Homeಮುಖಪುಟಗಾಂಧಿ ಕುಟುಂಬ ಭೇಟಿಯಾದ ಪ್ರಶಾಂತ್ ಕಿಶೋರ್: ಕಾಂಗ್ರೆಸ್ ಸೇರಲು ಸಜ್ಜು?

ಗಾಂಧಿ ಕುಟುಂಬ ಭೇಟಿಯಾದ ಪ್ರಶಾಂತ್ ಕಿಶೋರ್: ಕಾಂಗ್ರೆಸ್ ಸೇರಲು ಸಜ್ಜು?

- Advertisement -
- Advertisement -

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಚರ್ಚೆಗಳ ಬೆನ್ನೆಲ್ಲೆ ಅವರು ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

2024ರ ಚುನಾವಣೆ ನೀಲನಕ್ಷೆಗೆ ಸಜ್ಜುಗೊಳಿಸುವುದಕ್ಕೆ ಪ್ರಶಾಂತ್ ಕಿಶೋರ್ ಒತ್ತು ನೀಡಿದರೆ, ಈ ವರ್ಷದ ಅಂತ್ಯದಲ್ಲಿ ನಡೆಯುವ ಗುಜರಾತ್ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುವಂತೆ ಕೆಲ ಮುಖಂಡರು ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಅದರಲ್ಲಿಯೂ ಗಾಂಧಿ ಕುಟುಂಬದ ವಿರುದ್ಧ ಟೀಕೆ ಮಾಡುತ್ತಿದ್ದ ಪ್ರಶಾಂತ್ ಕಿಶೋರ್ ಈಗ ಮತ್ತೆ ಗಾಂಧಿ ಕುಟುಂಬದ ಜೊತೆ ಮುಂದಿನ ಚುನಾವಣೆಗಳ ಕುರಿತು ಮಾತುಕತೆ ನಡೆಸುತ್ತಿದ್ದಾರೆ. ಹೊರಗಿನಿಂದ ಬೆಂಬಲ ನೀಡುವ ಬದಲು ನೇರವಾಗಿ ಕಾಂಗ್ರೆಸ್ ಸೇರುವಂತೆ ಒತ್ತಾಯಿಸಲಾಗಿದೆ ಎನ್ನಲಾಗುತ್ತಿದ್ದು, ಈ ಕುರಿತು ಮೇ ತಿಂಗಳಿನಲ್ಲಿ ಕಿಶೋರ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡುವಂತೆ ಪ್ರಶಾಂತ್ ಕಿಶೋರ್ ಮೇಲೆ ಒತ್ತಡ ಹೇರಲಾಗುತ್ತಿರುವುದು ನಿಜ. ಆದರೆ ಕೇವಲ ಅದೊಂದು ಚುನಾವಣೆ ಮಾತ್ರವಲ್ಲದೇ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಬೃಹತ್ ಯೋಜನೆ ರೂಪಿಸುವುದು ಪ್ರಶಾಂತ್ ಕಿಶೋರ್‌ರವರ ಮಹತ್ವಕಾಂಕ್ಷೆಯಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ. ಈಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜೊತೆ ಮಾತುಕತೆ ಮುಂದುವರೆಸಲು ಬಯಸಿದ್ದು ಈ ಎಲ್ಲದರ ಕುರಿತು ಮೇ 02 ರಂದು ಪ್ರಶಾಂತ್ ಕಿಶೋರ್ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ.

2021ರಲ್ಲಿ ಜುಲೈನಲ್ಲಿ ಪ್ರಶಾಂತ್ ಕಿಶೋರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಮುಖ್ಯವಾಗಿ ರಾಹುಲ್ ಗಾಂಧಿ ಮತ್ತು ಪ್ರಶಾಂತ್ ಕಿಶೋರ್ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಆದರೆ ಆನಂತರ ಹಲವು ಭಿನ್ನಾಭಿಪ್ರಾಯಗಳ ಕಾರಣಕ್ಕೆ ಮಾತುಕತೆ ಮುರಿದು ಬಿದ್ದಿತ್ತು. ಆನಂತರ ಕಾಂಗ್ರೆಸ್ ನಾಯಕತ್ವದ ವಿರುದ್ಧ ಪ್ರಶಾಂತ್ ಕಿಶೋರ್ ಹಲವಾರು ಟೀಕೆಗಳನ್ನು ಮಾಡಿದ್ದರು.

ಬಿಜೆಪಿ ಇನ್ನು ಹಲವು ವರ್ಷಗಳ ಕಾಲ ಭಾರತದ ರಾಜಕೀಯದ ಕೇಂದ್ರವಾಗಲಿದೆ… ಈ ಹಿಂದೆ ಕಾಂಗ್ರೆಸ್‌ ಇದ್ದಂತೆ ಈಗ ಬಿಜೆಪಿ ಕೂಡಾ ಗೆದ್ದರೂ, ಸೋತರೂ ಎಲ್ಲಿಯೂ ಹೋಗುವುದಿಲ್ಲ. ಆದರೆ ಸಮಸ್ಯೆ ಇರುವುದು ರಾಹುಲ್ ಗಾಂಧಿಗೆ. ಬಹುಶಃ ಜನರು ಬಿಜೆಪಿಯನ್ನು ಕಿತ್ತೊಗೆಯುತ್ತಾರೆ ಎಂದು ಅವರು ಭಾವಿಸುತ್ತಾರೆ, ಅದು ಆಗುತ್ತಿಲ್ಲ, ಆ ಅರಿವು ರಾಹುಲ್ ಗಾಂಧಿಗೆ ಇಲ್ಲ” ಎಂದು ಪ್ರಶಾಂತ್‌ ಕಿಶೋರ್‌ 2021ರ ಅಕ್ಟೋಬರ್‌ನಲ್ಲಿ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ನಡೆಸಿದ್ದರು.

“ಕಾಂಗ್ರೆಸ್ ಪ್ರತಿನಿಧಿಸುವ ಚಿಂತನೆ ಮತ್ತು ಅದಕ್ಕಿರುವ ಸಾಮರ್ಥ್ಯವು ಪ್ರಬಲ ಪ್ರತಿಪಕ್ಷಕ್ಕೆ ಅತ್ಯಗತ್ಯ. ಆದರೆ ಕಾಂಗ್ರೆಸ್‌ನ ನಾಯಕತ್ವವು ವ್ಯಕ್ತಿಯೊಬ್ಬರ ದೈವಿಕ ಹಕ್ಕಲ್ಲ. ವಿಶೇಷವಾಗಿ ಕಳೆದ 10 ವರ್ಷಗಳಲ್ಲಿ ಪಕ್ಷವು 90% ಕ್ಕಿಂತ ಹೆಚ್ಚು ಚುನಾವಣೆಗಳನ್ನು ಸೋತಿದೆ. ವಿರೋಧ ಪಕ್ಷವು ತನ್ನ ನಾಯಕತ್ವವನ್ನು ಪ್ರಜಾಸತ್ತಾತ್ಮಕವಾಗಿ ನಿರ್ಧರಿಸಲಿ ಎಂದು ಡಿಸೆಂಬರ್ ವೇಳೆಗೆ ಪ್ರಶಾಂತ್ ಕಿಶೋರ್ ನುಡಿದಿದ್ದರು. ಪ್ರಶಾಂತ್ ಕಿಶೋರ್‌ರವರ ಎಷ್ಟೆಲ್ಲಾ ಟೀಕೆಗಳ ನಡುವೆಯೂ ರಾಹುಲ್ ಗಾಂಧಿ ತಾಳ್ಮೆ ವಹಿಸಿದ್ದಾರೆ ಹೊರತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಈಗ ಮತ್ತೊಂದು ಸುತ್ತಿನ ಮಾತುಕತೆಗೆ ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಅದೇ ಸಂದರ್ಭದಲ್ಲಿ ಪ್ರಶಾಂತ್ ಕಿಶೋರ್ ಸಹ ಕಾಂಗ್ರೆಸ್ ಮನಸ್ಸು ಮಾಡಿದ್ದರೆ 2024ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂದು ಉಚ್ಚರಿಸಿದ್ದಾರೆ.

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಇಂಡಿಯಾ ಟುಡೇ ಚಾನೆಲ್ ಜೊತೆ ಮಾತನಾಡಿದ್ದ ಪ್ರಶಾಂತ್ ಕಿಶೋರ್ “ಕಾಂಗ್ರೆಸ್ ಸಂಪೂರ್ಣ ಮನಸ್ಸು ಮಾಡಿದರೆ ಕೇವಲ ಎರಡು ವರ್ಷದಲ್ಲಿ ಅಂದರೆ 2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ” ಎಂದು ನುಡಿದಿದ್ದರು.

“ಬಿಜೆಪಿ ಮತ್ತು ಮೋದಿ ಎಷ್ಟೇ ಪ್ರಭಾವಿಯಾಗಿದ್ದರೂ ಈಶಾನ್ಯ ಭಾರತ ಮತ್ತು ದಕ್ಷಿಣ ಭಾರತದ 200 ಸ್ಥಾನಗಳಲ್ಲಿ (ಬಿಹಾರ, ಪ.ಬಂಗಾಳ, ಒಡಿಸ್ಸಾ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳ) ಇಂದಿಗೂ 50 ಸೀಟು ಪಡೆಯಲು ತಿಣುಕಾಡುತ್ತಿದೆ. ಅಂದರೆ ಬಿಹಾರ, ಓಡಿಸ್ಸಾ ಮತ್ತು ಬಂಗಾಳದಲ್ಲಿ ಬಿಜೆಪಿ ಯಶಸ್ವಿಯಾಗಿದ್ದರೂ ಸಹ 50ಕ್ಕಿಂತ ಹೆಚ್ಚು ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಬಿಜೆಪಿಗೆ ಬಿಹಾರದಲ್ಲಿ 18, ಬಂಗಾಳದಲ್ಲಿ 18,  ಒಡಿಸ್ಸಾದಲ್ಲಿ 12, ತೆಲಂಗಾಣದಲ್ಲಿ 4-5 ಬಿಜೆಪಿ ಸಂಸದರಿದ್ದಾರೆ ಅಷ್ಟೆ. ಅಂದರೆ 150 ರಷ್ಟು ಸೀಟುಗಳು ಇಂದಿಗೂ ವಿರೋಧ ಪಕ್ಷಗಳ ಕೈಯಲ್ಲಿವೆ. ಅವರೆಲ್ಲರೂ ಬಿಜೆಪಿಯನ್ನು ವಿರೋಧಿಸುತ್ತಿದ್ದಾರೆ” ಎಂದು ಪ್ರಶಾಂತ್ ಕಿಶೋರ್ ತಿಳಿಸಿದ್ದರು.

ಉಳಿದ 350ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಯಾವುದೇ ಪಕ್ಷವಾದರೂ ಅಂದರೆ ಆಪ್, ತೃಣಮೂಲ ಕಾಂಗ್ರೆಸ್ ಅಥವಾ ಮರುಹುಟ್ಟಿನ ಕಾಂಗ್ರೆಸ್ ಪಕ್ಷವಾಗಲಿ 120 ಸೀಟುಗಳನ್ನು ಗೆದ್ದುಕೊಂಡಲ್ಲಿ ರಾತ್ರೋರಾತ್ರಿ ಸಂಪೂರ್ಣ ಪರಿಸ್ಥಿತಿ ಬದಲಾಗಲಿದೆ. ಸೈದ್ದಾಂತಿಕವಾಗಿ ಹೇಳಬಹುದಾದರೆ ಕೇವಲ 2 ವರ್ಷದಲ್ಲಿ ಬಿಜೆಪಿಯನ್ನು ಸೋಲಿಸಬಹುದಾಗಿದೆ. ಕಾಂಗ್ರೆಸ್ ಥರದ ಪಕ್ಷ 120 ಸೀಟುಗಳನ್ನು ಗೆಲ್ಲಲಾಗುವುದಿಲ್ಲ ಎಂದು ಹೇಳಲು ಸಾಧ್ಯವೇ? ಈಗ 50 ಕ್ಷೇತ್ರಗಳಲ್ಲಿ ಗೆದ್ದಿರುವ ಕಾಂಗ್ರೆಸ್ ಇನ್ನು ಎರಡು ವರ್ಷಗಳಲ್ಲಿ ಅದನ್ನು ಡಬಲ್ ಮಾಡುವುದು ಸಾಧ್ಯವಿದೆ ಎಂದು ಪ್ರಶಾಂತ್ ಕಿಶೋರ್ ಲೆಕ್ಕಾಚಾರ ಹಾಕಿದ್ದಾರೆ.

ಅದಕ್ಕಾಗಿ ಕಾಂಗ್ರೆಸ್ ಅನ್ನು ಪುನಃ ಸ್ಥಾಪಿಸಬೇಕಾಗಿದೆ. ಅದರ ಆತ್ಮ, ಮುನ್ನೋಟ ಮತ್ತು ಸೈದ್ದಾಂತಿಕತೆಯನ್ನು ಇಟ್ಟುಕೊಂಡು ಉಳಿದೆಲ್ಲವನ್ನು ಬದಲಿಸಬೇಕಿದೆ. ಕಾಂಗ್ರೆಸ್ ಮನಸ್ಸು ಮಾಡಿ ಕೆಲಸ ಮಾಡಿದರೆ ಇದನ್ನು ಸಾಧಿಸಬಹುದು. ಬಿಜೆಪಿ ಸೋಲಿಸಲು ಇತರ ವಿರೋಧ ಪಕ್ಷಗಳ ಬೆಂಬಲ ಖಂಡಿತ ಬೇಕಾಗಿದೆ. ಅದಕ್ಕಾಗಿ ಮೊದಲಿಗೆ ಕಾಂಗ್ರೆಸ್ ಪ್ರತಿಪಕ್ಷಗಳ ಎದುರು ಬಿಜೆಪಿಯನ್ನು ಸೋಲಿಸುವ ಮುನ್ನೋಟವನ್ನು ಮುಂದಿಡಬೇಕು. ಎರಡನೇದಾಗಿ ಇದರಿಂದ ಅತಿ ಹೆಚ್ಚು ಲಾಭ ತನಗಾಗಲಿದೆ ಎನ್ನುವುದನ್ನು ಮನಗಾಣಬೇಕು ಮತ್ತು ಮೂರನೇಯದಾಗಿ ಬಿಜೆಪಿಯನ್ನು ಮಣಿಸಿದ ನಂತರ ಯಾರು ನಾಯಕತ್ವ ವಹಿಸಬೇಕು ಎಂಬುದನ್ನು ಪಡೆದ ಸೀಟುಗಳ ಆಧಾರದಲ್ಲಿ ನಿರ್ಧರಿಸಬೇಕು. ಆದರೆ ಕಾಂಗ್ರೆಸ್ ಇಂದು ಇದಕ್ಕೆ ವಿರುದ್ಧವಾಗಿ ಚಿಂತಿಸುತ್ತಿದೆ. ಬಹುದೊಡ್ಡ ಪಕ್ಷವಾಗಿ ಕಾಂಗ್ರೆಸ್‌ಗೆ ಖಂಡಿತ ಅನುಕೂಲಗಳಿವೆ, ಅದು ತನ್ನ ಚಿಂತನೆಯನ್ನು ಅದಲು ಬದಲು ಮಾಡಿದರೆ ಖಂಡಿತ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂದು ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ಟಿಎಂಸಿಯ ಮಮತಾ ಬ್ಯಾನರ್ಜಿ, ಎನ್‌ಸಿಪಿಯ ಶರದ್ ಪವಾರ್, ಆಪ್‌ನ ಅರವಿಂದ್ ಕೇಜ್ರಿವಾಲ್, ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ತಮಿಳುನಾಡಿನ ಸ್ಟಾಲಿನ್ ಜೊತೆ ಉತ್ತಮ ಸಂಬಂಧ ಹೊಂದಿರುವ ಪ್ರಶಾಂತ್ ಕಿಶೋರ್ 2024ರ ಮುಂಚೆ ಈ ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಐಕ್ಯ ಶಕ್ತಿಯಾಗಿ ಅಣಿನೆರೆಸಲು ಕಿಶೋರ್ ಬಯಸಿದ್ದಾರೆ. ಇದರ ಭಾಗವಾಗಿ ಅವರು ಇತ್ತೀಚೆಗೆ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್‌ ಕುಮಾರ್‌ರವರನ್ನು ಸಹ ಭೇಟಿ ಮಾಡಿದ್ದಾರೆ. ಎರಡು ವರ್ಷಗಳ ಹಿಂದೆ ಜೆಡಿಯುನಿಂದ ಉಚ್ಛಾಟಿತರಾಗಿದ್ದ ಪ್ರಶಾಂತ್ ಕಿಶೋರ್ ವೈಮನಸ್ಸು ಮರೆತು ನಿತೀಶ್‌ ಕುಮಾರ್‌ರವರನ್ನು ಭೇಟಿ ಮಾಡಿರುವುದು ಅವರ ನರೇಂದ್ರ ಮೋದಿ ವಿರುದ್ಧ ವಿರೋಧ ಪಕ್ಷಗಳನ್ನು ಗಟ್ಟಿಗೊಳಿಸುವ ಪ್ರಯತ್ನದ ಭಾಗ ಎನ್ನಲಾಗುತ್ತಿದೆ. ಈಗ ಕಾಂಗ್ರೆಸ್ ನಾಯಕತ್ವದ ಜೊತೆ ಮಾತುಕತೆ ಪುನಃ ಆರಂಭಿಸಿದ್ದಾರೆ. ಫಲಿತಾಂಶ ಏನಾಗಲಿದೆ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎತ್ತನ ಮಾಮರ ಎತ್ತನ ಕೋಗಿಲೆ, ಎತ್ತನಿಂದೆತ್ತ ಸಂಬಂಧವಯ್ಯ, ನರಹತ್ಯೆಯನ್ನೇ ತನ್ನ ರಾಜಕೀಯ ಬಂಡವಾಳ ಮಾಡಿಕೊಂಡ ನರೇಂದ್ರ ಮೋದಿ ಎಲ್ಲಿ, ವೈದಿಕ ಧರ್ಮದ ಆಚರಣೆಗಳ ವಿರುದ್ಧ ಹೋರಾಡಿ ದಲಿತರ ವಿಮೋಚನೆ ಮಾಡಿದ ಅಂಬೇಡ್ಕರ್ ಎಲ್ಲಿ, ಇಳಯರಾಜ ಒಂದು ಬಾರಿ ಬಾಬಾಸಾಹೇಬ ಅಂಬೇಡ್ಕರ್ ಅವರ ಜೀವನ ಚರಿತ್ರೆ ಓದಿ ನಂತರ ಅವರ ವ್ಯಕ್ತಿತ್ವದ ಹೊಂದಾಣಿಕೆಯನ್ನು ಬೇರೆಯವರ ಜೊತೆ ಮಾಡಲಿ…

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....