Homeಕರ್ನಾಟಕ'ಹದ್ದಬಸ್ತಿನಲ್ಲಿ ಇರಿ' | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

- Advertisement -
- Advertisement -

ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ತೀವ್ರವಾಗಿ ಮುಸ್ಲಿಂ ದ್ವೇಷದ ಮಾತುಗಳನ್ನು ಆಡುತ್ತಾ ಪಕ್ಷದಲ್ಲಿ ಮುನ್ನಲೆಗೆ ಬರಲು ಪ್ರಯತ್ನಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮತ್ತೊಮ್ಮೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, “ಹಿಂದೂಗಳು ಕಲ್ಲುಗಳನ್ನು ಎತ್ತಿಕೊಂಡರೆ ಯಾವುದೇ ಮುಸಲ್ಮಾನರು ಉಳಿಯುವುದಿಲ್ಲ, ಆದ್ದರಿಂದ ಹದ್ದಬಸ್ತಿನಲ್ಲಿ ಇರಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷ ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಸಾಂಪ್ರದಾಯಿಕ ದಸರಾಕ್ಕೆ ಪರ್ಯಾಯವಾದ ಮಹಿಷ ದಸರಾ ಆಚರಣೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪುರಾಣಗಳಲ್ಲಿ ರಾಕ್ಷಸನಾಗಿ ಚಿತ್ರಿಸಲಾಗಿರುವ ಮಹಿಷ ಮೇಲ್ಜಾತಿ ಆರ್ಯರಿಂದ ಕೊಲ್ಲಲ್ಪಟ್ಟ ಬೌದ್ಧ ದೊರೆ ಎಂದು ಪ್ರತಿಪಾದಿಸಿ ಜನಪರ ಚಳುವಳಿಗಳು 2015 ರಿಂದ ಮಹಿಷ ದಸರ ಆಚರಿಸಿಕೊಂಡು ಬರುತ್ತಿವೆ. ಈ ಮೂಲಕ ಮಹಿಷನ ಸಾಂಸ್ಕೃತಿಕ ಇತಿಹಾಸವನ್ನು ನೆನಪಿಸುವ ಆಚರಣೆಯನ್ನು ಚಳುವಳಿಗಳು ಮಾಡುತ್ತಿವೆ. ಇದನ್ನು ಸಂಸದ ಪ್ರತಾಪ್ ಸಿಂಹ ತಾನು ಸಂಸದನಾಗಿದ್ದಾಗ ವಿರೋಧಿಸಿದ್ದರು.

ಅಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, “ನಾನು ಮುಸಲ್ಮಾನರಿಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇನೆ. ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಯಾವುದೇ ಮುಲ್ಲಾ, ಇಮಾಂ ಮಾಡುತ್ತಿಲ್ಲ. ಆದ್ದರಿಂದ ಇಡೀ ಮುಸ್ಲಿಂ ಸಮಾಜದ ಗುರಿಯಾಗಿ ಇಟ್ಟುಕೊಂಡೆ ಮಾತನಾಡುತ್ತಿದ್ದೇನೆ, ಮುಸಲ್ಮಾನರೆ, ಹಿಂದೂಗಳನ್ನು ನೀವು ಕಡಿಮೆ ಅಂದಾಜು ಮಾಡಿಕೊಳ್ಳಬೇಡಿ” ಎಂದು ಹೇಳಿದ್ದಾರೆ.

“ನ್ಯೂಕ್ಲಿಯರ್ ಬಾಂಬ್ ಮಾಡಿರುವ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡಲು ಬರುವುದಿಲ್ಲ ಎಂದು ತಿಳಿದುಕೊಳ್ಳಬೇಡಿ. ಬ್ಯಾಲೆಸ್ಟಿಕ್ ಮಿಸೈಲ್‌ಗಳನ್ನು ಮಾಡಿರುವ ಹಿಂದೂಗಳಿಗೆ ಕಲ್ಲಲ್ಲಿ ಬಿಸಾಕಲು ಬರುವುದಿಲ್ಲ ಎಂದುಕೊಳ್ಳಬೇಡಿ. ವಿಶ್ವದ ಸಾಫ್ಟ್‌ವೇರ್ ಉದ್ಯಮವನ್ನು ನಡೆಸುತ್ತಿರುವ ಹಿಂದೂಗಳಿಗೆ ನಿಮ್ಮ ಮೇಲೆ ಆಕ್ರಮಣ ಮಾಲಡು ಕೈಗೆ ಕಲ್ಲೆತ್ತಲು ಬರುವುದಿಲ್ಲ ಎಂದು ಭಾವಿಸಬೇಡಿ. ಚಂದ್ರನನ್ನು ನೀವು ಆರಾಧನೆ ಮಾಡುತ್ತೀರಿ. ಆದರೆ ಚಂದ್ರನ ಮೇಲೆ ನಾವು ನೌಕೆ ಇಳಿಸಿದ್ದೇವೆ… ನೀವು ಗುಜರಿಗಳು, ಟಾಂಗಾಗಳು ಮಾಡುವಂತಹ ಪೆಟ್ರೋಲ್ ಬಾಂಬ್ ತಯಾರು ಮಾಡಲು ಬರುವುದಿಲ್ಲ ಎಂದು ತಿಳಿಯಬೇಡಿ” ಎಂದು ಹೇಳಿದ್ದಾರೆ. ಹದ್ದಬಸ್ತಿನಲ್ಲಿ ಇರಿ

ಇದನ್ನೂಓದಿ:ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

“ನ್ಯೂಕ್ಲಿಯರ್‌ ಬಾಂಬ್ ಮಾಡಿದ ನಮಗೆ ಗುಜಿರಿ-ಟಾಂಗಾಗಳು ಮಾಡುವ ಪೆಟ್ರೋಲ್ ಬಾಂಬ್ ಮಾಡಲು ನಮಗೂ ಬರುತ್ತದೆ. ಆದರೆ ನಾನು ಈ ದೇಶದ ಶಾಂತಿ ಮತ್ತು ಸುರಕ್ಷತೆಗೋಸ್ಕರ ಸುಮ್ಮನೆ ಇದ್ದೇವೆ. ನಮ್ಮ ಮೌನ, ತಾಳ್ಮೆ ಮತ್ತು ಸೌಹಾರ್ಧ ಭಾವನೆಯನ್ನು ಪಕ್ಕಲುತನ ಎಂದು ತಿಳಿದುಕೊಂಡರೆ, ಒಬ್ಬೊಬ್ಬ ಹಿಂದೂ ಕೂಡಾ ಒಂದೊಂದು ಕೈಯ್ಯಲ್ಲಿ ಕಲ್ಲನ್ನು ಇಟ್ಟುಕೊಂಡರೆ ನಿಮಗೆ ಉಳಿಗಾಲ ಇರಲ್ಲ. ಇದನ್ನು ಅರ್ಥ ಮಾಡಿಕೊಂಡು ಎಚ್ಚರಿಕೆಯಿಂದ, ಗೌರವಯುತವಾಗಿ ಹಾಗೂ ಹದ್ದಬಸ್ತಿನಲ್ಲಿ ಇರುವುದನ್ನು ಕಲಿತುಕೊಳ್ಳಬೇಕು” ಎಂದು ಹೇಳಿದ್ದಾರೆ.

“ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಧಾರ್ಮಿಕ ಮುಂಖಡರು ಮತ್ತು ಬುದ್ದಿಜೀವಿಗಳು ಮಾಡಿಲ್ಲವೆಂದರೆ, ಇಡೀ ಸಮಾಜ ಅವರು ಮಾಡುವ ಕೆಟ್ಟ ಹೆಸರನ್ನು ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಮೌನವಾಗಿ ನೀವು ಕೂಡಾ ಹೊಣೆಯಾಗಿರುತ್ತೀರಿ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮಹಿಷ ದಸರಾ ಆಚರಣೆಯನ್ನು ಟೀಕಿಸಿದ ಅವರು, ಈ ಹಬ್ಬವು “ತಾಯಿ ಚಾಮುಂಡಿ” ಯನ್ನು ಅಗೌರವಿಸುತ್ತದೆ ಮತ್ತು ಹಿಂದೂ ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಮಹಿಷನಲ್ಲಿ ನಂಬಿಕೆ ಇರುವವರು ಮನೆಯಲ್ಲಿ ಪೂಜೆ ಸಲ್ಲಿಸಬೇಕು ಎಂದು ಹೇಳಿದ ಅವರು, ಮಹಿಷ ದಸರಾ ಹೆಸರಿನಲ್ಲಿ ಒಡಕು ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮುಂದುವರಿದರೆ ಚಾಮುಂಡಿ ಭಕ್ತರು ಚಾಮುಂಡಿ ಚಲೋ ಹಮ್ಮಿಕೊಂಡು ಆಚರಣೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೊ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...