Homeಕರ್ನಾಟಕ'ಹದ್ದಬಸ್ತಿನಲ್ಲಿ ಇರಿ' | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

- Advertisement -
- Advertisement -

ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ತೀವ್ರವಾಗಿ ಮುಸ್ಲಿಂ ದ್ವೇಷದ ಮಾತುಗಳನ್ನು ಆಡುತ್ತಾ ಪಕ್ಷದಲ್ಲಿ ಮುನ್ನಲೆಗೆ ಬರಲು ಪ್ರಯತ್ನಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮತ್ತೊಮ್ಮೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, “ಹಿಂದೂಗಳು ಕಲ್ಲುಗಳನ್ನು ಎತ್ತಿಕೊಂಡರೆ ಯಾವುದೇ ಮುಸಲ್ಮಾನರು ಉಳಿಯುವುದಿಲ್ಲ, ಆದ್ದರಿಂದ ಹದ್ದಬಸ್ತಿನಲ್ಲಿ ಇರಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷ ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಸಾಂಪ್ರದಾಯಿಕ ದಸರಾಕ್ಕೆ ಪರ್ಯಾಯವಾದ ಮಹಿಷ ದಸರಾ ಆಚರಣೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪುರಾಣಗಳಲ್ಲಿ ರಾಕ್ಷಸನಾಗಿ ಚಿತ್ರಿಸಲಾಗಿರುವ ಮಹಿಷ ಮೇಲ್ಜಾತಿ ಆರ್ಯರಿಂದ ಕೊಲ್ಲಲ್ಪಟ್ಟ ಬೌದ್ಧ ದೊರೆ ಎಂದು ಪ್ರತಿಪಾದಿಸಿ ಜನಪರ ಚಳುವಳಿಗಳು 2015 ರಿಂದ ಮಹಿಷ ದಸರ ಆಚರಿಸಿಕೊಂಡು ಬರುತ್ತಿವೆ. ಈ ಮೂಲಕ ಮಹಿಷನ ಸಾಂಸ್ಕೃತಿಕ ಇತಿಹಾಸವನ್ನು ನೆನಪಿಸುವ ಆಚರಣೆಯನ್ನು ಚಳುವಳಿಗಳು ಮಾಡುತ್ತಿವೆ. ಇದನ್ನು ಸಂಸದ ಪ್ರತಾಪ್ ಸಿಂಹ ತಾನು ಸಂಸದನಾಗಿದ್ದಾಗ ವಿರೋಧಿಸಿದ್ದರು.

ಅಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, “ನಾನು ಮುಸಲ್ಮಾನರಿಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇನೆ. ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಯಾವುದೇ ಮುಲ್ಲಾ, ಇಮಾಂ ಮಾಡುತ್ತಿಲ್ಲ. ಆದ್ದರಿಂದ ಇಡೀ ಮುಸ್ಲಿಂ ಸಮಾಜದ ಗುರಿಯಾಗಿ ಇಟ್ಟುಕೊಂಡೆ ಮಾತನಾಡುತ್ತಿದ್ದೇನೆ, ಮುಸಲ್ಮಾನರೆ, ಹಿಂದೂಗಳನ್ನು ನೀವು ಕಡಿಮೆ ಅಂದಾಜು ಮಾಡಿಕೊಳ್ಳಬೇಡಿ” ಎಂದು ಹೇಳಿದ್ದಾರೆ.

“ನ್ಯೂಕ್ಲಿಯರ್ ಬಾಂಬ್ ಮಾಡಿರುವ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡಲು ಬರುವುದಿಲ್ಲ ಎಂದು ತಿಳಿದುಕೊಳ್ಳಬೇಡಿ. ಬ್ಯಾಲೆಸ್ಟಿಕ್ ಮಿಸೈಲ್‌ಗಳನ್ನು ಮಾಡಿರುವ ಹಿಂದೂಗಳಿಗೆ ಕಲ್ಲಲ್ಲಿ ಬಿಸಾಕಲು ಬರುವುದಿಲ್ಲ ಎಂದುಕೊಳ್ಳಬೇಡಿ. ವಿಶ್ವದ ಸಾಫ್ಟ್‌ವೇರ್ ಉದ್ಯಮವನ್ನು ನಡೆಸುತ್ತಿರುವ ಹಿಂದೂಗಳಿಗೆ ನಿಮ್ಮ ಮೇಲೆ ಆಕ್ರಮಣ ಮಾಲಡು ಕೈಗೆ ಕಲ್ಲೆತ್ತಲು ಬರುವುದಿಲ್ಲ ಎಂದು ಭಾವಿಸಬೇಡಿ. ಚಂದ್ರನನ್ನು ನೀವು ಆರಾಧನೆ ಮಾಡುತ್ತೀರಿ. ಆದರೆ ಚಂದ್ರನ ಮೇಲೆ ನಾವು ನೌಕೆ ಇಳಿಸಿದ್ದೇವೆ… ನೀವು ಗುಜರಿಗಳು, ಟಾಂಗಾಗಳು ಮಾಡುವಂತಹ ಪೆಟ್ರೋಲ್ ಬಾಂಬ್ ತಯಾರು ಮಾಡಲು ಬರುವುದಿಲ್ಲ ಎಂದು ತಿಳಿಯಬೇಡಿ” ಎಂದು ಹೇಳಿದ್ದಾರೆ. ಹದ್ದಬಸ್ತಿನಲ್ಲಿ ಇರಿ

ಇದನ್ನೂಓದಿ:ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

“ನ್ಯೂಕ್ಲಿಯರ್‌ ಬಾಂಬ್ ಮಾಡಿದ ನಮಗೆ ಗುಜಿರಿ-ಟಾಂಗಾಗಳು ಮಾಡುವ ಪೆಟ್ರೋಲ್ ಬಾಂಬ್ ಮಾಡಲು ನಮಗೂ ಬರುತ್ತದೆ. ಆದರೆ ನಾನು ಈ ದೇಶದ ಶಾಂತಿ ಮತ್ತು ಸುರಕ್ಷತೆಗೋಸ್ಕರ ಸುಮ್ಮನೆ ಇದ್ದೇವೆ. ನಮ್ಮ ಮೌನ, ತಾಳ್ಮೆ ಮತ್ತು ಸೌಹಾರ್ಧ ಭಾವನೆಯನ್ನು ಪಕ್ಕಲುತನ ಎಂದು ತಿಳಿದುಕೊಂಡರೆ, ಒಬ್ಬೊಬ್ಬ ಹಿಂದೂ ಕೂಡಾ ಒಂದೊಂದು ಕೈಯ್ಯಲ್ಲಿ ಕಲ್ಲನ್ನು ಇಟ್ಟುಕೊಂಡರೆ ನಿಮಗೆ ಉಳಿಗಾಲ ಇರಲ್ಲ. ಇದನ್ನು ಅರ್ಥ ಮಾಡಿಕೊಂಡು ಎಚ್ಚರಿಕೆಯಿಂದ, ಗೌರವಯುತವಾಗಿ ಹಾಗೂ ಹದ್ದಬಸ್ತಿನಲ್ಲಿ ಇರುವುದನ್ನು ಕಲಿತುಕೊಳ್ಳಬೇಕು” ಎಂದು ಹೇಳಿದ್ದಾರೆ.

“ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಧಾರ್ಮಿಕ ಮುಂಖಡರು ಮತ್ತು ಬುದ್ದಿಜೀವಿಗಳು ಮಾಡಿಲ್ಲವೆಂದರೆ, ಇಡೀ ಸಮಾಜ ಅವರು ಮಾಡುವ ಕೆಟ್ಟ ಹೆಸರನ್ನು ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಮೌನವಾಗಿ ನೀವು ಕೂಡಾ ಹೊಣೆಯಾಗಿರುತ್ತೀರಿ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮಹಿಷ ದಸರಾ ಆಚರಣೆಯನ್ನು ಟೀಕಿಸಿದ ಅವರು, ಈ ಹಬ್ಬವು “ತಾಯಿ ಚಾಮುಂಡಿ” ಯನ್ನು ಅಗೌರವಿಸುತ್ತದೆ ಮತ್ತು ಹಿಂದೂ ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಮಹಿಷನಲ್ಲಿ ನಂಬಿಕೆ ಇರುವವರು ಮನೆಯಲ್ಲಿ ಪೂಜೆ ಸಲ್ಲಿಸಬೇಕು ಎಂದು ಹೇಳಿದ ಅವರು, ಮಹಿಷ ದಸರಾ ಹೆಸರಿನಲ್ಲಿ ಒಡಕು ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮುಂದುವರಿದರೆ ಚಾಮುಂಡಿ ಭಕ್ತರು ಚಾಮುಂಡಿ ಚಲೋ ಹಮ್ಮಿಕೊಂಡು ಆಚರಣೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೊ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...