Homeಕರ್ನಾಟಕ'ಹದ್ದಬಸ್ತಿನಲ್ಲಿ ಇರಿ' | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

- Advertisement -
- Advertisement -

ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ತೀವ್ರವಾಗಿ ಮುಸ್ಲಿಂ ದ್ವೇಷದ ಮಾತುಗಳನ್ನು ಆಡುತ್ತಾ ಪಕ್ಷದಲ್ಲಿ ಮುನ್ನಲೆಗೆ ಬರಲು ಪ್ರಯತ್ನಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮತ್ತೊಮ್ಮೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, “ಹಿಂದೂಗಳು ಕಲ್ಲುಗಳನ್ನು ಎತ್ತಿಕೊಂಡರೆ ಯಾವುದೇ ಮುಸಲ್ಮಾನರು ಉಳಿಯುವುದಿಲ್ಲ, ಆದ್ದರಿಂದ ಹದ್ದಬಸ್ತಿನಲ್ಲಿ ಇರಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷ ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಸಾಂಪ್ರದಾಯಿಕ ದಸರಾಕ್ಕೆ ಪರ್ಯಾಯವಾದ ಮಹಿಷ ದಸರಾ ಆಚರಣೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪುರಾಣಗಳಲ್ಲಿ ರಾಕ್ಷಸನಾಗಿ ಚಿತ್ರಿಸಲಾಗಿರುವ ಮಹಿಷ ಮೇಲ್ಜಾತಿ ಆರ್ಯರಿಂದ ಕೊಲ್ಲಲ್ಪಟ್ಟ ಬೌದ್ಧ ದೊರೆ ಎಂದು ಪ್ರತಿಪಾದಿಸಿ ಜನಪರ ಚಳುವಳಿಗಳು 2015 ರಿಂದ ಮಹಿಷ ದಸರ ಆಚರಿಸಿಕೊಂಡು ಬರುತ್ತಿವೆ. ಈ ಮೂಲಕ ಮಹಿಷನ ಸಾಂಸ್ಕೃತಿಕ ಇತಿಹಾಸವನ್ನು ನೆನಪಿಸುವ ಆಚರಣೆಯನ್ನು ಚಳುವಳಿಗಳು ಮಾಡುತ್ತಿವೆ. ಇದನ್ನು ಸಂಸದ ಪ್ರತಾಪ್ ಸಿಂಹ ತಾನು ಸಂಸದನಾಗಿದ್ದಾಗ ವಿರೋಧಿಸಿದ್ದರು.

ಅಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, “ನಾನು ಮುಸಲ್ಮಾನರಿಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇನೆ. ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಯಾವುದೇ ಮುಲ್ಲಾ, ಇಮಾಂ ಮಾಡುತ್ತಿಲ್ಲ. ಆದ್ದರಿಂದ ಇಡೀ ಮುಸ್ಲಿಂ ಸಮಾಜದ ಗುರಿಯಾಗಿ ಇಟ್ಟುಕೊಂಡೆ ಮಾತನಾಡುತ್ತಿದ್ದೇನೆ, ಮುಸಲ್ಮಾನರೆ, ಹಿಂದೂಗಳನ್ನು ನೀವು ಕಡಿಮೆ ಅಂದಾಜು ಮಾಡಿಕೊಳ್ಳಬೇಡಿ” ಎಂದು ಹೇಳಿದ್ದಾರೆ.

“ನ್ಯೂಕ್ಲಿಯರ್ ಬಾಂಬ್ ಮಾಡಿರುವ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡಲು ಬರುವುದಿಲ್ಲ ಎಂದು ತಿಳಿದುಕೊಳ್ಳಬೇಡಿ. ಬ್ಯಾಲೆಸ್ಟಿಕ್ ಮಿಸೈಲ್‌ಗಳನ್ನು ಮಾಡಿರುವ ಹಿಂದೂಗಳಿಗೆ ಕಲ್ಲಲ್ಲಿ ಬಿಸಾಕಲು ಬರುವುದಿಲ್ಲ ಎಂದುಕೊಳ್ಳಬೇಡಿ. ವಿಶ್ವದ ಸಾಫ್ಟ್‌ವೇರ್ ಉದ್ಯಮವನ್ನು ನಡೆಸುತ್ತಿರುವ ಹಿಂದೂಗಳಿಗೆ ನಿಮ್ಮ ಮೇಲೆ ಆಕ್ರಮಣ ಮಾಲಡು ಕೈಗೆ ಕಲ್ಲೆತ್ತಲು ಬರುವುದಿಲ್ಲ ಎಂದು ಭಾವಿಸಬೇಡಿ. ಚಂದ್ರನನ್ನು ನೀವು ಆರಾಧನೆ ಮಾಡುತ್ತೀರಿ. ಆದರೆ ಚಂದ್ರನ ಮೇಲೆ ನಾವು ನೌಕೆ ಇಳಿಸಿದ್ದೇವೆ… ನೀವು ಗುಜರಿಗಳು, ಟಾಂಗಾಗಳು ಮಾಡುವಂತಹ ಪೆಟ್ರೋಲ್ ಬಾಂಬ್ ತಯಾರು ಮಾಡಲು ಬರುವುದಿಲ್ಲ ಎಂದು ತಿಳಿಯಬೇಡಿ” ಎಂದು ಹೇಳಿದ್ದಾರೆ. ಹದ್ದಬಸ್ತಿನಲ್ಲಿ ಇರಿ

ಇದನ್ನೂಓದಿ:ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

“ನ್ಯೂಕ್ಲಿಯರ್‌ ಬಾಂಬ್ ಮಾಡಿದ ನಮಗೆ ಗುಜಿರಿ-ಟಾಂಗಾಗಳು ಮಾಡುವ ಪೆಟ್ರೋಲ್ ಬಾಂಬ್ ಮಾಡಲು ನಮಗೂ ಬರುತ್ತದೆ. ಆದರೆ ನಾನು ಈ ದೇಶದ ಶಾಂತಿ ಮತ್ತು ಸುರಕ್ಷತೆಗೋಸ್ಕರ ಸುಮ್ಮನೆ ಇದ್ದೇವೆ. ನಮ್ಮ ಮೌನ, ತಾಳ್ಮೆ ಮತ್ತು ಸೌಹಾರ್ಧ ಭಾವನೆಯನ್ನು ಪಕ್ಕಲುತನ ಎಂದು ತಿಳಿದುಕೊಂಡರೆ, ಒಬ್ಬೊಬ್ಬ ಹಿಂದೂ ಕೂಡಾ ಒಂದೊಂದು ಕೈಯ್ಯಲ್ಲಿ ಕಲ್ಲನ್ನು ಇಟ್ಟುಕೊಂಡರೆ ನಿಮಗೆ ಉಳಿಗಾಲ ಇರಲ್ಲ. ಇದನ್ನು ಅರ್ಥ ಮಾಡಿಕೊಂಡು ಎಚ್ಚರಿಕೆಯಿಂದ, ಗೌರವಯುತವಾಗಿ ಹಾಗೂ ಹದ್ದಬಸ್ತಿನಲ್ಲಿ ಇರುವುದನ್ನು ಕಲಿತುಕೊಳ್ಳಬೇಕು” ಎಂದು ಹೇಳಿದ್ದಾರೆ.

“ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಧಾರ್ಮಿಕ ಮುಂಖಡರು ಮತ್ತು ಬುದ್ದಿಜೀವಿಗಳು ಮಾಡಿಲ್ಲವೆಂದರೆ, ಇಡೀ ಸಮಾಜ ಅವರು ಮಾಡುವ ಕೆಟ್ಟ ಹೆಸರನ್ನು ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಮೌನವಾಗಿ ನೀವು ಕೂಡಾ ಹೊಣೆಯಾಗಿರುತ್ತೀರಿ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮಹಿಷ ದಸರಾ ಆಚರಣೆಯನ್ನು ಟೀಕಿಸಿದ ಅವರು, ಈ ಹಬ್ಬವು “ತಾಯಿ ಚಾಮುಂಡಿ” ಯನ್ನು ಅಗೌರವಿಸುತ್ತದೆ ಮತ್ತು ಹಿಂದೂ ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಮಹಿಷನಲ್ಲಿ ನಂಬಿಕೆ ಇರುವವರು ಮನೆಯಲ್ಲಿ ಪೂಜೆ ಸಲ್ಲಿಸಬೇಕು ಎಂದು ಹೇಳಿದ ಅವರು, ಮಹಿಷ ದಸರಾ ಹೆಸರಿನಲ್ಲಿ ಒಡಕು ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮುಂದುವರಿದರೆ ಚಾಮುಂಡಿ ಭಕ್ತರು ಚಾಮುಂಡಿ ಚಲೋ ಹಮ್ಮಿಕೊಂಡು ಆಚರಣೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೊ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...