Homeಮುಖಪುಟನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ನಾಯಕರಿಂದ ನಮ್ಮ ಅಭ್ಯರ್ಥಿಗಳಿಗೆ ಬೆದರಿಕೆ : ಪ್ರಶಾಂತ್ ಕಿಶೋರ್ ಆರೋಪ

- Advertisement -
- Advertisement -

ಬಿಹಾರದ ಪ್ರಮುಖ ಕ್ಷೇತ್ರಗಳ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆದರಿಸುತ್ತಿದ್ದಾರೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವಂತೆ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಜನ್ ಸುರಾಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಮಂಗಳವಾರ ಆರೋಪಿಸಿದ್ದಾರೆ.

ಪಾಟ್ನಾದ ಶೇಖ್‌ಪುರ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಿಶೋರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೆಲೆ ಕಳೆದುಕೊಳ್ಳುವ ಭಯದಿಂದಾಗಿ ಬಿಜೆಪಿ ಒತ್ತಡ ತಂತ್ರಗಳನ್ನು ಬಳಸುತ್ತಿದೆ. ಯಾರೇ ಗೆದ್ದರೂ ನಾವು ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ಅಂದುಕೊಂಡಿತ್ತು. ಆದರೆ ಈ ಬಾರಿ, ಅವರ ವಿಶ್ವಾಸವನ್ನು ಜನ್ ಸುರಾಜ್ ಪಕ್ಷ ಅಲುಗಾಡಿಸಿದೆ ಎಂದು ಹೇಳಿದ್ದಾರೆ.

ದಾನಾಪುರದಲ್ಲಿ ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಅಖಿಲೇಶ್ ಕುಮಾರ್ ಅಲಿಯಾಸ್ ಮುತೂರ್ ಶಾ ಅವರನ್ನು ಬಂಧಿಸಿಟ್ಟ ಬಿಜೆಪಿ ನಾಮಪತ್ರ ಸಲ್ಲಿಸದಂತೆ ತಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಚುನಾವಣಾ ಉಸ್ತುವಾರಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರೊಂದಿಗೆ ನಮ್ಮ ಅಭ್ಯರ್ಥಿಯನ್ನು ಇಡೀ ದಿನ ಕೂರಿಸಲಾಗಿತ್ತು ಎಂದು ಪ್ರಶಾಂತ್ ಕಿಶೋರ್ ಆರೋಪ ಮಾಡಿದ್ದಾರೆ.

“ಆರ್‌ಜೆಡಿ ಗೂಂಡಾಗಳು ನಮ್ಮ ಅಭ್ಯರ್ಥಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎಂದು ಜನರಿಗೆ ಹೇಳಲಾಗಿತ್ತು. ಆದರೆ, ವಾಸ್ತವವಾಗಿ ನಮ್ಮ ಅಭ್ಯರ್ಥಿ ದೇಶದ ಗೃಹ ಸಚಿವರೊಂದಿಗೆ ಕುಳಿತಿದ್ದರು. ಚುನಾವಣಾ ಆಯೋಗ ಇದನ್ನು ಗಮನಿಸಬೇಕು. ಗೃಹ ಸಚಿವರು ಅಭ್ಯರ್ಥಿಯನ್ನು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಅವರು ನಾಮಪತ್ರ ಸಲ್ಲಿಸುವುದನ್ನು ತಡೆಯಲು ಹೇಗೆ ಸಾಧ್ಯ?” ಎಂದು ಕಿಶೋರ್ ಪ್ರಶ್ನಿಸಿದ್ದು, “ಇದು ಬಿಜೆಪಿಯ ನಿಜವಾದ ಮುಖ ಮತ್ತು ನಡವಳಿಕೆ” ಎಂದಿದ್ದಾರೆ.

ಮೂವರು ಜನ್ ಸುರಾಜ್ ಅಭ್ಯರ್ಥಿಗಳಿಗೆ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹಾಕುವಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಆರೋಪಿಸಿದ ಕಿಶೋರ್, ಜನ್ ಸುರಾಜ್‌ ಪಕ್ಷದ ಬ್ರಹ್ಮಪುರ ಅಭ್ಯರ್ಥಿ ಡಾ. ಸತ್ಯ ಪ್ರಕಾಶ್ ತಿವಾರಿ ಅವರೊಂದಿಗೆ ಧರ್ಮೇಂದ್ರ ಪ್ರಧಾನ್ ಇರುವ ಫೋಟೋ ಬಿಡುಗಡೆ ಮಾಡಿದ್ದಾರೆ.

ಪ್ರಶಾಂತ್ ಕಿಶೋರ್ ಆರೋಪಗಳ ಬಗ್ಗೆ ಬಿಜೆಪಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಎಲ್‌ಜೆಪಿಯ ಪ್ರಾಬಲ್ಯ ಹೊಂದಿರುವ ಬ್ರಹ್ಮಪುರದಲ್ಲಿ ನಮ್ಮ ಅಭ್ಯರ್ಥಿ, ಪಾಟ್ನಾದಲ್ಲಿ ಪ್ರಮುಖ ಆಸ್ಪತ್ರೆ ನಡೆಸುತ್ತಿರುವ ವೈದ್ಯ ಡಾ. ತಿವಾರಿ ಮೂರು ದಿನಗಳ ಕಾಲ ಪ್ರಚಾರ ಮಾಡಿದ್ದರು. ನಂತರ ಇದ್ದಕ್ಕಿದ್ದಂತೆ ಹಿಂದೆ ಸರಿದರು. ಧರ್ಮೇಂದ್ರ ಪ್ರಧಾನ್ ಜೊತೆ ತಿವಾರಿ ಇರುವ ಫೋಟೋ ಅವರ ಮೇಲೆ ಹೇರಲಾದ ಒತ್ತಡಕ್ಕೆ ಪುರಾವೆಯಾಗಿದೆ. ಚುನಾವಣೆ ಘೋಷಣೆಯಾದ ನಂತರ ಕೇಂದ್ರ ಸಚಿವರು ಎದುರಾಳಿ ಅಭ್ಯರ್ಥಿಯನ್ನು ಭೇಟಿಯಾಗುವುದು ಆಶ್ಚರ್ಯಕರ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಗೋಪಾಲ್‌ಗಂಜ್‌ನ ಬಿಜೆಪಿ ನಾಯಕರು ನಮ್ಮ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯ ರಾಜಕೀಯ ನಾಯಕ ರಘುನಾಥ್ ಪಾಂಡೆ ಅವರ ಅಳಿಯ ಡಾ. ಶಶಿ ಶೇಖರ್ ಸಿನ್ಹಾ ಅವರನ್ನು ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಒತ್ತಡ ಹೇರಿದ್ದಾರೆ. ಎರಡು ದಿನಗಳ ಹಿಂದಿನವರೆಗೂ ಸಿನ್ಹಾ ಅವರು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದರು. ತನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಲು ನನಗೆ ಕರೆ ಮಾಡಿದ್ದರು. ಆದರೆ, ಪಕ್ಷದಲ್ಲೇ ಇರುವುದಾಗಿ ತಿಳಿಸಿದ್ದರು. ಇದಾಗಿ ಎರಡು ಗಂಟೆಗಳ ನಂತರ, ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡರು. ಫೋನ್ ಸ್ವಿಚ್ ಆಫ್ ಮಾಡಿದರು. ರಾಜ್ಯಾದ್ಯಂತ ಇತರ ಅಭ್ಯರ್ಥಿಗಳು ಇದೇ ರೀತಿಯ ಒತ್ತಡ ಮತ್ತು ಬೆದರಿಕೆಯನ್ನು ಎದುರಿಸುತ್ತಿದ್ದಾರೆ” ಎಂದು ಕಿಶೋರ್ ವಿವರಿಸಿದ್ದಾರೆ.

“ಕುಮ್ರಾರ್‌ ಕ್ಷೇತ್ರದ ನಮ್ಮ ಅಭ್ಯರ್ಥಿ ಪ್ರೊ. ಕೆ. ಸಿ. ಸಿನ್ಹಾ ಅವರ ಮೇಲೆ ಒತ್ತಡ ಹೇರಲಾಗಿದೆ. ನಾಮಪತ್ರ ಹಿಂತೆಗೆದುಕೊಳ್ಳುವಂತೆ ಪದೇ ಪದೇ ಬೆದರಿಕೆ ಹಾಕಲಾಗುತ್ತಿದೆ. ಆದರೆ, ಅವರು ಒತ್ತಡಕ್ಕೆ ಮಣಿಯಲು ನಿರಾಕರಿಸಿದ್ದಾರೆ. ಎರಡು ವರ್ಷಗಳ ಹಿಂದೆ ಜನ್ ಸುರಾಜ್‌ಗೆ ಸೇರಲು ಬಿಜೆಪಿಗೆ ರಾಜೀನಾಮೆ ನೀಡಿರುವ ಶಾಲಾ ಶಿಕ್ಷಕ ವಾಲ್ಮೀಕಿನಗರ ಅಭ್ಯರ್ಥಿ ಡಾ. ನಾರಾಯಣ್ ಪ್ರಸಾದ್ ಅವರ ರಾಜೀನಾಮೆಯನ್ನು ಇದುವರೆಗೆ ಅಂಗೀಕರಿಸಲಾಗಿಲ್ಲ. ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರು ಎಂದು ಸ್ಥಳೀಯ ಅಧಿಕಾರಿಗಳು ಬೆದರಿಸುತ್ತಿದ್ದಾರೆ” ಎಂದು ಕಿಶೋರ್ ಆರೋಪಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಕಿಶೋರ್, “ಅಭ್ಯರ್ಥಿಗಳಿಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗದಿದ್ದರೆ, ಇನ್ನು ಮತದಾರರನ್ನು ಹೇಗೆ ರಕ್ಷಿಸುತ್ತೀರಿ? ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯುವಂತೆ ಈ ರೀತಿ ಬೆದರಿಕೆ ಹಾಕಿದರೆ, ಮತದಾನದ ದಿನದಂದು ಪಕ್ಷಗಳು ಮತದಾರರನ್ನು ಬೆದರಿಸುವುದನ್ನು ತಡೆಯಲು ಏನು ಕ್ರಮ ಕೈಗೊಂಡಿದ್ದೀರಿ?” ಎಂದು ಕೇಳಿದ್ದಾರೆ.

“14 ಮಂದಿ ಜನ ಸುರಾಜ್ ಅಭ್ಯರ್ಥಿಗಳು ಬೆದರಿಕೆಗಳನ್ನು ಎದುರಿಸಿದ್ದಾರೆ. ಆದರೂ 240 ಮಂದಿ ಅಭ್ಯರ್ಥಿಗಳು ದೃಢವಾಗಿ ನಿಂತಿದ್ದಾರೆ. ಅವರಿಗೆ ನಾನು ನಮಸ್ಕರಿಸುತ್ತೇನೆ. ಅವರು ನಮ್ಮ ಮೇಲೆ ಬೆದರಿಕೆ, ಒತ್ತಡ ಹಾಕಬಹುದು. ಇದಕ್ಕೆ ನಾವು ಪ್ರತ್ಯತ್ತರ ಕೊಡುತ್ತೇವೆ” ಎಂದಿದ್ದಾರೆ.

“ಬಿಜೆಪಿ ಮಹಾಮೈತ್ರಿಕೂಟದ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿಲ್ಲ, ಬದಲಾಗಿ ಜನ ಸುರಾಜ್‌ನ ಅಭ್ಯರ್ಥಿಗಳ ಬಗ್ಗೆ ಚಿಂತಿಸುತ್ತಿದೆ. ಏಕೆಂದರೆ ನಮ್ಮ ಅಭ್ಯರ್ಥಿಗಳು ಉತ್ತಮ ವೃತ್ತಿಪರರು, ವೈದ್ಯರು ಮತ್ತು ಉದ್ಯಮಿಗಳು. ಅವರು ಬಲ ಪ್ರಯೋಗಕ್ಕೆ ಹೆದರುವವರು ಅಲ್ಲ, ಸಭ್ಯ ಜನರಿಗೆ ಹೆದರುವವರು. ಇದು ಜನ ಸುರಾಜ್‌ನ ಭಯ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

“ಜನರು ಮತ್ತೆ ವಲಸೆ ಹೋಗಬಾರದು. ಹಾಗಾಗಿ, ಪೂರ್ಣ ಶಕ್ತಿಯಿಂದ ಎದ್ದು ಈ ಸರ್ಕಾರವನ್ನು ಉರುಳಿಸಿ” ಎಂದು ಬಿಹಾರದ ಯುವಜನತೆಗೆ ಪ್ರಶಾಂತ್ ಕಿಶೋರ್ ಕರೆ ಕೊಟ್ಟಿದ್ದಾರೆ.

ಅಭ್ಯರ್ಥಿ ಆಯ್ಕೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಕಿಶೋರ್, ಜನ್ ಸುರಾಜ್ ಅತ್ಯಂತ ಹಿಂದುಳಿದ ಸಮುದಾಯಗಳ 54 ಮತ್ತು ಮುಸ್ಲಿಂ ಸಮುದಾಯದ 34 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾವು ಅತ್ಯಂತ ಹಿಂದುಳಿದ ಗುಂಪುಗಳಿಗೆ 70 ಟಿಕೆಟ್‌ಗಳನ್ನು ನೀಡಲು ಉದ್ದೇಶಿಸಿದ್ದೆವು. ಆದರೆ, 54 ನೀಡಲು ಸಾಧ್ಯವಾಯಿತು. ಇಷ್ಟು ಟಿಕೆಟ್ ಇತರ ಯಾವುದೇ ಪಕ್ಷಗಳು ಈ ಸಮುದಾಯಗಳಿಗೆ ನೀಡಿಲ್ಲ. ನಾವು ಮುಸ್ಲಿಮರ ಬಗ್ಗೆ ನಾಟಕೀಯ ಒಲವು ತೋರಿಸುತ್ತಿದ್ದೇವೆ ಎನ್ನುವರಿಗೆ, ನಾವು ಕೊಟ್ಟ ಟಿಕೆಟ್ ಸೇರಿದಂತೆ ಸಮುದಾಯಕ್ಕೆ ನೀಡಿದ ಪ್ರಾಮುಖ್ಯತೆಯ ಇತರ ದಾಖಲೆಗಳು ಪ್ರತ್ಯುತ್ತರವಾಗಿದೆ. ಈಗಾಗಲೇ ಮುಸ್ಲಿಂ ಶಾಸಕರು ಇರುವ ಕ್ಷೇತ್ರಗಳನ್ನು ಹೊರತುಪಡಿಸಿ, ಸಾಧ್ಯವಾದಲ್ಲೆಲ್ಲಾ ನಾವು ಆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದ್ದೇವೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...