ಜನ ಸುರಾಜ್‌ನ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿದೆ. ಏಕೆಂದರೆ ನಮ್ಮ ಅಭ್ಯರ್ಥಿಗಳು ಉತ್ತಮ ವೃತ್ತಿಪರರು, ವೈದ್ಯರು ಮತ್ತು ಉದ್ಯಮಿಗಳು. ಅವರು ಬಲ ಪ್ರಯೋಗಕ್ಕೆ ಹೆದರುವವರು ಅಲ್ಲ, ಸಭ್ಯ ಜನರಿಗೆ ಹೆದರುವವರು. ಇದು ಜನ ಸುರಾಜ್‌ನ ಭಯ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಜನರು ಮತ್ತೆ ವಲಸೆ ಹೋಗಬಾರದು. ಹಾಗಾಗಿ, ಪೂರ್ಣ ಶಕ್ತಿಯಿಂದ ಎದ್ದು ಈ ಸರ್ಕಾರವನ್ನು ಉರುಳಿಸಿ” ಎಂದು ಬಿಹಾರದ ಯುವಜನತೆಗೆ ಪ್ರಶಾಂತ್ ಕಿಶೋರ್ ಕರೆ ಕೊಟ್ಟಿದ್ದಾರೆ.

ಅಭ್ಯರ್ಥಿ ಆಯ್ಕೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಕಿಶೋರ್, ಜನ್ ಸುರಾಜ್ ಅತ್ಯಂತ ಹಿಂದುಳಿದ ಸಮುದಾಯಗಳ 54 ಮತ್ತು ಮುಸ್ಲಿಂ ಸಮುದಾಯದ 34 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾವು ಅತ್ಯಂತ ಹಿಂದುಳಿದ ಗುಂಪುಗಳಿಗೆ 70 ಟಿಕೆಟ್‌ಗಳನ್ನು ನೀಡಲು ಉದ್ದೇಶಿಸಿದ್ದೆವು. ಆದರೆ, 54 ನೀಡಲು ಸಾಧ್ಯವಾಯಿತು. ಇಷ್ಟು ಟಿಕೆಟ್ ಇತರ ಯಾವುದೇ ಪಕ್ಷಗಳು ಈ ಸಮುದಾಯಗಳಿಗೆ ನೀಡಿಲ್ಲ. ನಾವು ಮುಸ್ಲಿಮರ ಬಗ್ಗೆ ನಾಟಕೀಯ ಒಲವು ತೋರಿಸುತ್ತಿದ್ದೇವೆ ಎನ್ನುವರಿಗೆ, ನಾವು ಕೊಟ್ಟ ಟಿಕೆಟ್ ಸೇರಿದಂತೆ ಸಮುದಾಯಕ್ಕೆ ನೀಡಿದ ಪ್ರಾಮುಖ್ಯತೆಯ ಇತರ ದಾಖಲೆಗಳು ಪ್ರತ್ಯುತ್ತರವಾಗಿದೆ. ಈಗಾಗಲೇ ಮುಸ್ಲಿಂ ಶಾಸಕರು ಇರುವ ಕ್ಷೇತ್ರಗಳನ್ನು ಹೊರತುಪಡಿಸಿ, ಸಾಧ್ಯವಾದಲ್ಲೆಲ್ಲಾ ನಾವು ಆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದ್ದೇವೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...