Homeಮುಖಪುಟ2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ : ಡಿಎಂಕೆ ಪಕ್ಷಕ್ಕೆ ಪ್ರಶಾಂತ್‌ ಕಿಶೋರ್‌ ಬಲ...

2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ : ಡಿಎಂಕೆ ಪಕ್ಷಕ್ಕೆ ಪ್ರಶಾಂತ್‌ ಕಿಶೋರ್‌ ಬಲ…

- Advertisement -
- Advertisement -

ತಮಿಳುನಾಡಿನಲ್ಲಿ 2021ರಲ್ಲಿ ಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಅವರ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ ಜೊತೆ ಒಪ್ಪಂದ ಮಾಡಿಕೊಳ್ಳಲು ಡಿಎಂಕೆ ಮುಂದಾಗಿದೆ. ಇದಕ್ಕೆ ಪ್ರತಿಪಕ್ಷಗಳು  ಮತ್ತು ರಾಜಕೀಯ ವಿಶ್ಲೇಷಕರು ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಸಂಸ್ಥೆಯ ಸಹಯೋಗದೊಂದಿಗೆ ಮುನ್ನಡೆದರೆ ಗೆಲುವು ಖಚಿತ ಎಂಬುದನ್ನು ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ನಂಬಿದೆ. ಹೀಗಾಗಿ ಒಪ್ಪಂದಕ್ಕೆ ಮುದ್ರೆ ಒತ್ತಲು ಸ್ಟಾಲಿನ್ ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ.

2019ರ ನವೆಂಬರ್ ನಲ್ಲಿ ಮತ್ತೊಬ್ಬ ರಾಜಕೀಯ ವಿಶ್ಲೇಷಕ ಸುನಿಲ್ ಕೊನೆಲೆಲು ಮತ್ತು ಡಿಎಂಕೆ ನಡುವೆ ಅಸಮಾಧಾನದ ಭುಗಿಲೆದ್ದ ಹಿನ್ನೆಲೆಯಲ್ಲಿ ಅವರೊಂದಿಗೆ ಕೆಲಸ ಮಾಡಲು ಡಿಎಂಕೆ ಹಿಂದೇಟು ಹಾಕಿದೆ. ಅದೇ ಕಾರಣಕ್ಕಾಗಿಯೇ ಪ್ರಶಾಂತ್ ಕಿಶೋರ್ ಗುಂಪಿನೊಂದಿಗೆ ಕೈಜೋಡಿಸಲು ಸಿದ್ದತೆ ನಡೆಸಿದೆ.

ದ್ರಾವಿಡ ಮುನ್ನೇತ್ರ ಕಳಗಂ ಪಕ್ಷವು 2019ರ ಲೋಕಸಭಾ ಚುನಾವಣೆಯಲ್ಲಿ ಕೆಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದಿತ್ತು. ನಂತರ 22 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲೂ ಡಿಎಂಕೆ 13 ಸ್ಥಾನಗಳನ್ನು ಗಳಿಸಿ ಪ್ರಾಬಲ್ಯವನ್ನು ಮೆರೆದಿತ್ತು. ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಡಿಎಂಕೆ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ಈ ಬೆಳವಣಿಗೆಗಳು ಡಿಎಂಕೆ ಪಕ್ಷದಲ್ಲಿ ಹೊಸ ಆಶಾಭಾವನೆಯನ್ನು ಮೂಡಿಸಿದ್ದು 2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಭವಿಷ್ಯ ಉಜ್ವಲವಾಗಿರುವುದನ್ನು ಮನಗಂಡಿರುವ ಡಿಎಂಕೆ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ತಂಡದಲ್ಲಿ ಸೇರ್ಪಡೆ ಮಾಡಿಕೊಳ್ಳುವ ನಿರ್ಧಾರವು ವಿರೋಧಿಗಳ ಪಾಳೆಯದಲ್ಲಿ ಹುಬ್ಬೇರಿಸುವಂತೆ ಮಾಡಿದೆ.

ಸದ್ಯಕ್ಕೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್‌ ಆಪ್‌ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪರವಾಗಿ ಕೆಲಸ ಮಾಡಲಿದ್ದಾರೆ.

ಐ-ಪ್ಯಾಕ್ ಜೊತೆ ಕೈಜೋಡಿಸುವ ಡಿಎಂಕೆ ನಿರ್ಧಾರದ ಪ್ರತಿಕ್ರಿಯೆ ನೀಡಿರುವ ಎಐಎಡಿಎಂಕೆ ಸಚಿವ ಡಿ.ಜಯಕುಮಾರ್ ಎಂ.ಕೆ. ಸ್ಟಾಲಿನ್ ಅವರನ್ನು ಇನ್ನು ಮುಂದ ಪಿ.ಕೆ.ಸ್ಟಾಲಿನ್ ಎಂದು ಕರೆಯಬೇಕು ಎಂದು ಗೇಲಿ ಮಾಡಿದ್ದಾರೆ. ಏಕೆಂದರೆ ಡಿಎಂಕೆ ನಾಯಕ ಸ್ಟಾಲಿನ್, ರಾಜಕೀಯ ಚತುರ ಕಿಶೋರ್ ಅವರ ಆಜ್ಞೆಗಳನ್ನು ಕೇಳುವುದಿಲ್ಲ. ಡಿಎಂಕೆ ಪಕ್ಷದ ನಾಯಕರ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದೆ. ಆದ್ದರಿಂದ ಸ್ಟಾಲಿನ್ ವಿಧಾನಸಭಾ ಚುನಾವಣೆಗೆ ತಂತ್ರಜ್ಞರನ್ನು ನೇಮಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...