Homeಮುಖಪುಟಶರದ್ ಪವಾರ್ ಭೇಟಿಯಾದ ಪ್ರಶಾಂತ್ ಕಿಶೋರ್: 2024ರಲ್ಲಿ ಮೋದಿ ವಿರುದ್ಧ ಮೈತ್ರಿಕೂಟಕ್ಕೆ ಸಿದ್ದತೆ?

ಶರದ್ ಪವಾರ್ ಭೇಟಿಯಾದ ಪ್ರಶಾಂತ್ ಕಿಶೋರ್: 2024ರಲ್ಲಿ ಮೋದಿ ವಿರುದ್ಧ ಮೈತ್ರಿಕೂಟಕ್ಕೆ ಸಿದ್ದತೆ?

- Advertisement -
- Advertisement -

ಬಂಗಾಳ ಮತ್ತು ತಮಿಳುನಾಡು ಚುನಾವಣಾ ಗೆಲುವಿನಿಂದ ಹುಮ್ಮಸ್ಸಿನಲ್ಲಿರುವ ರಾಜಕೀಯ ತಂತ್ರಜ್ಞ, ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ಇಂದು ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಒಟ್ಟಿಗೆ ಊಟ ಮಾಡಿದ್ದಾರೆ. ಇದು 2024ರಲ್ಲಿ ನರೇಂದ್ರ ಮೋದಿ ವಿರುದ್ಧದ ವಿರೋಧ ಪಕ್ಷಗಳ ಪ್ರಬಲ ಮೈತ್ರಿಕೂಟಕ್ಕೆ ಸಿದ್ದತೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದು ಸೌಜನ್ಯದ ಭೇಟಿ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ​ ಟಿಎಂಸಿ ಮತ್ತು ಡಿಎಂಕೆ ಪಕ್ಷಕ್ಕೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳ ಮುಖಂಡರನ್ನು ಪ್ರಶಾಂತ್ ಕಿಶೋರ್ ಭೇಟಿಯಾಗಿ ಧನ್ಯವಾದ ತಿಳಿಸುತ್ತಿದ್ದಾರೆ ಅವರ ಐಪ್ಯಾಕ್ ತಂಡ ಹೇಳಿದೆ.

ಆದರೂ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನರೇಂದ್ರ ಮೋದಿ ಎದುರು ಪ್ರಬಲ ವಿರೋಧ ಪಕ್ಷಗಳ ಮೈತ್ರಿ ಸ್ಥಾಪಿಸುವ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆ ಎಂಬ ಉಹಾಪೋಹಗಳು ಹರಿದಾಡುತ್ತಿವೆ.

ತಾನು ಕೆಲಸ ಮಾಡಿದ್ದ ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಬಂಗಾಳದಲ್ಲಿ ಟಿಎಂಸಿ ಭರ್ಜರಿ ಜಯಗಳಿಸುತ್ತಿದ್ದಂತೆ ಪ್ರಶಾಂತ್ ಕಿಶೋರ್‌ ತಾನು ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರು. “ಈಗ  ನಾನು ಮಾಡುತ್ತಿರುವುದನ್ನು ಮುಂದುವರಿಸಲು ಬಯಸುವುದಿಲ್ಲ. ನಾನು ಸಾಕಷ್ಟು ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಕ್ಷೇತ್ರವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ಪ್ರಶಾಂತ್ ಕಿಶೋರ್ ಈ ಕ್ಷೇತ್ರ ತ್ಯಜಿಸುವುದಾಗಿ ಹೇಳಿದ್ದರೂ, ಬಹಳಷ್ಟು ಜನರು ಅದನ್ನು ನಂಬಲು ಸಿದ್ದರಿಲ್ಲ. ಅವರು ಮತ್ತಷ್ಟು ಕೆಲಸ ಮಾಡಬೇಕೆಂದು ಬಯಸಿದ್ದಾರೆ. ಅಲ್ಲದೇ 2022ರಲ್ಲಿ ಅವರು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪರವಾಗಿ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇನ್ನು ಬಂಗಾಳ ಚುನಾವಣೆಯಲ್ಲಿ ಅವರನ್ನು ಇನ್ನಿಲ್ಲದಂತೆ ಕಾಡಿದ ಬಿಜೆಪಿ ವಿರುದ್ಧ 2024ರ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡುವಂತೆ ಹಲವು ವಿರೋಧ ಪಕ್ಷಗಳು ಕೇಳಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಇವತ್ತಿನ ಶರದ್ ಪವಾರ್‌ ಜೊತೆಗಿನ ಭೇಟಿಗೆ ಮಹತ್ವ ಬಂದಿದೆ.

ಇನ್ನೊಂದೆಡೆ ಮಹಾರಾಷ್ಟ್ರ ಮೈತ್ರಿಯಲ್ಲಿ ಬಿರುಕಿನ ಲಕ್ಷಣಗಳು ಗೋಚರಿಸಿವೆಯೆಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಶಿವಸೇನೆ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ಪ್ರಧಾನಿ ಮೋದಿಯನ್ನು ಭೇಟಿಯಾದ ಬೆನ್ನಲ್ಲೆ ಶಿವಸೇನೆ ಮುಖಂಡ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್, “ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಉನ್ನತ ನಾಯಕ” ಎಂದು ಹೊಗಳಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಈ ಭೇಟಿಯನ್ನು ಅರ್ಥೈಸಲಾಗುತ್ತಿದೆ.


ಇದನ್ನೂ ಓದಿ: ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...