Homeಕರ್ನಾಟಕ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿ ಸಮೀಪ ನಡೆದ ಪ್ರಕರಣದ ವರದಿ ಪ್ರಕಟಿಸಿರುವ ಸಂಬಂಧ ಮೈಸೂರಿನ ಪ್ರಾದೇಶಿಕ ದಿನಪತ್ರಿಕೆ ‘ಆಂದೋಲನ’ ಕುರಿತು ಸಂಸದ ಪ್ರತಾಪ್‌ ಸಿಂಹ ಅವರು ನೀಡಿರುವ ಅಸಂಬದ್ಧ ಹೇಳಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು ಆಗ್ರಹಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಪ್ರತಿಕ್ರಿಯೆ ಪಡೆದು ವರದಿ ಮಾಡಿದ ‘ಆಂದೋಲನ’ ದಿನಪತ್ರಿಕೆಯನ್ನು ಉಲ್ಲೇಖಿಸಿ ಪ್ರತಾಪ್‌ ಸಿಂಹ ಅವರು ಸುದ್ದಿಗೋಷ್ಠಿಯಲ್ಲಿ ‘ಪತ್ರಿಕೆ’ಯನ್ನು ಟಾರ್ಗೆಟ್ ಮಾಡಿ ಮಾತನಾಡಿರುವುದು ಖಂಡನೀಯ. ಈ ಬಗ್ಗೆ ಪ್ರತಾಪ್‌ ಸಿಂಹ ಅವರು ಕೂಡಲೇ ‘ಪತ್ರಿಕೆ’ಯ ಕ್ಷಮೆಯಾಚಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಟ್ವೀಟ್ ಮಾಡಿದ್ದಾರೆ.

ಏನಿದು ವಿವಾದ?

ಸಿದ್ದರಾಮನಹುಂಡಿಯಲ್ಲಿ ಗುರುವಾರ ಸಂಜೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿದೆ ಎನ್ನಲಾದ ಘರ್ಷಣೆ ಕುರಿತು ‘ಆಂದೋಲನ’ ವರದಿ ಪ್ರಕಟಿಸಿತ್ತು. ಪತ್ರಿಕೆಯು ವಾಸ್ತವಾಂಶಗಳನ್ನು ತಿರುಚಿ ಸುದ್ದಿ ಪ್ರಕಟಿಸಿದೆ ಎಂದು ಪ್ರತಾಪ್‌ ಆರೋಪಿಸಿದ್ದರು. ಸಂಸದರ ಹೇಳಿಕೆಯನ್ನು ಖಂಡಿಸಿ ‘ಆಂದೋಲನ’ ಮತ್ತೊಂದು ಟಿಪ್ಪಣಿಯನ್ನು ಪ್ರಕಟಿಸಿತ್ತು. ಜೊತೆಗೆ ತನ್ನ ವರದಿಗೆ ಬದ್ಧ ಎಂದು ಸ್ಪಷ್ಟಪಡಿಸಿತ್ತು.

‘ಆಂದೋಲನ’ ಹೇಳಿದ್ದೇನು?

“ಚುನಾವಣೆ ಸಂದರ್ಭದಲ್ಲಿ ವಿವಾದಗಳು, ವಾಗ್ವಾದಗಳು ಸಹಜ. ಆರೋಪಗಳು, ಆಪಾದನೆಗಳು, ಕೆಲವೊಮ್ಮೆ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಇಂಥ ಸಂದರ್ಭಗಳಲ್ಲಿ ಸಮಾಜದ ಸಾಮರಸ್ಯ ಕೆಡದಂತೆ ಕರ್ತವ್ಯ ನಿರ್ವಹಿಸಬೇಕಾಗಿರುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಧ್ಯಮಗಳ ಹೊಣೆ. ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳ ಹೇಳಿಕೆಗಳನ್ನು ತೆಗೆದುಕೊಂಡು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸಬೇಕು.”

“ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡೇ ಸಿದ್ದರಾಮನಹುಂಡಿ ಘಟನೆ ವರದಿಯನ್ನು ‘ಆಂದೋಲನ’ ಪ್ರಕಟಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ಹೇಳಿಕೆ ಹಾಗೂ ಘಟನಾವಳಿಯನ್ನು ಆಧರಿಸಿಯೇ ಈ ವರದಿ ಮಾಡಲಾಗಿದೆ.”

“ಆದರೆ, ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಈ ಸುದ್ದಿಯ ಜತೆ ಪ್ರಕಟವಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆಯು ಅವರು ಕೊಟ್ಟಿರುವುದಿಲ್ಲ, ಅವರನ್ನು ಕೋಟ್ ಮಾಡಿ ‘ಆಂದೋಲನ’ ಸುಳ್ಳು ಸುದ್ದಿ ಮಾಡಿದೆ. ಇದನ್ನು ನೇರವಾಗಿ ಹೇಳುತ್ತಿದ್ದೇನೆ. ಐ ಡೋಂಟ್ ಕೇರ್ ಎಂದು ಪತ್ರಿಕೆಯ ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ.”

“’ಆಂದೋಲನ’ ಮಾತ್ರವಲ್ಲ, ಬೇರೆ ಪತ್ರಿಕೆಗಳಲ್ಲೂ ಈ ವರದಿ ಪ್ರಕಟವಾಗಿದೆ. ಆದರೆ, ‘ಆಂದೋಲನ’ ದಿನಪತ್ರಿಕೆಯನ್ನು ಮಾತ್ರ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಗುರಿ ಮಾಡಿದ್ದಾರೆ. ಇದು ಸಂಸದರಿಗೆ ಶೋಭೆ ತರುವುದಿಲ್ಲ.”

‘ಆಂದೋಲನ’ ದಿನಪತ್ರಿಕೆ ನೀಡಿರುವ ಪ್ರತಿಕ್ರಿಯೆ

ಪ್ರತಾಪ್ ಸಿಂಹ ಹೇಳಿದ್ದೇನು?

“ನಾನು ನಿಮಗೆ ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ಮೊದಲು ಪೊಲೀಸ್ ಇಲಾಖೆಯವರನ್ನು ಕೇಳಿ, ಎಸ್ಪಿ ಅವರು ಮಾತನಾಡಿಯೇ ಇಲ್ಲ. ‘ಆಂದೋಲನ’ದಲ್ಲಿ ಬಂದಿರುವ ಸತ್ಯಕ್ಕೆ ದೂರವಾದ ಸುದ್ದಿಯನ್ನು ನೋಡಿ ಮಾತನಾಡಬೇಡಿ. ‘ಆಂದೋಲನ’ ಪತ್ರಿಕೆಯವರು ಆಗಾಗ ಪೊಲೀಸರನ್ನು ಕೋಟ್ ಮಾಡಿಕೊಂಡು ಈ ರೀತಿ ಸುಳ್ಳು ಸುದ್ದಿ ಬರೆಯುವುದನ್ನು ನಿಲ್ಲಿಸಬೇಕು. ನಾನು ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ನಾನು ಬೆಳಿಗ್ಗೆ ಎಸ್ಪಿ ಬಳಿ ಯಾಕೆ ಈ ರೀತಿ ಸ್ಟೇಟ್‌ಮೆಂಟ್ ಕೊಟ್ಟಿದ್ದೀರಿ ಎಂದು ಮಾತಾಡ್ಡೆ. ನಾನು ಸ್ಟೇಟ್‌ಮೆಂಟ್ ಕೊಟ್ಟಿಲ್ಲ. ಹಿಂದೇನೂ ‘ಆಂದೋಲನ’ದಲ್ಲಿ ಒಂದು ವರದಿ ಇದೇ ರೀತಿ ಆಗಿದೆ ಎಂದು ತಿಳಿಸಿದ್ದಾರೆ. ಸೋ ಐ ಪರ್ಟಿಕ್ಯುಲರ್ಲಿ ನೇಮಿಂಗ್ ದಿ ನ್ಯೂಸ್ ಪೇಪರ್, ಅಂಡ್ ಐ ಡೋಂಟ್ ಕೇರ್” ಎಂದು ಸಂಸದ ಪ್ರತಾಪ ಸಿಂಹ ಪತ್ರಿಕೆಯನ್ನು ಟೀಕಿಸಿದ್ದರು.

ಶುಕ್ರವಾರ ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ

ದಿವಂಗತ ರಾಜಶೇಖರ ಕೋಟಿಯವರು ಸ್ಥಾಪಿಸಿದ ಆಂದೋಲನ ದಿನಪತ್ರಿಕೆಗೆ ಐವತ್ತು ವರ್ಷಗಳ ಇತಿಹಾಸವಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಪ್ರಸರಣವನ್ನು ಹೊಂದಿರುವ ‘ಆಂದೋಲನ’, ದಲಿತ, ಆದಿವಾಸಿ, ರೈತ, ಕೂಲಿಕಾರ್ಮಿಕ ಮತ್ತು ಭಾಷಾ ಚಳವಳಿಗಳಿಗೆ ಬೆನ್ನೆಲುಬಾಗಿ ನಿಂತ ಇತಿಹಾಸವನ್ನು ಹೊಂದಿದೆ. ಪ್ರಗತಿಪರ ವಿಚಾರಧಾರೆ ಹಾಗೂ ಸೌಹಾರ್ದ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಂದೋಲನ ಮಹತ್ತರವಾದ ಕೆಲಸಗಳನ್ನು ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...