Homeಮುಖಪುಟಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ...

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ…

- Advertisement -
- Advertisement -

2014 ಮತ್ತು 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ ಬಗ್ಗೆ ಉತ್ಸಾಹ ಕಡಿಮೆಯಾಗಿದೆ ಎಂದು ಒಂದು ಕಾಲದಲ್ಲಿ ಮೋದಿ ಗೆಲುವಿನ ಹಿಂದಿನ ಪ್ರಮುಖ ರಣತಂತ್ರಗಾರನಾಗಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

RTV ಆಂಧ್ರಪ್ರದೇಶದೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಪ್ರಶಾಂತ್ ಕಿಶೋರ್, ಈ ಬಾರಿ ರಾಮಮಂದಿರದ ಹೆಸರಿನಲ್ಲಿ ಬಿಜೆಪಿಗೆ ಒಂದೇ ಒಂದು ಮತವೂ ಬರುವುದಿಲ್ಲ. ಈ ಹಿಂದೆ ರಾಮ ಮಂದಿರದ ಹೆಸರಲ್ಲಿ ಬಿಜೆಪಿಗೆ ಮತ ನೀಡದ ಆದರೆ ಈಗ ಅದೇ ಹೆಸರಲ್ಲಿ ಬಿಜೆಪಿಗೆ ಮತ ನೀಡಲು ಬಯಸುವ ಒಬ್ಬ ಮತದಾರ ಕೂಡ ನನಗೆ ಸಿಕ್ಕಿಲ್ಲ. ಹಾಗಾಗಿ ರಾಮ ಮಂದಿರದ ಹೆಸರಲ್ಲಿ ಈ ಬಾರಿ ಬಿಜೆಪಿಗೆ ಒಂದೇ ಒಂದು ಹೆಚ್ಚುವರಿ ಮತ ಸಿಗುವುದಿಲ್ಲ ಎನ್ನುವುದು ವಾಸ್ತವವಾಗಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಮೋದಿ ವಿರೋಧ ಪಕ್ಷಗಳಿಂದ ಯಾವುದೇ ಸವಾಲನ್ನು ಎದುರಿಸದಿರಬಹುದು, ಆದರೆ ಅವರು ಖಂಡಿತವಾಗಿಯೂ ಈ ದೇಶದ ಜನರ ಕೋಪವನ್ನು ಎದುರಿಸುತ್ತಾರೆ. ಈ ಚುನಾವಣೆಯಲ್ಲಿ ಬ್ರಾಂಡ್ ಮೋದಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂಬಂತಹ ಭಾವನೆಯಿಲ್ಲ, ಯಾರೂ ಅವರಿಗೆ ಸವಾಲು ಹಾಕಲು ಸಾಧ್ಯವಿಲ್ಲ ಎಂದಲ್ಲ. ರಾಜಕೀಯ ಪಕ್ಷ ಅಥವಾ ರಾಜಕೀಯ ನಾಯಕರು ಅವರಿಗೆ ಸವಾಲು ಹಾಕಲಿ ಅಥವಾ ಇಲ್ಲದಿರಲಿ ಆದರೆ ಜನರು ಮಾತ್ರ ಅವರಿಗೆ ಸವಾಲನ್ನು ಹಾಕುತ್ತಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ವಿರೋಧ ಪಕ್ಷಗಳು ಅಥವಾ ವಿರೋಧ ಪಕ್ಷಗಳ ಮೈತ್ರಿಕೂಟವು ದುರ್ಬಲವಾಗಿರಬಹುದು, ಆದರೆ ದೇಶದಲ್ಲಿ ಜನರ ವಿರೋಧ ದುರ್ಬಲವಾಗಿಲ್ಲ. 60 ಕೋಟಿಗೂ ಹೆಚ್ಚು ಜನರು ದಿನಕ್ಕೆ 100ರೂ.ಗಿಂತ ಹೆಚ್ಚು ಸಂಪಾದಿಸದ ದೇಶದಲ್ಲಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳನ್ನು ಎಂದಿಗೂ ದುರ್ಬಲಗೊಳಿಸಲು ಸಾಧ್ಯವಿಲ್ಲ. ಜನರ ವಿರೋಧ ದುರ್ಬಲವಾಗಿದೆ ಎಂದು ಎಂದೂ ಭಾವಿಸಬೇಡಿ, ಆ ತಪ್ಪನ್ನು ಎಂದಿಗೂ ಮಾಡಬೇಡಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಕಿಶೋರ್‌ ಅವರು ತಮ್ಮ ವಾದಗಳನ್ನು ಅಂಕಿ-ಅಂಶಗಳು ಮತ್ತು ಡೇಟಾದೊಂದಿಗೆ ಮತ್ತಷ್ಟು ಸಮರ್ಥಿಸಿಕೊಂಡಿದ್ದಾರೆ. ಭಾರತದಲ್ಲಿ ಯಾರೂ 50 ಪ್ರತಿಶತ ಮತಗಳನ್ನು ಪಡೆಯುವುದಿಲ್ಲ. ಸರಳವಾಗಿ ಹೇಳುವುದಾದರೆ, 100 ಜನರು ಮತ ಚಲಾಯಿಸಿದರೆ, ಕೇವಲ 40 ಜನರು ಮಾತ್ರ ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತಾರೆ. ಅವರ ಸಿದ್ಧಾಂತ, ಅವರ ಕೆಲಸ, ಹಿಂದುತ್ವ, ರಾಮಮಂದಿರ, ಆರ್ಟಿಕಲ್ 370 ಇವೆಲ್ಲದರಲ್ಲಿ ಕೇವಲ 40 ಜನರು ಮಾತ್ರ ಸಂತೋಷವಾಗಿದ್ದಾರೆ, ಆದರೆ 60-62ರಷ್ಟು ಮಂದಿ ಅತೃಪ್ತರಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಸವಾಲು ಎದುರಿಸುವುದು ಖಚಿತ. ಗ್ರಾಮೀಣ ಭಾಗದಲ್ಲಿನ ಸಂಕಷ್ಟವು ದೇಶದ ಪ್ರಮುಖ ಸಮಸ್ಯೆಯಾಗಿದೆ. ಇದಾದ ನಂತರವೂ ಬಿಜೆಪಿ ಗೆಲ್ಲುತ್ತದೆ ಎಂದರೆ ವಿರೋಧ ಪಕ್ಷಗಳು ಸಾಕಷ್ಟು ಬಲವಾಗಿಲ್ಲ ಅಥವಾ ವಿಶ್ವಾಸಾರ್ಹವಾಗಿಲ್ಲ ಎಂದಾಗಿದೆ ಹೊರತು ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಮೋದಿ ಸರ್ಕಾರದಿಂದ ಸಂತೋಷವಾಗಿದ್ದಾರೆ ಎಂದು ಅರ್ಥವಲ್ಲ ಎಂದು ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

2014ರ ಚುನಾವಣೆಗೆ ಹೋಲಿಸಿದರೆ 2024ರ ಚುನಾವಣೆಯಲ್ಲಿ ‘ಪ್ರಧಾನಿ ಮೋದಿ’ ಬ್ರಾಂಡ್‌ ಕುಸಿದಿದೆ. 2024ರಲ್ಲಿ ಮತ ಹಾಕಲು ಬೇರೆ ಯಾರೂ ಇಲ್ಲ ಎಂಬ ಭಾವನೆ ಜನರಲ್ಲಿದೆ. ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ. 2014ರಲ್ಲಿ ಬಿಜೆಪಿ ಮತದಾರರಲ್ಲಿ ‘ಉತ್ಸಾಹ’ದ ಭಾವನೆ ಇತ್ತು ಮತ್ತು 2019ರಲ್ಲಿ, ರಾಷ್ಟ್ರದ ಅಭಿವೃದ್ಧಿಗೆ ಪಕ್ಷಕ್ಕೆ ಇನ್ನೂ ಐದು ವರ್ಷಗಳು ಬೇಕು ಎಂದು ಜನರು ನಿರೀಕ್ಷಿಸಿದ್ದರು. ಮೋದಿ ಅಧಿಕಾರಕ್ಕೆ ಬಂದರೆ ದೇಶ ಪರಿವರ್ತನೆಯಾಗುತ್ತದೆ ಎಂದು 2014ರಲ್ಲಿ ನಂಬಿದ ಜನರ ದೊಡ್ಡ ವರ್ಗವಿತ್ತು. 2024ರಲ್ಲಿ ನಾವು ಏನು ಮಾಡೋಣ, ಬೇರೆ ಯಾರೂ ಇಲ್ಲ, ಆದ್ದರಿಂದ ನಾವು ಅವನಿಗೆ ಮಾತ್ರ ಮತ ಹಾಕೋಣ ಎಂದು ಹೇಳುವ ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ. ಜನರಲ್ಲಿ ಉತ್ಸಾಹ ಕಡಿಮೆಯಾಗಿದೆ ಎಂದು ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...