Homeಮುಖಪುಟಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ...

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ…

- Advertisement -
- Advertisement -

2014 ಮತ್ತು 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ ಬಗ್ಗೆ ಉತ್ಸಾಹ ಕಡಿಮೆಯಾಗಿದೆ ಎಂದು ಒಂದು ಕಾಲದಲ್ಲಿ ಮೋದಿ ಗೆಲುವಿನ ಹಿಂದಿನ ಪ್ರಮುಖ ರಣತಂತ್ರಗಾರನಾಗಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

RTV ಆಂಧ್ರಪ್ರದೇಶದೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಪ್ರಶಾಂತ್ ಕಿಶೋರ್, ಈ ಬಾರಿ ರಾಮಮಂದಿರದ ಹೆಸರಿನಲ್ಲಿ ಬಿಜೆಪಿಗೆ ಒಂದೇ ಒಂದು ಮತವೂ ಬರುವುದಿಲ್ಲ. ಈ ಹಿಂದೆ ರಾಮ ಮಂದಿರದ ಹೆಸರಲ್ಲಿ ಬಿಜೆಪಿಗೆ ಮತ ನೀಡದ ಆದರೆ ಈಗ ಅದೇ ಹೆಸರಲ್ಲಿ ಬಿಜೆಪಿಗೆ ಮತ ನೀಡಲು ಬಯಸುವ ಒಬ್ಬ ಮತದಾರ ಕೂಡ ನನಗೆ ಸಿಕ್ಕಿಲ್ಲ. ಹಾಗಾಗಿ ರಾಮ ಮಂದಿರದ ಹೆಸರಲ್ಲಿ ಈ ಬಾರಿ ಬಿಜೆಪಿಗೆ ಒಂದೇ ಒಂದು ಹೆಚ್ಚುವರಿ ಮತ ಸಿಗುವುದಿಲ್ಲ ಎನ್ನುವುದು ವಾಸ್ತವವಾಗಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಮೋದಿ ವಿರೋಧ ಪಕ್ಷಗಳಿಂದ ಯಾವುದೇ ಸವಾಲನ್ನು ಎದುರಿಸದಿರಬಹುದು, ಆದರೆ ಅವರು ಖಂಡಿತವಾಗಿಯೂ ಈ ದೇಶದ ಜನರ ಕೋಪವನ್ನು ಎದುರಿಸುತ್ತಾರೆ. ಈ ಚುನಾವಣೆಯಲ್ಲಿ ಬ್ರಾಂಡ್ ಮೋದಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂಬಂತಹ ಭಾವನೆಯಿಲ್ಲ, ಯಾರೂ ಅವರಿಗೆ ಸವಾಲು ಹಾಕಲು ಸಾಧ್ಯವಿಲ್ಲ ಎಂದಲ್ಲ. ರಾಜಕೀಯ ಪಕ್ಷ ಅಥವಾ ರಾಜಕೀಯ ನಾಯಕರು ಅವರಿಗೆ ಸವಾಲು ಹಾಕಲಿ ಅಥವಾ ಇಲ್ಲದಿರಲಿ ಆದರೆ ಜನರು ಮಾತ್ರ ಅವರಿಗೆ ಸವಾಲನ್ನು ಹಾಕುತ್ತಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ವಿರೋಧ ಪಕ್ಷಗಳು ಅಥವಾ ವಿರೋಧ ಪಕ್ಷಗಳ ಮೈತ್ರಿಕೂಟವು ದುರ್ಬಲವಾಗಿರಬಹುದು, ಆದರೆ ದೇಶದಲ್ಲಿ ಜನರ ವಿರೋಧ ದುರ್ಬಲವಾಗಿಲ್ಲ. 60 ಕೋಟಿಗೂ ಹೆಚ್ಚು ಜನರು ದಿನಕ್ಕೆ 100ರೂ.ಗಿಂತ ಹೆಚ್ಚು ಸಂಪಾದಿಸದ ದೇಶದಲ್ಲಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳನ್ನು ಎಂದಿಗೂ ದುರ್ಬಲಗೊಳಿಸಲು ಸಾಧ್ಯವಿಲ್ಲ. ಜನರ ವಿರೋಧ ದುರ್ಬಲವಾಗಿದೆ ಎಂದು ಎಂದೂ ಭಾವಿಸಬೇಡಿ, ಆ ತಪ್ಪನ್ನು ಎಂದಿಗೂ ಮಾಡಬೇಡಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಕಿಶೋರ್‌ ಅವರು ತಮ್ಮ ವಾದಗಳನ್ನು ಅಂಕಿ-ಅಂಶಗಳು ಮತ್ತು ಡೇಟಾದೊಂದಿಗೆ ಮತ್ತಷ್ಟು ಸಮರ್ಥಿಸಿಕೊಂಡಿದ್ದಾರೆ. ಭಾರತದಲ್ಲಿ ಯಾರೂ 50 ಪ್ರತಿಶತ ಮತಗಳನ್ನು ಪಡೆಯುವುದಿಲ್ಲ. ಸರಳವಾಗಿ ಹೇಳುವುದಾದರೆ, 100 ಜನರು ಮತ ಚಲಾಯಿಸಿದರೆ, ಕೇವಲ 40 ಜನರು ಮಾತ್ರ ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತಾರೆ. ಅವರ ಸಿದ್ಧಾಂತ, ಅವರ ಕೆಲಸ, ಹಿಂದುತ್ವ, ರಾಮಮಂದಿರ, ಆರ್ಟಿಕಲ್ 370 ಇವೆಲ್ಲದರಲ್ಲಿ ಕೇವಲ 40 ಜನರು ಮಾತ್ರ ಸಂತೋಷವಾಗಿದ್ದಾರೆ, ಆದರೆ 60-62ರಷ್ಟು ಮಂದಿ ಅತೃಪ್ತರಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಸವಾಲು ಎದುರಿಸುವುದು ಖಚಿತ. ಗ್ರಾಮೀಣ ಭಾಗದಲ್ಲಿನ ಸಂಕಷ್ಟವು ದೇಶದ ಪ್ರಮುಖ ಸಮಸ್ಯೆಯಾಗಿದೆ. ಇದಾದ ನಂತರವೂ ಬಿಜೆಪಿ ಗೆಲ್ಲುತ್ತದೆ ಎಂದರೆ ವಿರೋಧ ಪಕ್ಷಗಳು ಸಾಕಷ್ಟು ಬಲವಾಗಿಲ್ಲ ಅಥವಾ ವಿಶ್ವಾಸಾರ್ಹವಾಗಿಲ್ಲ ಎಂದಾಗಿದೆ ಹೊರತು ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಮೋದಿ ಸರ್ಕಾರದಿಂದ ಸಂತೋಷವಾಗಿದ್ದಾರೆ ಎಂದು ಅರ್ಥವಲ್ಲ ಎಂದು ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

2014ರ ಚುನಾವಣೆಗೆ ಹೋಲಿಸಿದರೆ 2024ರ ಚುನಾವಣೆಯಲ್ಲಿ ‘ಪ್ರಧಾನಿ ಮೋದಿ’ ಬ್ರಾಂಡ್‌ ಕುಸಿದಿದೆ. 2024ರಲ್ಲಿ ಮತ ಹಾಕಲು ಬೇರೆ ಯಾರೂ ಇಲ್ಲ ಎಂಬ ಭಾವನೆ ಜನರಲ್ಲಿದೆ. ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ. 2014ರಲ್ಲಿ ಬಿಜೆಪಿ ಮತದಾರರಲ್ಲಿ ‘ಉತ್ಸಾಹ’ದ ಭಾವನೆ ಇತ್ತು ಮತ್ತು 2019ರಲ್ಲಿ, ರಾಷ್ಟ್ರದ ಅಭಿವೃದ್ಧಿಗೆ ಪಕ್ಷಕ್ಕೆ ಇನ್ನೂ ಐದು ವರ್ಷಗಳು ಬೇಕು ಎಂದು ಜನರು ನಿರೀಕ್ಷಿಸಿದ್ದರು. ಮೋದಿ ಅಧಿಕಾರಕ್ಕೆ ಬಂದರೆ ದೇಶ ಪರಿವರ್ತನೆಯಾಗುತ್ತದೆ ಎಂದು 2014ರಲ್ಲಿ ನಂಬಿದ ಜನರ ದೊಡ್ಡ ವರ್ಗವಿತ್ತು. 2024ರಲ್ಲಿ ನಾವು ಏನು ಮಾಡೋಣ, ಬೇರೆ ಯಾರೂ ಇಲ್ಲ, ಆದ್ದರಿಂದ ನಾವು ಅವನಿಗೆ ಮಾತ್ರ ಮತ ಹಾಕೋಣ ಎಂದು ಹೇಳುವ ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ. ಜನರಲ್ಲಿ ಉತ್ಸಾಹ ಕಡಿಮೆಯಾಗಿದೆ ಎಂದು ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...