Homeಕರ್ನಾಟಕಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪ

ಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪ

ಈ ನನ್ನ ಆರೋಪಗಳು ಸುಳ್ಳು ಎನ್ನುವುದಾದರೆ ಪ್ರತಾಪ್ ಸಿಂಹರವರೆ ಕೋರ್ಟ್‌ಗೆ ಹೋಗಲಿ. ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಿ. ನಾನು ಕೋರ್ಟಿನಲ್ಲಿ ದಾಖಲೆ ಇಟ್ಟು ಹೋರಾಡುತ್ತೇನೆ ಎಂದು ಲಕ್ಷ್ಮಣ್ ಹೇಳಿದ್ದಾರೆ.

- Advertisement -
- Advertisement -

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹರವರ ಭ್ರಷ್ಟಚಾರ, ವೈಯುಕ್ತಿಕ ಜೀವನದ ಬಗ್ಗೆ ನನಗೆ ಮಾಹಿತಿ ಇದೆ. ಅವರೊಬ್ಬ ಸಂಸರಾಗುವುದಕ್ಕಿಂತ ಒಬ್ಬ ಬ್ಲೂ ಫಿಲಂ ಹೀರೋ ಆಗಿದ್ದರೆ ಸರಿಯಿರುತ್ತಿತ್ತು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೊಬ್ಬ ರೋಲ್‍ಕಾಲ್ ಗಿರಾಕಿ, ಬ್ಲಾಕ್‍ಮೇಲರ್ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಹಾಗೇನಾದರೂ ನಾನು ಯಾರಿಗಾದ್ರು ಬ್ಲಾಕ್‍ಮೇಲ್ ಮಾಡಿದ್ರೆ ದಯವಿಟ್ಟು ಸಾಬೀತು ಮಾಡಿ. ಒಂದು ವೇಳೆ ನಾನು ಮಾಡಿರುವುದು ಸಾಬೀತಾದರೆ ರಾಷ್ಟ್ರಪತಿಗಳಿಗೆ ಪತ್ರಬರೆದು ಬಹಿರಂಗವಾಗಿ ಮೈಸೂರಿನ ಕಲಾಮಂದಿರದ ಮುಂದೆ ನಾನೇ ನೇಣಿಗೆ ಶರಣಾಗ್ತಿನಿ ಎಂದು ಲಕ್ಷ್ಮಣ್ ಸವಾಲು ಹಾಕಿದ್ದಾರೆ.

ಕೆಲದಿನಗಳ ಹಿಂದೆ ಕೊರೊನಾ ಹೆಸರಿನಲ್ಲಿ ರಾಜ್ಯಸರ್ಕಾರ 5000 ಕೋಟಿ ರೂ ಭ್ರಷ್ಟಾಚಾರವೆಸಗಿದೆ ಮತ್ತು ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದ್ದರು. ಅದಕ್ಕೆ ಪ್ರತಿಯಾಗಿ ಸಂಸದ ಪ್ರತಾಪ್ ಸಿಂಹ, ‘ಅವರೊಬ್ಬ ರೋಲ್‍ಕಾಲ್ ಗಿರಾಕಿ, ಬ್ಲಾಕ್‍ಮೆಲರ್’ ಎಂದು ಟೀಕಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಲಕ್ಷ್ಮಣ್, ‘ನನ್ನ ಮೇಲೆ ತನಿಖೆ ನಡೆಸಿ ಆರೋಪ ಸಾಬೀತುಪಡಿಸಿದರೆ ನಾನು ನೇಣಿಗೆ ಶರಣಾಗುತ್ತೇನೆ. ಆದರೆ ನಾನು ಮಾಡುವ ಆರೋಪಗಳು ಸಾಬೀತಾದರೆ ಪ್ರತಾಪ್ ಸಿಂಹ ತನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವರೇ’ ಎಂದು ಸವಾಲು ಹಾಕಿದ್ದಾರೆ.

“ಪ್ರತಾಪ್ ಸಿಂಹ ಒಬ್ಬ ಕಚ್ಚೆಹರುಕ, ಬಾಯಿ ಹರುಕ. ನೀವು ಸೈಟಿಗಾಗಿ ಮಡದಿಯನ್ನ ತಂಗಿ ಅಂತ ಹೇಳಿದ್ದೀರಿ. ಚುನಾವಣೆ ಸಂದರ್ಭದಲ್ಲಿ ನಿಮ್ಮ ಒಂದು ಆಡಿಯೋ ವೈರಲ್ ಆಗಿತ್ತು. ಅಂತಹ ನಾಲ್ಕು ಆಡಿಯೋ ನನ್ನ ಬಳಿ ಇದೆ. ನೀನು ಎಷ್ಟು ಹೆಣ್ಣುಮಕ್ಕಳನ್ನು ಹಾಳು ಮಾಡಿದ್ದೀಯಾ ಅಂತ ಗೊತ್ತಿದೆ. ಈಗಲೇ ನಿನ್ನ ಯೋಗ್ಯತೆ ಏನು ಅಂತ ಸಾಬೀತು ಮಾಡ್ತಿನಿ. ನಾನು ದಾಖಲೆಗಳನ್ನು ಕೋರ್ಟ್‍ಗೆ ನೀಡುತ್ತೇನೆ” ಎಂದು ಲಕ್ಷ್ಮಣ್ ಪ್ರತಾಪ್ ಸಿಂಹ ವಿರುದ್ಧ ಹರಿಹಾಯ್ದಿದ್ದಾರೆ.

“ಅವರು 10%ಗೆ ತಮ್ಮ ಎಂಪಿ ಅನುದಾನ ಮಾರಿಕೊಂಡಿದ್ದಾರೆ. ಇದಕ್ಕೂ ನನ್ನ ಬಳಿ ದಾಖಲೆಗಳು ಇದೆ. ಅವರೊಬ್ಬ ಸಂಸದನಾಗುವುದಕ್ಕಿಂತ ಬ್ಲೂ ಫಿಲ್ಮ್ ಹೀರೋ ಆಗಬೇಕಿತ್ತು” ಎಂದು ಅವರು ದಾಳಿ ನಡೆಸಿದ್ದಾರೆ.

ಈ ನನ್ನ ಆರೋಪಗಳು ಸುಳ್ಳು ಎನ್ನುವುದಾದರೆ ಪ್ರತಾಪ್ ಸಿಂಹರವರೆ ಕೋರ್ಟ್‌ಗೆ ಹೋಗಲಿ. ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಿ. ನಾನು ಕೋರ್ಟಿನಲ್ಲಿ ದಾಖಲೆ ಇಟ್ಟು ಹೋರಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಹಿಂದೆ ಪ್ರಕಾಶ್ ರೈ, ಪ್ರತಾಪ್ ಸಿಂಹ ವಿರುದ್ದ 1 ರೂ ಕೇಸ್ ಹಾಕಿದ್ದರು. ಕೇಸಿನಲ್ಲಿ ಸೋಲುತ್ತೇನೆ ಎಂದು ಗೊತ್ತಾದ ಕೂಡಲೇ ಓಡಿಹೋಗಿ ಅವರ ಕೈಕಾಲು ಹಿಡಿದು ಕೇಸ್ ವಾಪಸ್ ತೆಗೆಸಿದರು. ಅದೇ ರೀತಿ ನನ್ನ ಮೇಲೆಯೂ ಒತ್ತಡ ಹಾಕಬಹುದು. ಆದರೆ ನಾನು ಹೆದರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

ಚುನಾವಣಾ ಸಂದರ್ಭದ ಆ ಹುಡುಗಿ ಎಲ್ಲೋದ್ಲು? ಕೊಲೆ ಏನಾದ್ರು ಮಾಡಿಸಿಬಿಟ್ರಾ? ಎಂದು ಲಕ್ಷ್ಮಣ್ ಪ್ರತಾಪ್ ಸಿಂಹರವರಿಗೆ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಾಪ್ ಸಿಂಹ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಇನ್ನು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “482 ಕೆಪಿಎಸ್‌ಸಿ ಹುದ್ದೆಗಳನ್ನು ವಿಜಯೇಂದ್ರ ಮಾರಾಟ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಲ್ಲಿ 218 ಕೋಟಿ ರೂ ಅವ್ಯವಹಾರ ನಡೆದಿದೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....