Homeಕರ್ನಾಟಕ'ಹದ್ದಬಸ್ತಿನಲ್ಲಿ ಇರಿ' | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

- Advertisement -
- Advertisement -

ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ತೀವ್ರವಾಗಿ ಮುಸ್ಲಿಂ ದ್ವೇಷದ ಮಾತುಗಳನ್ನು ಆಡುತ್ತಾ ಪಕ್ಷದಲ್ಲಿ ಮುನ್ನಲೆಗೆ ಬರಲು ಪ್ರಯತ್ನಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮತ್ತೊಮ್ಮೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, “ಹಿಂದೂಗಳು ಕಲ್ಲುಗಳನ್ನು ಎತ್ತಿಕೊಂಡರೆ ಯಾವುದೇ ಮುಸಲ್ಮಾನರು ಉಳಿಯುವುದಿಲ್ಲ, ಆದ್ದರಿಂದ ಹದ್ದಬಸ್ತಿನಲ್ಲಿ ಇರಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷ ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಸಾಂಪ್ರದಾಯಿಕ ದಸರಾಕ್ಕೆ ಪರ್ಯಾಯವಾದ ಮಹಿಷ ದಸರಾ ಆಚರಣೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪುರಾಣಗಳಲ್ಲಿ ರಾಕ್ಷಸನಾಗಿ ಚಿತ್ರಿಸಲಾಗಿರುವ ಮಹಿಷ ಮೇಲ್ಜಾತಿ ಆರ್ಯರಿಂದ ಕೊಲ್ಲಲ್ಪಟ್ಟ ಬೌದ್ಧ ದೊರೆ ಎಂದು ಪ್ರತಿಪಾದಿಸಿ ಜನಪರ ಚಳುವಳಿಗಳು 2015 ರಿಂದ ಮಹಿಷ ದಸರ ಆಚರಿಸಿಕೊಂಡು ಬರುತ್ತಿವೆ. ಈ ಮೂಲಕ ಮಹಿಷನ ಸಾಂಸ್ಕೃತಿಕ ಇತಿಹಾಸವನ್ನು ನೆನಪಿಸುವ ಆಚರಣೆಯನ್ನು ಚಳುವಳಿಗಳು ಮಾಡುತ್ತಿವೆ. ಇದನ್ನು ಸಂಸದ ಪ್ರತಾಪ್ ಸಿಂಹ ತಾನು ಸಂಸದನಾಗಿದ್ದಾಗ ವಿರೋಧಿಸಿದ್ದರು.

ಅಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, “ನಾನು ಮುಸಲ್ಮಾನರಿಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇನೆ. ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಯಾವುದೇ ಮುಲ್ಲಾ, ಇಮಾಂ ಮಾಡುತ್ತಿಲ್ಲ. ಆದ್ದರಿಂದ ಇಡೀ ಮುಸ್ಲಿಂ ಸಮಾಜದ ಗುರಿಯಾಗಿ ಇಟ್ಟುಕೊಂಡೆ ಮಾತನಾಡುತ್ತಿದ್ದೇನೆ, ಮುಸಲ್ಮಾನರೆ, ಹಿಂದೂಗಳನ್ನು ನೀವು ಕಡಿಮೆ ಅಂದಾಜು ಮಾಡಿಕೊಳ್ಳಬೇಡಿ” ಎಂದು ಹೇಳಿದ್ದಾರೆ.

“ನ್ಯೂಕ್ಲಿಯರ್ ಬಾಂಬ್ ಮಾಡಿರುವ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡಲು ಬರುವುದಿಲ್ಲ ಎಂದು ತಿಳಿದುಕೊಳ್ಳಬೇಡಿ. ಬ್ಯಾಲೆಸ್ಟಿಕ್ ಮಿಸೈಲ್‌ಗಳನ್ನು ಮಾಡಿರುವ ಹಿಂದೂಗಳಿಗೆ ಕಲ್ಲಲ್ಲಿ ಬಿಸಾಕಲು ಬರುವುದಿಲ್ಲ ಎಂದುಕೊಳ್ಳಬೇಡಿ. ವಿಶ್ವದ ಸಾಫ್ಟ್‌ವೇರ್ ಉದ್ಯಮವನ್ನು ನಡೆಸುತ್ತಿರುವ ಹಿಂದೂಗಳಿಗೆ ನಿಮ್ಮ ಮೇಲೆ ಆಕ್ರಮಣ ಮಾಲಡು ಕೈಗೆ ಕಲ್ಲೆತ್ತಲು ಬರುವುದಿಲ್ಲ ಎಂದು ಭಾವಿಸಬೇಡಿ. ಚಂದ್ರನನ್ನು ನೀವು ಆರಾಧನೆ ಮಾಡುತ್ತೀರಿ. ಆದರೆ ಚಂದ್ರನ ಮೇಲೆ ನಾವು ನೌಕೆ ಇಳಿಸಿದ್ದೇವೆ… ನೀವು ಗುಜರಿಗಳು, ಟಾಂಗಾಗಳು ಮಾಡುವಂತಹ ಪೆಟ್ರೋಲ್ ಬಾಂಬ್ ತಯಾರು ಮಾಡಲು ಬರುವುದಿಲ್ಲ ಎಂದು ತಿಳಿಯಬೇಡಿ” ಎಂದು ಹೇಳಿದ್ದಾರೆ. ಹದ್ದಬಸ್ತಿನಲ್ಲಿ ಇರಿ

ಇದನ್ನೂಓದಿ:ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

“ನ್ಯೂಕ್ಲಿಯರ್‌ ಬಾಂಬ್ ಮಾಡಿದ ನಮಗೆ ಗುಜಿರಿ-ಟಾಂಗಾಗಳು ಮಾಡುವ ಪೆಟ್ರೋಲ್ ಬಾಂಬ್ ಮಾಡಲು ನಮಗೂ ಬರುತ್ತದೆ. ಆದರೆ ನಾನು ಈ ದೇಶದ ಶಾಂತಿ ಮತ್ತು ಸುರಕ್ಷತೆಗೋಸ್ಕರ ಸುಮ್ಮನೆ ಇದ್ದೇವೆ. ನಮ್ಮ ಮೌನ, ತಾಳ್ಮೆ ಮತ್ತು ಸೌಹಾರ್ಧ ಭಾವನೆಯನ್ನು ಪಕ್ಕಲುತನ ಎಂದು ತಿಳಿದುಕೊಂಡರೆ, ಒಬ್ಬೊಬ್ಬ ಹಿಂದೂ ಕೂಡಾ ಒಂದೊಂದು ಕೈಯ್ಯಲ್ಲಿ ಕಲ್ಲನ್ನು ಇಟ್ಟುಕೊಂಡರೆ ನಿಮಗೆ ಉಳಿಗಾಲ ಇರಲ್ಲ. ಇದನ್ನು ಅರ್ಥ ಮಾಡಿಕೊಂಡು ಎಚ್ಚರಿಕೆಯಿಂದ, ಗೌರವಯುತವಾಗಿ ಹಾಗೂ ಹದ್ದಬಸ್ತಿನಲ್ಲಿ ಇರುವುದನ್ನು ಕಲಿತುಕೊಳ್ಳಬೇಕು” ಎಂದು ಹೇಳಿದ್ದಾರೆ.

“ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಧಾರ್ಮಿಕ ಮುಂಖಡರು ಮತ್ತು ಬುದ್ದಿಜೀವಿಗಳು ಮಾಡಿಲ್ಲವೆಂದರೆ, ಇಡೀ ಸಮಾಜ ಅವರು ಮಾಡುವ ಕೆಟ್ಟ ಹೆಸರನ್ನು ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಮೌನವಾಗಿ ನೀವು ಕೂಡಾ ಹೊಣೆಯಾಗಿರುತ್ತೀರಿ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮಹಿಷ ದಸರಾ ಆಚರಣೆಯನ್ನು ಟೀಕಿಸಿದ ಅವರು, ಈ ಹಬ್ಬವು “ತಾಯಿ ಚಾಮುಂಡಿ” ಯನ್ನು ಅಗೌರವಿಸುತ್ತದೆ ಮತ್ತು ಹಿಂದೂ ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಮಹಿಷನಲ್ಲಿ ನಂಬಿಕೆ ಇರುವವರು ಮನೆಯಲ್ಲಿ ಪೂಜೆ ಸಲ್ಲಿಸಬೇಕು ಎಂದು ಹೇಳಿದ ಅವರು, ಮಹಿಷ ದಸರಾ ಹೆಸರಿನಲ್ಲಿ ಒಡಕು ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮುಂದುವರಿದರೆ ಚಾಮುಂಡಿ ಭಕ್ತರು ಚಾಮುಂಡಿ ಚಲೋ ಹಮ್ಮಿಕೊಂಡು ಆಚರಣೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೊ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...