Homeಮುಖಪುಟಮೇ ತಿಂಗಳಲ್ಲೇ ಅಮರಿಂದರ್‌ ಪರವಾಗಿ ಕೆಲಸ ಪ್ರಾರಂಭಿಸಲಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್‌‌ ಕಿಶೋರ್

ಮೇ ತಿಂಗಳಲ್ಲೇ ಅಮರಿಂದರ್‌ ಪರವಾಗಿ ಕೆಲಸ ಪ್ರಾರಂಭಿಸಲಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್‌‌ ಕಿಶೋರ್

- Advertisement -
- Advertisement -

ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸುಮಾರು ಒಂದು ವರ್ಷ ಮುಂಚಿತವಾಗಿ, ಸಿಎಂ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರರಾಗಿ ನೇಮಕಗೊಂಡಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಮೇ ತಿಂಗಳಿನಿಂದ ತಮ್ಮ ತಂಡದೊಂದಿಗೆ ರಾಜ್ಯದಲ್ಲಿ ಉಳಿಯುವ ಸಾಧ್ಯತೆ ಇದೆ.

ಕಿಶೋರ್ ಮತ್ತು ಅವರ ತಂಡವು ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ತೆಗೆದುಕೊಂಡು, ಆಡಳಿತ ಪಕ್ಷದ ಶಾಸಕರ ಕಳೆದ ಐದು ವರ್ಷಗಳ ವರದಿ ಕಾರ್ಡ್ ಸಿದ್ಧಪಡಿಸುವ ಸಾಧ್ಯತೆಯಿದೆ.

ಕೆಲವು ದಿನಗಳ ಹಿಂದೆ ಕಿಶೋರ್ ಅವರು ಆಡಳಿತಾರೂಢ ಕಾಂಗ್ರೆಸ್‌‌ನಿಂದ ಮೊದಲ ಬಾರಿಗೆ ಶಾಸಕರಾದವರು ಮತ್ತು ಪಕ್ಷದ ಹಿರಿಯ ಶಾಸಕರನ್ನು ಭೇಟಿಯಾದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸರ್ಕಾರ ರಚಿಸಲು ಸೀಟುಗಳು ಕೊರತೆಯಾದರೆ ಬಿಜೆಪಿ ಮತ್ತು ಟಿಎಂಸಿ ಕೈಜೋಡಿಸುತ್ತದೆ: ಸಿಪಿಐ(ಎಂ)

ಕಿಶೋರ್ ಅವರು ಜನರು ಅತೃಪ್ತರಾಗಿರುವ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಪ್ರತಿಕ್ರಿಯೆ ತೆಗೆದುಕೊಳ್ಳಲು ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.

ಚುನಾವಣೆಯಲ್ಲಿ ಮಾಜಿ ಕ್ಯಾಬಿನೆಟ್ ಸಚಿವ ನವಜೋತ್ ಸಿಂಗ್ ಸಿಧು ಪ್ರಮುಖ ಪಾತ್ರ ವಹಿಸಬೇಕೆಂದು ಕಿಶೋರ್‌ ಬಯಸಿದ್ದಾರೆ ಎಂದು ನಂಬಲಾಗಿದೆ. ಕಳೆದ ಕೆಲವು ಸಮಯದಿಂದ ಸಿಧು ಅವರು ರಾಜಕೀಯದಲ್ಲಿ ಸಕ್ರಿಯರಾಗದೆ ಹೊರಗುಳಿದಿದ್ದಾರೆ.

ಪ್ರಶಾಂತ್ ಕಿಶೋರ್‌ ಇತ್ತೀಚೆಗೆ ಮುಖ್ಯಮಂತ್ರಿ ಅಮರಿಂದರ್ ಅವರನ್ನು ಭೇಟಿಯಾದರು ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಯ ನಿವಾಸದ ಪಕ್ಕದ ಬಂಗಲೆಯಲ್ಲಿ ವಾಸಿಸುವ ಕಿಶೋರ್ ಅವರೊಂದಿಗೆ ಸಮನ್ವಯ ಸಾಧಿಸಲು ಅಮರಿಂದರ್ ತಮ್ಮ ರಾಜಕೀಯ ಕಾರ್ಯದರ್ಶಿ ಸಂದೀಪ್ ಸಿಂಗ್ ಸಂಧು ಮತ್ತು ಅವರ ಮೊಮ್ಮಗ ನಿರ್ವಾನ್ ಸಿಂಗ್ ಅವರನ್ನು ನಿಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೊತೆಗೆ ಐಎಎಸ್ ಅಧಿಕಾರಿಯೊಬ್ಬರಿಗೆ ಕಿಶೋರ್‌‌ ಅವರೊಂದಿಗೆ ಸಮನ್ವಯ ಸಾಧಿಸಲು ತಿಳಿಸಲಾಗಿದೆ. ಕಿಶೋರ್ ಅವರ ತಂಡವು 2017 ರ ಸಮಯದಲ್ಲಿದ್ದ ತಂಡಕ್ಕಿಂತಲೂ ದೊಡ್ಡದಾಗಿದ್ದು, ಪ್ರಸ್ತುತ ತಂಡದಲ್ಲಿ ಸುಮಾರು 250 ಜನರು ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅತ್ಯಾಚಾರಿ ಕುಲದೀಪ್ ಸೆಂಗಾರ್‌ ಪತ್ನಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...