Homeಕರ್ನಾಟಕಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪ

ಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪ

ಈ ನನ್ನ ಆರೋಪಗಳು ಸುಳ್ಳು ಎನ್ನುವುದಾದರೆ ಪ್ರತಾಪ್ ಸಿಂಹರವರೆ ಕೋರ್ಟ್‌ಗೆ ಹೋಗಲಿ. ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಿ. ನಾನು ಕೋರ್ಟಿನಲ್ಲಿ ದಾಖಲೆ ಇಟ್ಟು ಹೋರಾಡುತ್ತೇನೆ ಎಂದು ಲಕ್ಷ್ಮಣ್ ಹೇಳಿದ್ದಾರೆ.

- Advertisement -
- Advertisement -

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹರವರ ಭ್ರಷ್ಟಚಾರ, ವೈಯುಕ್ತಿಕ ಜೀವನದ ಬಗ್ಗೆ ನನಗೆ ಮಾಹಿತಿ ಇದೆ. ಅವರೊಬ್ಬ ಸಂಸರಾಗುವುದಕ್ಕಿಂತ ಒಬ್ಬ ಬ್ಲೂ ಫಿಲಂ ಹೀರೋ ಆಗಿದ್ದರೆ ಸರಿಯಿರುತ್ತಿತ್ತು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೊಬ್ಬ ರೋಲ್‍ಕಾಲ್ ಗಿರಾಕಿ, ಬ್ಲಾಕ್‍ಮೇಲರ್ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಹಾಗೇನಾದರೂ ನಾನು ಯಾರಿಗಾದ್ರು ಬ್ಲಾಕ್‍ಮೇಲ್ ಮಾಡಿದ್ರೆ ದಯವಿಟ್ಟು ಸಾಬೀತು ಮಾಡಿ. ಒಂದು ವೇಳೆ ನಾನು ಮಾಡಿರುವುದು ಸಾಬೀತಾದರೆ ರಾಷ್ಟ್ರಪತಿಗಳಿಗೆ ಪತ್ರಬರೆದು ಬಹಿರಂಗವಾಗಿ ಮೈಸೂರಿನ ಕಲಾಮಂದಿರದ ಮುಂದೆ ನಾನೇ ನೇಣಿಗೆ ಶರಣಾಗ್ತಿನಿ ಎಂದು ಲಕ್ಷ್ಮಣ್ ಸವಾಲು ಹಾಕಿದ್ದಾರೆ.

ಕೆಲದಿನಗಳ ಹಿಂದೆ ಕೊರೊನಾ ಹೆಸರಿನಲ್ಲಿ ರಾಜ್ಯಸರ್ಕಾರ 5000 ಕೋಟಿ ರೂ ಭ್ರಷ್ಟಾಚಾರವೆಸಗಿದೆ ಮತ್ತು ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದ್ದರು. ಅದಕ್ಕೆ ಪ್ರತಿಯಾಗಿ ಸಂಸದ ಪ್ರತಾಪ್ ಸಿಂಹ, ‘ಅವರೊಬ್ಬ ರೋಲ್‍ಕಾಲ್ ಗಿರಾಕಿ, ಬ್ಲಾಕ್‍ಮೆಲರ್’ ಎಂದು ಟೀಕಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಲಕ್ಷ್ಮಣ್, ‘ನನ್ನ ಮೇಲೆ ತನಿಖೆ ನಡೆಸಿ ಆರೋಪ ಸಾಬೀತುಪಡಿಸಿದರೆ ನಾನು ನೇಣಿಗೆ ಶರಣಾಗುತ್ತೇನೆ. ಆದರೆ ನಾನು ಮಾಡುವ ಆರೋಪಗಳು ಸಾಬೀತಾದರೆ ಪ್ರತಾಪ್ ಸಿಂಹ ತನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವರೇ’ ಎಂದು ಸವಾಲು ಹಾಕಿದ್ದಾರೆ.

“ಪ್ರತಾಪ್ ಸಿಂಹ ಒಬ್ಬ ಕಚ್ಚೆಹರುಕ, ಬಾಯಿ ಹರುಕ. ನೀವು ಸೈಟಿಗಾಗಿ ಮಡದಿಯನ್ನ ತಂಗಿ ಅಂತ ಹೇಳಿದ್ದೀರಿ. ಚುನಾವಣೆ ಸಂದರ್ಭದಲ್ಲಿ ನಿಮ್ಮ ಒಂದು ಆಡಿಯೋ ವೈರಲ್ ಆಗಿತ್ತು. ಅಂತಹ ನಾಲ್ಕು ಆಡಿಯೋ ನನ್ನ ಬಳಿ ಇದೆ. ನೀನು ಎಷ್ಟು ಹೆಣ್ಣುಮಕ್ಕಳನ್ನು ಹಾಳು ಮಾಡಿದ್ದೀಯಾ ಅಂತ ಗೊತ್ತಿದೆ. ಈಗಲೇ ನಿನ್ನ ಯೋಗ್ಯತೆ ಏನು ಅಂತ ಸಾಬೀತು ಮಾಡ್ತಿನಿ. ನಾನು ದಾಖಲೆಗಳನ್ನು ಕೋರ್ಟ್‍ಗೆ ನೀಡುತ್ತೇನೆ” ಎಂದು ಲಕ್ಷ್ಮಣ್ ಪ್ರತಾಪ್ ಸಿಂಹ ವಿರುದ್ಧ ಹರಿಹಾಯ್ದಿದ್ದಾರೆ.

“ಅವರು 10%ಗೆ ತಮ್ಮ ಎಂಪಿ ಅನುದಾನ ಮಾರಿಕೊಂಡಿದ್ದಾರೆ. ಇದಕ್ಕೂ ನನ್ನ ಬಳಿ ದಾಖಲೆಗಳು ಇದೆ. ಅವರೊಬ್ಬ ಸಂಸದನಾಗುವುದಕ್ಕಿಂತ ಬ್ಲೂ ಫಿಲ್ಮ್ ಹೀರೋ ಆಗಬೇಕಿತ್ತು” ಎಂದು ಅವರು ದಾಳಿ ನಡೆಸಿದ್ದಾರೆ.

ಈ ನನ್ನ ಆರೋಪಗಳು ಸುಳ್ಳು ಎನ್ನುವುದಾದರೆ ಪ್ರತಾಪ್ ಸಿಂಹರವರೆ ಕೋರ್ಟ್‌ಗೆ ಹೋಗಲಿ. ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಿ. ನಾನು ಕೋರ್ಟಿನಲ್ಲಿ ದಾಖಲೆ ಇಟ್ಟು ಹೋರಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಹಿಂದೆ ಪ್ರಕಾಶ್ ರೈ, ಪ್ರತಾಪ್ ಸಿಂಹ ವಿರುದ್ದ 1 ರೂ ಕೇಸ್ ಹಾಕಿದ್ದರು. ಕೇಸಿನಲ್ಲಿ ಸೋಲುತ್ತೇನೆ ಎಂದು ಗೊತ್ತಾದ ಕೂಡಲೇ ಓಡಿಹೋಗಿ ಅವರ ಕೈಕಾಲು ಹಿಡಿದು ಕೇಸ್ ವಾಪಸ್ ತೆಗೆಸಿದರು. ಅದೇ ರೀತಿ ನನ್ನ ಮೇಲೆಯೂ ಒತ್ತಡ ಹಾಕಬಹುದು. ಆದರೆ ನಾನು ಹೆದರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

ಚುನಾವಣಾ ಸಂದರ್ಭದ ಆ ಹುಡುಗಿ ಎಲ್ಲೋದ್ಲು? ಕೊಲೆ ಏನಾದ್ರು ಮಾಡಿಸಿಬಿಟ್ರಾ? ಎಂದು ಲಕ್ಷ್ಮಣ್ ಪ್ರತಾಪ್ ಸಿಂಹರವರಿಗೆ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಾಪ್ ಸಿಂಹ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಇನ್ನು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “482 ಕೆಪಿಎಸ್‌ಸಿ ಹುದ್ದೆಗಳನ್ನು ವಿಜಯೇಂದ್ರ ಮಾರಾಟ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಲ್ಲಿ 218 ಕೋಟಿ ರೂ ಅವ್ಯವಹಾರ ನಡೆದಿದೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...