Homeಕರ್ನಾಟಕ'ಹದ್ದಬಸ್ತಿನಲ್ಲಿ ಇರಿ' | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

‘ಹದ್ದಬಸ್ತಿನಲ್ಲಿ ಇರಿ’ | ಮತ್ತೆ ಮುಸ್ಲಿಂ ದ್ವೇಷ ಭಾಷಣ ಮಾಡಿದ ಪ್ರತಾಪ್ ಸಿಂಹ

- Advertisement -
- Advertisement -

ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ತೀವ್ರವಾಗಿ ಮುಸ್ಲಿಂ ದ್ವೇಷದ ಮಾತುಗಳನ್ನು ಆಡುತ್ತಾ ಪಕ್ಷದಲ್ಲಿ ಮುನ್ನಲೆಗೆ ಬರಲು ಪ್ರಯತ್ನಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮತ್ತೊಮ್ಮೆ ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದು, “ಹಿಂದೂಗಳು ಕಲ್ಲುಗಳನ್ನು ಎತ್ತಿಕೊಂಡರೆ ಯಾವುದೇ ಮುಸಲ್ಮಾನರು ಉಳಿಯುವುದಿಲ್ಲ, ಆದ್ದರಿಂದ ಹದ್ದಬಸ್ತಿನಲ್ಲಿ ಇರಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವರ್ಷ ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಸಾಂಪ್ರದಾಯಿಕ ದಸರಾಕ್ಕೆ ಪರ್ಯಾಯವಾದ ಮಹಿಷ ದಸರಾ ಆಚರಣೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂಓದಿ: ಉತ್ತರ ಪ್ರದೇಶ: ಶಿಕ್ಷಕನ ಹೊಡೆತಕ್ಕೆ ದೃಷ್ಟಿ ಕಳೆದುಕೊಂಡ 6ನೇ ತರಗತಿ ವಿದ್ಯಾರ್ಥಿ

ಪುರಾಣಗಳಲ್ಲಿ ರಾಕ್ಷಸನಾಗಿ ಚಿತ್ರಿಸಲಾಗಿರುವ ಮಹಿಷ ಮೇಲ್ಜಾತಿ ಆರ್ಯರಿಂದ ಕೊಲ್ಲಲ್ಪಟ್ಟ ಬೌದ್ಧ ದೊರೆ ಎಂದು ಪ್ರತಿಪಾದಿಸಿ ಜನಪರ ಚಳುವಳಿಗಳು 2015 ರಿಂದ ಮಹಿಷ ದಸರ ಆಚರಿಸಿಕೊಂಡು ಬರುತ್ತಿವೆ. ಈ ಮೂಲಕ ಮಹಿಷನ ಸಾಂಸ್ಕೃತಿಕ ಇತಿಹಾಸವನ್ನು ನೆನಪಿಸುವ ಆಚರಣೆಯನ್ನು ಚಳುವಳಿಗಳು ಮಾಡುತ್ತಿವೆ. ಇದನ್ನು ಸಂಸದ ಪ್ರತಾಪ್ ಸಿಂಹ ತಾನು ಸಂಸದನಾಗಿದ್ದಾಗ ವಿರೋಧಿಸಿದ್ದರು.

ಅಲ್ಲಿ ಮಾತನಾಡಿರುವ ಪ್ರತಾಪ್ ಸಿಂಹ, “ನಾನು ಮುಸಲ್ಮಾನರಿಗೆ ಸ್ಪಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇನೆ. ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಯಾವುದೇ ಮುಲ್ಲಾ, ಇಮಾಂ ಮಾಡುತ್ತಿಲ್ಲ. ಆದ್ದರಿಂದ ಇಡೀ ಮುಸ್ಲಿಂ ಸಮಾಜದ ಗುರಿಯಾಗಿ ಇಟ್ಟುಕೊಂಡೆ ಮಾತನಾಡುತ್ತಿದ್ದೇನೆ, ಮುಸಲ್ಮಾನರೆ, ಹಿಂದೂಗಳನ್ನು ನೀವು ಕಡಿಮೆ ಅಂದಾಜು ಮಾಡಿಕೊಳ್ಳಬೇಡಿ” ಎಂದು ಹೇಳಿದ್ದಾರೆ.

“ನ್ಯೂಕ್ಲಿಯರ್ ಬಾಂಬ್ ಮಾಡಿರುವ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡಲು ಬರುವುದಿಲ್ಲ ಎಂದು ತಿಳಿದುಕೊಳ್ಳಬೇಡಿ. ಬ್ಯಾಲೆಸ್ಟಿಕ್ ಮಿಸೈಲ್‌ಗಳನ್ನು ಮಾಡಿರುವ ಹಿಂದೂಗಳಿಗೆ ಕಲ್ಲಲ್ಲಿ ಬಿಸಾಕಲು ಬರುವುದಿಲ್ಲ ಎಂದುಕೊಳ್ಳಬೇಡಿ. ವಿಶ್ವದ ಸಾಫ್ಟ್‌ವೇರ್ ಉದ್ಯಮವನ್ನು ನಡೆಸುತ್ತಿರುವ ಹಿಂದೂಗಳಿಗೆ ನಿಮ್ಮ ಮೇಲೆ ಆಕ್ರಮಣ ಮಾಲಡು ಕೈಗೆ ಕಲ್ಲೆತ್ತಲು ಬರುವುದಿಲ್ಲ ಎಂದು ಭಾವಿಸಬೇಡಿ. ಚಂದ್ರನನ್ನು ನೀವು ಆರಾಧನೆ ಮಾಡುತ್ತೀರಿ. ಆದರೆ ಚಂದ್ರನ ಮೇಲೆ ನಾವು ನೌಕೆ ಇಳಿಸಿದ್ದೇವೆ… ನೀವು ಗುಜರಿಗಳು, ಟಾಂಗಾಗಳು ಮಾಡುವಂತಹ ಪೆಟ್ರೋಲ್ ಬಾಂಬ್ ತಯಾರು ಮಾಡಲು ಬರುವುದಿಲ್ಲ ಎಂದು ತಿಳಿಯಬೇಡಿ” ಎಂದು ಹೇಳಿದ್ದಾರೆ. ಹದ್ದಬಸ್ತಿನಲ್ಲಿ ಇರಿ

ಇದನ್ನೂಓದಿ:ಬಾಡಿಗೆದಾರ ಯುವತಿಯ ಮಲಗುವ ಕೋಣೆ, ವಾಶ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ: ಆರೋಪಿ ಬಂಧನ

“ನ್ಯೂಕ್ಲಿಯರ್‌ ಬಾಂಬ್ ಮಾಡಿದ ನಮಗೆ ಗುಜಿರಿ-ಟಾಂಗಾಗಳು ಮಾಡುವ ಪೆಟ್ರೋಲ್ ಬಾಂಬ್ ಮಾಡಲು ನಮಗೂ ಬರುತ್ತದೆ. ಆದರೆ ನಾನು ಈ ದೇಶದ ಶಾಂತಿ ಮತ್ತು ಸುರಕ್ಷತೆಗೋಸ್ಕರ ಸುಮ್ಮನೆ ಇದ್ದೇವೆ. ನಮ್ಮ ಮೌನ, ತಾಳ್ಮೆ ಮತ್ತು ಸೌಹಾರ್ಧ ಭಾವನೆಯನ್ನು ಪಕ್ಕಲುತನ ಎಂದು ತಿಳಿದುಕೊಂಡರೆ, ಒಬ್ಬೊಬ್ಬ ಹಿಂದೂ ಕೂಡಾ ಒಂದೊಂದು ಕೈಯ್ಯಲ್ಲಿ ಕಲ್ಲನ್ನು ಇಟ್ಟುಕೊಂಡರೆ ನಿಮಗೆ ಉಳಿಗಾಲ ಇರಲ್ಲ. ಇದನ್ನು ಅರ್ಥ ಮಾಡಿಕೊಂಡು ಎಚ್ಚರಿಕೆಯಿಂದ, ಗೌರವಯುತವಾಗಿ ಹಾಗೂ ಹದ್ದಬಸ್ತಿನಲ್ಲಿ ಇರುವುದನ್ನು ಕಲಿತುಕೊಳ್ಳಬೇಕು” ಎಂದು ಹೇಳಿದ್ದಾರೆ.

“ಮುಸ್ಲಿಂ ಸಮುದಾಯದ ಪುಂಡರು ಮತ್ತು ಗಲಭೆಕೋರರನ್ನು ಖಂಡಿಸುವ ಕೆಲಸವನ್ನು ಧಾರ್ಮಿಕ ಮುಂಖಡರು ಮತ್ತು ಬುದ್ದಿಜೀವಿಗಳು ಮಾಡಿಲ್ಲವೆಂದರೆ, ಇಡೀ ಸಮಾಜ ಅವರು ಮಾಡುವ ಕೆಟ್ಟ ಹೆಸರನ್ನು ಪಡೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಮೌನವಾಗಿ ನೀವು ಕೂಡಾ ಹೊಣೆಯಾಗಿರುತ್ತೀರಿ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮಹಿಷ ದಸರಾ ಆಚರಣೆಯನ್ನು ಟೀಕಿಸಿದ ಅವರು, ಈ ಹಬ್ಬವು “ತಾಯಿ ಚಾಮುಂಡಿ” ಯನ್ನು ಅಗೌರವಿಸುತ್ತದೆ ಮತ್ತು ಹಿಂದೂ ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಮಹಿಷನಲ್ಲಿ ನಂಬಿಕೆ ಇರುವವರು ಮನೆಯಲ್ಲಿ ಪೂಜೆ ಸಲ್ಲಿಸಬೇಕು ಎಂದು ಹೇಳಿದ ಅವರು, ಮಹಿಷ ದಸರಾ ಹೆಸರಿನಲ್ಲಿ ಒಡಕು ಸೃಷ್ಟಿಸಬೇಡಿ ಎಂದು ಮನವಿ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಮುಂದುವರಿದರೆ ಚಾಮುಂಡಿ ಭಕ್ತರು ಚಾಮುಂಡಿ ಚಲೋ ಹಮ್ಮಿಕೊಂಡು ಆಚರಣೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೊ ನೋಡಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...