Homeಮುಖಪುಟವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ವಿಪಕ್ಷಗಳನ್ನು ಭೇಟಿಯಾಗುತ್ತಿರುವ ಪ್ರಶಾಂತ್‌ ಕಿಶೋರ್‌: ಪರ್ಯಾಯ ಒಕ್ಕೂಟದ ಚರ್ಚೆ?

ರಾಜ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಪರ್ಯಾಯವನ್ನು ಒದಗಿಸುವುದಕ್ಕಾಗಿ ಕಿಶೋರ್, ಮಾಂಝಿ, ಕನ್ಹಯ್ಯ ಕುಮಾರ್ ಮತ್ತು ಎಡ ಪಕ್ಷಗಳೊಂದಿಗೆ ಸೇರಲು ನಾನು ಸಿದ್ಧನಿದ್ದೇನೆ" ಎಂದು ಪಪ್ಪು ಯಾದವ್ ಹೇಳಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಮುಂದಿನ ನಡೆಯ ಬಗ್ಗೆ ಚರ್ಚಿಸಲು ಬಿಹಾರದ ವಿವಿಧ ವಿರೋಧ ಪಕ್ಷಗಳ ರಾಜಕೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) ನಿಂದ ಇತ್ತೀಚೆಗೆ ವಜಾಗೊಳಿಸಲ್ಪಟ್ಟ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಬಿಹಾರದ ಯುವಜನರನ್ನು ಸಂಪರ್ಕಿಸಲು ಗುರುವಾರ ತಮ್ಮ ‘ಬಾತ್ ಬಿಹಾರ ಕಿ’ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಬಿಹಾರವನ್ನು ಅಭಿವೃದ್ಧಿಪಡಿಸಲು ಕಿಶೋರ್ ಅವರೊಂದಿಗೆ ಕೈಜೋಡಿಸಲು ಬಯಸುವ ಸಮಾನ ಮನಸ್ಕ ಯುವಜನರ ನೋಂದಣಿಯನ್ನು ಈ ಅಭಿಯಾನ ಪ್ರಾರಂಭಿಸಿದೆ. ಕಿಶೋರ್ ಅವರ ‘ಬಾತ್ ಬಿಹಾರ ಕಿ’ ಕಾರ್ಯಕ್ರಮವು ಮುಂದಿನ 10 ವರ್ಷಗಳಲ್ಲಿ ಬಿಹಾರವನ್ನು ದೇಶದ 10 ಅತ್ಯುತ್ತಮ ರಾಜ್ಯಗಳಲ್ಲಿ ಒಂದನ್ನಾಗಿ ಮಾಡುವ ಗುರಿಯನ್ನು ಹೊಂದಿದೆ.

ಕಿಶೋರ್‌ ಗುರುವಾರ ಹಿಂದೂಸ್ತಾನಿ ಅವಮ್ ಮೋರ್ಚಾ ಮುಖ್ಯಸ್ಥ ಜಿತಾನ್ ರಾಮ್ ಮಾಂಝಿಯನ್ನು ಭೇಟಿಯಾಗಿದ್ದಾರೆ. ಅದಕ್ಕೂ ಮುಂಚೆ ಆರ್‌ಎಲ್‌ಎಸ್‌ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರನ್ನು ಭೇಟಿ ಮಾಡಿದ್ದರು. ಮಾಂಝಿ ಮತ್ತು ಕುಶ್ವಾಹ ಇಬ್ಬರೂ ಮಹಾ ಮೈತ್ರಿಕೂಟದ ನಾಯಕರಾಗಿದ್ದು, ಇದರಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಕೂಡ ಸೇರಿವೆ.

ಕಿಶೋರ್ ಅವರನ್ನು ಭೇಟಿಯಾಗಿದ್ದನ್ನು ದೃಢಪಡಿಸಿದ ಆರ್‌ಎಲ್‌ಎಸ್‌ಪಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರು ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ರೈತರ ದುಃಸ್ಥಿತಿಯ ಬಗ್ಗೆ ಸರ್ಕಾರ ಪೂರ್ಣ ವೈಫಲ್ಯ ಕಂಡಿದ್ದರಿಂದ ಆರ್‌ಎಲ್‌ಎಸ್‌ಪಿ ಜೆಡಿಯು ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡು ಹೋರಾಟ ನಡೆಸಿತ್ತು. ಅವರ ಪಕ್ಷವು ಕಿಶೋರ್‌ರೊಂದಿಗೆ ಒಂದು ಸಾಮಾನ್ಯ ನೆಲೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.

“ಸೈದ್ಧಾಂತಿಕ ವಿಷಯದಲ್ಲಿ ನಾವು ಒಂದೇ ಪುಟದಲ್ಲಿದ್ದೇವೆ. ಇದು ಅನೌಪಚಾರಿಕ ಸಭೆಯಾಗಿದ್ದು ಬಿಹಾರದ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ” ಎಂದು ಪಕ್ಷದ ಮಾಜಿ ರಾಷ್ಟ್ರೀಯ ಪದಾಧಿಕಾರಿ ಫಜಲ್ ಇಮಾಮ್ ಮುಲ್ಲಿಕ್ ಹೇಳಿದ್ದಾರೆ.

ಜನ್‌ ಅಧಿಕಾರ್‌ ಪಕ್ಷದ ಮುಖ್ಯಸ್ಥ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು ಕಿಶೋರ್ ಅವರು ಬಿಹಾರದ ಭವಿಷ್ಯದಲ್ಲಿ ಬದಲಾವಣೆಗಾಗಿ ಕೆಲಸ ಮಾಡುವ ಉದ್ದೇಶವನ್ನು ಶ್ಲಾಘಿಸಿದರು, “ಜನರು ಆಡಳಿತ ಮತ್ತು ವಿರೋಧ ಪಕ್ಷಗಳಿಂದ ಬೇಸರಗೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಪರ್ಯಾಯವನ್ನು ಒದಗಿಸುವುದಕ್ಕಾಗಿ ಕಿಶೋರ್, ಮಾಂಝಿ, ಕನ್ಹಯ್ಯ ಕುಮಾರ್ ಮತ್ತು ಎಡ ಪಕ್ಷಗಳೊಂದಿಗೆ ಸೇರಲು ನಾನು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ.

ಬಿಹಾರದ ಅಭಿವೃದ್ದಿಗಾಗಿ ರಾಜಕೀಯ ಬಿಟ್ಟು ಕೆಲಸ ಮಾಡುತ್ತೇನೆಂದು ಘೋಷಿಸಿದ ಪ್ರಶಾಂತ್‌ ಕಿಶೋರ್‌ ಈಗ ಯಾಕೆ ರಾಜಕೀಯ ಮುಖಂಡರನ್ನು ಭೇಟಿಯಾಗುತ್ತಿದ್ದಾರೆ ಎಂದು ಹಲವರು ಪ್ರಶ್ನಿಸಿದ್ದಾರೆ. ಜೆಡಿಯು ಇವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲು ಮುಂದಾಗಿದ್ದು ಶಾಸಕನೊಬ್ಬ ಪ್ರಶಾಂತ್‌ ಕಿಶೋರ್‌ ಯಾರು ಎಂದು ಕರೆಯುವ ಮೂಲಕ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...