Homeಮುಖಪುಟಹಳೆಯ ಹೇಳಿಕೆ ಉಲ್ಲೇಖಿಸಿದ ಕರಣ್ ಥಾಪರ್: ಸಿಟ್ಟಾದ ಪ್ರಶಾಂತ್ ಕಿಶೋರ್

ಹಳೆಯ ಹೇಳಿಕೆ ಉಲ್ಲೇಖಿಸಿದ ಕರಣ್ ಥಾಪರ್: ಸಿಟ್ಟಾದ ಪ್ರಶಾಂತ್ ಕಿಶೋರ್

ಹಿಮಾಚಲದಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದಿದ್ದನ್ನು ನೆನಪಿಸಿದ್ದಕ್ಕೆ ತಬ್ಬಿಬ್ಬಾದ ಚುನಾವಣಾ ತಂತ್ರಜ್ಞ

- Advertisement -
- Advertisement -

‘ದಿ ವೈರ್’ ಗಾಗಿ ಕರಣ್ ಥಾಪರ್ ನಡೆಸಿದ ಸಂದರ್ಶನದಲ್ಲಿ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಚುನಾವಣಾ ಫಲಿತಾಂಶಗಳ ಕುರಿತ ತನ್ನ ಹಳೆಯ ಭವಿಷ್ಯವಾಣಿಗಳ ಬಗ್ಗೆ ಉಲ್ಲೇಖಿಸಿದ್ದಕ್ಕೆ ತೀವ್ರ ಸಿಟ್ಟಾದ ಘಟನೆ ನಡೆದಿದೆ.

ಕರಣ್ ಥಾಪರ್ ಅವರು ಪ್ರಶಾಂತ್ ಕಿಶೋರ್ ಅವರ ಈ ಹಿಂದಿನ ಎಕ್ಸ್‌ ಪೋಸ್ಟ್‌ ಒಂದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆದರೆ, ಪ್ರಶಾಂತ್ ಕಿಶೋರ್ ಮಾತ್ರ ತಾನು ಆ ರೀತಿ ಹೇಳಿಕೆ ನೀಡೇ ಇಲ್ಲ ಎಂದು ವಾದಿಸಿದ್ದಾರೆ. ಈ ವಿಚಾರ ಇಂಟರ್‌ನೆಟ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮೇ 2022ರಲ್ಲಿ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ಪ್ರಶಾಂತ್ ಕಿಶೋರ್ ಈ ಹಿಂದೆ ಭವಿಷ್ಯ ನುಡಿದಿದ್ದರು. ಆದರೆ, ಕಾಂಗ್ರೆಸ್ ಗೆಲುವು ದಾಖಲಿಸಿತ್ತು. ಈ ವಿಚಾರವನ್ನು ಕರಣ್ ಥಾಪರ್ ನೆನಪಿಸಿದಾಗ ಕಿಶೋರ್ ಅವರು ಕಾಂಗ್ರೆಸ್ ಬಗ್ಗೆ ಈ ಹಿಂದೆ ಹೇಳಿದ್ದನ್ನೆಲ್ಲಾ ನಿರಾಕರಿಸಿದ್ದಾರೆ. ಏರುದನಿಯಲ್ಲಿ ಥಾಪರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ತಬ್ಬಿಬ್ಬಾಗಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300 ಸ್ಥಾನಗಳನ್ನು ಗೆಲ್ಲಬಹುದು ಮತ್ತು ಕಾಂಗ್ರೆಸ್ 100 ಸ್ಥಾನಗಳನ್ನು ಕೂಡಾ ಗೆಲ್ಲುವುದು ಕಷ್ಟ ಎಂದು ಸಂದರ್ಶನದಲ್ಲಿ ಕಿಶೋರ್ ಭವಿಷ್ಯ ನುಡಿದಿದ್ದಾರೆ. ಈ ವೇಳೆ ಪ್ರಶಾಂತ್ ಕಿಶೋರ್ ಅವರ ಈ ಹಿಂದಿನ ಭವಿಷ್ಯಗಳು ಸುಳ್ಳಾಗಿರುವುದನ್ನು ಥಾಪರ್ ಉಲ್ಲೇಖಿಸಿದ್ದಾರೆ.

“ಕಾಂಗ್ರೆಸ್ ಹಿಮಾಚಲದಲ್ಲಿ ಸೋಲುತ್ತದೆ ಎಂದು ನಾನು ಹೇಳಿದ ವಿಡಿಯೋ ತೋರಿಸಬೇಕು, ಇಲ್ಲದಿದ್ದರೆ ನೀವು ಕ್ಷಮೆ ಯಾಚಿಸಬೇಕು ” ಎಂದು ಕರಣ್ ಥಾಪರ್ ಮುಂದೆ ಪ್ರಶಾಂತ್ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಮಾಧ್ಯಮಗಳಲ್ಲಿ ಬಂದಿರುವ ಅವರ ಹೇಳಿಕೆಗಳನ್ನು ಕರಣ್ ಥಾಪರ್ ಉಲ್ಲೇಖಿಸಲು ಮುಂದಾಗಿದ್ದಾರೆ. ಆದರೆ, ಅದಕ್ಕೆ ಆಸ್ಪದವನ್ನೇ ಕೊಡದ ಕಿಶೋರ್, “ಮಾಧ್ಯಮಗಳು ಏನು ಬೇಕಾದರೂ ಬರೆಯುತ್ತವೆ. ಅದಕ್ಕೆ ನಾನು ಜವಾಬ್ದಾರನಲ್ಲ. ನಿಮ್ಮಂತಹ ಪತ್ರಕರ್ತರು ಏನು ಬೇಕಾದರೂ ಬರೀತೀರಿ” ಎಂದು ಕರಣ್ ಥಾಪರ್ ವಿರುದ್ಧವೇ ಆರೋಪ ಮಾಡಿದ್ದಾರೆ.

ತೀವ್ರ ಕೋಪಗೊಂಡಂತೆ ಕಂಡ ಪ್ರಶಾಂತ್‌ ಕಿಶೋರ್‌ಗೆ “ನೀವು ಸಂದರ್ಶನ ಮುಂದುವರಿಸಲು ಇಚ್ಛಿಸುತ್ತೀರಾ? ಅಥವಾ ಮುಗಿಸಲು ಬಯಸುತ್ತೀರಾ?” ಎಂದು ಕರಣ್ ಥಾಪರ್ ಕೇಳಿದ್ದು, ಇನ್ನಷ್ಟು ಸಿಟ್ಟಾಗಿಸಿದೆ. “ನಿಮ್ಮಂತಹ ಒಬ್ಬರಲ್ಲ ನಾಲ್ವರನ್ನು ನಾನು ಸುಧಾರಿಸಬಲ್ಲೆ, ನನಗೆ ನಿಮ್ಮನ್ನು ಹೇಗೆ ಎದುರಿಸಬೇಕು ಎಂದು ಚೆನ್ನಾಗಿ ಗೊತ್ತಿದೆ. ನಾನೇನೂ ಎದ್ದು ಹೋಗುವುದಿಲ್ಲ. ನೀವೇ ದೊಡ್ಡ ಖಡಕ್ ಸಂದರ್ಶಕ ಎಂಬ ಭ್ರಮೆಯಲ್ಲಿರಬೇಡಿ” ಎಂದು ಕರಣ್ ಥಾಪರ್ ಮೇಲೆ ಎಗರಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತೀವ್ರ ವಿಚಲಿತರಾದಂತೆ ಕಂಡು ಬಂದಿದ್ದು, ಪಕ್ಕದಲ್ಲಿದ್ದ ಲೋಟ ಎತ್ತಿ ನೀರನ್ನೂ ಕುಡಿದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಾಂತ್ ಕಿಶೋರ್‌ರ ಈ ಹಿಂದಿನ ಎಕ್ಸ್‌ನ ಪೋಸ್ಟ್‌ನ ಸ್ಕ್ರೀನ್‌ಶಾಟ್‌ ಮತ್ತು ಈ ಸಂದರ್ಶನದ ವಿಡಿಯೋ ವೈರಲ್ ಆಗುತ್ತಿದೆ. ಜೊತೆಗೆ ಈ ಹಿಂದೆ ಥಾಪರ್ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀರು ಕುಡಿಯುತ್ತಿರುವ ಮತ್ತು ಈಗ ಪ್ರಶಾಂತ್ ಕಿಶೋರ್ ನೀರು ಕುಡಿದ ಚಿತ್ರವನ್ನು ಹಂಚಿಕೊಂಡಿರುವ ನೆಟ್ಟಿಗರು, “ನೀರು ಉಳಿಸಿ, ಕರಣ್ ಥಾಪರ್‌ಗೆ ಸಂದರ್ಶನ ನೀಡಬೇಡಿ” ಎಂದು ಗೇಲಿ ಮಾಡಿದ್ದಾರೆ.

ಇದನ್ನೂ ಓದಿ : ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...