Homeಕರ್ನಾಟಕ'ಹದ್ದಬಸ್ತಿನಲ್ಲಿ ಇರಿ' | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

- Advertisement -
- Advertisement -

ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ತೀವ್ರವಾಗಿ ಮುಸ್ಲಿಂ ದ್ವೇಷದ ಮಾತುಗಳನ್ನು ಆಡುತ್ತಾ ಪಕ್ಷದಲ್ಲಿ ಮುನ್ನಲೆಗೆ ಬರಲು ಪ್ರಯತ್ನಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮತ್ತೊಮ್ಮೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, “ಹಿಂದೂಗಳು ಕಲ್ಲುಗಳನ್ನು ಎತ್ತಿಕೊಂಡರೆ ಯಾವುದೇ ಮುಸಲ್ಮಾನರು ಉಳಿಯುವುದಿಲ್ಲ, ಆದ್ದರಿಂದ ಹದ್ದಬಸ್ತಿನಲ್ಲಿ ಇರಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷ ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಸಾಂಪ್ರದಾಯಿಕ ದಸರಾಕ್ಕೆ ಪರ್ಯಾಯವಾದ ಮಹಿಷ ದಸರಾ ಆಚರಣೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪುರಾಣಗಳಲ್ಲಿ ರಾಕ್ಷಸನಾಗಿ ಚಿತ್ರಿಸಲಾಗಿರುವ ಮಹಿಷ ಮೇಲ್ಜಾತಿ ಆರ್ಯರಿಂದ ಕೊಲ್ಲಲ್ಪಟ್ಟ ಬೌದ್ಧ ದೊರೆ ಎಂದು ಪ್ರತಿಪಾದಿಸಿ ಜನಪರ ಚಳುವಳಿಗಳು 2015 ರಿಂದ ಮಹಿಷ ದಸರ ಆಚರಿಸಿಕೊಂಡು ಬರುತ್ತಿವೆ. ಈ ಮೂಲಕ ಮಹಿಷನ ಸಾಂಸ್ಕೃತಿಕ ಇತಿಹಾಸವನ್ನು ನೆನಪಿಸುವ ಆಚರಣೆಯನ್ನು ಚಳುವಳಿಗಳು ಮಾಡುತ್ತಿವೆ. ಇದನ್ನು ಸಂಸದ ಪ್ರತಾಪ್ ಸಿಂಹ ತಾನು ಸಂಸದನಾಗಿದ್ದಾಗ ವಿರೋಧಿಸಿದ್ದರು.

ಅಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, “ನಾನು ಮುಸಲ್ಮಾನರಿಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇನೆ. ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಯಾವುದೇ ಮುಲ್ಲಾ, ಇಮಾಂ ಮಾಡುತ್ತಿಲ್ಲ. ಆದ್ದರಿಂದ ಇಡೀ ಮುಸ್ಲಿಂ ಸಮಾಜದ ಗುರಿಯಾಗಿ ಇಟ್ಟುಕೊಂಡೆ ಮಾತನಾಡುತ್ತಿದ್ದೇನೆ, ಮುಸಲ್ಮಾನರೆ, ಹಿಂದೂಗಳನ್ನು ನೀವು ಕಡಿಮೆ ಅಂದಾಜು ಮಾಡಿಕೊಳ್ಳಬೇಡಿ” ಎಂದು ಹೇಳಿದ್ದಾರೆ.

“ನ್ಯೂಕ್ಲಿಯರ್ ಬಾಂಬ್ ಮಾಡಿರುವ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡಲು ಬರುವುದಿಲ್ಲ ಎಂದು ತಿಳಿದುಕೊಳ್ಳಬೇಡಿ. ಬ್ಯಾಲೆಸ್ಟಿಕ್ ಮಿಸೈಲ್‌ಗಳನ್ನು ಮಾಡಿರುವ ಹಿಂದೂಗಳಿಗೆ ಕಲ್ಲಲ್ಲಿ ಬಿಸಾಕಲು ಬರುವುದಿಲ್ಲ ಎಂದುಕೊಳ್ಳಬೇಡಿ. ವಿಶ್ವದ ಸಾಫ್ಟ್‌ವೇರ್ ಉದ್ಯಮವನ್ನು ನಡೆಸುತ್ತಿರುವ ಹಿಂದೂಗಳಿಗೆ ನಿಮ್ಮ ಮೇಲೆ ಆಕ್ರಮಣ ಮಾಲಡು ಕೈಗೆ ಕಲ್ಲೆತ್ತಲು ಬರುವುದಿಲ್ಲ ಎಂದು ಭಾವಿಸಬೇಡಿ. ಚಂದ್ರನನ್ನು ನೀವು ಆರಾಧನೆ ಮಾಡುತ್ತೀರಿ. ಆದರೆ ಚಂದ್ರನ ಮೇಲೆ ನಾವು ನೌಕೆ ಇಳಿಸಿದ್ದೇವೆ… ನೀವು ಗುಜರಿಗಳು, ಟಾಂಗಾಗಳು ಮಾಡುವಂತಹ ಪೆಟ್ರೋಲ್ ಬಾಂಬ್ ತಯಾರು ಮಾಡಲು ಬರುವುದಿಲ್ಲ ಎಂದು ತಿಳಿಯಬೇಡಿ” ಎಂದು ಹೇಳಿದ್ದಾರೆ. ಹದ್ದಬಸ್ತಿನಲ್ಲಿ ಇರಿ

ಇದನ್ನೂಓದಿ:ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

“ನ್ಯೂಕ್ಲಿಯರ್‌ ಬಾಂಬ್ ಮಾಡಿದ ನಮಗೆ ಗುಜಿರಿ-ಟಾಂಗಾಗಳು ಮಾಡುವ ಪೆಟ್ರೋಲ್ ಬಾಂಬ್ ಮಾಡಲು ನಮಗೂ ಬರುತ್ತದೆ. ಆದರೆ ನಾನು ಈ ದೇಶದ ಶಾಂತಿ ಮತ್ತು ಸುರಕ್ಷತೆಗೋಸ್ಕರ ಸುಮ್ಮನೆ ಇದ್ದೇವೆ. ನಮ್ಮ ಮೌನ, ತಾಳ್ಮೆ ಮತ್ತು ಸೌಹಾರ್ಧ ಭಾವನೆಯನ್ನು ಪಕ್ಕಲುತನ ಎಂದು ತಿಳಿದುಕೊಂಡರೆ, ಒಬ್ಬೊಬ್ಬ ಹಿಂದೂ ಕೂಡಾ ಒಂದೊಂದು ಕೈಯ್ಯಲ್ಲಿ ಕಲ್ಲನ್ನು ಇಟ್ಟುಕೊಂಡರೆ ನಿಮಗೆ ಉಳಿಗಾಲ ಇರಲ್ಲ. ಇದನ್ನು ಅರ್ಥ ಮಾಡಿಕೊಂಡು ಎಚ್ಚರಿಕೆಯಿಂದ, ಗೌರವಯುತವಾಗಿ ಹಾಗೂ ಹದ್ದಬಸ್ತಿನಲ್ಲಿ ಇರುವುದನ್ನು ಕಲಿತುಕೊಳ್ಳಬೇಕು” ಎಂದು ಹೇಳಿದ್ದಾರೆ.

“ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಧಾರ್ಮಿಕ ಮುಂಖಡರು ಮತ್ತು ಬುದ್ದಿಜೀವಿಗಳು ಮಾಡಿಲ್ಲವೆಂದರೆ, ಇಡೀ ಸಮಾಜ ಅವರು ಮಾಡುವ ಕೆಟ್ಟ ಹೆಸರನ್ನು ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಮೌನವಾಗಿ ನೀವು ಕೂಡಾ ಹೊಣೆಯಾಗಿರುತ್ತೀರಿ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮಹಿಷ ದಸರಾ ಆಚರಣೆಯನ್ನು ಟೀಕಿಸಿದ ಅವರು, ಈ ಹಬ್ಬವು “ತಾಯಿ ಚಾಮುಂಡಿ” ಯನ್ನು ಅಗೌರವಿಸುತ್ತದೆ ಮತ್ತು ಹಿಂದೂ ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಮಹಿಷನಲ್ಲಿ ನಂಬಿಕೆ ಇರುವವರು ಮನೆಯಲ್ಲಿ ಪೂಜೆ ಸಲ್ಲಿಸಬೇಕು ಎಂದು ಹೇಳಿದ ಅವರು, ಮಹಿಷ ದಸರಾ ಹೆಸರಿನಲ್ಲಿ ಒಡಕು ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮುಂದುವರಿದರೆ ಚಾಮುಂಡಿ ಭಕ್ತರು ಚಾಮುಂಡಿ ಚಲೋ ಹಮ್ಮಿಕೊಂಡು ಆಚರಣೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೊ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...