Homeಕರ್ನಾಟಕಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪ

ಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪ

ಈ ನನ್ನ ಆರೋಪಗಳು ಸುಳ್ಳು ಎನ್ನುವುದಾದರೆ ಪ್ರತಾಪ್ ಸಿಂಹರವರೆ ಕೋರ್ಟ್‌ಗೆ ಹೋಗಲಿ. ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಿ. ನಾನು ಕೋರ್ಟಿನಲ್ಲಿ ದಾಖಲೆ ಇಟ್ಟು ಹೋರಾಡುತ್ತೇನೆ ಎಂದು ಲಕ್ಷ್ಮಣ್ ಹೇಳಿದ್ದಾರೆ.

- Advertisement -
- Advertisement -

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹರವರ ಭ್ರಷ್ಟಚಾರ, ವೈಯುಕ್ತಿಕ ಜೀವನದ ಬಗ್ಗೆ ನನಗೆ ಮಾಹಿತಿ ಇದೆ. ಅವರೊಬ್ಬ ಸಂಸರಾಗುವುದಕ್ಕಿಂತ ಒಬ್ಬ ಬ್ಲೂ ಫಿಲಂ ಹೀರೋ ಆಗಿದ್ದರೆ ಸರಿಯಿರುತ್ತಿತ್ತು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೊಬ್ಬ ರೋಲ್‍ಕಾಲ್ ಗಿರಾಕಿ, ಬ್ಲಾಕ್‍ಮೇಲರ್ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಹಾಗೇನಾದರೂ ನಾನು ಯಾರಿಗಾದ್ರು ಬ್ಲಾಕ್‍ಮೇಲ್ ಮಾಡಿದ್ರೆ ದಯವಿಟ್ಟು ಸಾಬೀತು ಮಾಡಿ. ಒಂದು ವೇಳೆ ನಾನು ಮಾಡಿರುವುದು ಸಾಬೀತಾದರೆ ರಾಷ್ಟ್ರಪತಿಗಳಿಗೆ ಪತ್ರಬರೆದು ಬಹಿರಂಗವಾಗಿ ಮೈಸೂರಿನ ಕಲಾಮಂದಿರದ ಮುಂದೆ ನಾನೇ ನೇಣಿಗೆ ಶರಣಾಗ್ತಿನಿ ಎಂದು ಲಕ್ಷ್ಮಣ್ ಸವಾಲು ಹಾಕಿದ್ದಾರೆ.

ಕೆಲದಿನಗಳ ಹಿಂದೆ ಕೊರೊನಾ ಹೆಸರಿನಲ್ಲಿ ರಾಜ್ಯಸರ್ಕಾರ 5000 ಕೋಟಿ ರೂ ಭ್ರಷ್ಟಾಚಾರವೆಸಗಿದೆ ಮತ್ತು ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದ್ದರು. ಅದಕ್ಕೆ ಪ್ರತಿಯಾಗಿ ಸಂಸದ ಪ್ರತಾಪ್ ಸಿಂಹ, ‘ಅವರೊಬ್ಬ ರೋಲ್‍ಕಾಲ್ ಗಿರಾಕಿ, ಬ್ಲಾಕ್‍ಮೆಲರ್’ ಎಂದು ಟೀಕಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಲಕ್ಷ್ಮಣ್, ‘ನನ್ನ ಮೇಲೆ ತನಿಖೆ ನಡೆಸಿ ಆರೋಪ ಸಾಬೀತುಪಡಿಸಿದರೆ ನಾನು ನೇಣಿಗೆ ಶರಣಾಗುತ್ತೇನೆ. ಆದರೆ ನಾನು ಮಾಡುವ ಆರೋಪಗಳು ಸಾಬೀತಾದರೆ ಪ್ರತಾಪ್ ಸಿಂಹ ತನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವರೇ’ ಎಂದು ಸವಾಲು ಹಾಕಿದ್ದಾರೆ.

“ಪ್ರತಾಪ್ ಸಿಂಹ ಒಬ್ಬ ಕಚ್ಚೆಹರುಕ, ಬಾಯಿ ಹರುಕ. ನೀವು ಸೈಟಿಗಾಗಿ ಮಡದಿಯನ್ನ ತಂಗಿ ಅಂತ ಹೇಳಿದ್ದೀರಿ. ಚುನಾವಣೆ ಸಂದರ್ಭದಲ್ಲಿ ನಿಮ್ಮ ಒಂದು ಆಡಿಯೋ ವೈರಲ್ ಆಗಿತ್ತು. ಅಂತಹ ನಾಲ್ಕು ಆಡಿಯೋ ನನ್ನ ಬಳಿ ಇದೆ. ನೀನು ಎಷ್ಟು ಹೆಣ್ಣುಮಕ್ಕಳನ್ನು ಹಾಳು ಮಾಡಿದ್ದೀಯಾ ಅಂತ ಗೊತ್ತಿದೆ. ಈಗಲೇ ನಿನ್ನ ಯೋಗ್ಯತೆ ಏನು ಅಂತ ಸಾಬೀತು ಮಾಡ್ತಿನಿ. ನಾನು ದಾಖಲೆಗಳನ್ನು ಕೋರ್ಟ್‍ಗೆ ನೀಡುತ್ತೇನೆ” ಎಂದು ಲಕ್ಷ್ಮಣ್ ಪ್ರತಾಪ್ ಸಿಂಹ ವಿರುದ್ಧ ಹರಿಹಾಯ್ದಿದ್ದಾರೆ.

“ಅವರು 10%ಗೆ ತಮ್ಮ ಎಂಪಿ ಅನುದಾನ ಮಾರಿಕೊಂಡಿದ್ದಾರೆ. ಇದಕ್ಕೂ ನನ್ನ ಬಳಿ ದಾಖಲೆಗಳು ಇದೆ. ಅವರೊಬ್ಬ ಸಂಸದನಾಗುವುದಕ್ಕಿಂತ ಬ್ಲೂ ಫಿಲ್ಮ್ ಹೀರೋ ಆಗಬೇಕಿತ್ತು” ಎಂದು ಅವರು ದಾಳಿ ನಡೆಸಿದ್ದಾರೆ.

ಈ ನನ್ನ ಆರೋಪಗಳು ಸುಳ್ಳು ಎನ್ನುವುದಾದರೆ ಪ್ರತಾಪ್ ಸಿಂಹರವರೆ ಕೋರ್ಟ್‌ಗೆ ಹೋಗಲಿ. ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಿ. ನಾನು ಕೋರ್ಟಿನಲ್ಲಿ ದಾಖಲೆ ಇಟ್ಟು ಹೋರಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಹಿಂದೆ ಪ್ರಕಾಶ್ ರೈ, ಪ್ರತಾಪ್ ಸಿಂಹ ವಿರುದ್ದ 1 ರೂ ಕೇಸ್ ಹಾಕಿದ್ದರು. ಕೇಸಿನಲ್ಲಿ ಸೋಲುತ್ತೇನೆ ಎಂದು ಗೊತ್ತಾದ ಕೂಡಲೇ ಓಡಿಹೋಗಿ ಅವರ ಕೈಕಾಲು ಹಿಡಿದು ಕೇಸ್ ವಾಪಸ್ ತೆಗೆಸಿದರು. ಅದೇ ರೀತಿ ನನ್ನ ಮೇಲೆಯೂ ಒತ್ತಡ ಹಾಕಬಹುದು. ಆದರೆ ನಾನು ಹೆದರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

ಚುನಾವಣಾ ಸಂದರ್ಭದ ಆ ಹುಡುಗಿ ಎಲ್ಲೋದ್ಲು? ಕೊಲೆ ಏನಾದ್ರು ಮಾಡಿಸಿಬಿಟ್ರಾ? ಎಂದು ಲಕ್ಷ್ಮಣ್ ಪ್ರತಾಪ್ ಸಿಂಹರವರಿಗೆ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಾಪ್ ಸಿಂಹ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಇನ್ನು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “482 ಕೆಪಿಎಸ್‌ಸಿ ಹುದ್ದೆಗಳನ್ನು ವಿಜಯೇಂದ್ರ ಮಾರಾಟ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಲ್ಲಿ 218 ಕೋಟಿ ರೂ ಅವ್ಯವಹಾರ ನಡೆದಿದೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...