Homeಕರ್ನಾಟಕ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿ ಸಮೀಪ ನಡೆದ ಪ್ರಕರಣದ ವರದಿ ಪ್ರಕಟಿಸಿರುವ ಸಂಬಂಧ ಮೈಸೂರಿನ ಪ್ರಾದೇಶಿಕ ದಿನಪತ್ರಿಕೆ ‘ಆಂದೋಲನ’ ಕುರಿತು ಸಂಸದ ಪ್ರತಾಪ್‌ ಸಿಂಹ ಅವರು ನೀಡಿರುವ ಅಸಂಬದ್ಧ ಹೇಳಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು ಆಗ್ರಹಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಪ್ರತಿಕ್ರಿಯೆ ಪಡೆದು ವರದಿ ಮಾಡಿದ ‘ಆಂದೋಲನ’ ದಿನಪತ್ರಿಕೆಯನ್ನು ಉಲ್ಲೇಖಿಸಿ ಪ್ರತಾಪ್‌ ಸಿಂಹ ಅವರು ಸುದ್ದಿಗೋಷ್ಠಿಯಲ್ಲಿ ‘ಪತ್ರಿಕೆ’ಯನ್ನು ಟಾರ್ಗೆಟ್ ಮಾಡಿ ಮಾತನಾಡಿರುವುದು ಖಂಡನೀಯ. ಈ ಬಗ್ಗೆ ಪ್ರತಾಪ್‌ ಸಿಂಹ ಅವರು ಕೂಡಲೇ ‘ಪತ್ರಿಕೆ’ಯ ಕ್ಷಮೆಯಾಚಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಟ್ವೀಟ್ ಮಾಡಿದ್ದಾರೆ.

ಏನಿದು ವಿವಾದ?

ಸಿದ್ದರಾಮನಹುಂಡಿಯಲ್ಲಿ ಗುರುವಾರ ಸಂಜೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿದೆ ಎನ್ನಲಾದ ಘರ್ಷಣೆ ಕುರಿತು ‘ಆಂದೋಲನ’ ವರದಿ ಪ್ರಕಟಿಸಿತ್ತು. ಪತ್ರಿಕೆಯು ವಾಸ್ತವಾಂಶಗಳನ್ನು ತಿರುಚಿ ಸುದ್ದಿ ಪ್ರಕಟಿಸಿದೆ ಎಂದು ಪ್ರತಾಪ್‌ ಆರೋಪಿಸಿದ್ದರು. ಸಂಸದರ ಹೇಳಿಕೆಯನ್ನು ಖಂಡಿಸಿ ‘ಆಂದೋಲನ’ ಮತ್ತೊಂದು ಟಿಪ್ಪಣಿಯನ್ನು ಪ್ರಕಟಿಸಿತ್ತು. ಜೊತೆಗೆ ತನ್ನ ವರದಿಗೆ ಬದ್ಧ ಎಂದು ಸ್ಪಷ್ಟಪಡಿಸಿತ್ತು.

‘ಆಂದೋಲನ’ ಹೇಳಿದ್ದೇನು?

“ಚುನಾವಣೆ ಸಂದರ್ಭದಲ್ಲಿ ವಿವಾದಗಳು, ವಾಗ್ವಾದಗಳು ಸಹಜ. ಆರೋಪಗಳು, ಆಪಾದನೆಗಳು, ಕೆಲವೊಮ್ಮೆ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಇಂಥ ಸಂದರ್ಭಗಳಲ್ಲಿ ಸಮಾಜದ ಸಾಮರಸ್ಯ ಕೆಡದಂತೆ ಕರ್ತವ್ಯ ನಿರ್ವಹಿಸಬೇಕಾಗಿರುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಧ್ಯಮಗಳ ಹೊಣೆ. ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳ ಹೇಳಿಕೆಗಳನ್ನು ತೆಗೆದುಕೊಂಡು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸಬೇಕು.”

“ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡೇ ಸಿದ್ದರಾಮನಹುಂಡಿ ಘಟನೆ ವರದಿಯನ್ನು ‘ಆಂದೋಲನ’ ಪ್ರಕಟಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ಹೇಳಿಕೆ ಹಾಗೂ ಘಟನಾವಳಿಯನ್ನು ಆಧರಿಸಿಯೇ ಈ ವರದಿ ಮಾಡಲಾಗಿದೆ.”

“ಆದರೆ, ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಈ ಸುದ್ದಿಯ ಜತೆ ಪ್ರಕಟವಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆಯು ಅವರು ಕೊಟ್ಟಿರುವುದಿಲ್ಲ, ಅವರನ್ನು ಕೋಟ್ ಮಾಡಿ ‘ಆಂದೋಲನ’ ಸುಳ್ಳು ಸುದ್ದಿ ಮಾಡಿದೆ. ಇದನ್ನು ನೇರವಾಗಿ ಹೇಳುತ್ತಿದ್ದೇನೆ. ಐ ಡೋಂಟ್ ಕೇರ್ ಎಂದು ಪತ್ರಿಕೆಯ ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ.”

“’ಆಂದೋಲನ’ ಮಾತ್ರವಲ್ಲ, ಬೇರೆ ಪತ್ರಿಕೆಗಳಲ್ಲೂ ಈ ವರದಿ ಪ್ರಕಟವಾಗಿದೆ. ಆದರೆ, ‘ಆಂದೋಲನ’ ದಿನಪತ್ರಿಕೆಯನ್ನು ಮಾತ್ರ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಗುರಿ ಮಾಡಿದ್ದಾರೆ. ಇದು ಸಂಸದರಿಗೆ ಶೋಭೆ ತರುವುದಿಲ್ಲ.”

‘ಆಂದೋಲನ’ ದಿನಪತ್ರಿಕೆ ನೀಡಿರುವ ಪ್ರತಿಕ್ರಿಯೆ

ಪ್ರತಾಪ್ ಸಿಂಹ ಹೇಳಿದ್ದೇನು?

“ನಾನು ನಿಮಗೆ ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ಮೊದಲು ಪೊಲೀಸ್ ಇಲಾಖೆಯವರನ್ನು ಕೇಳಿ, ಎಸ್ಪಿ ಅವರು ಮಾತನಾಡಿಯೇ ಇಲ್ಲ. ‘ಆಂದೋಲನ’ದಲ್ಲಿ ಬಂದಿರುವ ಸತ್ಯಕ್ಕೆ ದೂರವಾದ ಸುದ್ದಿಯನ್ನು ನೋಡಿ ಮಾತನಾಡಬೇಡಿ. ‘ಆಂದೋಲನ’ ಪತ್ರಿಕೆಯವರು ಆಗಾಗ ಪೊಲೀಸರನ್ನು ಕೋಟ್ ಮಾಡಿಕೊಂಡು ಈ ರೀತಿ ಸುಳ್ಳು ಸುದ್ದಿ ಬರೆಯುವುದನ್ನು ನಿಲ್ಲಿಸಬೇಕು. ನಾನು ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ನಾನು ಬೆಳಿಗ್ಗೆ ಎಸ್ಪಿ ಬಳಿ ಯಾಕೆ ಈ ರೀತಿ ಸ್ಟೇಟ್‌ಮೆಂಟ್ ಕೊಟ್ಟಿದ್ದೀರಿ ಎಂದು ಮಾತಾಡ್ಡೆ. ನಾನು ಸ್ಟೇಟ್‌ಮೆಂಟ್ ಕೊಟ್ಟಿಲ್ಲ. ಹಿಂದೇನೂ ‘ಆಂದೋಲನ’ದಲ್ಲಿ ಒಂದು ವರದಿ ಇದೇ ರೀತಿ ಆಗಿದೆ ಎಂದು ತಿಳಿಸಿದ್ದಾರೆ. ಸೋ ಐ ಪರ್ಟಿಕ್ಯುಲರ್ಲಿ ನೇಮಿಂಗ್ ದಿ ನ್ಯೂಸ್ ಪೇಪರ್, ಅಂಡ್ ಐ ಡೋಂಟ್ ಕೇರ್” ಎಂದು ಸಂಸದ ಪ್ರತಾಪ ಸಿಂಹ ಪತ್ರಿಕೆಯನ್ನು ಟೀಕಿಸಿದ್ದರು.

ಶುಕ್ರವಾರ ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ

ದಿವಂಗತ ರಾಜಶೇಖರ ಕೋಟಿಯವರು ಸ್ಥಾಪಿಸಿದ ಆಂದೋಲನ ದಿನಪತ್ರಿಕೆಗೆ ಐವತ್ತು ವರ್ಷಗಳ ಇತಿಹಾಸವಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಪ್ರಸರಣವನ್ನು ಹೊಂದಿರುವ ‘ಆಂದೋಲನ’, ದಲಿತ, ಆದಿವಾಸಿ, ರೈತ, ಕೂಲಿಕಾರ್ಮಿಕ ಮತ್ತು ಭಾಷಾ ಚಳವಳಿಗಳಿಗೆ ಬೆನ್ನೆಲುಬಾಗಿ ನಿಂತ ಇತಿಹಾಸವನ್ನು ಹೊಂದಿದೆ. ಪ್ರಗತಿಪರ ವಿಚಾರಧಾರೆ ಹಾಗೂ ಸೌಹಾರ್ದ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಂದೋಲನ ಮಹತ್ತರವಾದ ಕೆಲಸಗಳನ್ನು ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...