Homeಮುಖಪುಟ2022ರ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್?: ಮೇ ತಿಂಗಳಲ್ಲಿ ಘೋಷಣೆ...

2022ರ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡಲಿರುವ ಪ್ರಶಾಂತ್ ಕಿಶೋರ್?: ಮೇ ತಿಂಗಳಲ್ಲಿ ಘೋಷಣೆ ಸಾಧ್ಯತೆ

"ಕಾಂಗ್ರೆಸ್ ಸಂಪೂರ್ಣ ಮನಸ್ಸು ಮಾಡಿದರೆ ಕೇವಲ ಎರಡು ವರ್ಷದಲ್ಲಿ ಅಂದರೆ 2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ" ಎಂದು ಪ್ರಶಾಂತ್ ಕಿಶೋರ್ ಇತ್ತೀಚೆಗೆ ಹೇಳಿದ್ದರು.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಿರುದ್ಧ ಅದರಲ್ಲಿಯೂ ಗಾಂಧಿ ಕುಟುಂಬದ ವಿರುದ್ಧ ಟೀಕೆ ಮಾಡುತ್ತಿದ್ದ ಪ್ರಶಾಂತ್ ಕಿಶೋರ್ ಮತ್ತೆ ಗಾಂಧಿ ಕುಟುಂಬದ ಜೊತೆ ಮುಂದಿನ ಚುನಾವಣೆಗಳ ಕುರಿತು ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. 2022ರ ಅಂತ್ಯದಲ್ಲಿ ನಡೆಯುವ ಗುಜರಾತ್‌ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುವಂತೆ ಮನವಿ ಮಾಡಲಾಗಿದ್ದು, ಈ ಕುರಿತು ಮೇ ತಿಂಗಳಿನಲ್ಲಿ ಕಿಶೋರ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡುವಂತೆ ಪ್ರಶಾಂತ್ ಕಿಶೋರ್ ಮೇಲೆ ಒತ್ತಡ ಹೇರಲಾಗುತ್ತಿರುವುದು ನಿಜ. ಆದರೆ ಕೇವಲ ಅದೊಂದು ಚುನಾವಣೆ ಮಾತ್ರವಲ್ಲದೇ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಬೃಹತ್ ಯೋಜನೆ ರೂಪಿಸುವುದು ಪ್ರಶಾಂತ್ ಕಿಶೋರ್‌ರವರ ಮಹತ್ವಕಾಂಕ್ಷೆಯಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ. ಈಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಜೊತೆ ಮಾತುಕತೆ ಮುಂದುವರೆಸಲು ಬಯಸಿದ್ದು ಈ ಎಲ್ಲದರ ಕುರಿತು ಮೇ 02 ರಂದು ಪ್ರಶಾಂತ್ ಕಿಶೋರ್ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ.

ಪ್ರಶಾಂತ್ ಕಿಶೋರ್‌ರವರು ಕಾಂಗ್ರೆಸ್‌ಗೆ ಸಲಹೆ ನೀಡುವುದನ್ನು ಬಿಟ್ಟು ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಸೇರಬೇಕೆಂಬ ಚರ್ಚೆ ಕೂಡ ಬದಿಗೆ ಸರಿದಿಲ್ಲ. ಅದನ್ನು ಪರಿಗಣಿಸಿಯೇ ಪ್ರಶಾಂತ್ ಕಿಶೋರ್ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

2021ರಲ್ಲಿ ಜುಲೈನಲ್ಲಿ ಪ್ರಶಾಂತ್ ಕಿಶೋರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಮುಖ್ಯವಾಗಿ ರಾಹುಲ್ ಗಾಂಧಿ ಮತ್ತು ಪ್ರಶಾಂತ್ ಕಿಶೋರ್ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಆದರೆ ಆನಂತರ ಹಲವು ಭಿನ್ನಾಭಿಪ್ರಾಯಗಳ ಕಾರಣಕ್ಕೆ ಮಾತುಕತೆ ಮುರಿದು ಬಿದ್ದಿತ್ತು. ಆನಂತರ ಕಾಂಗ್ರೆಸ್ ನಾಯಕತ್ವದ ವಿರುದ್ಧ ಪ್ರಶಾಂತ್ ಕಿಶೋರ್ ಹಲವಾರು ಟೀಕೆಗಳನ್ನು ಮಾಡಿದ್ದರು.

“ಬಿಜೆಪಿ ಇನ್ನು ಹಲವು ವರ್ಷಗಳ ಕಾಲ ಭಾರತದ ರಾಜಕೀಯದ ಕೇಂದ್ರವಾಗಲಿದೆ… ಈ ಹಿಂದೆ ಕಾಂಗ್ರೆಸ್‌ ಇದ್ದಂತೆ ಈಗ ಬಿಜೆಪಿ ಕೂಡಾ ಗೆದ್ದರೂ, ಸೋತರೂ ಎಲ್ಲಿಯೂ ಹೋಗುವುದಿಲ್ಲ. ಆದರೆ ಸಮಸ್ಯೆ ಇರುವುದು ರಾಹುಲ್ ಗಾಂಧಿಗೆ. ಬಹುಶಃ ಜನರು ಬಿಜೆಪಿಯನ್ನು ಕಿತ್ತೊಗೆಯುತ್ತಾರೆ ಎಂದು ಅವರು ಭಾವಿಸುತ್ತಾರೆ, ಅದು ಆಗುತ್ತಿಲ್ಲ, ಆ ಅರಿವು ರಾಹುಲ್ ಗಾಂಧಿಗೆ ಇಲ್ಲ” ಎಂದು ಪ್ರಶಾಂತ್‌ ಕಿಶೋರ್‌ 2021ರ ಅಕ್ಟೋಬರ್‌ನಲ್ಲಿ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ನಡೆಸಿದ್ದರು.

“ಕಾಂಗ್ರೆಸ್ ಪ್ರತಿನಿಧಿಸುವ ಚಿಂತನೆ ಮತ್ತು ಅದಕ್ಕಿರುವ ಸಾಮರ್ಥ್ಯವು ಪ್ರಬಲ ಪ್ರತಿಪಕ್ಷಕ್ಕೆ ಅತ್ಯಗತ್ಯ. ಆದರೆ ಕಾಂಗ್ರೆಸ್‌ನ ನಾಯಕತ್ವವು ವ್ಯಕ್ತಿಯೊಬ್ಬರ ದೈವಿಕ ಹಕ್ಕಲ್ಲ. ವಿಶೇಷವಾಗಿ ಕಳೆದ 10 ವರ್ಷಗಳಲ್ಲಿ ಪಕ್ಷವು 90% ಕ್ಕಿಂತ ಹೆಚ್ಚು ಚುನಾವಣೆಗಳನ್ನು ಸೋತಿದೆ. ವಿರೋಧ ಪಕ್ಷವು ತನ್ನ ನಾಯಕತ್ವವನ್ನು ಪ್ರಜಾಸತ್ತಾತ್ಮಕವಾಗಿ ನಿರ್ಧರಿಸಲಿ ಎಂದು ಡಿಸೆಂಬರ್ ವೇಳೆಗೆ ಪ್ರಶಾಂತ್ ಕಿಶೋರ್ ನುಡಿದಿದ್ದರು. ಪ್ರಶಾಂತ್ ಕಿಶೋರ್‌ರವರ ಎಷ್ಟೆಲ್ಲಾ ಟೀಕೆಗಳ ನಡುವೆಯೂ ರಾಹುಲ್ ಗಾಂಧಿ ತಾಳ್ಮೆ ವಹಿಸಿದ್ದಾರೆ ಹೊರತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಈಗ ಮತ್ತೊಂದು ಸುತ್ತಿನ ಮಾತುಕತೆಗೆ ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಅದೇ ಸಂದರ್ಭದಲ್ಲಿ ಪ್ರಶಾಂತ್ ಕಿಶೋರ್ ಸಹ ಕಾಂಗ್ರೆಸ್ ಮನಸ್ಸು ಮಾಡಿದ್ದರೆ 2024ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂದು ಉಚ್ಚರಿಸಿದ್ದಾರೆ.

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಇಂಡಿಯಾ ಟುಡೇ ಚಾನೆಲ್ ಜೊತೆ ಮಾತನಾಡಿದ್ದ ಪ್ರಶಾಂತ್ ಕಿಶೋರ್ “ಕಾಂಗ್ರೆಸ್ ಸಂಪೂರ್ಣ ಮನಸ್ಸು ಮಾಡಿದರೆ ಕೇವಲ ಎರಡು ವರ್ಷದಲ್ಲಿ ಅಂದರೆ 2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯ” ಎಂದು ನುಡಿದಿದ್ದರು.

“ಬಿಜೆಪಿ ಮತ್ತು ಮೋದಿ ಎಷ್ಟೇ ಪ್ರಭಾವಿಯಾಗಿದ್ದರೂ ಈಶಾನ್ಯ ಭಾರತ ಮತ್ತು ದಕ್ಷಿಣ ಭಾರತದ 200 ಸ್ಥಾನಗಳಲ್ಲಿ (ಬಿಹಾರ, ಪ.ಬಂಗಾಳ, ಒಡಿಸ್ಸಾ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕೇರಳ) ಇಂದಿಗೂ 50 ಸೀಟು ಪಡೆಯಲು ತಿಣುಕಾಡುತ್ತಿದೆ. ಅಂದರೆ ಬಿಹಾರ, ಓಡಿಸ್ಸಾ ಮತ್ತು ಬಂಗಾಳದಲ್ಲಿ ಬಿಜೆಪಿ ಯಶಸ್ವಿಯಾಗಿದ್ದರೂ ಸಹ 50ಕ್ಕಿಂತ ಹೆಚ್ಚು ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಬಿಜೆಪಿಗೆ ಬಿಹಾರದಲ್ಲಿ 18, ಬಂಗಾಳದಲ್ಲಿ 18,  ಒಡಿಸ್ಸಾದಲ್ಲಿ 12, ತೆಲಂಗಾಣದಲ್ಲಿ 4-5 ಬಿಜೆಪಿ ಸಂಸದರಿದ್ದಾರೆ ಅಷ್ಟೆ. ಅಂದರೆ 150 ರಷ್ಟು ಸೀಟುಗಳು ಇಂದಿಗೂ ವಿರೋಧ ಪಕ್ಷಗಳ ಕೈಯಲ್ಲಿವೆ. ಅವರೆಲ್ಲರೂ ಬಿಜೆಪಿಯನ್ನು ವಿರೋಧಿಸುತ್ತಿದ್ದಾರೆ” ಎಂದು ಪ್ರಶಾಂತ್ ಕಿಶೋರ್ ತಿಳಿಸಿದ್ದರು.

ಉಳಿದ 350ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಯಾವುದೇ ಪಕ್ಷವಾದರೂ ಅಂದರೆ ಆಪ್, ತೃಣಮೂಲ ಕಾಂಗ್ರೆಸ್ ಅಥವಾ ಮರುಹುಟ್ಟಿನ ಕಾಂಗ್ರೆಸ್ ಪಕ್ಷವಾಗಲಿ 120 ಸೀಟುಗಳನ್ನು ಗೆದ್ದುಕೊಂಡಲ್ಲಿ ರಾತ್ರೋರಾತ್ರಿ ಸಂಪೂರ್ಣ ಪರಿಸ್ಥಿತಿ ಬದಲಾಗಲಿದೆ. ಸೈದ್ದಾಂತಿಕವಾಗಿ ಹೇಳಬಹುದಾದರೆ ಕೇವಲ 2 ವರ್ಷದಲ್ಲಿ ಬಿಜೆಪಿಯನ್ನು ಸೋಲಿಸಬಹುದಾಗಿದೆ. ಕಾಂಗ್ರೆಸ್ ಥರದ ಪಕ್ಷ 120 ಸೀಟುಗಳನ್ನು ಗೆಲ್ಲಲಾಗುವುದಿಲ್ಲ ಎಂದು ಹೇಳಲು ಸಾಧ್ಯವೇ? ಈಗ 50 ಕ್ಷೇತ್ರಗಳಲ್ಲಿ ಗೆದ್ದಿರುವ ಕಾಂಗ್ರೆಸ್ ಇನ್ನು ಎರಡು ವರ್ಷಗಳಲ್ಲಿ ಅದನ್ನು ಡಬಲ್ ಮಾಡುವುದು ಸಾಧ್ಯವಿದೆ ಎಂದು ಪ್ರಶಾಂತ್ ಕಿಶೋರ್ ಲೆಕ್ಕಾಚಾರ ಹಾಕಿದ್ದಾರೆ.

ಅದಕ್ಕಾಗಿ ಕಾಂಗ್ರೆಸ್ ಅನ್ನು ಪುನಃ ಸ್ಥಾಪಿಸಬೇಕಾಗಿದೆ. ಅದರ ಆತ್ಮ, ಮುನ್ನೋಟ ಮತ್ತು ಸೈದ್ದಾಂತಿಕತೆಯನ್ನು ಇಟ್ಟುಕೊಂಡು ಉಳಿದೆಲ್ಲವನ್ನು ಬದಲಿಸಬೇಕಿದೆ. ಕಾಂಗ್ರೆಸ್ ಮನಸ್ಸು ಮಾಡಿ ಕೆಲಸ ಮಾಡಿದರೆ ಇದನ್ನು ಸಾಧಿಸಬಹುದು. ಬಿಜೆಪಿ ಸೋಲಿಸಲು ಇತರ ವಿರೋಧ ಪಕ್ಷಗಳ ಬೆಂಬಲ ಖಂಡಿತ ಬೇಕಾಗಿದೆ. ಅದಕ್ಕಾಗಿ ಮೊದಲಿಗೆ ಕಾಂಗ್ರೆಸ್ ಪ್ರತಿಪಕ್ಷಗಳ ಎದುರು ಬಿಜೆಪಿಯನ್ನು ಸೋಲಿಸುವ ಮುನ್ನೋಟವನ್ನು ಮುಂದಿಡಬೇಕು. ಎರಡನೇದಾಗಿ ಇದರಿಂದ ಅತಿ ಹೆಚ್ಚು ಲಾಭ ತನಗಾಗಲಿದೆ ಎನ್ನುವುದನ್ನು ಮನಗಾಣಬೇಕು ಮತ್ತು ಮೂರನೇಯದಾಗಿ ಬಿಜೆಪಿಯನ್ನು ಮಣಿಸಿದ ನಂತರ ಯಾರು ನಾಯಕತ್ವ ವಹಿಸಬೇಕು ಎಂಬುದನ್ನು ಪಡೆದ ಸೀಟುಗಳ ಆಧಾರದಲ್ಲಿ ನಿರ್ಧರಿಸಬೇಕು. ಆದರೆ ಕಾಂಗ್ರೆಸ್ ಇಂದು ಇದಕ್ಕೆ ವಿರುದ್ಧವಾಗಿ ಚಿಂತಿಸುತ್ತಿದೆ. ಬಹುದೊಡ್ಡ ಪಕ್ಷವಾಗಿ ಕಾಂಗ್ರೆಸ್‌ಗೆ ಖಂಡಿತ ಅನುಕೂಲಗಳಿವೆ, ಅದು ತನ್ನ ಚಿಂತನೆಯನ್ನು ಅದಲು ಬದಲು ಮಾಡಿದರೆ ಖಂಡಿತ ಬಿಜೆಪಿಯನ್ನು ಸೋಲಿಸಲು ಸಾಧ್ಯ ಎಂದು ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದರು.

ಟಿಎಂಸಿಯ ಮಮತಾ ಬ್ಯಾನರ್ಜಿ, ಎನ್‌ಸಿಪಿಯ ಶರದ್ ಪವಾರ್, ಆಪ್‌ನ ಅರವಿಂದ್ ಕೇಜ್ರಿವಾಲ್, ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ತಮಿಳುನಾಡಿನ ಸ್ಟಾಲಿನ್ ಜೊತೆ ಉತ್ತಮ ಸಂಬಂಧ ಹೊಂದಿರುವ ಪ್ರಶಾಂತ್ ಕಿಶೋರ್ 2024ರ ಮುಂಚೆ ಈ ಎಲ್ಲಾ ವಿರೋಧ ಪಕ್ಷಗಳನ್ನು ಬಿಜೆಪಿ ವಿರುದ್ಧ ಐಕ್ಯ ಶಕ್ತಿಯಾಗಿ ಅಣಿನೆರೆಸಲು ಕಿಶೋರ್ ಬಯಸಿದ್ದಾರೆ. ಇದರ ಭಾಗವಾಗಿ ಅವರು ಇತ್ತೀಚೆಗೆ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್‌ ಕುಮಾರ್‌ರವರನ್ನು ಸಹ ಭೇಟಿ ಮಾಡಿದ್ದಾರೆ. ಎರಡು ವರ್ಷಗಳ ಹಿಂದೆ ಜೆಡಿಯುನಿಂದ ಉಚ್ಛಾಟಿತರಾಗಿದ್ದ ಪ್ರಶಾಂತ್ ಕಿಶೋರ್ ವೈಮನಸ್ಸು ಮರೆತು ನಿತೀಶ್‌ ಕುಮಾರ್‌ರವರನ್ನು ಭೇಟಿ ಮಾಡಿರುವುದು ಅವರ ನರೇಂದ್ರ ಮೋದಿ ವಿರುದ್ಧ ವಿರೋಧ ಪಕ್ಷಗಳನ್ನು ಗಟ್ಟಿಗೊಳಿಸುವ ಪ್ರಯತ್ನದ ಭಾಗ ಎನ್ನಲಾಗುತ್ತಿದೆ. ಈಗ ಕಾಂಗ್ರೆಸ್ ನಾಯಕತ್ವದ ಜೊತೆ ಮಾತುಕತೆ ಪುನಃ ಆರಂಭಿಸಿದ್ದಾರೆ. ಫಲಿತಾಂಶ ಏನಾಗಲಿದೆ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...