Homeಮುಖಪುಟಪ್ರಶಾಂತ್‌ ಕಿಶೋರ್‌, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ

ಪ್ರಶಾಂತ್‌ ಕಿಶೋರ್‌, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ

- Advertisement -
- Advertisement -

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ಮಂಗಳವಾರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ಪ್ರಶಾಂತ್‌ ಕಿಶೋರ್‌ ಗಂಟೆಗಳ ಕಾಲ ಕಾಂಗ್ರೆಸ್‌ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಹಾಜರಿದ್ದರು.

ಜೂನ್‌ 21ರಂದು ಪ್ರಶಾಂತ್‌ ಕಿಶೋರ್‌ ಹಾಗೂ ಶರದ್‌ ಪವಾರ್‌ ಚರ್ಚೆ ನಡೆಸಿದ್ದು ದೇಶದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಕುರಿತು ಚರ್ಚೆ ಆರಂಭವಾಗಿತ್ತು. 2 ವಾರಗಳ ನಂತರ ಅವರು ರಾಹುಲ್ ಗಾಂಧಿಯವರನ್ನು ಭೇಟಿಯಾಗಿರುವುದು ದೆಹಲಿ ರಾಜಕೀಯದಲ್ಲಿ ಹೊಸ ರಾಜಕೀಯ ಗಾಳಿ ಬೀಸುವ ಮುನ್ಸೂಚನೆಯಾಗಿದೆ ಎಂದು ಹಲವು ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

ಬಿಜೆಪಿ ವಿರುದ್ಧ ವಿರೊಧ ಪಕ್ಷಗಳ ಒಕ್ಕೂಟವನ್ನು ರಚಿಸುವ ಪ್ರಯತ್ನದಲ್ಲಿ ಅವರು ತೊಡಗಿದ್ದಾರೆ ಎಂಬ ಚರ್ಚೆ ಕಳೆದ ತಿಂಗಳಲ್ಲಿಯೇ ಆರಂಭವಾಗಿತ್ತು. ಪ್ರಶಾಂತ್ ಕಿಶೋರ್‌ ಭೇಟಿಯ ಮಾರನೇ ದಿನ ಶರದ್‌ ಪವಾರ್‌ ತಮ್ಮ ನಿವಾಸದಲ್ಲಿ ವಿರೋಧ ಪಕ್ಷಗಳ ಮುಖಂಡರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕಾಂಗ್ರೆಸ್‌ ನಾಯಕರ ಅನುಪಸ್ಥಿತಿ ತ್ರತೀಯ ರಂಗದ ರಚನೆಯ ಊಹಾಪೋಹಗಳು ಹರಿದಾಡಲು ಕಾರಣವಾಗಿತ್ತು. ಶರದ್‌ ಪವಾರ್ ತೃತೀಯ ರಂಗದ ಎಲ್ಲಾ ವದಂತಿಗಳನ್ನು ತಳ್ಳಿಹಾಕಿ ಕಾಂಗ್ರೆಸ್‌ ಇಲ್ಲದ ವಿರೊಧ ಪಕ್ಷಗಳ ಒಕ್ಕೂಟದಿಂದ ಬಿಜೆಪಿ ಎದುರಿಸುವುದು ಸಾಧ್ಯವಿಲ್ಲ ಎಂದಿದ್ದರು.

ಇದನ್ನೂ ಓದಿ: ಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ ಪಕ್ಷಗಳು ಸಜ್ಜು?

ಶರದ್‌ ಪವಾರ್‌ ಹೇಳಿಕೆಯ ಬೆನ್ನಲ್ಲೇ ಮಂಗಳವಾರ ಮಧ್ಯಾಹ್ನ ಪ್ರಶಾಂತ್‌ ಮತ್ತು ರಾಹುಲ್ ಭೇಟಿಯಾಗಿರುವುದು 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ನಡೆಯುತ್ತಿದೆ ಎಂಬ ವದಂತಿಗಳಿಗೆ ಪುಷ್ಠಿ ನೀಡಿದೆ.

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಶಿವಸೇನೆ ಸಂಸದ ಸಂಜಯ್‌ ರಾವತ್‌ ಸೇರಿದಂತೆ ಹಲವು ನಾಯಕರು 2024ರ ಲೋಕಸಭೆ ಚುನಾವಣೆಯಲ್ಲಿ ವಿರೊಧ ಪಕ್ಷಗಳು ಒಟ್ಟಾಗಿ ಬಿಜೆಪಿ ವಿರುದ್ಧ ಸ್ಪರ್ಧಿಸಬೇಕು ಎಂಬ ಪ್ರಶಾಂತ್‌ ಕಿಶೊರ್‌ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಸಂಸತ್‌ ಮುಂಗಾರು ಅಧಿವೇಶನಕ್ಕೂ ವಾರ ಮೊದಲು ಪ್ರಶಾಂತ್‌ ಕಿಶೋರ್‌ ಮತ್ತು ಕಾಂಗ್ರೆಸ್‌ ನಾಯಕರ ಭೇಟಿ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಘಟಿಸುವ ಮುನ್ಸೂಚನೆ ನೀಡುತ್ತಿದೆ.

ಈ ಬಾರಿ ಸಂಸತ್‌ ಮುಂಗಾರು ಅಧಿವೇಶನ ಜುಲೈ 19ರಿಂದ ಅರಂಭವಾಗಿದ್ದು, ಕೋವಿಡ್‌ ಎರಡನೇ ಅಲೆಯ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯಗಳು ತೀವ್ರ ಚರ್ಚೆಗೆ ಗುರಿಯಾಗುವ ಸಾಧ್ಯತೆ ಇದೆ. ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಸುಮಾರು 9 ತಿಂಗಳಿನಿಂದ ಧರಣಿ ನಡೆಸುತ್ತಿದ್ದಾರೆ. ಇದೆರಡು ಮುಖ್ಯ ವಿಷಯಗಳು ಸಂಸತ್‌ ಅಧಿವೇಶನದಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಇದೆ. ವಿರೋಧ ಪಕ್ಷಗಳು ಎಂದಿನ ತಮ್ಮ ಪರಸ್ಪರ ಕಚ್ಚಾಟವನ್ನು ನಿಲ್ಲಿಸಿ ಜನರ ಸಮಸ್ಯೆಯನ್ನು ಸರ್ಕಾರದ ಮುಂದಿಡಲಿವೆಯೇ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...