Homeಮುಖಪುಟದೆಹಲಿ ಚುನಾವಣೆ: ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ಅರವಿಂದ್‌ ಕೇಜ್ರಿವಾಲ್‌ ತೆಕ್ಕೆಗೆ...

ದೆಹಲಿ ಚುನಾವಣೆ: ರಾಜಕೀಯ ಚತುರ ಪ್ರಶಾಂತ್‌ ಕಿಶೋರ್‌ ಅರವಿಂದ್‌ ಕೇಜ್ರಿವಾಲ್‌ ತೆಕ್ಕೆಗೆ…

- Advertisement -
- Advertisement -

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಸಲಹಾ ಸಂಸ್ಥೆ ಐ-ಪಿಎಸಿಯು ಆಮ್ ಆದ್ಮಿ ಪಕ್ಷದ ಜೊತೆಗೂಡಿ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಪ್ರಕಟಿಸಿದ್ದಾರೆ.

ಈ ಕುರಿತು ಪ್ರಶಾಂತ್‌ ಕಿಶೋರ್‌ರವರ ಐಪ್ಯಾಕ್‌ ಮತ್ತು ಅರವಿಂದ್‌ ಕೇಜ್ರಿವಾಲ್‌ ಟ್ವಿಟ್ಟರ್‌ನಲ್ಲಿ ಪರಸ್ಪರ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ.

ಪ್ರಶಾಂತ್‌ ಕಿಶೋರ್ ಜೆಡಿಯುನ ಉಪಾಧ್ಯಕ್ಷರಾಗಿದ್ದಾರೆ. ಅವರ ಪಕ್ಷ ಸದ್ಯ ಬಿಹಾರದಲ್ಲಿ ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೊಂಡಿದೆ. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಬಿಹಾರ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್‌ ಕಿಶೋರ್ ಕಿಡಿಕಾರಿದ್ದಾರೆ.

ಅವರ ಟೀಕೆಗಳ ನಂತರ “ನಾನು ಯಾರನ್ನೂ ಹೆಸರಿಸುವುದಿಲ್ಲ ಆದರೆ ಯಾರಿಗಾದರೂ ಸಮಸ್ಯೆ ಇದ್ದರೆ ಅವರು ಪಕ್ಷವನ್ನು ತೊರೆಯಲು ಸ್ವತಂತ್ರರು” ಎಂದು ಜೆಡಿಯು ಸಂಸದ ರಾಮ್ ಚಂದ್ರ ಪ್ರಸಾದ್ ಸಿಂಗ್ ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು 2015 ರ ರಾಜ್ಯ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡಿದ ನಂತರ ಪ್ರಶಾಂತ್‌ ಕಿಶೋರ್ ಜೆಡಿಯುಗೆ ಸೇರಿದ್ದರು. ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್ ಜೊತೆ ಮಹಾಮೈತ್ರಿಯ ಭಾಗವಾಗಿದ್ದ ನಿತೀಶ್ ಕುಮಾರ್ ಅವರು ಚುನಾವಣೆಯಲ್ಲಿ ಜಯಗಳಿಸಿದ್ದರು.

ಪ್ರಶಾಂತ್‌ ಕಿಶೋರ್‌ರವರ ಭಾರತೀಯ ರಾಜಕೀಯ ಕ್ರಿಯಾ ಸಮಿತಿ (ಐ-ಪಿಎಸಿ)ಯು ಬಿಜೆಪಿಯ “ಚಾಯ್ ಪಾರ್ ಚರ್ಚಾ” ಅಭಿಯಾನದ ಹಿಂದಿನ ರೂವಾರಿಗಳಾಗಿದ್ದರು. ಇದೇ ಸಮಿತಿಯು 2014 ರಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿಯಾಗಿ ಅಧಿಕಾರಕ್ಕೆ ಬರಲು ಸಹಾಯ ಮಾಡಿತು.

ರಾಜಕೀಯ ಚತುರರ ಈ ಗುಂಪು ಪ್ರಸ್ತುತ 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ ಪರವಾಗಿ ಸಹ ಕೆಲಸ ಮಾಡಲಿದೆ. ರಾಜ್ಯದಲ್ಲಿ ಬಿಜೆಪಿ ಅರಳಲು ಕನಸು ಕಾಣುತ್ತಿದ್ದರೆ, ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಲು ಮಮತಾ ಬ್ಯಾನರ್ಜಿಯವರ ಪರವಾಗಿ ಈ ಗುಂಪು ನಿಂತಿದೆ. ಪ್ರಶಾಂತ್‌ ಕಿಶೋರ್ ಅವರನ್ನು ಜೂನ್ 6 ರಂದು ಮಮತಾ ಬ್ಯಾನರ್ಜಿಯವರ ಸೋದರಳಿಯ ಮತ್ತು ಪಕ್ಷದ ಶಾಸಕ ಅಭಿಷೇಕ್ ಬ್ಯಾನರ್ಜಿ ಸಂಪರ್ಕಿಸಿ ಒಪ್ಪಿಸಿದ್ದರು.

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರು ಸಹ ಈ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಪ್ರಶಾಂತ್‌ ಕಿಶೋರ್‌ರವರ ಸಲಹೆಯನ್ನು ಪಡೆದುಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...