Homeಕರ್ನಾಟಕ'ಹದ್ದಬಸ್ತಿನಲ್ಲಿ ಇರಿ' | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

- Advertisement -
- Advertisement -

ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ತೀವ್ರವಾಗಿ ಮುಸ್ಲಿಂ ದ್ವೇಷದ ಮಾತುಗಳನ್ನು ಆಡುತ್ತಾ ಪಕ್ಷದಲ್ಲಿ ಮುನ್ನಲೆಗೆ ಬರಲು ಪ್ರಯತ್ನಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮತ್ತೊಮ್ಮೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, “ಹಿಂದೂಗಳು ಕಲ್ಲುಗಳನ್ನು ಎತ್ತಿಕೊಂಡರೆ ಯಾವುದೇ ಮುಸಲ್ಮಾನರು ಉಳಿಯುವುದಿಲ್ಲ, ಆದ್ದರಿಂದ ಹದ್ದಬಸ್ತಿನಲ್ಲಿ ಇರಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷ ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಸಾಂಪ್ರದಾಯಿಕ ದಸರಾಕ್ಕೆ ಪರ್ಯಾಯವಾದ ಮಹಿಷ ದಸರಾ ಆಚರಣೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪುರಾಣಗಳಲ್ಲಿ ರಾಕ್ಷಸನಾಗಿ ಚಿತ್ರಿಸಲಾಗಿರುವ ಮಹಿಷ ಮೇಲ್ಜಾತಿ ಆರ್ಯರಿಂದ ಕೊಲ್ಲಲ್ಪಟ್ಟ ಬೌದ್ಧ ದೊರೆ ಎಂದು ಪ್ರತಿಪಾದಿಸಿ ಜನಪರ ಚಳುವಳಿಗಳು 2015 ರಿಂದ ಮಹಿಷ ದಸರ ಆಚರಿಸಿಕೊಂಡು ಬರುತ್ತಿವೆ. ಈ ಮೂಲಕ ಮಹಿಷನ ಸಾಂಸ್ಕೃತಿಕ ಇತಿಹಾಸವನ್ನು ನೆನಪಿಸುವ ಆಚರಣೆಯನ್ನು ಚಳುವಳಿಗಳು ಮಾಡುತ್ತಿವೆ. ಇದನ್ನು ಸಂಸದ ಪ್ರತಾಪ್ ಸಿಂಹ ತಾನು ಸಂಸದನಾಗಿದ್ದಾಗ ವಿರೋಧಿಸಿದ್ದರು.

ಅಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, “ನಾನು ಮುಸಲ್ಮಾನರಿಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇನೆ. ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಯಾವುದೇ ಮುಲ್ಲಾ, ಇಮಾಂ ಮಾಡುತ್ತಿಲ್ಲ. ಆದ್ದರಿಂದ ಇಡೀ ಮುಸ್ಲಿಂ ಸಮಾಜದ ಗುರಿಯಾಗಿ ಇಟ್ಟುಕೊಂಡೆ ಮಾತನಾಡುತ್ತಿದ್ದೇನೆ, ಮುಸಲ್ಮಾನರೆ, ಹಿಂದೂಗಳನ್ನು ನೀವು ಕಡಿಮೆ ಅಂದಾಜು ಮಾಡಿಕೊಳ್ಳಬೇಡಿ” ಎಂದು ಹೇಳಿದ್ದಾರೆ.

“ನ್ಯೂಕ್ಲಿಯರ್ ಬಾಂಬ್ ಮಾಡಿರುವ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡಲು ಬರುವುದಿಲ್ಲ ಎಂದು ತಿಳಿದುಕೊಳ್ಳಬೇಡಿ. ಬ್ಯಾಲೆಸ್ಟಿಕ್ ಮಿಸೈಲ್‌ಗಳನ್ನು ಮಾಡಿರುವ ಹಿಂದೂಗಳಿಗೆ ಕಲ್ಲಲ್ಲಿ ಬಿಸಾಕಲು ಬರುವುದಿಲ್ಲ ಎಂದುಕೊಳ್ಳಬೇಡಿ. ವಿಶ್ವದ ಸಾಫ್ಟ್‌ವೇರ್ ಉದ್ಯಮವನ್ನು ನಡೆಸುತ್ತಿರುವ ಹಿಂದೂಗಳಿಗೆ ನಿಮ್ಮ ಮೇಲೆ ಆಕ್ರಮಣ ಮಾಲಡು ಕೈಗೆ ಕಲ್ಲೆತ್ತಲು ಬರುವುದಿಲ್ಲ ಎಂದು ಭಾವಿಸಬೇಡಿ. ಚಂದ್ರನನ್ನು ನೀವು ಆರಾಧನೆ ಮಾಡುತ್ತೀರಿ. ಆದರೆ ಚಂದ್ರನ ಮೇಲೆ ನಾವು ನೌಕೆ ಇಳಿಸಿದ್ದೇವೆ… ನೀವು ಗುಜರಿಗಳು, ಟಾಂಗಾಗಳು ಮಾಡುವಂತಹ ಪೆಟ್ರೋಲ್ ಬಾಂಬ್ ತಯಾರು ಮಾಡಲು ಬರುವುದಿಲ್ಲ ಎಂದು ತಿಳಿಯಬೇಡಿ” ಎಂದು ಹೇಳಿದ್ದಾರೆ. ಹದ್ದಬಸ್ತಿನಲ್ಲಿ ಇರಿ

ಇದನ್ನೂಓದಿ:ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

“ನ್ಯೂಕ್ಲಿಯರ್‌ ಬಾಂಬ್ ಮಾಡಿದ ನಮಗೆ ಗುಜಿರಿ-ಟಾಂಗಾಗಳು ಮಾಡುವ ಪೆಟ್ರೋಲ್ ಬಾಂಬ್ ಮಾಡಲು ನಮಗೂ ಬರುತ್ತದೆ. ಆದರೆ ನಾನು ಈ ದೇಶದ ಶಾಂತಿ ಮತ್ತು ಸುರಕ್ಷತೆಗೋಸ್ಕರ ಸುಮ್ಮನೆ ಇದ್ದೇವೆ. ನಮ್ಮ ಮೌನ, ತಾಳ್ಮೆ ಮತ್ತು ಸೌಹಾರ್ಧ ಭಾವನೆಯನ್ನು ಪಕ್ಕಲುತನ ಎಂದು ತಿಳಿದುಕೊಂಡರೆ, ಒಬ್ಬೊಬ್ಬ ಹಿಂದೂ ಕೂಡಾ ಒಂದೊಂದು ಕೈಯ್ಯಲ್ಲಿ ಕಲ್ಲನ್ನು ಇಟ್ಟುಕೊಂಡರೆ ನಿಮಗೆ ಉಳಿಗಾಲ ಇರಲ್ಲ. ಇದನ್ನು ಅರ್ಥ ಮಾಡಿಕೊಂಡು ಎಚ್ಚರಿಕೆಯಿಂದ, ಗೌರವಯುತವಾಗಿ ಹಾಗೂ ಹದ್ದಬಸ್ತಿನಲ್ಲಿ ಇರುವುದನ್ನು ಕಲಿತುಕೊಳ್ಳಬೇಕು” ಎಂದು ಹೇಳಿದ್ದಾರೆ.

“ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಧಾರ್ಮಿಕ ಮುಂಖಡರು ಮತ್ತು ಬುದ್ದಿಜೀವಿಗಳು ಮಾಡಿಲ್ಲವೆಂದರೆ, ಇಡೀ ಸಮಾಜ ಅವರು ಮಾಡುವ ಕೆಟ್ಟ ಹೆಸರನ್ನು ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಮೌನವಾಗಿ ನೀವು ಕೂಡಾ ಹೊಣೆಯಾಗಿರುತ್ತೀರಿ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮಹಿಷ ದಸರಾ ಆಚರಣೆಯನ್ನು ಟೀಕಿಸಿದ ಅವರು, ಈ ಹಬ್ಬವು “ತಾಯಿ ಚಾಮುಂಡಿ” ಯನ್ನು ಅಗೌರವಿಸುತ್ತದೆ ಮತ್ತು ಹಿಂದೂ ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಮಹಿಷನಲ್ಲಿ ನಂಬಿಕೆ ಇರುವವರು ಮನೆಯಲ್ಲಿ ಪೂಜೆ ಸಲ್ಲಿಸಬೇಕು ಎಂದು ಹೇಳಿದ ಅವರು, ಮಹಿಷ ದಸರಾ ಹೆಸರಿನಲ್ಲಿ ಒಡಕು ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮುಂದುವರಿದರೆ ಚಾಮುಂಡಿ ಭಕ್ತರು ಚಾಮುಂಡಿ ಚಲೋ ಹಮ್ಮಿಕೊಂಡು ಆಚರಣೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೊ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...