Homeಕರ್ನಾಟಕ'ಹದ್ದಬಸ್ತಿನಲ್ಲಿ ಇರಿ' | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

- Advertisement -
- Advertisement -

ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ತೀವ್ರವಾಗಿ ಮುಸ್ಲಿಂ ದ್ವೇಷದ ಮಾತುಗಳನ್ನು ಆಡುತ್ತಾ ಪಕ್ಷದಲ್ಲಿ ಮುನ್ನಲೆಗೆ ಬರಲು ಪ್ರಯತ್ನಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮತ್ತೊಮ್ಮೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, “ಹಿಂದೂಗಳು ಕಲ್ಲುಗಳನ್ನು ಎತ್ತಿಕೊಂಡರೆ ಯಾವುದೇ ಮುಸಲ್ಮಾನರು ಉಳಿಯುವುದಿಲ್ಲ, ಆದ್ದರಿಂದ ಹದ್ದಬಸ್ತಿನಲ್ಲಿ ಇರಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷ ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಸಾಂಪ್ರದಾಯಿಕ ದಸರಾಕ್ಕೆ ಪರ್ಯಾಯವಾದ ಮಹಿಷ ದಸರಾ ಆಚರಣೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪುರಾಣಗಳಲ್ಲಿ ರಾಕ್ಷಸನಾಗಿ ಚಿತ್ರಿಸಲಾಗಿರುವ ಮಹಿಷ ಮೇಲ್ಜಾತಿ ಆರ್ಯರಿಂದ ಕೊಲ್ಲಲ್ಪಟ್ಟ ಬೌದ್ಧ ದೊರೆ ಎಂದು ಪ್ರತಿಪಾದಿಸಿ ಜನಪರ ಚಳುವಳಿಗಳು 2015 ರಿಂದ ಮಹಿಷ ದಸರ ಆಚರಿಸಿಕೊಂಡು ಬರುತ್ತಿವೆ. ಈ ಮೂಲಕ ಮಹಿಷನ ಸಾಂಸ್ಕೃತಿಕ ಇತಿಹಾಸವನ್ನು ನೆನಪಿಸುವ ಆಚರಣೆಯನ್ನು ಚಳುವಳಿಗಳು ಮಾಡುತ್ತಿವೆ. ಇದನ್ನು ಸಂಸದ ಪ್ರತಾಪ್ ಸಿಂಹ ತಾನು ಸಂಸದನಾಗಿದ್ದಾಗ ವಿರೋಧಿಸಿದ್ದರು.

ಅಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, “ನಾನು ಮುಸಲ್ಮಾನರಿಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇನೆ. ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಯಾವುದೇ ಮುಲ್ಲಾ, ಇಮಾಂ ಮಾಡುತ್ತಿಲ್ಲ. ಆದ್ದರಿಂದ ಇಡೀ ಮುಸ್ಲಿಂ ಸಮಾಜದ ಗುರಿಯಾಗಿ ಇಟ್ಟುಕೊಂಡೆ ಮಾತನಾಡುತ್ತಿದ್ದೇನೆ, ಮುಸಲ್ಮಾನರೆ, ಹಿಂದೂಗಳನ್ನು ನೀವು ಕಡಿಮೆ ಅಂದಾಜು ಮಾಡಿಕೊಳ್ಳಬೇಡಿ” ಎಂದು ಹೇಳಿದ್ದಾರೆ.

“ನ್ಯೂಕ್ಲಿಯರ್ ಬಾಂಬ್ ಮಾಡಿರುವ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡಲು ಬರುವುದಿಲ್ಲ ಎಂದು ತಿಳಿದುಕೊಳ್ಳಬೇಡಿ. ಬ್ಯಾಲೆಸ್ಟಿಕ್ ಮಿಸೈಲ್‌ಗಳನ್ನು ಮಾಡಿರುವ ಹಿಂದೂಗಳಿಗೆ ಕಲ್ಲಲ್ಲಿ ಬಿಸಾಕಲು ಬರುವುದಿಲ್ಲ ಎಂದುಕೊಳ್ಳಬೇಡಿ. ವಿಶ್ವದ ಸಾಫ್ಟ್‌ವೇರ್ ಉದ್ಯಮವನ್ನು ನಡೆಸುತ್ತಿರುವ ಹಿಂದೂಗಳಿಗೆ ನಿಮ್ಮ ಮೇಲೆ ಆಕ್ರಮಣ ಮಾಲಡು ಕೈಗೆ ಕಲ್ಲೆತ್ತಲು ಬರುವುದಿಲ್ಲ ಎಂದು ಭಾವಿಸಬೇಡಿ. ಚಂದ್ರನನ್ನು ನೀವು ಆರಾಧನೆ ಮಾಡುತ್ತೀರಿ. ಆದರೆ ಚಂದ್ರನ ಮೇಲೆ ನಾವು ನೌಕೆ ಇಳಿಸಿದ್ದೇವೆ… ನೀವು ಗುಜರಿಗಳು, ಟಾಂಗಾಗಳು ಮಾಡುವಂತಹ ಪೆಟ್ರೋಲ್ ಬಾಂಬ್ ತಯಾರು ಮಾಡಲು ಬರುವುದಿಲ್ಲ ಎಂದು ತಿಳಿಯಬೇಡಿ” ಎಂದು ಹೇಳಿದ್ದಾರೆ. ಹದ್ದಬಸ್ತಿನಲ್ಲಿ ಇರಿ

ಇದನ್ನೂಓದಿ:ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

“ನ್ಯೂಕ್ಲಿಯರ್‌ ಬಾಂಬ್ ಮಾಡಿದ ನಮಗೆ ಗುಜಿರಿ-ಟಾಂಗಾಗಳು ಮಾಡುವ ಪೆಟ್ರೋಲ್ ಬಾಂಬ್ ಮಾಡಲು ನಮಗೂ ಬರುತ್ತದೆ. ಆದರೆ ನಾನು ಈ ದೇಶದ ಶಾಂತಿ ಮತ್ತು ಸುರಕ್ಷತೆಗೋಸ್ಕರ ಸುಮ್ಮನೆ ಇದ್ದೇವೆ. ನಮ್ಮ ಮೌನ, ತಾಳ್ಮೆ ಮತ್ತು ಸೌಹಾರ್ಧ ಭಾವನೆಯನ್ನು ಪಕ್ಕಲುತನ ಎಂದು ತಿಳಿದುಕೊಂಡರೆ, ಒಬ್ಬೊಬ್ಬ ಹಿಂದೂ ಕೂಡಾ ಒಂದೊಂದು ಕೈಯ್ಯಲ್ಲಿ ಕಲ್ಲನ್ನು ಇಟ್ಟುಕೊಂಡರೆ ನಿಮಗೆ ಉಳಿಗಾಲ ಇರಲ್ಲ. ಇದನ್ನು ಅರ್ಥ ಮಾಡಿಕೊಂಡು ಎಚ್ಚರಿಕೆಯಿಂದ, ಗೌರವಯುತವಾಗಿ ಹಾಗೂ ಹದ್ದಬಸ್ತಿನಲ್ಲಿ ಇರುವುದನ್ನು ಕಲಿತುಕೊಳ್ಳಬೇಕು” ಎಂದು ಹೇಳಿದ್ದಾರೆ.

“ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಧಾರ್ಮಿಕ ಮುಂಖಡರು ಮತ್ತು ಬುದ್ದಿಜೀವಿಗಳು ಮಾಡಿಲ್ಲವೆಂದರೆ, ಇಡೀ ಸಮಾಜ ಅವರು ಮಾಡುವ ಕೆಟ್ಟ ಹೆಸರನ್ನು ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಮೌನವಾಗಿ ನೀವು ಕೂಡಾ ಹೊಣೆಯಾಗಿರುತ್ತೀರಿ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮಹಿಷ ದಸರಾ ಆಚರಣೆಯನ್ನು ಟೀಕಿಸಿದ ಅವರು, ಈ ಹಬ್ಬವು “ತಾಯಿ ಚಾಮುಂಡಿ” ಯನ್ನು ಅಗೌರವಿಸುತ್ತದೆ ಮತ್ತು ಹಿಂದೂ ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಮಹಿಷನಲ್ಲಿ ನಂಬಿಕೆ ಇರುವವರು ಮನೆಯಲ್ಲಿ ಪೂಜೆ ಸಲ್ಲಿಸಬೇಕು ಎಂದು ಹೇಳಿದ ಅವರು, ಮಹಿಷ ದಸರಾ ಹೆಸರಿನಲ್ಲಿ ಒಡಕು ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮುಂದುವರಿದರೆ ಚಾಮುಂಡಿ ಭಕ್ತರು ಚಾಮುಂಡಿ ಚಲೋ ಹಮ್ಮಿಕೊಂಡು ಆಚರಣೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೊ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...