Homeಮುಖಪುಟಗಾಂಧಿ ಕುಟುಂಬ ಭೇಟಿಯಾದ ಪ್ರಶಾಂತ್ ಕಿಶೋರ್: ಕಾಂಗ್ರೆಸ್ ಸೇರಲು ಸಜ್ಜು?

ಗಾಂಧಿ ಕುಟುಂಬ ಭೇಟಿಯಾದ ಪ್ರಶಾಂತ್ ಕಿಶೋರ್: ಕಾಂಗ್ರೆಸ್ ಸೇರಲು ಸಜ್ಜು?

- Advertisement -
- Advertisement -

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಚರ್ಚೆಗಳ ಬೆನ್ನೆಲ್ಲೆ ಅವರು ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

2024ರ ಚುನಾವಣೆ ನೀಲನಕ್ಷೆಗೆ ಸಜ್ಜುಗೊಳಿಸುವುದಕ್ಕೆ ಪ್ರಶಾಂತ್ ಕಿಶೋರ್ ಒತ್ತು ನೀಡಿದರೆ, ಈ ವರ್ಷದ ಅಂತ್ಯದಲ್ಲಿ ನಡೆಯುವ ಗುಜರಾತ್ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುವಂತೆ ಕೆಲ ಮುಖಂಡರು ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಅದರಲ್ಲಿಯೂ ಗಾಂಧಿ ಕುಟುಂಬದ ವಿರುದ್ಧ ಟೀಕೆ ಮಾಡುತ್ತಿದ್ದ ಪ್ರಶಾಂತ್ ಕಿಶೋರ್ ಈಗ ಮತ್ತೆ ಗಾಂಧಿ ಕುಟುಂಬದ ಜೊತೆ ಮುಂದಿನ ಚುನಾವಣೆಗಳ ಕುರಿತು ಮಾತುಕತೆ ನಡೆಸುತ್ತಿದ್ದಾರೆ. ಹೊರಗಿನಿಂದ ಬೆಂಬಲ ನೀಡುವ ಬದಲು ನೇರವಾಗಿ ಕಾಂಗ್ರೆಸ್ ಸೇರುವಂತೆ ಒತ್ತಾಯಿಸಲಾಗಿದೆ ಎನ್ನಲಾಗುತ್ತಿದ್ದು, ಈ ಕುರಿತು ಮೇ ತಿಂಗಳಿನಲ್ಲಿ ಕಿಶೋರ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡುವಂತೆ ಪ್ರಶಾಂತ್ ಕಿಶೋರ್ ಮೇಲೆ ಒತ್ತಡ ಹೇರಲಾಗುತ್ತಿರುವುದು ನಿಜ. ಆದರೆ ಕೇವಲ ಅದೊಂದು ಚುನಾವಣೆ ಮಾತ್ರವಲ್ಲದೇ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಬೃಹತ್ ಯೋಜನೆ ರೂಪಿಸುವುದು ಪ್ರಶಾಂತ್ ಕಿಶೋರ್‌ರವರ ಮಹತ್ವಕಾಂಕ್ಷೆಯಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ. ಈಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜೊತೆ ಮಾತುಕತೆ ಮುಂದುವರೆಸಲು ಬಯಸಿದ್ದು ಈ ಎಲ್ಲದರ ಕುರಿತು ಮೇ 02 ರಂದು ಪ್ರಶಾಂತ್ ಕಿಶೋರ್ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ.

2021ರಲ್ಲಿ ಜುಲೈನಲ್ಲಿ ಪ್ರಶಾಂತ್ ಕಿಶೋರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಮುಖ್ಯವಾಗಿ ರಾಹುಲ್ ಗಾಂಧಿ ಮತ್ತು ಪ್ರಶಾಂತ್ ಕಿಶೋರ್ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಆದರೆ ಆನಂತರ ಹಲವು ಭಿನ್ನಾಭಿಪ್ರಾಯಗಳ ಕಾರಣಕ್ಕೆ ಮಾತುಕತೆ ಮುರಿದು ಬಿದ್ದಿತ್ತು. ಆನಂತರ ಕಾಂಗ್ರೆಸ್ ನಾಯಕತ್ವದ ವಿರುದ್ಧ ಪ್ರಶಾಂತ್ ಕಿಶೋರ್ ಹಲವಾರು ಟೀಕೆಗಳನ್ನು ಮಾಡಿದ್ದರು.

ಬಿಜೆಪಿ ಇನ್ನು ಹಲವು ವರ್ಷಗಳ ಕಾಲ ಭಾರತದ ರಾಜಕೀಯದ ಕೇಂದ್ರವಾಗಲಿದೆ… ಈ ಹಿಂದೆ ಕಾಂಗ್ರೆಸ್‌ ಇದ್ದಂತೆ ಈಗ ಬಿಜೆಪಿ ಕೂಡಾ ಗೆದ್ದರೂ, ಸೋತರೂ ಎಲ್ಲಿಯೂ ಹೋಗುವುದಿಲ್ಲ. ಆದರೆ ಸಮಸ್ಯೆ ಇರುವುದು ರಾಹುಲ್ ಗಾಂಧಿಗೆ. ಬಹುಶಃ ಜನರು ಬಿಜೆಪಿಯನ್ನು ಕಿತ್ತೊಗೆಯುತ್ತಾರೆ ಎಂದು ಅವರು ಭಾವಿಸುತ್ತಾರೆ, ಅದು ಆಗುತ್ತಿಲ್ಲ, ಆ ಅರಿವು ರಾಹುಲ್ ಗಾಂಧಿಗೆ ಇಲ್ಲ” ಎಂದು ಪ್ರಶಾಂತ್‌ ಕಿಶೋರ್‌ 2021ರ ಅಕ್ಟೋಬರ್‌ನಲ್ಲಿ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ನಡೆಸಿದ್ದರು.

“ಕಾಂಗ್ರೆಸ್ ಪ್ರತಿನಿಧಿಸುವ ಚಿಂತನೆ ಮತ್ತು ಅದಕ್ಕಿರುವ ಸಾಮರ್ಥ್ಯವು ಪ್ರಬಲ ಪ್ರತಿಪಕ್ಷಕ್ಕೆ ಅತ್ಯಗತ್ಯ. ಆದರೆ ಕಾಂಗ್ರೆಸ್‌ನ ನಾಯಕತ್ವವು ವ್ಯಕ್ತಿಯೊಬ್ಬರ ದೈವಿಕ ಹಕ್ಕಲ್ಲ. ವಿಶೇಷವಾಗಿ ಕಳೆದ 10 ವರ್ಷಗಳಲ್ಲಿ ಪಕ್ಷವು 90% ಕ್ಕಿಂತ ಹೆಚ್ಚು ಚುನಾವಣೆಗಳನ್ನು ಸೋತಿದೆ. ವಿರೋಧ ಪಕ್ಷವು ತನ್ನ ನಾಯಕತ್ವವನ್ನು ಪ್ರಜಾಸತ್ತಾತ್ಮಕವಾಗಿ ನಿರ್ಧರಿಸಲಿ ಎಂದು ಡಿಸೆಂಬರ್ ವೇಳೆಗೆ ಪ್ರಶಾಂತ್ ಕಿಶೋರ್ ನುಡಿದಿದ್ದರು. ಪ್ರಶಾಂತ್ ಕಿಶೋರ್‌ರವರ ಎಷ್ಟೆಲ್ಲಾ ಟೀಕೆಗಳ ನಡುವೆಯೂ ರಾಹುಲ್ ಗಾಂಧಿ ತಾಳ್ಮೆ ವಹಿಸಿದ್ದಾರೆ ಹೊರತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಈಗ ಮತ್ತೊಂದು ಸುತ್ತಿನ ಮಾತುಕತೆಗೆ ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಅದೇ ಸಂದರ್ಭದಲ್ಲಿ ಪ್ರಶಾಂತ್ ಕಿಶೋರ್ ಸಹ ಕಾಂಗ್ರೆಸ್ ಮನಸ್ಸು ಮಾಡಿದ್ದರೆ 2024ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂದು ಉಚ್ಚರಿಸಿದ್ದಾರೆ.

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಇಂಡಿಯಾ ಟುಡೇ ಚಾನೆಲ್ ಜೊತೆ ಮಾತನಾಡಿದ್ದ ಪ್ರಶಾಂತ್ ಕಿಶೋರ್ “ಕಾಂಗ್ರೆಸ್ ಸಂಪೂರ್ಣ ಮನಸ್ಸು ಮಾಡಿದರೆ ಕೇವಲ ಎರಡು ವರ್ಷದಲ್ಲಿ ಅಂದರೆ 2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ” ಎಂದು ನುಡಿದಿದ್ದರು.

“ಬಿಜೆಪಿ ಮತ್ತು ಮೋದಿ ಎಷ್ಟೇ ಪ್ರಭಾವಿಯಾಗಿದ್ದರೂ ಈಶಾನ್ಯ ಭಾರತ ಮತ್ತು ದಕ್ಷಿಣ ಭಾರತದ 200 ಸ್ಥಾನಗಳಲ್ಲಿ (ಬಿಹಾರ, ಪ.ಬಂಗಾಳ, ಒಡಿಸ್ಸಾ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳ) ಇಂದಿಗೂ 50 ಸೀಟು ಪಡೆಯಲು ತಿಣುಕಾಡುತ್ತಿದೆ. ಅಂದರೆ ಬಿಹಾರ, ಓಡಿಸ್ಸಾ ಮತ್ತು ಬಂಗಾಳದಲ್ಲಿ ಬಿಜೆಪಿ ಯಶಸ್ವಿಯಾಗಿದ್ದರೂ ಸಹ 50ಕ್ಕಿಂತ ಹೆಚ್ಚು ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಬಿಜೆಪಿಗೆ ಬಿಹಾರದಲ್ಲಿ 18, ಬಂಗಾಳದಲ್ಲಿ 18,  ಒಡಿಸ್ಸಾದಲ್ಲಿ 12, ತೆಲಂಗಾಣದಲ್ಲಿ 4-5 ಬಿಜೆಪಿ ಸಂಸದರಿದ್ದಾರೆ ಅಷ್ಟೆ. ಅಂದರೆ 150 ರಷ್ಟು ಸೀಟುಗಳು ಇಂದಿಗೂ ವಿರೋಧ ಪಕ್ಷಗಳ ಕೈಯಲ್ಲಿವೆ. ಅವರೆಲ್ಲರೂ ಬಿಜೆಪಿಯನ್ನು ವಿರೋಧಿಸುತ್ತಿದ್ದಾರೆ” ಎಂದು ಪ್ರಶಾಂತ್ ಕಿಶೋರ್ ತಿಳಿಸಿದ್ದರು.

ಉಳಿದ 350ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಯಾವುದೇ ಪಕ್ಷವಾದರೂ ಅಂದರೆ ಆಪ್, ತೃಣಮೂಲ ಕಾಂಗ್ರೆಸ್ ಅಥವಾ ಮರುಹುಟ್ಟಿನ ಕಾಂಗ್ರೆಸ್ ಪಕ್ಷವಾಗಲಿ 120 ಸೀಟುಗಳನ್ನು ಗೆದ್ದುಕೊಂಡಲ್ಲಿ ರಾತ್ರೋರಾತ್ರಿ ಸಂಪೂರ್ಣ ಪರಿಸ್ಥಿತಿ ಬದಲಾಗಲಿದೆ. ಸೈದ್ದಾಂತಿಕವಾಗಿ ಹೇಳಬಹುದಾದರೆ ಕೇವಲ 2 ವರ್ಷದಲ್ಲಿ ಬಿಜೆಪಿಯನ್ನು ಸೋಲಿಸಬಹುದಾಗಿದೆ. ಕಾಂಗ್ರೆಸ್ ಥರದ ಪಕ್ಷ 120 ಸೀಟುಗಳನ್ನು ಗೆಲ್ಲಲಾಗುವುದಿಲ್ಲ ಎಂದು ಹೇಳಲು ಸಾಧ್ಯವೇ? ಈಗ 50 ಕ್ಷೇತ್ರಗಳಲ್ಲಿ ಗೆದ್ದಿರುವ ಕಾಂಗ್ರೆಸ್ ಇನ್ನು ಎರಡು ವರ್ಷಗಳಲ್ಲಿ ಅದನ್ನು ಡಬಲ್ ಮಾಡುವುದು ಸಾಧ್ಯವಿದೆ ಎಂದು ಪ್ರಶಾಂತ್ ಕಿಶೋರ್ ಲೆಕ್ಕಾಚಾರ ಹಾಕಿದ್ದಾರೆ.

ಅದಕ್ಕಾಗಿ ಕಾಂಗ್ರೆಸ್ ಅನ್ನು ಪುನಃ ಸ್ಥಾಪಿಸಬೇಕಾಗಿದೆ. ಅದರ ಆತ್ಮ, ಮುನ್ನೋಟ ಮತ್ತು ಸೈದ್ದಾಂತಿಕತೆಯನ್ನು ಇಟ್ಟುಕೊಂಡು ಉಳಿದೆಲ್ಲವನ್ನು ಬದಲಿಸಬೇಕಿದೆ. ಕಾಂಗ್ರೆಸ್ ಮನಸ್ಸು ಮಾಡಿ ಕೆಲಸ ಮಾಡಿದರೆ ಇದನ್ನು ಸಾಧಿಸಬಹುದು. ಬಿಜೆಪಿ ಸೋಲಿಸಲು ಇತರ ವಿರೋಧ ಪಕ್ಷಗಳ ಬೆಂಬಲ ಖಂಡಿತ ಬೇಕಾಗಿದೆ. ಅದಕ್ಕಾಗಿ ಮೊದಲಿಗೆ ಕಾಂಗ್ರೆಸ್ ಪ್ರತಿಪಕ್ಷಗಳ ಎದುರು ಬಿಜೆಪಿಯನ್ನು ಸೋಲಿಸುವ ಮುನ್ನೋಟವನ್ನು ಮುಂದಿಡಬೇಕು. ಎರಡನೇದಾಗಿ ಇದರಿಂದ ಅತಿ ಹೆಚ್ಚು ಲಾಭ ತನಗಾಗಲಿದೆ ಎನ್ನುವುದನ್ನು ಮನಗಾಣಬೇಕು ಮತ್ತು ಮೂರನೇಯದಾಗಿ ಬಿಜೆಪಿಯನ್ನು ಮಣಿಸಿದ ನಂತರ ಯಾರು ನಾಯಕತ್ವ ವಹಿಸಬೇಕು ಎಂಬುದನ್ನು ಪಡೆದ ಸೀಟುಗಳ ಆಧಾರದಲ್ಲಿ ನಿರ್ಧರಿಸಬೇಕು. ಆದರೆ ಕಾಂಗ್ರೆಸ್ ಇಂದು ಇದಕ್ಕೆ ವಿರುದ್ಧವಾಗಿ ಚಿಂತಿಸುತ್ತಿದೆ. ಬಹುದೊಡ್ಡ ಪಕ್ಷವಾಗಿ ಕಾಂಗ್ರೆಸ್‌ಗೆ ಖಂಡಿತ ಅನುಕೂಲಗಳಿವೆ, ಅದು ತನ್ನ ಚಿಂತನೆಯನ್ನು ಅದಲು ಬದಲು ಮಾಡಿದರೆ ಖಂಡಿತ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂದು ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ಟಿಎಂಸಿಯ ಮಮತಾ ಬ್ಯಾನರ್ಜಿ, ಎನ್‌ಸಿಪಿಯ ಶರದ್ ಪವಾರ್, ಆಪ್‌ನ ಅರವಿಂದ್ ಕೇಜ್ರಿವಾಲ್, ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ತಮಿಳುನಾಡಿನ ಸ್ಟಾಲಿನ್ ಜೊತೆ ಉತ್ತಮ ಸಂಬಂಧ ಹೊಂದಿರುವ ಪ್ರಶಾಂತ್ ಕಿಶೋರ್ 2024ರ ಮುಂಚೆ ಈ ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಐಕ್ಯ ಶಕ್ತಿಯಾಗಿ ಅಣಿನೆರೆಸಲು ಕಿಶೋರ್ ಬಯಸಿದ್ದಾರೆ. ಇದರ ಭಾಗವಾಗಿ ಅವರು ಇತ್ತೀಚೆಗೆ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್‌ ಕುಮಾರ್‌ರವರನ್ನು ಸಹ ಭೇಟಿ ಮಾಡಿದ್ದಾರೆ. ಎರಡು ವರ್ಷಗಳ ಹಿಂದೆ ಜೆಡಿಯುನಿಂದ ಉಚ್ಛಾಟಿತರಾಗಿದ್ದ ಪ್ರಶಾಂತ್ ಕಿಶೋರ್ ವೈಮನಸ್ಸು ಮರೆತು ನಿತೀಶ್‌ ಕುಮಾರ್‌ರವರನ್ನು ಭೇಟಿ ಮಾಡಿರುವುದು ಅವರ ನರೇಂದ್ರ ಮೋದಿ ವಿರುದ್ಧ ವಿರೋಧ ಪಕ್ಷಗಳನ್ನು ಗಟ್ಟಿಗೊಳಿಸುವ ಪ್ರಯತ್ನದ ಭಾಗ ಎನ್ನಲಾಗುತ್ತಿದೆ. ಈಗ ಕಾಂಗ್ರೆಸ್ ನಾಯಕತ್ವದ ಜೊತೆ ಮಾತುಕತೆ ಪುನಃ ಆರಂಭಿಸಿದ್ದಾರೆ. ಫಲಿತಾಂಶ ಏನಾಗಲಿದೆ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎತ್ತನ ಮಾಮರ ಎತ್ತನ ಕೋಗಿಲೆ, ಎತ್ತನಿಂದೆತ್ತ ಸಂಬಂಧವಯ್ಯ, ನರಹತ್ಯೆಯನ್ನೇ ತನ್ನ ರಾಜಕೀಯ ಬಂಡವಾಳ ಮಾಡಿಕೊಂಡ ನರೇಂದ್ರ ಮೋದಿ ಎಲ್ಲಿ, ವೈದಿಕ ಧರ್ಮದ ಆಚರಣೆಗಳ ವಿರುದ್ಧ ಹೋರಾಡಿ ದಲಿತರ ವಿಮೋಚನೆ ಮಾಡಿದ ಅಂಬೇಡ್ಕರ್ ಎಲ್ಲಿ, ಇಳಯರಾಜ ಒಂದು ಬಾರಿ ಬಾಬಾಸಾಹೇಬ ಅಂಬೇಡ್ಕರ್ ಅವರ ಜೀವನ ಚರಿತ್ರೆ ಓದಿ ನಂತರ ಅವರ ವ್ಯಕ್ತಿತ್ವದ ಹೊಂದಾಣಿಕೆಯನ್ನು ಬೇರೆಯವರ ಜೊತೆ ಮಾಡಲಿ…

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...